ಲೇಖಕ: admin

ಕುಶಾಲನಗರ ಜು.31 NEWS DESK : ಸಾಮಾಜಿಕ ಕಳಕಳಿಯೊಂದಿಗೆ ಪ್ರಾಮಾಣಿಕ  ಸೇವಾ ಮನೋಭಾವದ ಮೂಲಕ ಪತ್ರಕರ್ತರು ವಸ್ತುನಿಷ್ಠ ವರದಿ ಮಾಡಿದಲ್ಲಿ ಮಾತ್ರ  ಸಮಾಜ ಸುಧಾರಣೆ ಕಾಣಲು ಸಾಧ್ಯವಾಗಲಿದೆ ಎಂದು  ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.   ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ.,  ವಂಶಿ ನ್ಯೂಸ್ ಹಾಗೂರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ  ಪತ್ರಿಕಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ನೀಡಲಾಗುವ ಕಾವೇರಿ ರತ್ನ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶದಲ್ಲಿ ನಾವೆಲ್ಲರೂ ಸಂವಿಧಾನವನ್ನು ಪಾಲಿಸುವ ಮೂಲಕ ಸಮಾಜವನ್ನು ಸದೃಢಗೊಳಿಸಬೇಕು.  ಇಂದಿನ ಸಮಾಜದ ಪ್ರಗತಿಗೆ ಪತ್ರಿಕಾ ರಂಗದ‌ ಪಾತ್ರ ಮಹತ್ವದ್ದಾಗಿದೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದ ಜೊತೆಗೆ  ಪತ್ರಿಕಾ ರಂಗವೂ  ಗುರುತಿಸಿಕೊಂಡಿದೆ.  ಯಾವುದೇ ಕ್ಷೇತ್ರದಲ್ಲಿ ಲೋಪ ದೋಷಗಳು ಕಂಡುಬಂದಲ್ಲಿ   ಪತ್ರಿಕಾ ರಂಗ ತನ್ನ ವರದಿಯ ಮೂಲಕ  ತಿದ್ದುವಂತ ಕೆಲಸ ಮಾಡುತ್ತದೆ. ವಂಶಿ…

Read More

ಮಡಿಕೇರಿ NEWS DESK ಜು.30 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನಧಿಕೃತವಾಗಿ, ಕಾನೂನು ಬಾಹಿರವಾಗಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿರುವುದು ಬಹಳ ಆತಂಕಕಾರಿಯದ ಬೆಳವಣಿಗೆಯಾಗಿದೆ. ಸುಮಾರು ರೂ.390 ಕೋಟಿಗಿಂತಲೂ ಅಧಿಕ ಮೌಲ್ಯದ ಡ್ರಗ್ಸ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಪೊಲೀಸರು ಈ ಪ್ರಕರಣವನ್ನು ಪತ್ತೆ ಮಾಡಿರುವುದು ರಾಜ್ಯದ ಪೊಲೀಸ್ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಹ ಸಂಚಾಲಕ ಮಹೇಶ್ ಕಡಗದಾಳು, ಮೈಸೂರು ಮಹಾನಗರ ಜಿಲ್ಲಾ ಸಂಚಾಲಕ ರಂಗಸ್ವಾಮಿ ಹಾಗೂ ಮೈಸೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ಅನೀಶ್ ಪಿರಿಯಾಪಟ್ಟಣ ಆರೋಪಿಸಿದ್ದಾರೆ. ಸ್ವತ: ರಾಜ್ಯದ ಗೃಹ ಸಚಿವರು ಈ ಬಗ್ಗೆ ಮಾತನಾಡಿದ್ದು ರಾಜ್ಯ ಪೋಲಿಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದ ತಯಾರಿಕಾ ಘಟಕ ಅದರಲ್ಲೂ ಕಾನೂನು ಬಾಹಿರವಾಗಿ ನಡೆಯುತ್ತಿರುವುದರ ಬಗ್ಗೆ ಪೋಲಿಸ್ ಇಲಾಖೆಯ ಗುಪ್ತಚರ ಇಲಾಖೆಯ ಗಮನಕ್ಕೆ ಬಾರದಿರುವುದು ವಿಪರ್ಯಾಸ. ರಾಜ್ಯದಲ್ಲಿ ವ್ಯಾಪಕವಾಗಿ ಡ್ರಗ್ಸ್ ಮಾರಾಟವಾಗುತ್ತಿರುವುದು ಆತಂಕವನ್ನು ಉಂಟು ಮಾಡುತ್ತಿದೆ. ಈಗಾಗಲೇ…

