ಲೇಖಕ: admin

ಮಡಿಕೇರಿ ಸೆ.18 NEWS DESK : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡಲು ರಾಜ್ಯ ಸರ್ಕಾರವು ‘ಯುವನಿಧಿ’ ಯೋಜನೆ ಅನುಷ್ಠಾನಗೊಳಿಸಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಇಂಡಸ್ಟ್ರೀ ಲಿಂಕೇಜ್ ಸೆಲ್ ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಅದರಂತೆ ಇಂಡಸ್ಟ್ರೀ ಲಿಂಕೇಜ್ ಸೆಲ್ ಅಡಿ ಮತ್ತು ಪ್ಯೂಚರ್ ಸ್ಕಿಲ್ಸ್ ಕಾರ್ಯಕ್ರಮದಡಿ ಕೈಗಾರಿಕೆ/ ಕೈಗಾರಿಕಾ ಸಂಸ್ಥೆಗಳ ತರಬೇತಿ ಕೇಂದ್ರಗಳು ಮತ್ತು ಸರ್ಕಾರಿ ತರಬೇತಿ ಸಂಸ್ಥೆಗಳ ಮೂಲಕ ತಾಂತ್ರಿಕ ಉದ್ದಿಮೆ/ ಕೈಗಾರಿಕೆ ಆಧಾರಿತ ಹಾಗೂ ಉದ್ಯಮಶೀಲತೆಯ ತರಬೇತಿ ನೀಡುವುದರೊಂದಿಗೆ ಕಾರ್ಯಕ್ರಮ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ.  ಯುವನಿಧಿ ಯೋಜನೆಯಡಿ ನೋಂದಾಯಿಸಿ ನೇರ ನಗದು ವರ್ಗಾವಣೆ ಮೂಲಕ ನಿರಂತರವಾಗಿ ಆರು ತಿಂಗಳು ನಿರುದ್ಯೋಗ ಭತ್ಯೆ ಪಡೆದಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್‍ಕರ್ ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ನೋಂದಾಯಿಸುವಂತೆ ಹಾಗೂ ಒಂದು ವೇಳೆ ತರಬೇತಿ ಪಡೆಯಲು ನೋಂದಾಯಿಸದೆ ಇದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನಿರುದ್ಯೋಗ ಭತ್ಯೆಯನ್ನು…

Read More

ಸುಂಟಿಕೊಪ್ಪ ಸೆ.1 NEWS DESK : ಸುಂಟಿಕೊಪ್ಪ ಸಂತ ಮೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಫುಟ್ಬಾಲ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಗೋಣಿಕೊಪ್ಪದ ಕಾಪ್ಸ್ ಶಾಲಾ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ವಿಭಾಗದಲ್ಲಿ ಸಂತಮೇರಿ ಪದವಿ ಕಾಲೇಜು ಬಾಲಕರು ಜಯಗಳಿಸುವ ಮೂಲಕ ದಾವಣೆಗೆರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್ ಹಾಗೂ ಪ್ರಾಚಾರ್ಯರಾದ ಆರ್.ಸೇಲ್ವರಾಜ್, ಬಾಲಕರ ತಂಡಕ್ಕೆ ಹಾಗೂ ತರಬೇತುದಾರ ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಅವರಿಗೆ ಶುಭಹಾರೈಸಿ ಬೀಳ್ಕೊಟ್ಟರು.

