ಮಡಿಕೇರಿ ಆ.1 NEWS DESK : ಕುಶಾಲನಗರದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕಾರ ಬಿ.ಪಿ.ದಿನೇಶ್ ಕುಮಾರ್ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸೋಮವಾರಪೇಟೆ ಉಪ ವಿಭಾಗದ ಗಣಪತಿ ಪ್ರತಿಷ್ಟಾಪನಾ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಿ ಶಾಂತಿಯುತ ಗಣೇಶ ಚತುರ್ಥಿ ಆಚರಣೆಗೆ ಸಲಹೆ ನೀಡಿದರು.
ಲೇಖಕ: admin
ಮಡಿಕೇರಿ ಆ.1 NEWS DESK : ಕೇರಳ ರಾಜ್ಯದ ಇಬ್ಬರು ಕ್ರೈಸ್ತ ಕನ್ಯಾಸ್ತ್ರೀಯರನ್ನು ಸುಳ್ಳು ಮೊಕದ್ದಮೆ ಹೂಡಿ ಛತ್ತೀಸ್ಗಢ ರಾಜ್ಯದಲ್ಲಿ ಬಂಧಿಸಿರುವ ಕ್ರಮವನ್ನು ಖಂಡಿಸಿ ಆ.2 ರಂದು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು. ಕನ್ಯಾಸ್ತ್ರೀಯರನ್ನು ತಕ್ಷಣ ಬಿಡುಗಡೆ ಮಾಡಬೇಕು, ಸುಳ್ಳು ಮೊಕದ್ದಮೆಯನ್ನು ಹಿಂಪಡೆಯಬೇಕು ಮತ್ತು ಬಂಧಿಸಲು ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಆ.1 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿವೃತ್ತ ಎಎಸ್ಐ ಬಿ.ಎನ್.ಶಿವಪ್ಪ, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿ ಲತಾ ಮತ್ತು ಸ್ವಇಚ್ಛಾ ನಿವೃತ್ತಿ ಹೊಂದಿದ ಎಎಸ್ಐ ಫ್ರಾನ್ಸಿಸ್, ಎಆರ್ಎಸ್ಐ ಬೇಲಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು. ಈ ಸಂದರ್ಭ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ಐ.ಪಿ. ಮೇದಪ್ಪ ಹಾಗೂ ಇತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸೋಮವಾರಪೇಟೆ ಆ.1 NEWS DESK : ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ಶಾಂತಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಹಲವು ಯೋಜನೆಗಳನ್ನು ಮಾಡಿದೆ. ಈ ಅವಕಾಶವನ್ನು ಪೋಷಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷ ಗುರುಪ್ರಸಾದ್ ಹೇಳಿದರು. ಪ್ರಣವ್ ಫೌಂಡೇಶನ್ನವರು ಜನಪರ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭ ಫೌಂಡೇಶನ್ನ ಪದಾಧಿಕಾರಿಗಳಾದ ಪ್ರೇಮ್ ಸಾಗರ್, ಸಜನ್ ಮಂದಣ್ಣ, ಕೆ. ಪಿ.ಆಶೀತ್ ಶಾಲೆಯ ಮುಖ್ಯ ಶಿಕ್ಷಕ ಪರಮೇಶ್, ಸ್ಥಳೀಯರಾದ ಡಿ.ಎಸ್.ಲಿಂಗರಾಜು, ಕೆ.ಎಂ.ಕೃಷ್ಣಕುಮಾರ್, ಮಧುಕುಮಾರ್, ಧರ್ಮಪ್ಪ, ನಿಶಾಂತ್, ಕಿರಣ್ ಕುಮಾರ್ ಇದ್ದರು.
