ಲೇಖಕ: admin

ವಿರಾಜಪೇಟೆ ಸೆ.1 NEWS DESK : ವಿರಾಜಪೇಟೆ ಕೊಡವ ಸಮಾಜದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕೈಲ್‍ಪೊಲ್ದ್ ನಮ್ಮೆಯನ್ನು ಸೆ.27 ರಂದು ಕೊಡವ ಸಮಾಜ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಕ್ರೀಡಾ ಕಾರ್ಯದರ್ಶಿ ಅಮ್ಮಣಿಚಂಡ ರತ್ನಾ ಸುಬ್ರಮಣಿ ಹೇಳಿದರು. ವಿರಾಜಪೇಟೆ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಮಹಿಳೆಯರಿಗೆ ಮತ್ತು ಪುರುಷರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಹಗ್ಗಜಗ್ಗಾಟ, ವಾಲಗದ ಕುಣಿತ, ಭಾರದ ಗುಂಡು ಎಸೆತ ಸೇರಿದಂತೆ ಹಲವಾರು ಪೈಪೋಟಿಗಳನ್ನು ನಡೆಸಲಾಗುವುದು. ಪೂರ್ವಹ್ನ 9.30 ನಡೆಯುವ ಕಾರ್ಯಕ್ರಮವನ್ನು ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಉಪಾಧ್ಯಕ್ಷ ಕಾಣತಂಡ ಜಗದೀಶ್, ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಮರಣನಿಧಿ ಕಾರ್ಯರ್ಶೀ ಮಾದೇಯಂಡ ಸಂಪಿ ಪೂಣಚ್ಚ ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.1  NEWS DESK : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ವಿಶೇಷ ಹಿಲ್ ಕೌನ್ಸಿಲ್ ಸ್ಟೆಟಸ್ ಪಡೆಯುವುದು ಕೊಡವರ ಸಂವಿಧಾನಬದ್ಧ ಹಕ್ಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 30ನೇ ವರ್ಷದ ಸಾರ್ವತ್ರಿಕ “ಕೈಲ್ ಪೊವ್ದ್” ಹಬ್ಬ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡವರು ಕೇವಲ 1 ಲಕ್ಷದ ಒಳಗೆ ಇರುವ ಅತ್ಯಂತ ನಗಣ್ಯ ಜನಸಂಖ್ಯೆಯ ಎಥಿನಿಕ್ ಸಮುದಾಯವಾಗಿದ್ದು, ಭಾರತದ ಈಶಾನ್ಯ ಪ್ರಾಂತ್ಯ ಹಾಗೂ ಗೋದಾವರಿ ಹಿಲ್‍ಟ್ರ್ಯಾಕ್ಟ್ ಮತ್ತು ವಿಶಾಕಪಟ್ಟಣಂ ಹಿಲ್‍ಟ್ರ್ಯಾಕ್ಟ್ ಏಜೆನ್ಸಿಯ ಮಾದರಿಯಲ್ಲಿ ಕೊಡವರಿಗೆ ಶಾಸನಾತ್ಮಕವಾದ ಭದ್ರತೆಯನ್ನು ನೀಡಬೇಕು. 40-50ಲಕ್ಷ ಜನಸಂಖ್ಯೆ ಇರುವ ಬಲಾಡ್ಯರನ್ನು ಎಸ್‍ಟಿ ಪಟ್ಟಿಯಲ್ಲಿ ಸೇರಿಸಿರುವಾಗ ಸಂವಿಧಾನಿಕ ಸಬಲೀಕರಣಕ್ಕಾಗಿ ಬುಡಕಟ್ಟು ಲಕ್ಷಣವನ್ನು ಹೊಂದಿರುವ ಆದಿಮಸಂಜಾತ ಕೊಡವರನ್ನು ಎಸ್‍ಟಿ ಪಟ್ಟಿಗೆ ಸೇರಿಸುವುದು ಪ್ರಾಯಾಸದ ಕೆಲಸವಲ್ಲ ಎಂದರು. ಕೊಡವ ಮಣ್ಣಿನೊಂದಿಗೆ ಉಪ್ಪಿನಂತೆ…

Read More

ಮಡಿಕೇರಿ ಸೆ.1 NEWS DESK : ಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಒಂದೇ ರೀತಿಯಲ್ಲಿ ನೋಡಬೇಕಿತ್ತು. ಆ ಮೂಲಕ ದೀಪಾ ಭಾಸ್ತಿ ಅವರನ್ನು ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರಕಾರ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ಕ್ರಮ ಸರಿಯಾಗಿದೆ. ಈ ಹಂತದಲ್ಲಿ ಬೂಕರ್ ವಿಜೇತೆ ದೀಪಾ ಭಾಸ್ತಿಯವರನ್ನು ಕೂಡ ಕರೆಯಬಹುದಿತ್ತು. ಈ ಲೋಪವನ್ನು ಈಗಲೂ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದರು. ದಸರಾ ಉತ್ಸವದಂದು ಚಾಮುಂಡಿ ಬೆಟ್ಟದಲ್ಲಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಹಾಗೂ ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರೊಂದಿಗೆ ದೀಪಾ ಭಾಸ್ತಿಯವರನ್ನು…

Read More

ಮಡಿಕೇರಿ ಸೆ.1 NEWS DESK : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್‍ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ, ಮಾಜಿ ಸಚಿವ…

Read More

ಮಡಿಕೇರಿ ಸೆ.1 NEWS DESK : ಕುಶಾಲನಗರದಲ್ಲಿ ಗಣೇಶ ವಿಸರ್ಜನೋತ್ಸವದ ಸಂದರ್ಭ ನಿಯಮ ಉಲ್ಲಂಘಿಸಿ ಅಧಿಕ ಶಬ್ದ ಬಳಕೆ ಮಾಡಿದ ಹಿನ್ನೆಲೆ ಪ್ರೆಶರ್ ಮಿಡ್ ಸ್ಪೀಕರ್ ಮತ್ತು 5 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆ.31 ರಂದು ಕುಶಾಲನಗರದಲ್ಲಿ ನಡೆದ ಗಣೇಶ ವಿಸರ್ಜನೋತ್ಸವದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯಡಿ ನಿಗದಿ ಪಡಿಸಿರುವ ಶಬ್ದ ಮಿತಿಯನ್ನು ಮೀರಿ ಶಬ್ದ ಬಳಸಲಾಗಿತ್ತು. ಮೆರವಣಿಗೆಯಲ್ಲಿ ಪ್ರ್ರೆಶರ್ ಮಿಡ್ ಸ್ಪೀಕರ್ ಅಳವಡಿಸಿದ 5 ಸೌಂಡ್ ಸಿಸ್ಟಂ ವಾಹನದ ಚಾಲಕರುಗಳ ವಿರುದ್ಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಮೆರವಣಿಗೆಯಲ್ಲಿ ಅತೀ ಹೆಚ್ಚು ಶಬ್ದವನ್ನು ಹೊರ ಹೊಮ್ಮಿಸುವ ಪ್ರೆಶರ್ ಮಿಡ್ ಸ್ಪೀಕರ್‍ಗಳನ್ನು ಸೌಂಡ್ ಸಿಸ್ಟಂನಲ್ಲಿ ಬಳಸದಂತೆ ಕುಶಾಲನಗರ ಪೊಲಿಸರು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದರು. ಹೀಗಿದ್ದೂ ಅತೀ ಹೆಚ್ಚಿನ ಶಬ್ದ ಹೊರ ಹೊಮ್ಮಿಸುವ ಪ್ರ್ರೆಶರ್ ಮಿಡ್ ಸ್ಪೀಕರ್ ಹೊಂದಿದ ಸೌಂಡ್ ಸಿಸ್ಟಂಗಳನ್ನು ಬಳಸಲಾಗಿದೆ ಎಂದು ಎಸ್‍ಪಿ ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ಸೆ.1 NEWS DESK : ಕೊಡಗು ಜಿಲ್ಲೆಯಲ್ಲಿ ಮತಾಂತರದ ಪಿಡುಗು ಗುಪ್ತವಾಗಿ ವ್ಯಾಪಿಸುತ್ತಿದ್ದು, ಮತಾಂತರ ಮಾಡುವವರನ್ನು ಪೊಲೀಸ್ ಇಲಾಖೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಗೋಣಿಕೊಪ್ಪಲಿನ ಖಾಸಗಿ ಶಾಲೆಯೊಂದರಲ್ಲಿ ಮತಾಂತರದ ಚಟುವಟಿಕೆ ನಡೆಯುತ್ತಿದೆ ಎನ್ನುವ ಆರೋಪದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅಲ್ಲದೆ ತೀವ್ರ ಚರ್ಚೆಗೆ ಗ್ರಾಸವಾಗಿದೆ ಮತ್ತು ಮತಾಂತರಕ್ಕೆ ಕುಮ್ಮಕ್ಕು ನೀಡುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಧರ್ಮ ಪ್ರಚಾರದ ಹಕ್ಕಿನಲ್ಲಿ ಇತರರನ್ನು ಮತಾಂತರಿಸುವ ಹಕ್ಕು ಸೇರಿಲ್ಲ ಎಂದು ಈಗಾಗಲೇ ತೀರ್ಪು ನೀಡಿದೆ. ನೇರವಾಗಿ ಅಥವಾ ಪರೋಕ್ಷವಾಗಿ ಮತಾಂತರದಲ್ಲಿ ಭಾಗಿಯಾಗುವುದು ಅಪರಾಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾನೂನನ್ನು ಮೀರಿ ಕೊಡಗು ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಇದು ಶಾಂತಿ ಕದಡುವ ಪ್ರಯತ್ನವಾಗಿದೆ. ಗೋಣಿಕೊಪ್ಪಲಿನ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ…

