ಲೇಖಕ: admin

ಗೋಣಿಕೊಪ್ಪ ಜು.30 NEWS DESK : ಗೋಣಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ.ಬೋಪಣ್ಣ ಪುನರಾಯ್ಕೆಯಾಗಿದ್ದಾರೆ. ವಾಹನ ಚಾಲಕರ ಸಂಘದ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ಸರ್ವ ಸದಸ್ಯರ ಒಮ್ಮತದ ತೀರ್ಮಾನದಂತೆ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಉಪಾಧ್ಯಕ್ಷರಾಗಿ ಶರತ್ ಕಾಂತ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣೇಗೌಡ, ಸಹ ಕಾರ್ಯದರ್ಶಿ ರೇಣುಕುಮಾರ್, ಕೋಶಾಧಿಕಾರಿ ವಿ.ಟಿ.ವೇಣು ಮತ್ತು ನಿರ್ದೇಶಕರುಗಳಾಗಿ ಅನಿಲ್, ಅಶೋಕ್, ಕೀರ್ತಿ, ಕೃಷ್ಣ ಶ್ರೀನಿವಾಸ್, ಸುರೇಶ್, ಅನೀಶ್ ಇವರುಗಳು ಆಯ್ಕೆಯಾಗಿದ್ದಾರೆ.

Read More

ನಾಪೋಕ್ಲು ಜು.30 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೂರುಳಿಯ ಸುಭಾಷ್ ನಗರದಲ್ಲಿ ನಾಗನಕಟ್ಟೆಗೆ ಪೂಜೆ ಸಲ್ಲಿಸಲಾಯಿತು. ವಿವಿಧ ದೇವಾಲಯಗಳಲ್ಲಿ ಕ್ಷೀರಾಭಿಷೇಕ, ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಬಲ್ಲಮಾವಟಿಯ ಭಗವತಿ ದೇವಾಲಯದಲ್ಲಿ ಮಹಾಪೂಜೆ ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯ, ಪಾಲೂರಿನ ಮಹಾಲಿಂಗೇಶ್ವರ ದೇವಾಲಯ, ಬಲ್ಲಮಾವಟಿಯ ಭಗವತಿ ದೇವಾಲಯ ಭಕ್ತರು ಶ್ರದ್ಧಾಭಕ್ತಿಯಿಂದ ನಾಗನಿಗೆ ಪೂಜೆ ಸಲ್ಲಿಸಿದರು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಅರ್ಚಕ ಜಗದೀಶ್ ಪೂಜೆ ನೆರವೇರಿಸಿದರು. ಈ ಸಂದರ್ಭ ಹಂಬಲ ನಿವಾಸಿ ಸುಬ್ರಮಣಿ, ಸಿಬ್ಬಂದಿ ಶ್ರೀಕಾಂತ್, ಸಂಪತ್ ಭಟ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ನಾಗರಪಂಚಮಿ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು.ಅಧಿಕ ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಂಡಿದ್ದರು. ಕೂರುಳಿಯ…

Read More

ಮಡಿಕೇರಿ ಜು.30 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್  ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರ ದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6ನೇ ತರಗತಿಯಿಂದ 12ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲು ಸರ್ಕಾರದಿಂದ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ  ಶಾಸಕರಾದ ಶ್ರೀ ಡಾ.ಮಂತರ್ ಗೌಡ ಅವರು ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು.