Read More

ನಾಪೋಕ್ಲು NEWS DESK : ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರಮದಾನ ಮಾಡಲಾಯಿತು. ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸದಸ್ಯರು ಹಿಂದೂ ರುದ್ರಭೂಮಿಯ ಆವರಣದಲ್ಲಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯ ನಡೆಸಿ ಶ್ರಮದಾನ ಮಾಡಲಾಯಿತು. ಈ ಸಂದರ್ಭ ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಅಂಬಿ ಕಾರ್ಯಪ್ಪ  ಸಹ ಪ್ರಮುಖರು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರುಗಳಿಗೆ ಹಣ್ಣು ಹಂಪಲು ಹಾಗೂ ಜ್ಯೂಸ್ ವಿತರಿಸುವ ಮೂಲಕ ನರೇಂದ್ರ ಮೋದಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.  ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಂ.ಪ್ರತೀಪ, ಪ್ರವೀಣ ಬಿ.ಎಸ್, ಲೋಹಿತ್ ಕೆ.ಎಸ್., ಸಂದೇಶ್, ಜೀವನ್, ಶಾಜೇಶ್, ಜಗದೀಶ್ ಕೆ.ವಿ, ನವೀನ್, ಗಿರೀಶ್ ಬಿ.ಎಸ್, ಗಿರೀಶ್ ಬಿ.ಜಿ.ಕಿರಣ, ದರ್ಶನ್, ಮಹೇಶ್, ಶೇಕರ ಹಾಗೂ ಇತರ ಕಾರ್ಯಕರ್ತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.18 NEWS DESK :  ನಾಪೋಕ್ಲು ನಾಡ್ ಕೊಡವ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, 2024-25ನೇ ಸಾಲಿನ ಸಹಕಾರಿಯ 7ನೇ ವಾರ್ಷಿಕ ಮಹಾಸಭೆಯು ನಾಪೋಕ್ಲು ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಅಪ್ಪಾರಂಡ ಎಸ್.ಅಯ್ಯಪ್ಪ, ಪ್ರಸ್ತುತ ಸಂಘದಲ್ಲಿ ಒಟ್ಟು 793 ಸದಸ್ಯರಿದ್ದು, ಈ ವರ್ಷ ನಮ್ಮ ಸಂಘವು 4,12,605/-ರಷ್ಟು ಲಾಭಗಳಿಸಿ ಉತ್ತಮ ರೀತಿಯಲ್ಲಿ ಸಾಗುತ್ತಿದೆ ಎಂದರು. ಸಂಘವು 2024-2025ನೇ ಸಾಲಿನನಲ್ಲಿ 10 ಸೆಂಟ್ ನಿವೇಶನ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿದ್ದರು ಹಾಗೂ ಸಂಘದ ದ್ಯೆಯೋದ್ದೇಶಗಳ ಬಗ್ಗೆ  ಬಗ್ಗೆ ಮಾತನಾಡಿ ಸಂಘದ ಏಳಿಗೆಗಾಗಿ ಸದಸ್ಯರು ಸಹಕರಿಸುವಂತೆ ಕೇಳಿಕೊಂಡರು. ಈ ಸಂದರ್ಭ ಸಂಘದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಸದಸ್ಯರು ಮತ್ತು ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮುಂಡಂಡ.ಸಿ.ನಾಣಯ್ಯ ನಿರ್ದೇಶಕರಾದ, ಬಿದ್ದಾಟಂಡ ರಮೇಶ್ ಚಂಗಪ್ಪ, ಬೊಳ್ಯಯಂಡ.ಪಿ.ಹರೀಶ್ ಕಾರ್ಯಪ್ಪ, ಕನ್ನಂಬೀರ.ಸಿ.ತಿಮ್ಮಯ್ಯ,…

