ಮಡಿಕೇರಿ ಅ.6 NEWS DESK : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು. ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲ್ಯುಎಸ್ ಪ್ರಮಾಣ ಪತ್ರ) ಹೊಂದಿರಬೇಕು. (8 ಲಕ್ಷ ಆದಾಯ ಮಿತಿ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65…
ಲೇಖಕ: admin
ಮಡಿಕೇರಿ ಅ.6 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಮಧ್ಯಸ್ಥಗಾರರಾಗಿ ಸೇವೆ ಸಲ್ಲಿಸಲು ಮಧ್ಯಸ್ಥಗಾರರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಧ್ಯಸ್ಥಗಾರರಾಗಿ ಸೇವೆ ಸಲ್ಲಿಸಲು ಆಸಕ್ತರು ಕ್ರಿಮಿನಲ್, ಸಿವಿಲ್, ವೈವಾಹಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ವಾಣಿಜ್ಯ ವ್ಯಾಜ್ಯ ವಿವಾದಗಳು, ಪ್ರಕರಣಗಳು ಮುಂತಾದ ಎಲ್ಲಾ ವಿಭಾಗಗಳಲ್ಲಿ ಪರಿಣತಿ ಹೊಂದಿರುವ, 15 ವರ್ಷಗಳಿಗೂ ಹೆಚ್ಚು ಕಾಲ ವಕೀಲ ವೃತ್ತಿಯಲ್ಲಿ ಅನುಭವವಿರುವ ವಕೀಲರು, ನಿವೃತ್ತ ನ್ಯಾಯಾಧೀಶರು, ಮಾಜಿ ಸೈನಿಕರು, ಹಿರಿಯ ವಿಮಾ ಕಂಪನಿ ಅಧಿಕಾರಿಗಳು, ಬ್ಯಾಂಕಿಂಗ್ ಸಂಸ್ಥೆಗಳ ಹಿರಿಯ ಅಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು/ ಶಿಕ್ಷಕರು ಹಾಗೂ ವೈದ್ಯರು ಅ.15 ರೊಳಗೆ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಬೇಕು. ಹೆಚ್ಚಿನ ಮಾಹಿತಿಗೆ 08272-222373 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…
ಮಡಿಕೇರಿ ಅ.6 NEWS DESK : 2021ನೇ ಸಾಲಿನ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ಕೊಡವ ಭಾಷೆಯ ‘ನಾಡ ಪೆದ ಆಶಾ’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿ ಲಭಿಸಿದೆ. ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರ ಕಾದಂಬರಿಯನ್ನು ಆಧರಿಸಿ ವಿಕೆ3 ಪಿಕ್ಚರ್ಸ್ ಬ್ಯಾನರಿನಡಿ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರು ‘ನಾಡ ಪೆದ ಆಶಾ’ವನ್ನು ನಿರ್ಮಿಸಿದ್ದು, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿದ್ದಾರೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಗ್ರಾಮೀಣ ಸೊಗಡನ್ನು ಸುಂದರವಾಗಿ ಬಿಂಬಿಸಲಾಗಿದೆ. ಕೊಡವ ಸಂಸ್ಕೃತಿ, ಉಡುಗೆ ತೊಡುಗೆ, ಸಂಪ್ರದಾಯ, ಆಚಾರ ವಿಚಾರಗಳನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಯುದ್ಧದಲ್ಲಿ ವೀರ ಯೋಧ ಪತಿಯನ್ನು ಕಳೆದುಕೊಳ್ಳುವ ಅಂಗನವಾಡಿ ಕಾರ್ಯಕರ್ತೆ ತನ್ನ ಬದುಕಿನ ಕಹಿ ಘಟನೆಯ ನಡುವೆಯೂ ಕರ್ತವ್ಯ, ಸಾಮಾಜಿಕ ಪ್ರಜ್ಞೆ, ಮನೆ ಮತ್ತು ಕುಟುಂಬವನ್ನು ಯಶಸ್ವಿಯಾಗಿ ನಿಭಾಯಿಸುವ ಕಥಾಹಂದರವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. 2021 ರ ಫೆಬ್ರವರಿ ತಿಂಗಳಿನಲ್ಲಿ 15 ದಿನಗಳ ಕಾಲ ಹಗಲುರಾತ್ರಿ…
ಮಡಿಕೇರಿ ಅ.6 NEWS DESK : ಕೊಡಗು “ಜಿಲ್ಲಾ ಮಟ್ಟದ ಯುವಜನೋತ್ಸವ’ ಕಾರ್ಯಕ್ರಮ ಅ.16ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಯುವ ಸಮೂಹಕ್ಕಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ, ಸರಕಾರಿ ಪದವಿ ಪೂರ್ವ ಕಾಲೇಜ್ ನ ಸಹಯೋಗದೊಂದಿಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿದೆ. ಆಸಕ್ತ ಸ್ಪರ್ಧಿಗಳು ಅಂದು ಬೆಳಿಗ್ಗೆ 9.30 ಗಂಟೆಯೊಳಗೆ ಹಾಜರಿದ್ದು ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. *ಗುಂಪು ಸ್ಪರ್ಧೆ* ಜನಪದ ನೃತ್ಯ 10 ಜನರ ತಂಡ, 15 ನಿಮಿಷಗಳು, ಜನಪದ ಗೀತೆ 10 ಜನರ ತಂಡ, 7 ನಿಮಿಷ ಕಾಲಾವಕಾಶ ನೀಡಲಾಗುವುದು. ಯಾವುದೇ ರೀತಿಯ ರೀಮಿಕ್ಸ್ ಅಥವಾ ಮೂಲ ಹಾಡಿನ ಬದಲಾವಣೆಗೆ ಅವಕಾಶ ಇರುವುದಿಲ್ಲ. ಮೂಲ ಜನಪದ ಗೀತೆಯನ್ನು…
ಸೋಮವಾರಪೇಟೆ ಅ.6 NEWS DESK : ಮಳೆ, ಬಿಸಿಲೆನ್ನದೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುತ್ತಿರುವ ಶಿಕ್ಷಕರಿಗೆ ನೋಟಿಸ್ ನೀಡಿದ್ದು, ಅದನ್ನು ತಕ್ಷಣವೇ ಹಿಂಪಡೆಯ ಬೇಕೆಂದು ಒತ್ತಾಯಿಸಿ ಶಿಕ್ಷಕರ ಸಂಘ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ನೂರಾರು ಶಿಕ್ಷಕರು ಗಣತಿಕಾರ್ಯದಿಂದ ತಾವು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಅವಲತ್ತುಕೊಂಡರು. ಮಳೆ, ಬಿಸಿಲನ್ನು ಲೆಕ್ಕಿಸದೆ ದಸರಾ ರಜೆಯಲ್ಲಿಯೂ ಕರ್ತವ್ಯ ನಿರ್ವಹಿಸಿದ ಸೋಮವಾರಪೇಟೆ, ಕುಶಾಲನಗರ ತಾಲೂಕಿನ 275 ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ ಇದು ಯಾವ ನ್ಯಾಯವೆಂದು ಪ್ರಶ್ನಿಸಿದ್ದಾರೆ. ಸರ್ಕಾರಿ ಕಚೇರಿಗಳು, ಶೌಚಾಲಯ, ಖಾಲಿ ಮನೆಗಳಿಗೂ ಯು.ಹೆಚ್.ಐ.