ಮಡಿಕೇರಿ ಸೆ.2 NEWS DESK : ಸಕಲೇಶಪುರದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ಪ್ರಥಮ ಸ್ಥಾನ ಗಳಿಸಿದೆ. ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋದ ನೃತ್ಯ ಸಂಯೋಜಕ ಅಭಿಷೇಕ್ ಅವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳಾದ ಅಭಿರಾಮ್ ಆರ್ಯ, ಮೊನಾಲಿ, ಸಾನ್ವಿಕ, ದಿಶಾ, ಆಧ್ಯಾಶ್ರೀ, ನಿಶ್ಮಿತಾ, ಲೀಶ, ಜೈಷ್ಣವ್, ವರ್ಷ, ಯಾನ ಶೆಟ್ಟಿ, ಪ್ರೇಕ್ಷ, ಶಿವ ಕುಮಾರ್, ಕೀರ್ತನ್, ತೇಜಸ್, ತಶ್ಮಿತ, ಭಾವನಾ ರೈ, ತ್ರಿಷ್ಯ, ಶ್ರವಣ್, ಅಶ್ವಧಿ, ಪ್ರಜ್ಞಾ, ಪ್ರೀತಮ್ ಹಾಗೂ ಅಮೃತ ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಂಡು ಗೆಲುವು ಸಾಧಿಸಿದರು. ಸಕಲೇಶಪುರದ ಶ್ರೀ ರಾಮದೂತ ಹಿಂದೂ ಮಹಾಗಣಪತಿ ಸಮಿತಿ ಹಾಗೂ ರೀದಮ್ ಕೀಪಜ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಸೆ.2 NEWS DESK : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢ ವಿಭಾಗದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದ ಬೊಳ್ಳೆಪಂಡ ದೀಪ್ತಿ ತಂಗಮ್ಮ, ಮೂಕಂಡ ಕಾವೇರಮ್ಮ ಮತ್ತು ಹನಾ ಫಲಕ್ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಮುಖ್ಯ ಶಿಕ್ಷಕಿಯಾದ ಪಿ.ಯು.ಪಾರ್ವತಿ , ಸಂಯೋಜಿಕಿ ಅಮೃತ ಅರ್ಜುನ, ಬೋದಕ ಬೋದಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಭಾಗಮಂಡಲ ಸೆ.2 NEWS DESK : ಕೆವಿಜಿ ಐಟಿಐ ಭಾಗಮಂಡಲದಲ್ಲಿ 2025-27 ನೇ ಸಾಲಿಗೆ ಪ್ರವೇಶ ಪಡೆದ ನೂತನ ತರಬೇತಿದಾರರಿಗೆ ಸ್ವಾಗತ ಮತ್ತು ಪೋಷಕರ ಸಭೆ ನಡೆಯಿತು. ಸಂಸ್ಥೆಯ ಸಭಾಂಗಣದಲ್ಲಿ ಪ್ರಾಂಶುಪಾಲರಾದ ಕೆ.ವಿ.ಶ್ರೀಕಾಂತ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಸಂಸ್ಥೆಯ ನೀತಿ ನಿಯಮಗಳ ಬಗ್ಗೆ, ವಿದ್ಯಾರ್ಥಿಗಳ ಮತ್ತು ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಸಂಸ್ಥೆಯ, ತರಬೇತಿಯ ಸಂಪೂರ್ಣ ಮಾಹಿತಿ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಎಂ.ಕೆ.ವೆಂಕಟೇಶ್ ಸ್ವಾಗತಿಸಿದರು, ಕೆ.ಜಿ.ಜಯಪ್ರಕಾಶ್ ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀ ಕೃಷ್ಣಮೂರ್ತಿ ಜೆ ಕಾರ್ಯಕ್ರಮ ನಿರೂಪಿಸಿದರು.
