ಲೇಖಕ: admin

ಮಡಿಕೇರಿ ಜೂ.13 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.14 ರಂದು ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಅಪರಾಹ್ನ 12 ಗಂಟೆಗೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ಸಮಾರಂಭ ನಡೆಯಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹರಪಳ್ಳಿ ರವೀಂದ್ರ, ಉದ್ಯಮಿ ಅವರೆಮಾದಂಡ ಶರಣ್ ಪೂಣಚ್ಚ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ ಭಾಗವಹಿಸಲಿದ್ದಾರೆ. 20 ವಿಭಾಗದ ವಾರ್ಷಿಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Read More

ಕುಶಾಲನಗರ ಜೂ.13 NEWS DESK : ಕುಶಾಲನಗರ ತಾಲ್ಲೂಕಿನ‌ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡ ಪೂರ್ವ ಪ್ರಾಥಮಿಕ ತರಗತಿ( ಎಲ್.ಕೆ.ಜಿ.,ಮತ್ತು ಯು.ಕೆ.ಜಿ.)ಗಳನ್ನು ಕೂಡುಮಂಗಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ದಾನಿ ಕೆ.ಕೆ.ಭೋಗಪ್ಪ ಪೂರ್ವ ಪ್ರಾಥಮಿಕ ತರಗತಿಗಳ ಉದ್ಘಾಟಿಸಿದರು. ಎಲ್ ಕೆ ಜಿ ಮತ್ತು ಯು ಕೆ ಜಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಕೆ.ಕೆ.ಭೋಗಪ್ಪ, ಹಳ್ಳಿಗಳಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡವರಿಗೆ ತಮ್ಮ ಮಕ್ಕಳಿಗೆ ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಣ ಕೊಡಿಸುವುದು ಗಗನ ಕುಸುಮವಾಗಿತ್ತು. ಈಗ ಹಳ್ಳಿಯ ಈ ಶಾಲೆಯಲ್ಲಿ ಮಕ್ಕಳಿಗೆ ಪೂರ್ವ ಪ್ರಾಥಮಿಕ‌ ಶಿಕ್ಷಣವು ಉತ್ತಮವಾಗಿ ದೊರಕುತ್ತಿದೆ. ಪೋಷಕರು ಸರ್ಕಾರಿ ಶಾಲೆಯಲ್ಲಿನ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ತಮ್ಮ‌ ಮಕ್ಕಳಿಗೆ ಉತ್ತಮ‌ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು. ಸದ್ಯ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಮಾತ್ರವೇ ಮಕ್ಕಳಿಗೆ ಕಲಿಕೆಗೆ ಆರಂಭವಾಗುತ್ತಿತ್ತು. ಹೀಗಾಗಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗಾಗಿ ಪೋಷಕರು ತಮ್ಮ ಮಕ್ಕಳನ್ನು…

Read More

ಮಡಿಕೇರಿ NEWS DESK ಜೂ.13 : ಅಹಂ ಮತ್ತು ತಾನೇ ಶ್ರೇಷ್ಠ ಎಂಬ ಮನೋಭಾವದಿಂದ ಹೊರ ಬಂದಾಗ ಮಾತ್ರವೇ ಸುಖ ಸಂಸಾರ ನಡೆಸಲು ಸಾಧ್ಯ. ಇದನ್ನು ಗೌಡ ಸಮುದಾಯದ ಇಂದಿನ ಯುವ ಪೀಳಿಗೆ ಮನಗಾಣಬೇಕು, ಪೋಷಕರು ಕೂಡ ಈ ಕುರಿತು ಮಕ್ಕಳಿಗೆ ತಿಳಿ ಹೇಳಬೇಕು ಎಂದು ಮೈಸೂರು ಗೌಡ ಸಮಾಜದ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಂಶುಪಾಲ ಕೊಂಬಾರನ ಬಸಪ್ಪ ಕರೆ ನೀಡಿದ್ದಾರೆ. ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ 10 ಕುಟುಂಬ 18 ಗೋತ್ರದ ಗೌಡ ಸಮುದಾಯದ ವಧು ವರರ ಸಮಾವೇಶ ನಡೆಯಿತು. ಸಮಾವೇಶವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿದ ಅವರು ದಾಂಪತ್ಯ ಎಂಬುವುದು ಪತಿ-ಪತ್ನಿ ನಡುವಿನ ಹೊಂದಾಣಿಕೆಯಾಗಿದೆ. ಹಿಂದಿನ ಕಾಲಘಟ್ಟದಲ್ಲಿ ಪೋಷಕರು ಗುರುತಿಸಿದ ವಧು ವರನ ನಡುವೆ ವಿವಾಹಗಳು ನಡೆಯುತ್ತಿತ್ತು. ಇಂತಹ ಮದುವೆಗಳಿಂದ ದಾಂಪತ್ಯ ಜೀವನವೂ ಸುಖಕರವಾಗಿರುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಸಮಾಜಿಕ ಜಾಲತಾಣಗಳ ಪ್ರಭಾವ ಯುವ ಸಮುದಾಯದ ಮೇಲೆ ಗಾಢ ಪರಿಣಾಮ ಬೀರಿದ್ದು,…