Read More

ಮಡಿಕೇರಿ NEWS DESK ಸೆ.17 : ಮಹಾಭಾರತದಲ್ಲಿ ಶ್ರೀಕೃಷ್ಣ ತನ್ನ ತಂಗಿ ಸುಭದ್ರೆಗೆ ಯುದ್ಧದಲ್ಲಿನ ಅಭೇದ್ಯವ್ಯೂಹಗಳ ಭೇದನೆಯನ್ನು ವಿವರಿಸುವಾಗ ಗರ್ಭದಲ್ಲಿದ್ದ ಅಭಿಮನ್ಯು ಅದನ್ನು ಕೇಳಿ ತಿಳಿದು, ಮುಂದೆ ಧನುರ್ವಿದ್ಯಾಪಾರಂಗತನಾದ.  ವೈಜ್ಞಾನಿಕ ಸಂಶೋಧನೆಯ ಪ್ರಗತಿಯಿಂದ ಗರ್ಭಾಶಯವು ಶಬ್ದರಹಿತವಲ್ಲ ಎಂಬುದು ತಿಳಿದುಬಂದಿದೆ. ಗರ್ಭದೊಳಗಿನ ಮಗುವಿಗೆ ಹೊರ ಜಗತ್ತಿನಿಂದ ಬರುವ ಜೋರಾದ ಶಬ್ದಗಳು ಗರ್ಭರಸದ ( ಅಮ್ನಿಯೋಟಿಕ್ ಫ್ಲೂಯಿಡ್) ಮೂಲಕ ತಲುಪಬಹುದು ಮತ್ತು ನೇರವಾಗಿ ಹಾನಿಕರ ಪರಿಣಾಮ ಬೀರಬಹುದು ಎಂಬುದು ಸಾಬೀತಾಗಿದೆ.  ಗರ್ಭದಲ್ಲಿ ಮಗು ಶಬ್ದವನ್ನು ಹೇಗೆ ಕೇಳುತ್ತದೆ?…  ಮಗುವಿನ ಶ್ರವಣ ಶಕ್ತಿಯು ಗರ್ಭಾವಸ್ಥೆಯ ಆರಂಭದಲ್ಲಿಯೇ ಬೆಳವಣಿಗೆಯಾಗಲು ಪ್ರಾರಂಭವಾಗುತ್ತದೆ. ಸುಮಾರು ಹದಿನೆಂಟು ವಾರಗಳಲ್ಲಿ,  ತಾಯಿಯ ದೇಹದ ಒಳಗಿನ ಶಬ್ದಗಳಾದ ಹೃದಯ ಬಡಿತ, ಜೀರ್ಣಕ್ರಿಯೆಯ ಶಬ್ದ ಮತ್ತು ತಾಯಿಯ ಧ್ವನಿಯನ್ನು ಕೇಳುವಷ್ಟು  ಕಿವಿಯ ರಚನೆಯು ಬೆಳೆದಿರುತ್ತದೆ. ಮೂರನೇ ತ್ರೈಮಾಸಿಕದ ವೇಳೆಗೆ, ಮಗುವು ಹೊರಗಿನ ಜಗತ್ತಿನಿಂದ ಬರುವ ಶಬ್ದಗಳಾದ ಸಂಗೀತ ಮತ್ತು ಧ್ವನಿಗಳನ್ನು ಗುರುತಿಸಬಹುದು ಮತ್ತು ಅವುಗಳಿಗೆ ಪ್ರತಿಕ್ರಿಯಿಸಬಹುದು. *ಜೋರಾದ ಶಬ್ದದಿಂದ ಉಂಟಾಗುವ ಅಪಾಯಗಳು…* ತಾಯಿಯ ದೇಹದ ಹೊದಿಕೆಗಳಾದ ಹೊಟ್ಟೆಯ ಗೋಡೆ…

Read More

ಮಡಿಕೇರಿ NEWS DESK ಸೆ.17 : ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಅಸಂಘಟಿತ ಕಾರ್ಮಿಕರು ಕಡ್ಡಾಯವಾಗಿ ಹೆಸರು ನೋಂದಾಯಿಸುವಂತೆ ಕಾರ್ಮಿಕ ಸಚಿವ ಸಂತೋಷ್.ಎಸ್.ಲಾಡ್ ಅವರು ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಕ್ರಿಸ್ಟಲ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಂತೋಷ್ ಎಸ್.ಲಾಡ್ ಅವರು ಕೋರಿದರು. ಸರ್ಕಾರ ಪ್ರಮುಖವಾಗಿ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಿರುವುದು ಇಡೀ ದೇಶದಲ್ಲಿ ವಿಶೇಷವಾಗಿದೆ ಎಂದರು. ಸ್ವಿಗ್ಗಿ,…