ಸೋಮವಾರಪೇಟೆ ಆ.1 NEWS DESK : ಸೋಮವಾರಪೇಟೆ ಬಿ.ಬಿ.ಶಿವಪ್ಪ ಅಭಿಮಾನಿ ಬಳಗದ ವತಿಯಿಂದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಿ.ಬಿ.ಶಿವಪ್ಪ ಅವರ 8ನೇ ಸಂಸ್ಮರಣೋತ್ಸವವನ್ನು ಪಟ್ಟಣದ ಶ್ರೀಗಣಪತಿ ದೇವಾಲಯದಲ್ಲಿ ಆಚರಿಸಲಾಯಿತು. ಬಳಗದ ಪದಾಧಿಕಾರಿಗಳಾದ ಡಿ.ಬಿ.ಧರ್ಮಪ್ಪ, ಬಿ.ಟಿ.ತಿಮ್ಮಶೆಟ್ಟಿ, ರಾಘವ, ಬಿ.ಎಸ್.ಅನಂತರಾಮ್, ತಾಕೇರಿ ಪೊನ್ನಪ್ಪ, ಪ್ರೇಮನಾಥ್, ಕೆ.ಜಿ.ಸುರೇಶ್, ಸುಮಾ ಸುದೀಪ್, ಎ.ಎಸ್.ಮಲ್ಲೇಶ್, ಶೇಷಪ್ಪ ಮತ್ತಿತ್ತರು ಇದ್ದರು.
ನಾಪೋಕ್ಲು ಆ.1 NEWS DESK : ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಆ.3 ರಂದು ಕಕ್ಕಡ-18 ತೀನಿ ನಮ್ಮೆ ಪೈಪೋಟಿ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆಯಲಿದೆ. ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದು,್ದ ಕೊಳಕೇರಿಯ ಕಾಫಿ ಬೆಳೆಗಾರ್ತಿ ಬಿದ್ದಾಟಂಡ ಸುಮನ್ ಪ್ರದೀಪ್ ಉದ್ಘಾಟಿಸಲಿದ್ದಾರೆ. ತಿನಿಸುಗಳ ಪ್ರದರ್ಶನವನ್ನು ನೆಲಜಿ ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಮಣವಟ್ಟಿರ ಕಮಲ ಬೆಳ್ಳಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕಿ ಕೋಡಿಮಣಿಯಂಡ ರಚನ ಕುಟ್ಟಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ನರ್ಸಿಂಗ್ ಸೂಪರಿಟೆಂಡೆಂಟ್ ಬಾಳೆಯಡ ರತಿ ಪೆಮ್ಮಯ್ಯ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ಉಪನ್ಯಾಸಕಿ ಚೀಯಕಪೂವಂಡ ಸವಿತ ಅಪ್ಪಚ್ಚು ಅವರನ್ನು ಸನ್ಮಾನಿಸಲಾಗುವುದು. ಕಕ್ಕಡ ತೀನಿರ ಭೋಜ…
ನಾಪೋಕ್ಲು ಆ.1 NEWS DESK : ಜಿಲ್ಲೆಯ ಅತ್ಯಂತ ಎತ್ತರದ ಬೆಟ್ಟ ಭಾಗಮಂಡಲ ವಲಯದ ಕಕ್ಕಬೆ ಉಪವಲಯ ವ್ಯಾಪ್ತಿಯಲ್ಲಿ ತಡಿಯಂಡಮೋಳ್ ಬೆಟ್ಟಕ್ಕೆ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಚಾರಣ ನಿರ್ಬಂಧಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಮಾನವ ಪ್ರಾಣ ಹಾನಿ, ಜಾನುವಾರುಗಳ ಪ್ರಾಣಹಾನಿ, ಮೂಲಭೂತ ಸೌಕರ್ಯಗಳು ಹಾನಿಯಾಗುವಂತಹ ಪ್ರಕರಣಗಳು ವರದಿಯಾಗಿದ್ದು, ಮುಂಜಾಗ್ರತ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿರುಸಿನ ಮಳೆಯಾಗುತ್ತಿರುವುದರಿಂದ ಮಳೆ ಗಾಳಿಯಿಂದಾಗಿ ಅಪಾಯಕಾರಿ ಹಂತದಲ್ಲಿರುವ ಮರದ ರೆಂಬೆ ಕೊಂಬೆಗಳು ರಸ್ತೆ ಮೇಲೆ ಅಥವಾ ಸಂಚರಿಸುವ ಮಾರ್ಗದಲ್ಲಿ ಮುರಿದು ಬಿದ್ದು ಪ್ರಾಣಾಪಾಯವಾಗುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮುಂಗಾರು ಅವಧಿ ಮುಕ್ತಾಯಗೊಳ್ಳುವವರೆಗೆ ಅರಣ್ಯ ವ್ಯಾಪ್ತಿಯಲ್ಲಿ ಚಾರಣವನ್ನು ನಿಷೇಧಿಸಲಾಗಿದೆ. ಮಡಿಕೇರಿ ಪ್ರಾದೇಶಿಕ ವಿಭಾಗ ವ್ಯಾಪ್ತಿಯ ಭಾಗಮಂಡಲ ವಲಯದ ಕಕ್ಕಬೆ ಉಪವಲಯ ವ್ಯಾಪ್ತಿಯಲ್ಲಿ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣ ತೆರಳಲು ಇಲಾಖೆ ಅನುಮತಿ ಪಡೆಯಲು ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ.…