ಡಿ ಕೋಡ್ ಹಾಕಲಾಗಿದೆ, ಗುಡ್ಡಗಾಡು ಪ್ರದೇಕಷ್ಟಶದಲ್ಲಿ ಮನೆ ಹುಡುಕುವುದೇ ಸವಾಲಾಗಿದೆ ಇಂತಹ ಪರಿಸ್ಥಿಯಲ್ಲಿ ಕರ್ತವ್ಯ ನಿರ್ವಹಿಸುವ ನಮ್ಮ ಪರಿಸ್ಥಿತಿ ಹೇಳತೀರದು ಎಂದು ತಮ್ಮ ಸದಸ್ಯೆಯನ್ನು ವಿವರಿಸಿದರು. ಗಣತಿ ಕಾರ್ಯದ ಆ್ಯಪ್ ಹಾಗೂ ಮನೆಗಳು ಸಿಗದೇ ಇದ್ದ ತಾಂತ್ರಿಕ ದೋಷ ಮತ್ತಿತರ ಸಮಸ್ಯೆಯಿಂದ ಐದು ದಿನಗಳ ನಂತರ ಗಣತಿ ಕಾರ್ಯ ವಿಳಂಬವಾಗಿದೆ. ಇದರ ಜತೆಗೆ ಶೇ.20-25 …
ಮಡಿಕೇರಿ, ಅ.6 NEWS DESK : ಭಾರತ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ ಹಾಗೂ ಅತ್ಯುತ್ತಮ ಸೇವೆಗಾಗಿ ಭಾರತ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಬೆಂಗಳೂರಿನಲ್ಲಿ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಸೇರಿದಂತೆ ಐವರು ಸನ್ಮಾನ ಸ್ವೀಕರಿಸಿದರು. ಬೆಂಗಳೂರಿನ ರಾಜ್ಯಭವನದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕಗಳ ಪ್ರಧಾನ ಆಯುಕ್ತರು, ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ತಲಾ ಮೂವರು ಲೀಡರ್ ಟ್ರೈನರ್ಸ್ಗ್ ಗಳಿಗೆ ಸನ್ಮಾನಿಸಿ ಸನ್ಮಾನ ಪತ್ರ ವಿತರಿಸಿದರು. ಸ್ಕೌಟ್ಸ್, ಗೈಡ್ಸ್ ನ ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಅವರು ನೆನಪಿನ ಕಾಣಿಕೆ ನೀಡಿದರು. ಜಿಲ್ಲೆಯ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಹಾಗೂ ಕಾರ್ಯದರ್ಶಿ ಎಂ.ಎಂ.ವಸಂತಿ ಸೇರಿದಂತೆ ಲೀಡರ್ ಟ್ರೈನರ್ಸ್ ಗಳಾದ ಜಿಲ್ಲಾ ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ತರಬೇತುದಾರರಾದ ಮೈಥಿಲಿ ರಾವ್ ಹಾಗೂ…
ವಿರಾಜಪೇಟೆ ಅ.6 NEWS DESK : ನಮ್ಮ ಬದುಕಿಗೆ ಆಧಾರವಾದ, ನಮ್ಮ ಕೆಲಸವನ್ನು ಸುಗಮಗೊಳಿಸುವ ನಿರ್ಜೀವ ವಸ್ತುಗಳಲ್ಲಿಯೂ ಜೀವಂತ ದೈವತ್ವವನ್ನು ಕಾಣುವುದು ಮತ್ತು ಅದರ ನಂಬಿಕೆಯ ದ್ಯೋತಕವೇ ಈ ಆಯುಧ ಪೂಜೆ ಹಬ್ಬ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ವಿರಾಜಪೇಟೆಯ ಬಸ್ಸು ನಿಲ್ಧಾಣದಲ್ಲಿ ಆಯೋಜಿಸಲಾಗಿದ್ದ ಕೊಡಗು ಖಾಸಗಿ ¨ಸ್ಸ್ ಕಾರ್ಮಿಕರ ಸಂಘ ವಿರಾಜಪೇಟೆ ಇವರ 18ನೇ ವರ್ಷದ ಆಯುಧ ಪೂಜೆ ಹಾಗು ವಿವಿಧ ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಪೊನ್ನಣ್ಣ ಅವರು, ಆಯುಧ ಪೂಜೆ ಕೇವಲ ಉಪಕರಣಗಳ ಪೂಜೆಯಲ್ಲ, ಅದು ಮನುಷ್ಯನ ಸೃಜನಶೀಲತೆಗೆ ಮತ್ತು ಕೌಶಲ್ಯಕ್ಕೆ ಸಲ್ಲಿಸುವ ಗೌರವ. ವಿಶ್ವಕರ್ಮನ ಚೈತನ್ಯವು ಪ್ರತಿಯೊಂದು ಉಪಕರಣದಲ್ಲಿ ಮತ್ತು ಅದನ್ನು ಬಳಸುವ ಕುಶಲಕರ್ಮಿಯಲ್ಲಿ ನೆಲೆಸಿದೆ. ನಮ್ಮ ದೇಹದ ಒಳಗಿನ ಆಂತರಿಕ ದ್ವೇಷವನ್ನು ಸಂಹಾರ ಮಾಡಿ ಒಳ್ಳೆಯ ಶಕ್ತಿಯ ಗೆಲುವು, ದುಷ್ಟ ಶಕ್ತಿಯ ಸೋಲು ಕಾಣುವಂತಾಗಬೇಕು. ರಾಜ್ಯದ ಎಲ್ಲಾ ಭಾಗಗಳಲ್ಲಿ ನಾಡ ಹಬ್ಬ ದಸರಾಗೆ…
ಮೂರ್ನಾಡು ಅ.6 NEWS DESK : ಮೂರ್ನಾಡು ವಿವೇಕ ಜಾಗೃತ ಬಳಗ ಹಾಗೂ ಸಾಲಿಗ್ರಾಮ ಡಿಸೈನ್ ಪಾರ್ಕ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಯೋಗಾರೋಗ್ಯ ಕಾರ್ಯಕ್ರಮ ಅ.7 ರಂದು ಮೂರ್ನಾಡು ಕೊಡವ ಸಮಾಜದಲ್ಲಿ ನಡೆಯಲಿದೆ. ಅಂದು ಅಪರಾಹ್ನ 2.30 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಕೋಟದ ಮಕ್ಕಳ ತಜ್ಞರಾದ ಡಾ. ಮಾಧವ ಪೈ ಆಗಮಿಸಲಿದ್ದಾರೆ . ಈ ಕಾರ್ಯಕ್ರಮದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮೂರ್ನಾಡು ವಿವೇಕ ಜಾಗೃತ ಬಳಗ ಮನವಿ ಮಾಡಿಕೊಂಡಿದೆ.
ನಾಪೋಕ್ಲು ಅ.6 NEWS DESK : ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂದಿ ವಿಭಾಗದ ವತಿಯಿಂದ ಹಿಂದಿ ದಿವಸ್ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲರಾದ ಡಾ. ಎಂ.ಬಿ.ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಪೊನ್ನಂಪೇಟೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ರ್ಯಾಂಚ್ ಮ್ಯಾನೇಜರ್ ಶ್ರೀಕಾಂತ್ ಸಾಹು ಅವರು ಮುಖ್ಯ ಅಥಿತಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಕಾಲೇಜು ಉಪಪ್ರಾಂಶುಪಾಲರಾದ ಪ್ರೊ. ಎಂ.ಎಸ್.ಭಾರತಿ, ಹಿಂದಿ ವಿಭಾಗ ಮುಖ್ಯಸ್ಥರಾದ ಡಾ. ಪಿ.ಪಿ.ಸವಿತಾ, ಉಪನ್ಯಾಸಕರಾದ ಲೆಫ್ಟಿ ನೆಂಟ್. ಐ.ಡಿ.ಲೇಪಾಕ್ಷಿ ಇನ್ನಿತರರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.6 NEWS DESK : ಮಡಿಕೇರಿ ದಸರಾ ಕ್ರೀಡಾಕೂಟದ ಮಹಿಳೆಯರ ಹಗ್ಗ ಜಗ್ಗಾಟದ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಈ ಸಂದರ್ಭ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಪದಾಧಿಕಾರಿಗಳು ಹಾಗೂ ಸದಸ್ಯರ ಉಪಸ್ಥಿತಿಯಲ್ಲಿ ಬಹುಮಾನವನ್ನು ಸ್ವೀಕರಿಸಿಕೊಳ್ಳಲಾಯಿತು. ವರದಿ : ದುಗ್ಗಳ ಸದಾನಂದ.