ಮಡಿಕೇರಿ ಆ.2 NEWS DESK : ಭಾಗಮಂಡಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. 2006-2007 ನೇ ಸಾಲಿನಲ್ಲಿ ಏಳನೇ ತರಗತಿ ವರೆಗೆ ಶಾಲೆಯಲ್ಲಿ ವ್ಯಾಸಂಗ ಮುಗಿಸಿದ ವಿದ್ಯಾರ್ಥಿ ವೃಂದ ವಿದ್ಯೆ ಕಲಿಸಿದ ಗುರುಗಳನ್ನು ಆಹ್ವಾನಿಸಿ ಸನ್ಮಾನ ಮಾಡಿ ಗೌರವಿಸಿದರು. ನಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಳೇ ವಿದ್ಯಾರ್ಥಿಗಳು ರೂಪಾಯಿ 23,000 ವೆಚ್ಚದ ಪ್ರೊಜೆಕ್ಟರ್ ಮತ್ತು ಮಕ್ಕಳಿಗೆ ತಟ್ಟೆ, ಲೋಟ ಗಳನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳಾದ ಸರ್ಫುದ್ದೀನ್, ನೌಫಲ್, ಶೃತಿ, ಧನಲಕ್ಷ್ಮಿ, ಜೆ.ಎನ್.ಮನೋಜ್ ಸೇರಿದಂತೆ 40ಕ್ಕೂ ಹೆಚ್ಚಿನ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಔತಣಕೂಟ ಏರ್ಪಡಿಸಲಾಗಿತ್ತು.
ಮಡಿಕೇರಿ ಸೆ.2 NEWS DESK : ಮಡಿಕೇರಿ ನಗರದ ಪುಟಾಣಿನಗರದ ಶ್ರೀ ಉದ್ಭವ ವಿನಾಯಕ ಸೇವಾ ಸಮಿತಿ ವತಿಯಿಂದ ಬಡಾವಣೆಯ ನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬಡಾವಣೆ ನಿವಾಸಿಗಳು ಮಕ್ಕಳು ಸೇರಿದಂತೆ ವಿವಿಧ ಕ್ರೀಡಾಕೂಟದಲ್ಲಿ ಮಳೆಯನ್ನು ಲೆಕ್ಕಿಸದೆ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಅಂಗನವಾಡಿ ಮಕ್ಕಳಿಗೆ ಕಾಳು ಹೆಕ್ಕುವುದು, ರಸ್ತೆ ಓಟ, ಕಪ್ಪೆ ಓಟ, ಗಣಪತಿ ಮೂರ್ತಿಯ ಚಿತ್ರಕಲೆ, ಆದರ್ಶ ದಂಪತಿಗಳಿಗೆ ವಿಶೇಷ ಕ್ರೀಡೆ, ಯುವಕರಿಗೆ ಮಡಿಕೆ ಒಡೆಯುವ ಸ್ಪರ್ಧೆ, ಹಗ್ಗ ಜಗ್ಗಟ ಸೇರಿದಂತೆ ವಿವಿಧ ಕ್ರೀಡಾಕೂಟ ಗಮನ ಸೆಳೆಯಿತು. ಸಂಜೆ ಬಡಾವಣೆಯ ಮಕ್ಕಳು ಸೇರಿದಂತೆ ಶಾಲಾ ಕಾಲೇಜಿನ ಯುವಕ ಯುವತಿಯರು ನೃತ್ಯ ಪ್ರದರ್ಶನ ಮಾಡಿದರು. ಉದ್ಭವ ಕಲೋತ್ಸವ ಕಾರ್ಯಕ್ರಮಕ್ಕೆ ಅಗಮಿಸಿದ ಮೂಡಾ ಅದ್ಯಕ್ಷ ರಾಜೇಶ್ ಯಲ್ಲಪ್ಪ ಮಾತಾನಾಡಿ, ಪುಟಾಣಿ ನಗರದ ಯುವಕರು ಗಣಪತಿಯನ್ನು ಕಳೆದ 32 ವರ್ಷಗಳಿಂದ ಪ್ರತಿಷ್ಟಾಪನೆ ಮಾಡಿ ಧಾರ್ಮಿಕ ಕಾರ್ಯಗಳೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದಾರೆ. ಪುಟಾಣಿ ನಗರದ ಯುವಕರ ಕಾರ್ಯವನ್ನು ಪ್ರತಿವರ್ಷ ಹತ್ತಿರದಿಂದ ನೋಡಿಕೊಂಡು…