Read More

ಕುಶಾಲನಗರ ಜು.30 NEWS DESK :  ಕುಶಾಲನಗರ ವಾಸವಿ ಯುವ ಜನ ಸಂಘ ಆಶ್ರಯದಲ್ಲಿ ಮೈಸೂರು ನಾರಾಯಣ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಹೃದಯ ತಪಾಸಣಾ ಶಿಬಿರ ನಡೆಯಿತು.   ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ವಾಸವಿ ಮಹಾಸಭಾ ಪ್ರಮುಖರು ಹಾಗೂ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಚಾಲನೆ ನೀಡಿದರು.  ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಪ್ರವೀಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾಸವಿ ಮಹಾಸಭಾ ಕೊಡಗು ಜಿಲ್ಲಾ ಕಾರ್ಯದರ್ಶಿ ಬಿ.ಎಲ್.ಸತ್ಯನಾರಾಯಣ, ಮಹಿಳಾ ವೇದಿಕೆಯ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ಕಾರ್ಯದರ್ಶಿ ಹೇಮಾ ಸುನಿಲ್, ಪುರಸಭೆ ಸದಸ್ಯರಾದ ಅಮೃತರಾಜ್, ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ಮತ್ತಿತರರು ಇದ್ದರು.  ಮೈಸೂರು ನಾರಾಯಣ ಆಸ್ಪತ್ರೆಯ ವೈದ್ಯರಾದ ಡಾ.ಗುಲ್ಜಾರ್ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ 120ಕ್ಕೂ ಅಧಿಕ ಮಂದಿ ಪಾಲ್ಗೊಂಡು ರಕ್ತ ಪರೀಕ್ಷೆ, ರಕ್ತದೊತ್ತಡ ಹಾಗೂ ಇಸಿಜಿ ಮತ್ತಿತರ ಪರೀಕ್ಷೆಯನ್ನು ತಂಡದ ಸಿಬ್ಬಂದಿಗಳು…

Read More

ಮಡಿಕೇರಿ NEWS DESK ಜು.30 : ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ ಆಚರಣೆಗೆ ದಿನಗಣನೆ ಆರಂಭಗೊಂಡಿದೆ. ನಗರದಲ್ಲಿ ಸುಮಾರು 50 ಕ್ಕೂ ಅಧಿಕ ಗಣೇಶೋತ್ಸವ ಸಮಿತಿಗಳು ಗಣೇಶನ ಮೂರ್ತಿಯ ಪ್ರತಿಷ್ಠಾಪನೆಯ ಸಿದ್ಧತೆಯಲ್ಲಿವೆ. ಗಣೇಶ ಚತುರ್ಥಿಯನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಅಗತ್ಯ ಮಾರ್ಗಸೂಚಿಗಳನ್ನು ತಿಳಿಸಲು ಕೊಡಗು ಪೊಲೀಸರು ಗೌರಿ ಗಣೇಶೋತ್ಸವ ಆಯೋಜಕರ ಸಭೆಯನ್ನು ನಡೆಸಿದರು. ನಗರದ ಕಾವೇರಿ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪರಿಸರ ಮತ್ತು ಶಬ್ಧ ಮಾಲಿನ್ಯಕ್ಕೆ ಅವಕಾಶ ನೀಡದೆ ಸಂಪ್ರದಾಯಕ್ಕೆ ಒತ್ತು ನೀಡಿ ಕಾನೂನಿನ ಚೌಕಟ್ಟಿನಡಿ ಹಬ್ಬಗಳನ್ನು ಆಚರಣೆ ಮಾಡುವಂತೆ ಮನವಿ ಮಾಡಿದರು. ಡಿಜೆ ಶಬ್ಧ ನಿಯಮ ಮೀರಿದರೆ ಅಥವಾ ಶಬ್ಧ ಮಾಲಿನ್ಯವಾದರೆ ಡಿಜೆ ಪರಿಕರಗಳನ್ನು ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್, ಡಿವೈಎಸ್‌ಪಿ ಸೂರಜ್, ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ, ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ…

Read More

ಮಡಿಕೇರಿ ಜು.30 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವಿಶ್ವ ಯಕೃತ್ ದಿನಾಚರಣೆ ಆಯೋಜಿಸಲಾಗಿತ್ತು. ನಗರದ ರೋಟರಿ ಸಭಾಂಗಣದಲ್ಲಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ತಜ್ಞ ವೈದ್ಯ ಡಾ. ಚಂದ್ರಶೇಖರ್ ಪಾಲ್ಗೊಂಡು ಯಕೃತ್ ನ ಮಹತ್ವ, ಹೆಪಟೈಟಸ್ ಬಿ ಮತ್ತು ಸಿ ಕುರಿತ ಮಾಹಿತಿ, ಸಮಸ್ಯೆ ಹಾಗೂ ನಿವಾರಣೆ ಕುರಿತು ಸಮಗ್ರ ಮಾಹಿತಿ ನೀಡಿದರು.  ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ವೇದಿಕೆಯಲ್ಲಿದ್ದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ನಿದೇ೯ಶಕರಾದ ಎ.ಕೆ.ವಿನೋದ್, ದೇವಣಿರ ತಿಲಕ್, ಡಾ.ಚೇತನ್ ನಿವ೯ಹಿಸಿದರು.