Read More

ನಾಪೋಕ್ಲು ಸೆ.1 NEWS DESK : ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಕೆಲಸ ನಿರ್ವಹಿಸಿದ್ದಕ್ಕಾಗಿ ಡಿಸಿಸಿ ಬ್ಯಾಂಕ್ ನಿಂದ ಕೊಡಲ್ಪಡುವ ಸಹಕಾರ ಸಂಘ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಡಿಕೇರಿಯಲ್ಲಿ ಜರುಗಿದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಮತ್ತು ನಗದು ನೀಡಿ ಗೌರವಿಶಲಾಯಿತು. ಬಹುಮಾನವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಗಣಪತಿ ಹಾಗೂ, ಪದಾಧಿಕಾರಿಗಳಿಂದ ಸಂಘದ ಅಧ್ಯಕ್ಷರಾದ ಕೇಟೋಳಿರ ಹರೀಶ್ ಪೂವಯ್ಯ, ನಿರ್ದೇಶಕರಾದ ಅರೆಯಡ ರತ್ನ ಪೆಮ್ಮಯ್ಯ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶಿವಚಳಿಯಂಡ ವಿಜು ಪೂನಚ್ಚ ಸ್ವೀಕರಿಸಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.1 NEWS DESK : ಪ್ರವಾದಿ ಮೊಹಮ್ಮದ್ (ಸ) ಅವರ 1500ನೇ ಜನ್ಮ ದಿನಾಚರಣೆ ಈದ್ ಮಿಲಾದ್ ಪ್ರಯುಕ್ತ  ಎಸ್ ವೈ ಎಸ್ ಕೊಟ್ಟಮುಡಿ ವತಿಯಿಂದ  ಸ್ವಚ್ಛತಾ ಶ್ರಮದಾನ ನಡೆಯಿತು. ನಾಪೋಕ್ಲು-ಮಡಿಕೇರಿ ಮುಖ್ಯ ರಸ್ತೆ ಕೊಟ್ಟಮುಡಿಯಲ್ಲಿ ಎಸ್.ವೈ.ಎಸ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ರಸ್ತೆಯ ಬದಿಗಳಲ್ಲಿದ್ದ ಕಾಡು ಗಿಡಗಂಟಿಗಳನ್ನು  ಕಡಿದು ಸ್ವಚ್ಛಗೊಳಿಸಿದರು. ಈ ಸಂದರ್ಭ ಕೊಟ್ಟಮುಡಿ ಎಸ್ ವೈ ಎಸ್ ಅಧ್ಯಕ್ಷ ಉಸೈನ್ ಝುಹರಿ, ಉಪಾಧ್ಯಕ್ಷ ಮೈಸಿ ಅಸ್ಕರ್ ಸಖಾಫಿ, ಸದಸ್ಯರಾದ ಉಸೈನ್ ಆಬಿದ್ ರಹೂಫ್ ಜಾಫರ್ ಬಷೀರ್ ರಫೀಕ್ ಜಕರಿಯ್ಯ ರಜಾಕ್ ಇನ್ನಿತರರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.1 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. 2024-25ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಅವರು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಪಿ.ಎಂ. ಅಶೋಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.1 NEWS DESK : ಕಾಡಾನೆಗಳ ಹಿಂಡು ಮನೆಯ ಅಂಗಳದಲ್ಲಿ ದಾಂಧಲೆ ನಡೆಸಿ, ಹೂ ಕುಂಡಗಳನ್ನು ಹಾನಿಗೊಳಿಸಿದ ಘಟನೆ ಕಕ್ಕಬ್ಬೆಯ ನಾಲಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೋಡಿಮಣಿಯಂಡ ಶರಣ್ ಕುಟ್ಟಪ್ಪ ಅವರ ಮನೆಯಂಗಳದಲ್ಲಿದ್ದ ಹೂ ಗಿಡಗಳನ್ನು ಹಾಗೂ ಹೂಕುಂಡಗಳು ಧ್ವಂಸವಾಗಿವೆ. ಮುಂಜಾನೆ ನಾಲ್ಕು ಕಾಡಾನೆಗಳು ಎರಡು ಮರಿಗಳ ಸಹಿತ ಮನೆಯಂಗಳದಲ್ಲಿ ದಾಂಧಲೆ ನಡೆಸಿದಲ್ಲದೆ ಸಮೀಪದ ಕಾಫಿ ತೋಟಗಳಲ್ಲಿಯೂ ಕೃಷಿ ಗಿಡಗಳನ್ನು ನಷ್ಟ ಮಾಡಿದೆ. ಗ್ರಾಮದಲ್ಲಿ ಕಾಡಾನೆಗಳಿಂದ ಆತಂಕ ಎದುರಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶರಣ್ ಕುಟ್ಟಪ್ಪ ಒತ್ತಾಯಿಸಿದ್ದಾರೆ ವರದಿ : ದುಗ್ಗಳ ಸದಾನಂದ. 

Read More