ಮಡಿಕೇರಿ ಆ.1 NEWS DESK : ಎಜಿಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕೆ.ಆರ್ ಚಾರಿಟೇಬಲ್ ಟ್ರಸ್ಟ್ ಪ್ರತಿವರ್ಷ ಸ್ವಾತಂತ್ರೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿದ ಗಣ್ಯರನ್ನು ಗುರುತಿಸಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಅಂತೆಯೇ ಈ ಸಾಲಿನ ಪ್ರಶಸ್ತಿ ಪ್ರಕಣವಾಗಿದ್ದು, ಪತ್ರಕರ್ತ ಪ್ರಶಾಂತ್.ಟಿ.ಆರ್ ಅವರು ಈ ಸಾಲಿನ ಕರ್ನಾಟಕ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಹನ್ನೆರಡು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಅವರು ಪ್ರಸ್ತುತ ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಪ್ರಶಾಂತ್ ಅವರು ರಚಿಸಿರುವ ಹೊನ್ನಮ್ಮನ ಕನಸು ಕಾದಂಬರಿಗೆ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ಬಾಳಹಾದಿಯಲಿ ಬೆಳ್ಳಿ ಚುಕ್ಕಿ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್ ಸಂದಿದೆ. ಈಗ ಕರ್ನಾಟಕ ಸೇವಾ ರತ್ನ ಪ್ರಶಸ್ತಿಯೂ ಸಂದಿದೆ. ಇದು ರಾಜ್ಯ ಮಟ್ಟದ ಪ್ರಶಸ್ತಿಯಾಗಿದ್ದು, ಇದೇ 10 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ನೀಡಿ…
ಮಡಿಕೇರಿ ಆ.1 NEWS DESK : ಮಡಿಕೇರಿ-ಸಂಪಾಜೆ ಹೆದ್ದಾರಿಯ ಬೃಹತ್ ತಡೆಗೋಡೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಮುದ್ದುರಾಜು, ಸದಾ ಮುದ್ದಪ್ಪ, ಮೂಡ ಸದಸ್ಯ ಆರ್.ಪಿ.ಚಂದ್ರಶೇಖರ್ ಹಾಗೂ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಆ.1 NEWS DESK : ಅರಿವೆಯ ಚೀಲವನ್ನು ಹಿಡಿದು ಮನೆಯಿಂದ ಮನೆಗೆ ಹೋಗಿ ಕುಟುಂಬ- ಸಮಾಜ- ದೇಶವನ್ನೇ ಹಾಳು ಮಾಡುವ ದುವ್ರ್ಯಸನ ಹಾಗೂ ದುಶ್ಚಟಗಳ ದಾಸ್ಯದಿಂದ ಜನಸಾಮಾನ್ಯರನ್ನು ಹೊರತರಲು ಜನರ ಎಲ್ಲಾ ದುಶ್ಚಟಗಳ ವಸ್ತುಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಂಡು, ಇನ್ನೆಂದೂ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿಸಿದವರು ಡಾ.ಮಹಾಂತ ಶಿವಯೋಗಿ ಅವರು ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಮಹಾಂತ ಸ್ವಾಮಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ಅಜ್ಞಾನ, ಅನಾರೋಗ್ಯ, ಅಪರಾಧ, ಅಸಮಾನತೆ ಯಂತಹ ಸಾಮಾಜಿಕ ಪಿಡುಗುಗಳಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗುಗಳಿಂದ ಮುಕ್ತಗೊಳಿಸಬೇಕು ಎಂದು ಅವರು ನಂಬಿದ್ದರು. ವಿಜಯಪುರ ಜಿಲ್ಲೆಯ (ಇಂದಿನ ಬಾಗಲಕೋಟೆ ಜಿಲ್ಲೆ) ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 1, 1930 ರಲ್ಲಿ ಜನಿಸಿದ ಡಾ|| ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ…