Read More

ಮಡಿಕೇರಿ ಸೆ.17 NEWS DESK  : ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಚನೆಗೊಂಡಿರುವ ಕನ್ನಡ ಜಾಗೃತಿ ಸಮಿತಿಯ ಕೊಡಗು ಜಿಲ್ಲಾ ಸದಸ್ಯರುಗಳನ್ನಾಗಿ ಕುಶಾಲನಗರದ ಬಿ.ಎಸ್.ಲೋಕೇಶ್ ಸಾಗರ್, ಪಾಲಿಬೆಟ್ಟದ ಡಾ.ಕಾವೇರಿ ಹೆಚ್.ಎಂ, ಮಡಿಕೇರಿಯ ಅಮೀನ್ ಮೊಹಿಸಿನ್, ಅರಮೇರಿ ಗ್ರಾಮದ ಡಾ.ರಾಧಿಕ ಕುಟ್ಟಪ್ಪ ಹಾಗೂ ವಿರಾಜಪೇಟೆಯ ಕೆ.ವಿ.ಸುನಿಲ್ ಕುಮಾರ್ ಅವರುಗಳನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.

Read More

ಮಡಿಕೇರಿ ಸೆ.17 NEWS DESK : ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್  ಅವರು ಸ್ಮಾರ್ಟ್ ಕಾರ್ಡ್ ವಿತರಣೆ ವಿತರಣೆ ಮಾಡಿದರು. ನಗರದ  ಹಿಲ್ ಡೆಲ್ ರೆಸಾರ್ಟ್ (ಕ್ರಿಸ್ಟಲ್ ಕೋರ್ಟ್) ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡು ಮಾತನಾಡಿ, ಕರ್ನಾಟಕ ರಾಜ್ಯ ಸರಕಾರದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಅಸಂಘಟಿತ ಕಾರ್ಮಿಕರ ಏಳಿಗೆಗಾಗಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅತ್ಯಂತ ಸಂತೋಷದ ವಿಷಯ. ಅದರಂತೆ ಇಂದು ಕೊಡಗಿನ ಅಸಂಘಟಿತ ಕಾರ್ಮಿಕರಿಗೆ ಬಹು ಉಪಯೋಗಿ  ಸ್ಮಾರ್ಟ್ ಕಾರ್ಡ್ ಅನ್ನು ನೀಡುತ್ತಿರುವುದು ನಮ್ಮ ನಾಡಿನ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ತುಂಬಾ ಬಲವನ್ನು ನೀಡುತ್ತಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಯಾವಾಗಲೂ ತಳಮಟ್ಟದ ಕಾರ್ಮಿಕರಿಗೆ ಮಹತ್ವವನ್ನು ನೀಡುತ್ತಿದ್ದು, ಎಲ್ಲರೂ ಇದರ ಬಗ್ಗೆ ಹೆಮ್ಮೆ ಪಡಬೇಕೆಂದು ಕರೆ ನೀಡಿದರು. ಈ ಸಂದರ್ಭ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ರಾಜ್ಯ…