Read More

ಮಡಿಕೇರಿ ಜು.30 NEWS DESK : ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಚಾಲಕ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೊಣನೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಅಶೋಕ್ ಮೃತಪಟ್ಟರು. ಸ್ಥಳಕ್ಕೆ ಡಿವೈಎಸ್ಪಿ ಚಂದ್ರಶೇಖರ್, ವೃತ್ತ ನಿರೀಕ್ಷಕ ದಿನೇಶ್, ಸಂಚಾರಿ ಠಾಣಾಧಿಕಾರಿ ಶ್ರೀನಿವಾಸ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ಅಶೋಕ್ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More

ಮಡಿಕೇರಿ ಜು.30 NEWS DESK : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ ಹನೀಫ್ ಕೊಂಡಂಗೇರಿ ಆಯ್ಕೆಯಾಗಿದ್ದಾರೆ. ಪಕ್ಷದ ಬಲವರ್ಧನೆಗಾಗಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ತಿಳಿಸಿದ್ದಾರೆ.

Read More

ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ಅವರು ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ “ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನ” ದ ಅಂಗವಾಗಿ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ , ಏಳನೇ ಹೊಸಕೋಟೆ, ನಂಜರಾಯಪಟ್ಟಣ ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ – ನೀರಿನ ಗುಣಮಟ್ಟ ಸೇರಿದಂತೆ ವಿವಿಧ ವಿಷಯಗಳ ಕುರಿತು ವರದಿಗಳನ್ನು ಪರಿಶೀಲಿಸಿದರು. ಗ್ರಾಮಗಳಲ್ಲಿನ ಶಾಲೆ, ಗ್ರಂಥಾಲಯ ಮತ್ತು ಅಂಗನವಾಡಿಗಳಿಗೆ ಭೇಟಿ ನೀಡಿದ ಅವರು ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಯೋಜನೆಯ ನೀರು ಶುದ್ದಿಕರಣ ಘಟಕಗಳು ಹಾಗೂ ನೀರು ಶೇಖರಣ ತೊಟ್ಟಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಗ್ರಾ.ಕು.ನೀ.ನೈ ವಿಭಾಗ, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯಿತಿ , ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ/ ಕಿರಿಯ…

Read More

ಮಡಿಕೇರಿ ಜು.30 NEWS DESK : ಕೊಡಗು ಪತ್ರಕತ೯ರ ಸಂಘದ ವೀರಾಜಪೇಟೆ ತಾಲೂಕು ಘಟಕದ ವತಿಯಿಂದ ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್, ಅಮ್ಮತ್ತಿ ಇವರ ಸಹಯೋಗದಲ್ಲಿ ಆ.3 ರಂದು ಕಥಾ ಸಮಯ. ಕಥೆ ಹೇಳುವ ಸ್ಪಧೆ೯ ಆಯೋಜಿಸಲಾಗಿದೆ ಎಂದು ಪತ್ರಕತ೯ರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮುದೋಷ್ ಪೂವಯ್ಯ ಮಾಹಿತಿ ನೀಡಿದ್ದಾರೆ. ಕಾವಾಡಿ ಅಮ್ಮತ್ತಿಯ ಕಾಮದೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್ ನ ಆವರಣದಲ್ಲಿ ಆಯೋಜಿತ ಕಥಾ ಸಮಯ ಕಾಯ೯ಕ್ರಮವನ್ನು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಿಕಾಭವನದ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವಕಾಮತ್, ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಅಪ್ಪಣ್ಣ, ಬಾರಿಯಂಡ ಜೋಯಪ್ಪ, ಅಸೀಮಾ ಮಾಸಪತ್ರಿಕೆಯ ಸಂಪಾದಕ ಮಾಣಿಪಂಡ ಸಂತೋಷ್ ತಮ್ಮಯ್ಯ, ಪಕ್ಷಿ ತಜ್ಞ ಡಾ.ಎಸ್.ವಿ. ನರಸಿಂಹನ್, ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ರಾಮಚಂದ್ರ ಭಟ್ , ಕೊಡಗು ಪತ್ರಕತ೯ರ ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ…

Read More