Read More

ಮಡಿಕೇರಿ NEWS DESK ಜೂ.13 : ಮಡಿಕೇರಿ ನಗರದ ಹೃದಯ ಭಾಗ ಐಟಿಐ ಜಂಕ್ಷನ್ ನ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಬೃಹತ್ ಗುಂಡಿಯನ್ನು ಸ್ವಂತ ಖರ್ಚಿನಿಂದ ಮುಚ್ಚುವ ಮೂಲಕ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಘಟಕ ಸಾಮಾಜಿಕ ಕಳಕಳಿ ಮೆರೆಯಿತು. ಐಟಿಐ ಜಂಕ್ಷನ್ ನಲ್ಲಿ ಮೂಡಿದ್ದ ದೊಡ್ಡ ಗುಂಡಿಯಿoದ ವಾಹನ ಸವಾರರು, ವಿದ್ಯಾರ್ಥಿಗಳು ಹಾಗೂ ಪಾದಾಚಾರಿಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು, ಅಲ್ಲದೆ ಗುಂಡಿ ಅಪಾಯವನ್ನು ಆಹ್ವಾನಿಸುತ್ತಿತ್ತು. ಇದನ್ನು ಗಮನಿಸಿದ ನಗರ ಮಹಿಳಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷೆ ಧನಲಕ್ಷಿö್ಮ ಪೊನ್ನು ಅವರು ನಗರಾಧ್ಯಕ್ಷೆ ಶಶಿಕಲಾ ಅವರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಶಶಿಕಲಾ ಹಾಗೂ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಅವರು ಗುಂಡಿ ಮುಚ್ಚಲು ಅಗತ್ಯವಿರುವ ಕಾಂಕ್ರೀಟ್ ಮತ್ತಿತರ ಸಾಮಾಗ್ರಿಗಳನ್ನು ಒದಗಿಸಿದರು. ಅಲ್ಲದೆ ಕಾಂಕ್ರೀಟ್ ಕೆಲಸಗಾರರನ್ನು ಒಗ್ಗೂಡಿಸಿ ರಸ್ತೆ ಗುಂಡಿ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಾಮಗಾರಿಯಲ್ಲಿ ತಾವು ಕೂಡ ತೊಡಗಿಸಿಕೊಂಡರು. ಧನಲಕ್ಷ್ಮಿ ಪೊನ್ನು, ಶಶಿಕಲಾ ಹಾಗೂ ಲೀಲಾ ಶೇಷಮ್ಮ ಅವರ ಕಾರ್ಯಕ್ಕೆ…

Read More

ಮಡಿಕೇರಿ NEWS DESK ಜೂ.13 : ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮೂರನೇ ವರ್ಷದ “ವಿದ್ಯಾನಿಧಿ ವಿತರಣೆ” ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಪತ್ರಕರ್ತರ 50 ಮಕ್ಕಳಿಗೆ 2.26 ಲಕ್ಷ ರೂ. ನೆರವನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿತ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ಕಲ್ಲಡ್ಕದ ನಾರಾಯಣ ಗೌಡ ಅವರು ಜ್ಯೋತಿ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರನ್ನುದ್ದೇಶಿಸಿ ಮಾತನಾಡಿದ ಅವರು, ಒಳ್ಳೆಯ ಮನಸ್ಸು ಮತ್ತು ಒಳ್ಳೆಯ ಭಾವನೆ ಒಟ್ಟು ಸೇರಿದಾಗ ಮಾತ್ರ ಸಾಧನೆ ಸಾಧ್ಯ. ಕೊಡಗು ಪತ್ರಿಕಾ ಭವನ ಟ್ರಸ್ಟ್ ವಿದ್ಯಾನಿಧಿಯ ಮೂಲಕ ದೊಡ್ಡ ಮೊತ್ತದ ನೆರವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಉತ್ತಮ ಕಾರ್ಯವೆಂದು ಮೆಚ್ಚುಗೆಯ ವ್ಯಕ್ತಪಡಿಸಿದರು. ಇಂದು ವಿದ್ಯೆಯನ್ನು ಖರೀದಿಸುವ ಕಾರ್ಯವಾಗುತ್ತಿದೆ. ಆರೋಗ್ಯ ಮತ್ತು ಶಿಕ್ಷಣವನ್ನು ಉಚಿತವಾಗಿ ನಿಡಬೇಕೆನ್ನುವುದು ಹಿರಿಯರ ಅಭಿಲಾಷೆಯಾಗಿತ್ತು. ಆದರೆ, ಇಂದು ಇವೆರಡು ದುಬಾರಿಯಾಗಿದೆ. ಉಚಿತ ಶಿಕ್ಷಣ ಮತ್ತು ಆರೋಗ್ಯ ನೀಡುವುದು ಇಂದು ಅಸಾಧ್ಯವಾಗಿದೆ. ಸರಕಾರಿ ಶಾಲೆಗಳಲ್ಲಿ…

Read More

ಮಡಿಕೇರಿ NEWS DESK ಜೂ.13 : 2029ರ ನಂತರ ಕೋವಿ-ತೋಕ್ ಆಚರಣೆಗೆ ಯಾವುದೇ ಸಾಂವಿಧಾನಿಕ ಧಕ್ಕೆ ಬಾರದಂತೆ ತಡೆಯಲು, ಕೊಡವ ಧಾರ್ಮಿಕ ಸಂಸ್ಕಾರವನ್ನು ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಬೇಕು. ಆ ಮೂಲಕ ಆಯುಧ ಕಾಯ್ದೆಯ ತಿದ್ದುಪಡಿಗಳ ಪ್ರಭಾವಕ್ಕೆ ಒಳಗಾಗದಂತೆ ಇದಕ್ಕೆ ಶಾಶ್ವತ ರಕ್ಷಣೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಭಾರತೀಯ ಕಾನೂನು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಭಾರತದ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ಪ್ರಾಚೀನ, ಆದಿಮ ಸಂಜಾತ, ಏಕ-ಜನಾಂಗೀಯ, ಪ್ರಕೃತಿ ಆರಾಧಕ (ಅನಿಮಿಸ್ಟಿಕ್) ಕೊಡವ ಧಾರ್ಮಿಕ ಸಂಸ್ಕಾರವಾದ “ಕೋವಿ-ತೋಕ್” ಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.…