Read More

ಮೈಸೂರು NEWS DESK ಜು.30 : ಮೈಸೂರು ಇಡೀ ವಿಶ್ವದಲ್ಲಿ ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಊರು ಎಂದು ಜನಜನಿತವಾಗಿದೆ. ಆದರೆ ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳು ವಶವಾಗಿರುವುದು ಈ ಖ್ಯಾತಿಗೆ ಅಪಖ್ಯಾತಿ ತಂದಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ. ಬುಧವಾರ ನಡೆದ ಲೋಕಸಭಾ ಕಲಾಪದಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, 390 ಕೋಟಿ ರೂಪಾಯಿ ಮೌಲ್ಯದ ಎಂಡಿಎಂ ಡಗ್ಸ್ ಪತ್ತೆಯಾಗಿರುವುದು ಆತಂಕಕಾರಿ ವಿಷಯವಾಗಿದೆ ಎಂದರು. ಸರ್ಕಾರಿ ಜಾಗದಲ್ಲಿಯೇ ಈ ಡ್ರಗ್ಸ್ ಕೇಂದ್ರವಿದ್ದು, ಕರ್ನಾಟಕ ಪೊಲೀಸರು ಯಾವುದೇ ರೀತಿಯಲ್ಲೂ ಕ್ರಮ ಕೈಗೊಂಡಿಲ್ಲ. ಅಚ್ಚರಿಯ ವಿಷಯ ಎಂದರೆ ಮಹಾರಾಷ್ಟ್ರ ಪೊಲೀಸರು ಮೈಸೂರಿಗೆ ಬಂದು ದಾಳಿ ನಡೆಸಿ ಈ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿದ್ದಾರೆ ಎಂದು ಸಂಸದ ಯದುವೀರ್ ಸದನದ ಗಮನ ಸೆಳೆದರು. ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆಯ…

Read More

ಮಡಿಕೇರಿ NEWS DESK ಜು.30 : ಸೋಮವಾರಪೇಟೆ ತಾಲ್ಲೂಕು ಮಾನವ ಬಂಧುತ್ವ ವೇದಿಕೆ ವತಿಯಿಂದ ಶನಿವಾರಸಂತೆ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬಸವ ಪಂಚಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಅವರು ನಾಗರಪಂಚಮಿ ಎನ್ನುವುದು ಮೌಢ್ಯತೆಯ ಆಚರಣೆಯಾಗಿರುವುದರಿಂದ ಇದರ ಬದಲಾಗಿ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದರು. ಹುತ್ತದ ಹಾವಿಗೆ ಹಾಲೆರೆಯುವ ಬದಲು ಬೆಳೆಯುವ ಮಕ್ಕಳಿಗೆ ಹಾಲನ್ನೆರೆದರೆ ಭವಿಷ್ಯದಲ್ಲಿ ವೈಚಾರಿಕತೆಯ ಪ್ರಜ್ಞೆಯನ್ನು ಮೂಡಿಸುವ ಜವಾಬ್ದಾರಿಯನ್ನು ಮಕ್ಕಳು ನಿಭಾಯಿಸುತ್ತಾರೆ. ಈ ರೀತಿಯ ಸಾಮಾಜಿಕ ಪರಿವರ್ತನೆಯ ಕೆಲಸಗಳನ್ನು ಮಾನವ ಬಂಧುತ್ವ ವೇದಿಕೆ ಜನಪ್ರತಿನಿಧಿ ಸತೀಶ್ ಜಾರಕಿಹೊಳಿ ಅವರ ಆಶಯದಂತೆ ಮಾಡುತ್ತಿದ್ದು, ಮೌಲ್ಯಯುತ ಆದರ್ಶಗಳನ್ನು ಮಕ್ಕಳಲ್ಲಿ ತುಂಬುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿಯ ಒಕ್ಕೂಟದ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವ ಅಗತ್ಯವಿದೆ. ಈ ನಾಡಿನಲ್ಲಿ ನಡೆಯುವ ಎಲ್ಲಾ ಆಚರಣೆಗಳ ಮೂಲ ಉದ್ದೇಶಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮೂಢನಂಬಿಕೆಗಳನ್ನು ತ್ಯಜಿಸಿ ವಿಜ್ಞಾನದಲ್ಲಿ ಆಸಕ್ತಿ ವಹಿಸಬೇಕು. ಶೈಕ್ಷಣಿಕ…

Read More

ಮಡಿಕೇರಿ ಜು.30 NEWS DESK : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್, 13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. :: ವ್ಯಾಜ್ಯ ಪೂರ್ವ ಪ್ರಕರಣಗಳು :: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ  ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.  :: ನ್ಯಾಯಾಲಯದಲ್ಲಿ ಬಾಕಿ ಇರುವ…

