ಬೆಂಗಳೂರು, ಆ.30 NEWS DESK : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜಭವನದ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು. :: ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು :: ಇಂದು ವಿಶಿಷ್ಠ…
ಲೇಖಕ: admin
ಮಡಿಕೇರಿ ಆ.30 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಆಯ್ದ ಮೀನು ಮಾರಾಟಗಾರರಿಗೆ “ನಾಲ್ಕು ಚಕ್ರ ಮೀನು ಮಾರಾಟ ವಾಹನ ಖರೀದಿಗೆ” ಶೇ 50 ಅಥವಾ ಗರಿಷ್ಟ 3 ಲಕ್ಷಗಳ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಮತ್ತು ಅವಶ್ಯ ದಾಖಲಾತಿಯನ್ನು ಸೆ.10 ರ ಸಂಜೆ 05 ಗಂಟೆಯೊಳಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಕಚೇೀರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕುಶಾಲನಗರ, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನವರು 8105367337 ಹಾಗೂ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನವರು 9886717626 ಅಥವಾ ವೆಬೆಸೈಟ್ https://fisheries.karnataka.gov.in/fisheries-kodagu/public/kn ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್ ತಿಳಿಸಿದ್ದಾರೆ.
ಮಡಿಕೇರಿ ಆ.30 NEWS DESK : ಭಾರತೀಯ ರೆಡ್ ಕ್ರಾಸ್ ನ ಕೊಡಗು ಘಟಕದಿಂದ ಸೆ.2 ರಂದು ಪೊನ್ನಂಪೇಟೆ ತಾಲ್ಲೂಕು ಘಟಕವನ್ನು ಪ್ರಾರಂಭಿಸಲಾಗುತ್ತಿದೆ. ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಭವನದಲ್ಲಿ ಆಯೋಜಿತ ಪೊನ್ನಂಪೇಟೆ ತಾಲ್ಲೂಕು ರೆಡ್ ಕ್ರಾಸ್ ನ ನೂತನ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಕೊಡಗು ಘಟಕದ ಸಭಾಪತಿ ಬಿ.ಕೆ. ರವೀಂದ್ರ ರೈ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ, ಕನಾ೯ಟಕ ರೆಡ್ ಕ್ರಾಸ್ ನ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ಎಡಿಜಿಪಿ ಬಿ. ಭಾಸ್ಕರ್ ರಾವ್ ಕೊಡಗು ಜಿಲ್ಲಾಧಿಕಾರಿ, ರೆಡ್ ಕ್ರಾಸ್ ಜಿಲ್ಲಾ ಸಭಾಧ್ಯಕ್ಷ ವೆಂಕಟರಾಜಾ, ಪೊನ್ನಂಪೇಟೆ ತಹಶೀಲ್ದಾರ್ ಕೆ.ಎನ್.ಮೋಹನ್ ಕುಮಾರ್, ರಾಜ್ಯ ರೆಡ್ ಕ್ರಾಸ್ ನ ಸಹಾಯಕ ಕಾಯ೯ದಶಿ೯ ಉಮಾಕಾಂತ್, ಕೊಡಗು ರೆಡ್ ಕ್ರಾಸ್ ಕಾಯ೯ದಶಿ೯ ಎಂ.