ಲೇಖಕ: admin

ಮಡಿಕೇರಿ ಸೆ.17 NEWS DESK : ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಎಂ.ಸಿ ನಾಣಯ್ಯ ಅವರ ಮನೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್,  ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ಕುಶಲೋಪರಿ ವಿಚಾರಿಸಿದರು.  ಜನ್ಮದಿನ ಸಂಭ್ರಮದಲ್ಲಿದ್ದ ಎಂ.ಸಿ.ನಾಣಯ್ಯ ಅವರನ್ನು ಅಭಿನಂದಿಸಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ  ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ  ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.17 NEWS DESK : ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಸುವ ಕರ್ನಾಟಕ ರಾಜ್ಯದ ಸಮಗ್ರ ಜನತೆಯ ಜಾತಿ ಜನಗಣತಿಯ ಸಂದರ್ಭ ಕೊಡವ ಭಾಷಿಕ ಜನಾಂಗದವರು ಧರ್ಮವನ್ನು “ಹಿಂದೂ”, ಜಾತಿಯನ್ನು ಸರಕಾರದ ಜಾತಿವಾರು ಪಟ್ಟಿಯಲ್ಲಿ ಈಗಾಲೇ ಗುರುತಿಸಲ್ಪಟ್ಟಿರುವ ತಮ್ಮ ಜಾತಿಯ ಹೆಸರನ್ನು ಮತ್ತು ಭಾಷೆ ಕಾಲಂನಲ್ಲಿ ಕೊಡವ ಭಾಷೆ ಎಂದು ನಿಖರ ಮಾಹಿತಿ ನೀಡುವಂತೆ ಕೊಡವ ಭಾಷಿಕ ಸಮುದಾಯಗಳ ಕೂಟ ಮನವಿ ಮಾಡಿದೆ. ವಿರಾಜಪೇಟೆಯ ಜಯಶ್ರೀ ಸಭಾಂಗಣದಲ್ಲಿ ನಡೆದ ಕೊಡವ ಭಾಷಿಕ ಸಮುದಾಯಗಳ ಕೂಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಜಾತಿ ಜನಗಣತಿ ಸಂದರ್ಭ ನಿಖರ ಮಾಹಿತಿ ನೀಡಿ ಸಹಕರಿಸುವಂತೆ ತಿಳಿಸಿದರು. ಗಣತಿದಾರರು ಮನೆಗೆ ಭೇಟಿ ನೀಡಿದಾಗ ಶೈಕ್ಷಣಿಕ, ಉದ್ಯೋಗ, ಅರ್ಥಿಕ, ಸಾಮಾಜಿಕ ಮತ್ತಿತರ ಮಾಹಿತಿಯನ್ನು ಯಾವುದೇ ತಪ್ಪಿಲ್ಲದೆ ಸ್ಪಷ್ಟವಾಗಿ ನೀಡಬೇಕು. ಸರಿಯಾದ ಮಾಹಿತಿ ನೀಡುವುದರಿಂದ ಮುಂದಿನ ದಿನಗಳಲ್ಲಿ…

Read More

ವಿರಾಜಪೇಟೆ ಸೆ.17 NEWS DESK : ಶಿವಕೇರಿಯ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೆ.22 ರಿಂದ ಅ.1 ರವರೆಗೆ ವಿಶೇಷ ಪೂಜೆಗಳು ನಡೆಯಲಿದೆ. 9 ದಿವಸ ನವದುರ್ಗಿ ಮಾತೆಯ 9 ಅವತಾರದ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮ ನಿತ್ಯ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕೆಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ವಿರಾಜಪೇಟೆ ಸೆ.17 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.20 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಪಟ್ರಪಂಡ ಗೀತಾ ಬೆಳ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹಾಸಭೆಗೆ ಮಹಿಳಾ ಸಹಕಾರ ಸಂಘದ ಎಲ್ಲ ಸದಸ್ಯರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪುತ್ತೂರು ಸೆ.17 NEWS DESK : ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಮೌಲ್ಯಯುತವಾಗಿ ಬಳಸಿಕೊಂಡರೆ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಬಹುದು ಎಂದು ಜಗತ್ತಿಗೆ ತಿಳಿಸಿಕೊಟ್ಟ ಸರ್.ಎಂ.ವಿಶ್ವೇಶ್ವರಯ್ಯನವರ ಜೀವನವು ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಪರವಾನಿಗೆ ಪಡೆದ ಭೂಮಾಪಕ ವಿನೋದ್ ಕುಮಾರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಸಿವಿಲ್ ಇಂಜಿನಿಯರಿಂಗ್ ಮುಗಿಸಿದವರಿಗೆ ಸಾಕಷ್ಟು ಸರಕಾರಿ ಕೆಲಸಗಳು ಲಭ್ಯವಿದೆ, ಇದಕ್ಕಾಗಿ ಒಂದಷ್ಟು ಪೂರ್ವ ತಯಾರಿಯ ಅಗತ್ಯವಿದೆ ಎಂದರು. ಯಾವುದೇ ಕೆಲಸ ಮಾಡುವಾಗ ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು, ದಿನದಿಂದ ದಿನಕ್ಕೆ ಬದಲಾಗುವ ತಂತ್ರಜ್ಞಾನವನ್ನು ಇಂಜಿನಿಯರುಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಸಮಾಜದ ಉನ್ನತಿಗೆ ಮತ್ತು ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಮೂಲಸೌಕರ್ಯದಿಂದ ಹಿಡಿದು…