Read More

ಮಡಿಕೇರಿ ಜು.29 NEWS DESK  :  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ (DA-JGUA) ಮತ್ತು ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನ (PM-JUGA) ದ ಅಧೀನದಲ್ಲಿ, ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ಯೋಜನೆಯ ಉಪಯೋಜನೆಯಾಗಿ ಆದಿವಾಸಿ ಪ್ರದೇಶಗಳಲ್ಲಿ ಹೋಂಸ್ಟೇ ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದ್ದು, ಈ ಯೋಜನೆಯ ಉದ್ದೇಶ, ಪರಿಶಿಷ್ಟ ಪಂಗಡದ ಬುಡಕಟ್ಟು/ಅದಿವಾಸಿ ಸಮುದಾಯವಿರುವ ಗ್ರಾಮಗಳಲ್ಲಿ ಅತಿಥ್ಯಾಧಾರಿತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ಸ್ಥಳೀಯ ಜನರಿಗೆ ಖಾಯಂ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವುದು ಮತ್ತು ಬುಡಕಟ್ಟು/ ಆದಿವಾಸಿ ಸಮುದಾಯದ ಸಂಸ್ಕøತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದಾಗಿದೆ. ಈ ಯೋಜನೆಯಡಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮವನ್ನು ಆಯ್ಕೆ ಮಾಡಲಾಗಿರುತ್ತದೆ. ಆಯ್ಕೆ ಮಾಡಿರುವ ಈ ಗ್ರಾಮದಲ್ಲಿ ಹೋಂಸ್ಟೇಗಳನ್ನು ಅಭಿವೃದ್ಧಿಪಡಿಸಲು ಸ್ಥಳೀಯ ಪರಿಶಿಷ್ಟ ಪಂಗಡದ ಬುಡಕಟ್ಟು/ ಆದಿವಾಸಿ ಸಮುದಾಯಗಳಿಗೆ ಪ್ರತಿ ಹೋಂ-ಸ್ಟೇ ನಿರ್ಮಾಣಕ್ಕೆ 5 ಲಕ್ಷದವರೆಗೆ ಸಹಾಯಧನ, ನವೀಕರಣಕ್ಕೆ 3 ಲಕ್ಷದವರೆಗೆ ಹಣಕಾಸು ಸಹಾಯಧನ ನೀಡಲಾಗುವುದು.…

Read More

ಮಡಿಕೇರಿ ಜು.30 NEWS DESK : ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.  ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ  ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು  ರೂ.47000 ಹಾಗೂ ಅಡಿಕೆ ಬೆಳೆಗೆ  ರೂ.128000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ 2025 ರ ಆಗಸ್ಟ್, 11 ಕೊನೆಯ…

Read More

ಮಡಿಕೇರಿ ಜು.30 NEWS DESK : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಪ್ರಸಕ್ತ ಸಾಲಿನಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆಯನ್ನು ಏರ್ಪಡಿಸುತ್ತಿದೆ. ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ ಪರಿಗಣಿಸಲಾಗುವುದು. 10 ರಿಂದ 15 ವರ್ಷ ವಯೋಮಾನದ ಕಿರೋರ ಪ್ರತಿಭೆಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ, ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ ರೂ.20 ಸಾವಿರ, ದ್ವಿತೀಯ ಬಹುಮಾನ ರೂ. 15 ಸಾವಿರ, ತೃತೀಯ ಬಹುಮಾನ ರೂ.10 ಸಾವಿರ ಮತ್ತು ಇಬ್ಬರಿಗೆ ಸಮಾಧಾನಕರ ಬಹುಮಾನ (ತಲಾ ರೂ.5,000 ದಂತೆ)ಇರುತ್ತವೆ. ಪ್ರತ್ಯೇಕ ಸಮಾರಂಭವೊಂದರಲ್ಲಿ ಬಹುಮಾನ ವಿತರಿಸಲಾಗುವುದು. ಕಿಶೋರ ಪ್ರತಿಭೆ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧ್ಯಯನ ಕೇಂದ್ರದ ಜಾಲತಾಣ https://kanakadasaresearcheenter.karnataka.gov.in/ ರಲ್ಲಿ ಅರ್ಜಿಗಳನ್ನು ಡೌನಲೋಡ್ ಮಾಡಿಕೊಂಡು ಪೂರ್ಣ ಮಾಹಿತಿಯೊನ್ನೊಳಗೊಂಡ ಅರ್ಜಿಗಳನ್ನು ಭರ್ತಿಮಾಡಿ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಗೆ ಅಥವಾ ಇ-ಮೇಲ್ kanakaresearchcentre@gmail.com ಮೂಲಕ 2025ರ ಸೆಪ್ಟೆಂಬರ್, 20ರೊಳಗೆ ತಲುಪುವಂತೆ…