ಧನಂಜಯ್ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಆ.30 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಹಾಗೂ ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ ಅವಕಾಶ. ಇಲ್ಲಿ ಸೇವ ಮನೋಭಾವ ಮಾತ್ರವಲ್ಲ ಅದ ಆಚೆಗೂ ಸಾಕಷ್ಟು ಅವಕಾಶಗಳಿಗೆ ಇಂದು ಒಂದು ಉತ್ತಮ ವೇದಿಕೆಯಾಗಿದೆ. ನಾನು ಹೀಗೆ ಲೀಲಾ ಜಾಲಾವಾಗಿ ಮಾತನಾಡಲು ಅಡಿಪಾಯ ಹಾಕಿದ್ದೆ ಈ ಎನ್ಎಸ್ಎಸ್ ಬಹಳ ಅನುಭವ ಅವಕಾಶಗಳ ಜೊತೆಗೆ ಜೀವನದ ಅನುಭವವನ್ನ ಈ ಎನ್.ಎಸ್.ಎಸ್ ನೀಡುತ್ತೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು…
ಮಡಿಕೇರಿ ಆ.30 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಸೆ.1ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ಮಂದ್ ನಲ್ಲಿ 30ನೇ ವರ್ಷದ “ಕೈಲ್ ಪೊವ್ದ್” ಹಬ್ಬವನ್ನು ಸಾರ್ವತ್ರಿಕವಾಗಿ ಆಚರಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದ್ ನಲ್ಲಿ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗೆ ಪ್ರಕೃತಿ ವರವಾಗಿ ನೀಡಿರುವ ತೋಕ್ಪೂವ್ ನಿಂದ ಬಂದೂಕುಗಳನ್ನು ಸಿಂಗರಿಸಿ ಪ್ರಾರ್ಥಿಸಲಾಗುವುದು. ನಂತರ ಪೂಜ್ಯ ಸ್ಥಾನದಲ್ಲಿರುವ ಗುರುಕಾರೋಣರಿಗೆ ಮೀದಿ ಅರ್ಪಿಸಿ ಸಿಎನ್ಯ 35 ವರ್ಷದ ಹೋರಾಟಕ್ಕೆ ಕೃಪಾಶೀರ್ವಾದ ಕೋರಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್, ಹೆಸರಾಂತ ವೈದ್ಯರು ಹಾಗೂ ಸಮಾಜ ಸೇವಕರೂ ಆದ ಡಾ.ಮಾತಂಡ ಅಯ್ಯಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಯುದ್ಧ ಮತ್ತು ಬೇಟೆಯ ಕೌಶಲ್ಯಗಳು ಆದಿಮಸಂಜಾತ ಆ್ಯನಿಮಿಸ್ಟಿಕ್ ನಂಬಿಕೆಯ ಏಕಜನಾಂಗವಾದ ಕೊಡವರಲ್ಲಿ ವಂಶವಾಹಿಯಾಗಿ ಬೇರೂರಿದೆ. ಶಸ್ತ್ರಾಸ್ತ್ರಗಳನ್ನು ಹೊಂದುವುದು ಯೋಧ ಪರಂಪರೆಯ ಕೊಡವರ ಅನುವಂಶಿಕ ಶಾಶ್ವತ…
ಮಡಿಕೇರಿ ಆ.30 NEWS DESK : ನಗರದ ವಿಕಾಸ್ ಜನಸೇವಾ ಕೇಂದ್ರದಲ್ಲಿರುವ 34 ಆಶ್ರಿತರಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಉಚಿತ ನೇತ್ರ ತಪಾಸಣೆ ಮತ್ತು ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿತ್ತು. ನೇತ್ರ ತಜ್ಞರಾದ ಡಾ. ಎಸ್.ಎಂ.ಚೇತನ್, ಡಾ. ಸಿ.ಆರ್.ಪ್ರಶಾಂತ್ ನೇತ್ರ ತಪಾಸಣೆ, ಚಿಕಿತ್ಸೆ ನೀಡಿದರೆ, , ಜಿಲ್ಲಾ ಸಕಾ೯ರಿ ಆಸ್ಪತ್ರೆಯ ವೈದ್ಯರಾದ ಡಾ. ಚೇತನ್ ಮತ್ತು ಡಾ ಸುಹಾಸ್ ಆರೋಗ್ಯ ತಪಾಸಣೆ, ಚಿಕಿತ್ಸೆ ಕೈಗೊಂಡರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ನಿದೇ೯ಶಕರಾದ ಜಗದೀಶ್ ಪ್ರಶಾಂತ್, ಪ್ರಮೋದ್ ರೈ ಪ್ರಕಾಶ್ ಪೂವಯ್ಯ, ಪ್ರಸಾದ್ ಗೌಡ, ತಾನ್ಯ ಶಿಬಿರ ನಿವ೯ಹಿಸಿದರು.