ಮಡಿಕೇರಿ ಸೆ.2 NEWS DESK : ಭಾಗಮಂಡಲ ಶ್ರೀ ವಿನಾಯಕ ಟ್ರಸ್ಟ್ ಹಾಗೂ ಶ್ರೀ ಸದಾಶಿವ ಶಿವಣ್ಣನವರ್ ಮತ್ತು ಸ್ನೇಹಿತರ ಸಹ ಪ್ರಯೋಜಕತ್ವದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ಶೀರ್ಷಿಕೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ರಸಪ್ರಶ್ನೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹುಮ್ಮಸ್ಸಿನಿಂದ ಪಾಲ್ಗೊಂಡರು. ಪ್ರಥಮ ಬಹುಮಾನವನ್ನು ಅಟಲ್ ಬಿಹಾರಿ ವಾಜಿಪೇಯಿ ಶಾಲಾ ವಿದ್ಯಾರ್ಥಿಗಳು ಮೂಡಿಗೆರಿಸಿಕೊಂಡರು. ದ್ವಿತೀಯ ಬಹುಮಾನವನ್ನು ಶ್ರೀ ರಾಜ ರಾಜೇಶ್ವರಿ ಶಾಲೆ, ತೃತೀಯ ಬಹುಮಾನವನ್ನು ಶ್ರೀ ರಾಜ ರಾಜೇಶ್ವರಿ ಶಾಲೆ, ಚತುರ್ಥ ಬಹುಮಾನವನ್ನು ಕೋರಂಗಾಲ ಜ್ಞಾನೋದಯ ಶಾಲೆ ಪಡೆದುಕೊಂಡಿತು. ಉಳಿದಂತಹ 6 ತಂಡಗಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು. ನಂತರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಅಲಂಕೃತ ಮಂಟಪದಲ್ಲಿ ವಾದ್ಯಗೋಷ್ಠಿ ಯೊಂದಿಗೆ ಮೆರವಣಿಗೆ ಸಾಗಿ ತ್ರಿವೇಣಿ ಸಂಗಮದಲ್ಲಿ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮಮಕ್ಕೆ ಸ್ಥಳೀಯ ಸಂಘ ಸಂಸ್ಥೆಗಳು ಊರಿನ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಡಿಕೇರಿ ಸೆ.2 NEWS DESK : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪೊನ್ನಂಪೇಟೆ ತಾಲ್ಲೂಕಿನ ನೂತನ ಕಚೇರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಒಂದು ಶತಮಾನಕ್ಕೂ ಅಧಿಕ ಇತಿಹಾಸವುಳ್ಳ ಸ್ವಯಂ ಸೇವಕ ಸಂಸ್ಥೆಯು, ನಾಗರೀಕ ಸೇವೆಯಲ್ಲಿ, ಸಮಾಜಕ್ಕೆ ಒದಗಿದ ವಿವಿಧ ಸಂಕಷ್ಟದ ಸಮಯದಲ್ಲಿ ಹಾಗೂ ಶೋಷಿತ ಸಮಾಜದ ಪರ ಕೆಲಸ ಮಾಡುವಲ್ಲಿ ಮುಂಚೂಣಿಯಲ್ಲಿದೆ. ಪ್ರಪಂಚದಾದ್ಯಂತ ಉತ್ತಮ ಹೆಸರು ಮಾಡಿರುವ ಈ ಸಂಸ್ಥೆಯ ಪೊನ್ನಂಪೇಟೆ ಘಟಕವು ಯಶಸ್ಸು ಕಾಣುತ್ತಾ, ಜನಮನದಲ್ಲಿ ಛಾಪು ಮೂಡಿಸಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಹಶೀಲ್ದಾರರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ವಿರಾಜಪೇಟೆ NEWS DESK ಸೆ.2 : ವಿರಾಜಪೇಟೆಯಲ್ಲಿ ಇಂದು ಶಾಸಕರ ವಿಶೇಷ ನಿಧಿಯಿಂದ ಕ್ಷೇತ್ರದ ಆಯ್ದ ಅರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ದ್ವಿಚಕ್ರವಾಹನವನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿ ಸಮಾಜದಲ್ಲಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ಈ ಸೌಲಭ್ಯ ಒದಗಿಸಲಾಗುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನತೆಯನ್ನು ಮರೆತು ಸಮಾಜದಲ್ಲಿ ತಮ್ಮ ಕೈಲಾದ ಸಾಧನೆಯನ್ನು ಮಾಡಲು ಪ್ರಯತ್ನಿಸಬೇಕೆಂದು ಕಿವಿಮಾತು ಹೇಳಿದರು. ವಿಶೇಷ ಆದ್ಯತೆ ಮೇರೆಗೆ ತಾನು ಸಹಾಯ ಮಾಡಲು ಸದಾ ಸಿದ್ಧವಿರುವುದಾಗಿ ಭರವಸೆ ನೀಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪುರಸಭೆ ಸದಸ್ಯರಾದ ರಜಿನಿಕಾಂತ್, ರಾಫಿ, ಪಕ್ಷದ ಪ್ರಮುಖ ಜೋಕಿಮ್, ಕುಂದಚೀರ ಮಂಜು ದೇವಯ್ಯ, ಶಬೀರ್, ಮಂಜುನಾಥ್, ಮಹದೇವ, ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
ಮಡಿಕೇರಿ ಸೆ.2 NEWS DESK : ವಿರಾಜಪೇಟೆ ತಾಲ್ಲೂಕು ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತಟ್ಟಳ್ಳಿ ಹಾಡಿ ನಿವಾಸಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಧ್ವನಿವರ್ಧಕವನ್ನು ಖರೀದಿಸಿ ಕೊಡುಗೆಯಾಗಿ ನೀಡಿದರು. ಶಾಸಕರ ಕೊಡುಗೆಯನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ ನಿವಾಸಿಗಳು, ಧನ್ಯವಾದಗಳು ಅರ್ಪಿಸುತ್ತಾ ಕಳೆದ ವರ್ಷವೂ ಶಾಸಕರು ತಮ್ಮ ಸ್ವಂತ ಹಣದಲ್ಲಿ ನೀಡಿದ ಕೊಡುಗೆಯ ಬಗ್ಗೆಯೂ ಸ್ಮರಿಸಿಕೊಂಡರು.
ಮಡಿಕೇರಿ, ಸೆ.2 NEWS DESK : ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಆಡಳಿತ ) ರಾಗಿ ಬಸವರಾಜು ಅಧಿಕಾರ ಸ್ವೀಕರಿಸಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ ಸಿ.ರಂಗಧಾಮಪ್ಪ ಅವರಿಂದ ನೂತನ ಡಿಡಿಪಿಐ ಬಸವರಾಜು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಡಿಪಿಐ ಬಸವರಾಜು,ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ ಕಾರ್ಯಕ್ರಮಗಳು/ ಚಟುವಟಿಕೆಗಳನ್ನು ಉತ್ತಮವಾಗಿ ನಡೆಸುವ ಮೂಲಕ ಜಿಲ್ಲೆಯಲ್ಲಿ ಉತ್ತಮವಾಗಿ ಶೈಕ್ಷಣಿಕ ಸಾಧನೆಗೆ ಒತ್ತು ನೀಡಲಾಗುವುದು ಎಂದರು. ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಗಳಿಸುತ್ತಾ ಬಂದಿದ್ದು, ಕಳೆದ ಸಲ ಕೂಡ 4 ನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಕೂಡ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಮೂಲಕ ಶೈಕ್ಷಣಿಕ ಪ್ರಗತಿಗೆ ಪ್ರಯತ್ನಿಸಲಾಗುವುದು ಎಂದು ನೂತನ ಡಿಡಿಪಿಐ ಬಸವರಾಜು ತಿಳಿಸಿದರು.…






