ಸುಂಟಿಕೊಪ್ಪ ಆ.30 NEWS DESK : ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ 7ನೇ ಗೌರಿ ಗಣೇಶೋತ್ಸವನ್ನು ಧಾರ್ಮಿಕ ವಿಧಿ ವಿಧಾನದೊಂದಿಗೆ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದ ಉತ್ಸವ ಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಇರಿಸಿ ವಿರ್ಜಿಸಲಾಯಿತು. 3 ದಿನಗಳ ಕಾಲ ವಿಶೇಷ ಪೂಜಾ ಕೈಂ ಕರ್ಯ ಹಾಗೂ ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಸಂಜೆ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಕೊಡಗರಹಳ್ಳಿ ಗ್ರಾಮ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ವಿಸರ್ಜಿಸಲಾಯಿತು.
ಲೇಖಕ: admin
ನಾಪೋಕ್ಲು ಆ.30 NEWS DESK : ರನ್ನಿಂಗ್ ಇವೆಂಟ್ (5 ಕಿ.ಮೀ. ಓಟ) ದಲ್ಲಿ ಸ್ಪರ್ಧಿಸಿದ ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನ ತೃತೀಯ ಬಿಎ ವಿದ್ಯಾರ್ಥಿ ಎಸ್.ಗೌತಮ್ ಮೊದಲನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. 2025-26ನೇ ಸಾಲಿನ ಯುವಜನೋತ್ಸವ ಎಚ್.ಐ.ವಿ ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ರೆಡ್ ರಿಬ್ಬನ್, ಹೆಲ್ತ್ ಡಿಪಾಟ್ರ್ಮೆಂಟ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ ಎಸ್.ಗೌತಮ್ಗೆ ಗೌರವವಾಗಿ 5000 ನಗದು ಬಹುಮಾನ, ಪ್ರಮಾಣ ಪತ್ರ ಮತ್ತು ಪದಕ ಲಭಿಸಿದೆ. ತರಬೇತಿದಾರರಾಗಿ ವಿಕಾಸ್ ಶ್ರೀನಿವಾಸ್ ಕಾರ್ಯನಿರ್ವಹಿಸಿದ್ದು, ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಗೌತಮ್ ಎಸ್. ವಿರಾಜಪೇಟೆ ನಿವಾಸಿ ಕೆ.ಶೇಖರ್ ಮತ್ತು ಎಸ್.ಶೋಭಾ ದಂಪತಿಗಳ ಪುತ್ರ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.30 NEWS DESK : ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಿಂಹ ಮಾಸದ ಆರಾಧನೆ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು. ಸಂಪ್ರದಾಯದಂತೆ ಮುಂಜಾನೆ ದೇವತಕ್ಕರು ಹಾಗೂ ತಕ್ಕರ ಮನೆಗಳಿಂದ ಪಲ್ ಬೈವಾಡು ಆಗಮಿಸಿತು. ಅಯ್ಯಪ್ಪ ಕಟ್ಟೆಯ ಮುಂದೆ ದೇವತಕರು ಹಾಗೂ ಊರು ನಾಡಿನ ತಕ್ಕರು ಸೇರಿ ನಡೆಸುವ ಪ್ರಾರ್ಥನೆಯೊಂದಿಗೆ ಸಿಂಹ ಮಾಸದ ಆರಾಧನೆಗೆ ಚಾಲನೆ ನೀಡಲಾಯಿತು. ತುಲಾಭಾರ ಸೇವೆ ಮಹಾಪೂಜೆ ನಿತ್ಯ ಪೂಜೆಯ ಬಳಿಕ ಶ್ರೀ ಇಗ್ಗುತ್ತಪ್ಪ ದೇವರ ಉತ್ಸವ ಮೂರ್ತಿ ದಿವ್ಯ ಅಲಂಕೃತ ಭೂಶಿತವಾಗಿ ದೇವಸ್ಥಾನದ ಪ್ರಾಂಗಣದಲ್ಲಿ ಭಕ್ತರಿಗೆ ದರ್ಶನ ನೀಡಿದ್ದಲ್ಲದೆ ನಿತ್ಯ ಬಲಿಯೊಂದಿಗೆ ಉತ್ಸವ ಸಂಪನ್ನಗೊಂಡಿತು. ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಕೊಡಗಿನ ಜನತೆಯ ಶ್ರೇಯೋಭಿವೃದ್ಧಿಗೆ ನಾಡಿನ ಸಮೀಕ್ಷೆಗೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ರಕ್ಷಿಸಿ ಹರಸುವಂತೆ ಇಗ್ಗುತ್ತಪ್ಪನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪೂಜಾ ವಿಧಿ ವಿಧಾನಗಳನ್ನು ಕುಶ ಭಟ್ ಹಾಗೂ ಜಗದೀಶ್ ನೆರವೇರಿಸಿದರು. ದೇವಸ್ಥಾನದ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ,…
ಮಡಿಕೇರಿ NEWS DESK ಆ.30 : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬಾಳೆಲೆಯಲ್ಲಿ “ತಂತ್ರಜ್ಞಾನದಿಂದ ರೈತರ ಶಕ್ತಿಕರಣ” ಎಂಬ ಶೀರ್ಷಿಕೆಯಡಿ ಜಾಗೃತಿ ಮೂಡಿಸಿದರು. ಬಾಳೆಲೆಯ ಗದ್ದೆಗಳಲ್ಲಿ ಹಾಗೂ ಪಟ್ಟಣದಲ್ಲಿ ಕಾರ್ಯಕ್ರಮ ನಡೆಸಿದ ವಿದ್ಯಾರ್ಥಿಗಳು ವಿವಿಧ ಮೊಬೈಲ್ ಆ್ಯಪ್ ಗಳನ್ನು ಪರಿಚಯಿಸಿ, ಇದನ್ನು ಕೃಷಿ ಕ್ಷೇತ್ರದಲ್ಲ್ಲಿ ಹೇಗೆ ಬಳಸಬಹುದು, ಕೃಷಿಯಲ್ಲಿ ತಂತ್ರಜ್ಞಾನ ಬಳಕೆಯಿಂದ ಆಗುವ ಪ್ರಯೋಜನ ಮತ್ತು ಲಾಭವೇನು ಎಂಬುವುದರ ಕುರಿತು ಮಾಹಿತಿ ನೀಡಿದರು. ಮೊಬೈಲ್ ಆ್ಯಪ್ ಗಳು ಕೃಷಿ ಕಾರ್ಯಗಳನ್ನು ಸುಲಭಗೊಳಿಸುವುದರ ಜೊತೆಗೆ ಉತ್ಪಾದನೆ ಹೆಚ್ಚಿಸಲು ಸಹಕಾರಿಯಾಗಿದೆ ಎಂದು ರೈತರಿಗೆ ವಿವರಿಸಿದರು. ತಂತ್ರಜ್ಞಾನ ಬಳಸಿ ಕೃಷಿಯಲ್ಲಿ ಯಶಸ್ಸು ಸಾಧಿಸುವ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಲು ವಿದ್ಯಾರ್ಥಿಗಳು ಆಕರ್ಷಕ ಪೋಸ್ಟರ್ ಗಳನ್ನು ಸಿದ್ಧಪಡಿಸಿ ಪ್ರದರ್ಶಿಸಿದರು. ಲ್ಯಾಪ್ಟಾಪ್ಗಳ ಮೂಲಕ ನೇರ ಪ್ರದರ್ಶನಗಳನ್ನು ನೀಡಿದರು. ಗದ್ದೆಗಳಲ್ಲಿ ನೀರು ತುಂಬಿಸಿ ಮಣ್ಣು ಮಿಶ್ರಣ ಮಾಡುವ ಕಾರ್ಯದಲ್ಲೂ ಪಾಲ್ಗೊಂಡ ವಿದ್ಯಾರ್ಥಿಗಳು ರೈತರ ಹಿತಕ್ಕಾಗಿ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು. ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು…
ಮಡಿಕೇರಿ NEWS DESK ಆ.29 : ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ *ವೋಟರ್ ಅಧಿಕಾರ ಯಾತ್ರೆ* ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕರ್ನಾಟಕದ ಪ್ರಮುಖರು ಭಾಗವಹಿಸಿದರು. ‘ಓರ್ವ ವ್ಯಕ್ತಿಗೆ, ಒಂದು ಮತ’ ಸಿದ್ಧಾಂತಕ್ಕಾಗಿ ಹೋರಾಡುತ್ತಿರುವ ಕಾಂಗ್ರೆಸ್ ನೇತೃತ್ವದ ಮೈತ್ರಿ ಪಕ್ಷಗಳು, ಚುನಾವಣಾ ಆಯೋಗದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ಅವರ ಮುಂದಾಳತ್ವದಲ್ಲಿ, ಬಿಹಾರದಾದ್ಯಂತ ಸುಮಾರು 1300 ಕಿ.ಮೀ ಪಾದಯಾತ್ರೆ ಹಮ್ಮಿಕೊಂಡಿದೆ. ಈ ತಂಡದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್, ಡಾ. ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಶಾಸಕ ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯರುಗಳಾದ ಸಲೀಂ ಅಹಮದ್, ಬಿ.ಕೆ.ಹರಿಪ್ರಸಾದ್, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಆ.29 : ತಮ್ಮ ಸರಳತೆಯ ಮೂಲಕವೇ ಯುವ ಮನಸ್ಸುಗಳನ್ನು ಗೆದ್ದಿರುವ ಶಾಸಕ ಡಾ.ಮಂತರ್ ಗೌಡ ಅವರು ಇಂದು ಮಡಿಕೇರಿಯ ವಿವಿಧ ಬಡಾವಣೆಗಳ ಗಣೇಶೋತ್ಸವ ಸಮಿತಿಗಳನ್ನು ಭೇಟಿಯಾದರು. ಪ್ರತಿಷ್ಠಾಪಿಸಲ್ಪಟ್ಟಿರುವ ಗಣೇಶ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪುಟಾಣಿ ನಗರದ ಉದ್ಭವ ಶ್ರೀ ವಿನಾಯಕ ಸೇವಾ ಸಮಿತಿಗೆ ಆಗಮಿಸಿ ಸದಸ್ಯರ ಉಪಸ್ಥಿತಿಯಲ್ಲಿ ಪೂಜೆಯಲ್ಲಿ ಭಾಗಿಯಾದರು. ಗಣೇಶನ ಮೂರ್ತಿಯ ವಿಸರ್ಜನೋತ್ಸವವನ್ನು ಅತ್ಯಂತ ಸಂಭ್ರಮ ಮತ್ತು ಸಂಯಮದಿಂದ ಆಚರಿಸುವಂತೆ ಮನವಿ ಮಾಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಬಿ.ವೈ.ರಾಜೇಶ್, ಶ್ರೀಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಸದಸ್ಯ ಪ್ರಕಾಶ್ ಆಚಾರ್ಯ ಮತ್ತಿತರ ಪ್ರಮುಖರು ಹಾಗೂ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ NEWS DESK ಆ.29 : 2025-26ನೇ ಸಾಲಿನ ಯುವಜನೋತ್ಸವ ಎಚ್.ಐ.ವಿ ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಎಚ್ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್.ಐ.ವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಇತ್ಯಾದಿ ಕುರಿತು ಅರಿವು ಮೂಡಿಸುವುದು. ಅದರಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಎಚ್ಐವಿ/ ಏಡ್ಸ್ ಅರಿವು ಆಂದೋಲನ 2025-26ರ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಕೊಡಗು ಶಾಖೆ ಇವರ ಸಹಯೋಗದೊಂದಿಗೆ ಮ್ಯಾರಾಥಾನ್ ಸ್ಪರ್ಧೆ (5ಕಿ.ಮೀ) ನಡೆಯಿತು. ಮ್ಯಾರಾಥಾನ್ ಸ್ಪರ್ಧೆಯಲ್ಲಿ ಜಿಲ್ಲೆಯ…
ಮಡಿಕೇರಿ NEWS DESK ಆ.29 : ಕೊಡಗು ಜಿಲ್ಲೆಯಲ್ಲಿ ಮಳೆ ಗಾಳಿಯ ವಾತಾವರಣವಿದ್ದರೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಉತ್ತಮವಾಗಿದೆ. ಈ ಬಾರಿ ಪದವಿ ಪೂರ್ವ ಶಿಕ್ಷಣದಲ್ಲಿ ಕೊಡಗು 4ನೇ ಸ್ಥಾನ ಪಡೆದಿದ್ದು, ಮುಂದಿನ ಸಾಲಿನಲ್ಲಿ ಮೊದಲ ಸ್ಥಾನಕ್ಕೇರಬೇಕೆಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್.