ಶನಿವಾರಸಂತೆ ಆ.30 NEWS DESK : ಮನುಷ್ಯನ ಆರೋಗ್ಯ, ನೆಮ್ಮದಿ ಹಾಗೂ ಶಾಂತಿ ಸಹಬಾಳ್ವೆಯ ಬದುಕಿಗೆ ಶರಣರ ವಚನಗಳ ಅರಿವು ದಿವ್ಯ ಔಷಧಿ ಇದ್ದಂತೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಸುತ್ತೂರು ಮಹಾಸಂಸ್ಥಾನದ 23ನೇ ಜಗದ್ಗುರು ಡಾ.ಶಿವರಾತ್ರೀಶ್ವರ ರಾಜೇಂದ್ರ ಸ್ವಾಮೀಜಿಯವರ 110ನೇ ಸಂಸ್ಮರಣೆ ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮನುಷ್ಯನ ನೆಮ್ಮದಿಯುತ ಬದುಕಿಗೆ ಹನ್ನೆರಡನೇ ಶತಮಾನದ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯದ ಅಧ್ಯಯನ ಹಾಗೂ ಅರಿವು ಆಭರಣಗಳೇ ಹೊರತು ಹಣ ಅಥವಾ ಒಡವೆಗಳಲ್ಲ. ಹನ್ನೆರಡನೇ ಶತಮಾನದ ಸಮಾಜದಲ್ಲಿ ಮೇಲು – ಕೀಳು, ಬಡವ – ಬಲ್ಲಿದ ಎಂಬ ಗೊಡವೆಗಳ ವಿರುದ್ದ ಸಮರ ಸಾರಿದ ಶರಣರು ಇವನಾರವ ಎನ್ನದೇ ಇವ ನಮ್ಮವ ಎಂದು…
ಮಡಿಕೇರಿ ಆ.30 NEWS DESK : ಕೂಡಿಗೆ ಸರಕಾರಿ ಕ್ರೀಡಾ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಣೆ ಮಾಡಲಾಯಿತು. ಹಾಕಿ ಮಾಂತ್ರಿಕಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿದ ಶಾಲೆಯ ಕ್ರೀಡಾಪಟುಗಳಾದ ಚಪ್ಪುಡಿರ ನಾಚಪ್ಪ, ಪ್ರತೀಕ್ ಯರಕಲ್, ಖುಷಿ, ಅರ್ಚನಾ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ದಿನದ ಮಹತ್ವದ ಬಗ್ಗೆ ಶಾಲೆಯ ಹಾಕಿ ತರಬೇತಿದಾರರಾದ ವೆಂಕಟೇಶ್ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ಮುರುಳಿ ಮಾತಾನಾಡಿ ಕ್ರೀಡಾ ಪಟುಗಳು, ಹಿರಿಯ ಕ್ರೀಡಾಪಟುಗಳ ಮಾರ್ಗದರ್ಶನದಲ್ಲಿ ಸಾಗಿ ತಮ್ಮ ಪ್ರತಿಭೆಯ ಮುಖೇನ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧಿಸಲು ವಿದ್ಯಾರ್ಥಿಗಳು ಪಣತೊಡಬೇಕು ಎಂದು ಹೇಳಿದರು. ಈ ಸಂದರ್ಭ ಕ್ರೀಡಾ ತರಬೇತಿದಾರರಾದ ಸುರೇಶ್, ದಿನಾಮಣಿ, ಆಶ್ವಿತ, ಶಿಕ್ಷಕರಾದ ರಂಜಿನಿ, ಗೀತಾ, ಆಶಾ, ಸವಿತ, ಮೋಹನ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು. ಕ್ರೀಡಾ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಕಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರ ನೇತೃತ್ವವನ್ನು ಪ್ರಥಮ ಪದವಿಪೂರ್ವ ತರಗತಿಯ…
ಮಡಿಕೇರಿ ಆ.30 NEWS DESK : ಕೊಂಡಗೇರಿಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಖೋ ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ತಂಡದಲ್ಲಿ ಪುಚ್ಚಿಮಂಡ ಯು.ತನಿಶಾ, ಕನ್ನಂಡ ಕೃತಿಕಾ ಅಕ್ಕಮ್ಮ, ಅಮ್ಮಂಡ ಸ್ಪೂರ್ತಿ ದೇಚಮ್ಮ, ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ, ಆಯಿಷಾ ಶಿಝ, ಕುಲ್ಲಚಂಡ ಭೂಮಿಕಾ ಭೋಜಮ್ಮ, ಕನ್ನಂಡ ಶತಕ ಕಾವೇರಮ್ಮ, ಫಾತಿಮಾತ್ ಫಿದಾ, ಪಟ್ಟಡ ಬಿ.ದೇಚಮ್ಮ, ಕಾಳಚಂಡ ಎಂ. ದೇಚಮ್ಮ ಸ್ಪರ್ಧಿಸಿದ್ದರು. ಈ ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕಾ ಬಿ.ಎಸ್ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಆ.30 NEWS DESK :ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಮಾಡಿ ಅಭಿನಂದಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಉಪಸ್ಥಿತರಿದ್ದರು.