Read More

ವಿರಾಜಪೇಟೆ ಜು.30 NEWS DESK : ಕೇರಳದ ತಿರುವನಂತಪುರದ ಗ್ರೀನ್ ಫೀಲ್ಡ್ ಸ್ಟೇಡಿಯಂನಲ್ಲಿ ನಡೆದ ಸ್ಟೀಫನ್ ಜಾಕೋಬ್ ಕೋಶಿ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾರತೀಯ ಟೆಕ್ ಸಿಲ್ಲೋ ತಂಡವನ್ನು ಕೊಡಗಿನ ಹಿರಿಯ ಬಾಸ್ಕೆಟ್‌ಬಾಲ್ ಆಟಗಾರರು ಪ್ರತಿನಿಧಿಸಿ ಮೂರು ಚಿನ್ನದ ಪದಕಗಳನ್ನು ಪಡೆದು ಉನ್ನತ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯ 55 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಒಂದು ಚಿನ್ನದ ಪದಕ, 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಒಂದು ಚಿನ್ನದ ಪದಕ ಹಾಗೂ 65 ವರ್ಷ ಮೇಲ್ಪಟ್ಟ ಆಟಗಾರರ ವಿಭಾಗದಲ್ಲಿ ಒಂದು ಚಿನ್ನದ ಪದಕಗಳನ್ನು ಪಡೆಯುವುದರೊಂದಿಗೆ ಜಿಲ್ಲಾ ತಂಡವು ಸಾಧನೆಯನ್ನು ಮಾಡಿದೆ. ಪಂದ್ಯಾವಳಿಯಲ್ಲಿ ಕೊಡಗಿನ ಹಿರಿಯ ಅಂತಾರಾಷ್ಟ್ರೀಯ ಆಟಗಾರ್ತಿ ಡಾ. ಮಂಡೇಪಂಡ ಪುಷ್ಪ ಕುಟ್ಟಣ್ಣ, ಮತ್ತೋರ್ವ ಹಿರಿಯ ಅಂತಾರಾಷ್ಟ್ರೀಯ ಆಟಗಾರ್ತಿ ಕಾಡ್ಯಮಾಡ ದೇಚಮ್ಮ ಪೂಣಚ್ಚ, ಪಳಂಗಂಡ ವಾಣಿ ಚೆಂಗಪ್ಪ, ಕೊಲ್ಲಿಮಾಡ ರಶ್ಮಿ ಅಯ್ಯಪ್ಪ, ಬಲ್ಯಮೀದೇರೀರ ಆಶಾ ಶಂಕರ್, ತಾತಂಡ ಜ್ಯೋತಿ ಪ್ರಕಾಶ್, ಐನಂಡ ಜಮುನಾ ಚಂಗಪ್ಪ, ಕೋಣೆರೀರ ಶಿಲ್ಪಾ ಪೆಮ್ಮಯ್ಯ, ಚೋವಂಡ…

Read More

ಗೋಣಿಕೊಪ್ಪ ಜು.30 NEWS DESK : ಬಾಳೆಲೆ ಫಾರ್ಮರ್ಸ್ ಅಸೋಸಿಯೆಷನ್ ವತಿಯಿಂದ ನಿಟ್ಟೂರು ಗ್ರಾಮದಲ್ಲಿರುವ ಡ.ಮಾಪಂಗಡ ಬೆಳ್ಯಪ್ಪ ಅವರ ಗದ್ದೆಯಲ್ಲಿ ಆ.15 ರಂದು ಪೊನ್ನಂಪೇಟೆ ತಾಲ್ಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಅಸೋಷಿಯೇಷನ್ ಅಧ್ಯಕ್ಷ ಅಳಮೇಂಗಡ ಬೋಸ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಸಂಘ-ಸಂಸ್ಥೆಗಳ ಸಹಯೊಗದಲ್ಲಿ 4ನೇ ವರ್ಷದ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. 10 ವರ್ಷ, 10-14 ವರ್ಷ, 15 ರಿಂದ 17 ವರ್ಷ, 18-35 ವರ್ಷದ ಯುವಕರಿಗೆ, 36 ವರ್ಷ ಮೇಲ್ಪಟ್ಟವರಿಗೆ ಹಾಗೂ 56 ವರ್ಷ ಮೇಲ್ಟಟ್ಟವರಿಗೆ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನ 2 ಗಂಟೆಯ ನಂತರ ಸ್ಪರ್ಧೆ ನಡೆಯಲಿದೆ. ಶಾಲಾ-ಕಾಲೇಜು ಮುಗಿದ ಮೇಲೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ನಡೆಯಲಿದೆ. 7 ಜನರ ತಂಡ ಭಾಗವಹಿಸಬಹುದಾಗಿದೆ. ವಾಲಿಬಾಲ್ ಕ್ರೀಡೆಗೆ ಪುರುಷರು ಮಾತ್ರ ಭಾಗವಹಿಸಬೇಕಿದೆ. ಎರಡು ವಿಭಾಗದಲ್ಲಿ ವಿಜೇತರಿಗೆ 15 ಸಾವಿರ, ದ್ವಿತೀಯ 10 ಸಾವಿರ,…

Read More