Read More

ಮಡಿಕೇರಿ ಜೂ.12 NEWS DESK :  ಕಳೆದ ಎಂಟು ವರ್ಷಗಳಿಂದ ಜಿಲ್ಲೆಯ ವಿವಿಧ ಜನಾಂಗದಲ್ಲಿರುವ ಆಯ್ದ ಸಂಕಷ್ಟ ಕುಟುಂಬಗಳಿಗೆ ಆಹಾರದ ಕಿಟ್, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರಗಳನ್ನು ವಿತರಿಸುತ್ತಾ ಬರುತ್ತಿರುವ ಮಾನವೀಯ ಸ್ನೇಹಿತರ ಒಕ್ಕೂಟದ ಜಿಲ್ಲಾಮಟ್ಟದ ಕಾರುಣ್ಯ ಕಾರ್ಯಕ್ರಮ ಜೂ.14 ರಂದು ನಡೆಯಲಿದೆ. ಅಂದು ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಪೂರ್ವಾಹ್ನ10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ವಕ್ತಾರ ಶಶಿಕುಮಾರ್ ಚೆಟ್ಟಳ್ಳಿ ಅವರು ವಹಿಸಲಿದ್ದು, ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷ ಎಚ್ಎಂ ನಂದ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್ ಟಿ ಅನಿಲ್, ಒಕ್ಕೂಟದ ಸ್ಥಾಪಕ ಅಡ್ಮಿನ್ ಅನಿಲ್ ರೈ, ಡಾ.ಮುಸ್ತಫ ಮಾದಾಪುರ, ಸುಂಟಿಕೊಪ್ಪದ ಹಿರಿಯ ಸಹಕಾರಿ ಚೆಟ್ರಂಡ ಲೀಲಾ ಮೇದಪ್ಪ ಮುಂತಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಆ‌ಹಾರ, ಆರೋಗ್ಯ,ಶಿಕ್ಷಣ ವಿಭಾಗಗಳಲ್ಲಿ ಅಂದು ಜಿಲ್ಲೆಯ 70ಕ್ಕೂ ಅಧಿಕ ಫಲಾನುಭವಿಗಳಿಗೆ ಒಕ್ಕೂಟದ ವತಿಯಿಂದ ಸವಲತ್ತುಗಳ ವಿತರಣೆ ನಡೆಯಲಿದೆ,ಈ ಉದ್ದೇಶಿತ ಕಾರುಣ್ಯ…

Read More

ಮಡಿಕೇರಿ ಜೂ.12 NEWS DESK : ರಾಜ್ಯದ ಅತ್ಯಂತ ಪ್ರಸಿದ್ಧ ಮತ್ತು ಸುಂದರಪ್ರವಾಸಿ ತಾಣಗಳಲ್ಲಿ ಒಂದಾದ ಮಡಿಕೇರಿಯ ಮಾಂದಲಪಟ್ಟಿ(ಮುಗಿಲುಪೇಟೆ) ಗಿರಿಧಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ನಿರ್ದೇಶನದ ಮೇರೆಗೆ ನಿರ್ಮಿಸಲಾದ 60 ಲಕ್ಷ ರೂ ವೆಚ್ಚದ 4 ಕಿ.ಮೀ ರಸ್ತೆಯನ್ನು ಹೊದ್ದೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಎಚ್.ಎ.ಹಂಸ ಅವರು ಸ್ಥಳೀಯ ಮುಖಂಡರೊಂದಿಗೆ ಶಾಸಕರ ಅನುಪಸ್ಥಿತಿಯಲ್ಲಿ ಉದ್ಘಾಟನೆ ಮಾಡಿದರು. ಸ್ಥಳೀಯ ನಿವಾಸಿಗಳು, ಗ್ರಾಮಸ್ಥರು ಹಾಗೂ ಬಾಡಿಗೆ ಜೀಪ್ ಮಾಲಿಕರ ಕೋರಿಕೆ ಮೇರೆಗೆ ಶಾಸಕರು ಈ ರಸ್ತೆಯನ್ನು ನಿರ್ಮಾಣ ಮಾಡಲು ಅವಕಾಶ ಮಾಡಿದ್ದು ನಿಯಮ ಬಾಹಿರ ಚಟುವಟಿಕೆಗಳು ಪ್ರವಾಸಿ ತಾಣದಲ್ಲಿ ನಡೆಯದಂತೆ ಎಚ್ಚರವಹಿಸಬೇಕು ಎಂದು ಸ್ಥಳಿಯರಿಗೆ ಹಂಸ ಅವರು ಮನವಿ ಮಾಡಿದರು. ಕಾಲೂರು ಗ್ರಾಮಕ್ಕೆ ಬಸ್ ಬರುವ ರಸ್ತೆ ಹದಗೆಟ್ಟಿದ್ದು ತಕ್ಷಣಕ್ಕೆ ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಪ್ರಾಸ್ತವಿಕವಾಗಿ…