Read More

ಕಾರ್ಕಳ ಸೆ.17 NEWS DESK : ನಿಟ್ಟೆ ಎನ್.ಎಂ.ಎ.ಎಂ.ಐ.ಟಿ ಯಲ್ಲಿ ನಡೆದ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಹ್ಯಾನ್ಸೆಲ್ ಇಮ್ಯಾನುಯೆಲ್ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

Read More

ಮಡಿಕೇರಿ ಸೆ.17 NEWS DESK : ಅಲ್ಲಾರಂಡ ರಂಗಚಾವಡಿ ಮತ್ತು ಮಡಿಕೇರಿ ಕೊಡವ ಸಮಾಜದ ವತಿಯಿಂದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 158ನೇ ಜನ್ಮ ದಿನವನ್ನು ಸೆ.21 ರಂದು ಆಚರಿಸಲಾಗುವುದು. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಪ್ಪಚ್ಚಕವಿ ಕಲಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಮನೋಜ್ ಮಂದಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಲ್ಲಾರಂಡ ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಅಲ್ಲಾರಂಡ ವಿಠಲ ನಂಜಪ್ಪ ನಿರ್ಮಾಣ ನಿರ್ದೇಶಿಸಿದ 30 ನಿಮಿಷದ ಕವಿ ನೆಪ್ಪುರ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದ್ದು, ಕೊಡವ ಸಿನಿಮಾ ನಿರ್ಮಾಪಕಿ, ಸಹ ನಿರ್ದೇಶಕಿ ಹಾಗೂ ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು.

Read More

ಕಲಬುರ್ಗಿ ಸೆ.17 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರ್ಗಿಯ ಶರಣ ಬಸವೇಶ್ವರ ಸಂಸ್ಥಾನಕ್ಕೆ ಭೇಟಿ ನೀಡಿ, ಇತ್ತೀಚಿಗೆ ಶಿವೈಕ್ಯರಾದ ಪೂಜ್ಯಶ್ರೀ ಡಾ.ಶರಣ ಬಸಪ್ಪ ಅಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಮತ್ತು ಜಿಲ್ಲೆಯ ಶಾಸಕರುಗಳು ಜೊತೆಗಿದ್ದರು.

Read More

ಮಡಿಕೇರಿ ಸೆ.17 NEWS DESK :  ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 14, 15 ಹಾಗೂ 16 ರಂದು ಕೊಡವ ಪ್ರೀಮಿಯರ್ ಲೀಗ್ -2025 ಸೀಸನ್-4 ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಆಟಗಾರರ ನೋಂದಣಿಗೆ ಸೆ.25 ಕೊನೆಯ ದಿನವಾಗಿದೆ.  ಪಂದ್ಯಾವಳಿಯು ಐಪಿಎಲ್ ಮಾದರಿಯಲ್ಲಿ ಇರಲಿದ್ದು, 12 ಫ್ರೆಂಚೈಸಿಗಳನ್ನು ಹೊಂದಿದೆ ಎಂದು ಪಂದ್ಯಾವಳಿಯ ಆಯೋಜಕರು ತಿಳಿಸಿದ್ದಾರೆ.

Read More

ಬೆಂಗಳೂರು ಸೆ.17 NEWS DESK : ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯಲ್ಲಿ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಡಿ. ಸುಧಾಕರ್, ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ.ಅಜಯ್‌ ಸಿಂಗ್‌ ಉಪಸ್ಥಿತರಿದ್ದರು.

Read More