Read More

ಮಡಿಕೇರಿ ಸೆ.17 NEWS DESK : ನಿವೇಶನ, ವಸತಿ, ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಕೊಡಗು ಜಿಲ್ಲೆಯ ಕಾರ್ಮಿಕರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸೂಚಿಸುವಂತೆ ಒತ್ತಾಯಿಸಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಪತ್ರ ಸಲ್ಲಿಸಿತು. ಮಡಿಕೇರಿಗೆ ಭೇಟಿ ನೀಡಿದ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ಜಿಲ್ಲೆಯ ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು. ಕಾಫಿ, ಕರಿಮೆಣಸು, ಏಲಕ್ಕಿ, ಜೇನು ಸೇರಿದಂತೆ ವಾಣಿಜ್ಯ ಬೆಳೆಗಳ ಕೃಷಿಯ ಮೂಲಕ ಕೊಡಗು ಜಿಲ್ಲೆ ಕರ್ನಾಟಕ ರಾಜ್ಯಕ್ಕೆ ಗಣನೀಯ ಕೊಡುಗೆಯನ್ನು ನೀಡುತ್ತಿದೆ. ಜಿಲ್ಲೆಯ ತೋಟಗಳಲ್ಲಿ ಲಕ್ಷಾಂತರ ಸಂಖ್ಯೆಯ ಕಾರ್ಮಿಕರು ದುಡಿಯುತ್ತಿದ್ದು, ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತೋಟ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಹಮಾಲಿ ಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕ ವರ್ಗ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಆದ್ದರಿಂದ ಕೊಡಗು ಜಿಲ್ಲಾಧಿಕಾರಿಗಳು ಕಾರ್ಮಿಕ ಸಂಘಟನೆಗಳ ನಾಯಕರ…

Read More

ಸೋಮವಾರಪೇಟೆ ಸೆ.17 NEWS DESK : ಸೋಮವಾರಪೇಟೆ ತಾಲ್ಲೂಕಿನಲ್ಲಿರುವ ಐತಿಹಾಸಿಕ ಹಿನ್ನೆಲೆಯುಳ್ಳ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ.ಗಳ ಅನುದಾನ ಕಲ್ಪಿಸುವುದಾಗಿ ಶಾಸಕ ಡಾ.ಮಂತರ್ ಗೌಡ ಅವರು ಭರವಸೆ ನೀಡಿದರು. ಸೋಮವಾರಪೇಟೆ ಹಾಗೂ ಶಾಂತಳ್ಳಿ ಹೋಬಳಿಯ 7 ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು ಮತ್ತು ಅಧಿಕಾರಿಗಳ ತಂಡ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಯಡೂರು ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಹಿಳೆಯರು ತಮ್ಮೂರಿನ ರಸ್ತೆಯ ಸಮಸ್ಯೆಯ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಟ್ಟರು. ಗ್ರಾಮದೊಳಗಿನ ರಸ್ತೆಯಲ್ಲಿ ತಿರುಗಾಡಲು ಸಮಸ್ಯೆಯಾಗಿದೆ. ರಸ್ತೆ ಡಾಮರೀಕರಣಕ್ಕೆ ಅನುದಾನ ಕಲ್ಪಿಸಬೇಕೆಂದು ಮನವಿ ಮಾಡಿದರು. ಚೌಡ್ಲು ಗ್ರಾಮದಲ್ಲಿ ನಡೆದ ಸಭೆಯಲ್ಲಿ ಚೌಡ್ಲು ಸುಗ್ಗಿ ಕಟ್ಟೆ ಅಭಿವೃದ್ಧಿಗೆ 10 ಲಕ್ಷ ರೂ.ಗಳ ಅನುದಾನ ಹಾಗೂ 50 ಲಕ್ಷ ರೂ.ಗಳ ವೆಚ್ಚದಲ್ಲಿ ಚನ್ನಬಸಪ್ಪ ಸಭಾಂಗಣದಿಂದ ಚೌಡ್ಲು ಗ್ರಾಮದೊಳಗಿನ ರಸ್ತೆ ಕಾಮಗಾರಿ ನಡೆಯಲಿದೆ ಎಂದು ಹೇಳಿದರು. ಹಾನಗಲ್ಲು ಶೆಟ್ಟಳ್ಳಿ ಗ್ರಾಮಸ್ಥರು ರಸ್ತೆ, ತಡೆಗೋಡೆ, ಹಾಗು ಸಮುದಾಯಭವನಕ್ಕೆ ಅನುದಾನ ನೀಡುವಂತೆ…

Read More