Read More

ಮಡಿಕೇರಿ ಜೂ.12 NEWS DESK : ಮಕ್ಕಳು ಭವಿಷ್ಯದ ಪ್ರಜೆಗಳಾಗಿದ್ದು, ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಆಟ-ಪಾಠ ಮತ್ತು ಸುರಕ್ಷಿತಾ ಬಾಲ್ಯ ದೊರೆಯುವುದು ಮೂಲಭೂತ ಹಕ್ಕಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಗೆ ಗಮನಹರಿಸಬೇಕು ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಡತನ, ಅಜ್ಞಾನ, ನಿರುದ್ಯೋಗ ಮತ್ತು ಸಾಮಾಜಿಕ ಸಮಸ್ಯೆಗಳ ಕಾರಣದಿಂದ ಅನೇಕ ಮಕ್ಕಳು ಕಾರ್ಖಾನೆ, ಹೋಟೆಲ್, ಅಂಗಡಿಗಳಲ್ಲಿ…

Read More

ಸುಂಟಿಕೊಪ್ಪ ಜೂ.12 NEWS DESK : ಜಿಟೌನ್ ಸುಂಟಿಕೊಪ್ಪದ ವತಿಯಿಂದ ಫಿಪಾ ವಿಶ್ವಕಪ್ 2026 ಸಂಭ್ರಮದ ಹಿನ್ನಲೆಯಲ್ಲಿ ಫುಟ್ಬಾಲ್ ಪ್ರೇಮಿಗಳು ಚೆಸ್ಕಾಂ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸರಿ ಸುಮಾರು 150 ಅಡಿ ಉದ್ದ ಮತ್ತು 10 ಅಡಿ ಎತ್ತರದ ವಿವಿಧ ದೇಶಗಳ ಫುಟ್ಬಾಲ್ ಆಟಗಾರರ ಭಾವಚಿತ್ರಗಳನ್ನು ಅಳವಡಿಸಿದ ಬೃಹತ್ ಪ್ಲೆಕ್ಸ್ ಅನ್ನು ನಿರ್ಮಿಸಿ ಅಳವಡಿಸಿದ್ದಾರೆ. ಇದನ್ನು ಸುಂಟಿಕೊಪ್ಪ ಹಿರಿಯ ಪುಟ್ಬಾಲ್ ಆಟಗಾರರಾದ ವಹೀದ್‍ಜಾನ್ ಮತ್ತು ಅಬ್ಧುಲ್ ರಹೆಮಾನ್ ಉದ್ಘಾಟಿಸಿದರು. ಈ ಸಂದರ್ಭ ಜಿಟೌನ್ ಸುಂಟಿಕೊಪ್ಪ ಹಿರಿಯ ಮತ್ತು ಕಿರಿಯ ಆಟಗಾರರು ಫುಟ್ಬಾಲ್ ಜೆರ್ಸಿಗಳನ್ನು ಧರಿಸಿ ಪಟಾಕಿ ಸಿಡಿಸಿ ಸಂಭ್ರಮದಿಂದ ಘೋಷಣೆ ಕೂಗಿದರು. ಈ ಸಂದರ್ಭ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರುಗಳಾದ ಕೆ.ಎ.ಉಸ್ಮಾನ್, ಪಿ.ಎಫ್.ಸಬಾಸ್ಟಿನ್, ಶಬ್ಬೀರ್, ರಫೀಕ್‍ಖಾನ್, ಕೆ.ಎಸ್.ಅನಿಲ್‍ಕುಮಾರ್, ಆದಂ ರಫೀ, ಬಾಸಿತ್, ಬಿ.ಕೆ.ಪ್ರಶಾಂತ್ (ಕೋಕಾ), ಕೆ.ಎ.ಲತೀಫ್, ಕೊಡಗರಹಳ್ಳಿ ನೇತಾಜಿ ಯುವಕ ಸಂಘದ ಮಾಜಿ ಅಧ್ಯಕ್ಷ ಬಿ.ಸಿ.ದಿನೇಶ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋಚಾಲಕರ ಸಂಘದ ಅಧ್ಯಕ್ಷ…

Read More