ಚಿದಾನAದ ಕುಮಾರ್ ಕರೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರುಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು 2025-26 ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಉತ್ತಮ ಫಲಿತಾಂಶಕ್ಕಾಗಿ ಪ್ರತಿಯೊಬ್ಬ ಪ್ರಾಧ್ಯಾಪಕರು ಶ್ರಮಿಸುತ್ತಿದ್ದಾರೆ. ವಿದ್ಯಾರ್ಥಿಗಳ ಜೀವನದಲ್ಲಿ ಪ್ರಾಧ್ಯಾಪಕರುಗಳಲ್ಲದೆ ಪೋಷಕರ ಪ್ರಯತ್ನವು ಮುಖ್ಯ ಪಾತ್ರ ವಹಿಸಿದೆ. ಕೊಡಗಿನಲ್ಲಿ ಮಳೆಯಿಂದಾಗಿ ರಜೆ ಇದ್ದರೂ ಫಲಿತಾಂಶದಲ್ಲಿ ವ್ಯತ್ಯಾಸವಾಗಲಿಲ್ಲ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ…
ಕುಶಾಲನಗರ NEWS DESK ಆ.29 : ಗಣೇಶೋತ್ಸವದ ಅಂಗವಾಗಿ ಕುಶಾಲನಗರದ ರಥ ಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ 101 ಗಣಪತಿ ಮೂರ್ತಿಗಳಿಗೆ ಇಂದು ಶ್ರದ್ಧಾಭಕ್ತಿಯಿಂದ ರಂಗಪೂಜೆ ನಡೆಯಿತು. ಕುಶಾಲನಗರ ವಾಸವಿ ಯುವಕ ಸಂಘದ ವತಿಯಿಂದ ಆರ್ಯವೈಶ್ಯ ಮಂಡಳಿಯ ಸಹಯೋಗದೊಂದಿಗೆ 101 ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ಪ್ರತಿದಿನ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆ.31 ರಂದು 101 ಗಣಪತಿ ಮೂರ್ತಿಗಳನ್ನು ಭವ್ಯ ಮೆರವಣಿಗೆಯ ಮೂಲಕ ಕೊಂಡೊಯ್ದು ವಿಸರ್ಜಿಸಲಾಗುವುದು ಎಂದು ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದರು. ಈ ಸಂದರ್ಭ ವಾಸವಿ ಯುವಕ ಸಂಘದ ಅಧ್ಯಕ್ಷ ಪ್ರವೀಣ್ ಹಾಗೂ ಪದಾಧಿಕಾರಿಗಳು ಇದ್ದರು.
ಮಡಿಕೇರಿ ಆ.29 NEWS DESK : ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘವು 2024-25ನೇ ಸಾಲಿಗೆ ರೂ.28,96,676 ರಷ್ಟು ಲಾಭಗಳಿಸಿದ್ದು, ಸದಸ್ಯರಿಗೆ ಶೇ.10 ರಂತೆ ಡಿವಿಡೆಂಟ್ ಪಾವತಿಸಲಾಗುವುದೆಂದು ಸಂಘದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2005ರಲ್ಲಿ ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಅವರ ಸಲಹೆ, ಮಾರ್ಗದರ್ಶನದಂತೆ ಅಂದಿನ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾಗಿದ್ದ ಮಾತಂಡ ಎಂ.ಸುರೇಶ್ ಚಂಗಪ್ಪ ಮತ್ತು ಆಡಳಿಮಂಡಳಿಯವರು ಈ ಸೌಹಾರ್ದ ಸಹಕಾರಿ ಹುಟ್ಟಿಗೆ ಕಾರಣಕರ್ತರಾದರು. 472 ಸದಸ್ಯರ ರೂ.5.96 ಲಕ್ಷ ಪಾಲು ಬಂಡವಾಳದಿಂದ ಪ್ರಾರಂಭಗೊಂಡು ಇದೀಗ 2025ರ ಮಾರ್ಚ್ ಅಂತ್ಯಕ್ಕೆ 2143 ಸದಸ್ಯರೊಂದಿಗೆ ರೂ.98.61 ಲಕ್ಷ ಪಾಲುಬಂಡವಾಳ ಇರುತ್ತದೆ. ಈ ಸಹಕಾರಿಯಿಂದ ತನ್ನ ಸದಸ್ಯರಿಗೆ ಜಾಮೀನು ಸಾಲ, ಆಭರಣ ಸಾಲ ನೀಡುತ್ತಾ ಬರುತ್ತಿದ್ದು, ಅಂದಿನಿಂದ ಇಂದಿನವರೆಗೆ ಪ್ರತಿ ವರ್ಷ ಲಾಭದೊಂದಿಗೆ ಮುಂದುವರಿದೆ ಎಂದರು. ವಯಸ್ಸಿಗನುಗುಣವಾಗಿ ಮರಣ ನಿಧಿ ಸೌಲಭ್ಯವನ್ನು ಅಳವಡಿಸಕೊಂಡಿರುತ್ತದೆ. ಇದಲ್ಲದೆ ಹೆಚ್ಚಿನ ಬಡ್ಡಿದರದಲ್ಲಿ ಮಿತವ್ಯಯ ಠೇವಣಿ, ನಿರಖು ಠೇವಣಿಯನ್ನು ಸ್ವೀಕರಿಸುತ್ತಿದ್ದೇವೆ. ಉಳಿತಾಯ…






