ಮಡಿಕೇರಿ ಆ.29 NEWS DESK : ಮಡಿಕೇರಿ ದಸರಾ ಜನೋತ್ಸವವನ್ನು ಸಂಭ್ರಮ, ಸುರಕ್ಷತೆ ಮತ್ತು ಸ್ವಚ್ಛತೆಯಿಂದ ಆಚರಿಸಲು ಎಲ್ಲರೂ ಕೈಜೋಡಿಸಬೇಕು. ದಸರಾ ಆಚರಣೆಗೆ ಅಗತ್ಯವಿರುವ ಅನುದಾನವನ್ನು ಕೋರಲು ಸೆಪ್ಟಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಡಿಕೇರಿ ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು ಹಣ ಬಿಡುಗಡೆ ಸಂಬAಧ ಮುಖ್ಯಮಂತ್ರಿಯವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಿಯೋಗದ ಮೂಲಕ ಭೇಟಿ ಮಾಡಲಾಗುವುದು ಎಂದರು. ಸಂಪ್ರದಾಯದಂತೆ ನಡೆದುಕೊಂಡು ಬಂದಿರುವ ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸುವಂತಾಗಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಪ್ರತೀ ಮಂಟಪದಲ್ಲಿ ಪೊಲೀಸರನ್ನು ನಿಯೋಜಿಸಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ ಕಾರ್ಯವಾಗಬೇಕು. ವಿದ್ಯುತ್ ಮಾರ್ಗ ಸರಿಪಡಿಸುವುದು ಹಾಗೂ ಬೀಳುವ ಮರಗಳಿದ್ದಲ್ಲಿ ತೆರವುಗೊಳಿಸುವ ಕಾರ್ಯ ಕೈಗೊಳ್ಳಬೇಕು. ಮಡಿಕೇರಿ…
ಲೇಖಕ: admin
ಮಡಿಕೇರಿ ಆ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು. ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು. ರಸ್ತೆ ಕಾಮಗಾರಿಯ ಸಂದರ್ಭ ಕಳಪೆ ಕಾಮಗಾರಿ ನಡೆಯದಂತೆ ಎಚ್ಚರ ವಹಿಸಬೇಕು. ಕಾಮಗಾರಿಯನ್ನು ಗ್ರಾಮಸ್ಥರು ಖುದ್ದು ಪರಿಶೀಲಿಸಿ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಹೀಗೆ ಮಾಡುವುದರಿಂದ ಅಭಿವೃದ್ಧಿ ಹೊಂದಿದ ರಸ್ತೆಗಳು ಸುದೀರ್ಘ ಕಾಲ ಹದಗೆಡದೆ ಉಳಿದುಕೊಳ್ಳಲಿವೆ ಎಂದು ತಿಳಿಸಿದರು. *ವಿವಿಧೆಡೆ ಕಾಮಗಾರಿ* ರೂ.1 ಕೋಟಿ ವೆಚ್ಚದಲ್ಲಿ ಐಗೂರು-ಕಿರಗಂದೂರು-ಕೂಡೆಗದ್ದೆ ರಸ್ತೆ ಕಾಂಕ್ರಿಟೀಕರಣ, ರೂ.50 ಲಕ್ಷ ವೆಚ್ಚದಲ್ಲಿ ತಾಕೇರಿ-ಹರಗ ರಸ್ತೆ ಮರು ಡಾಂಬರೀಕರಣ, ರೂ.15 ಲಕ್ಷ ವೆಚ್ಚದಲ್ಲಿ ಕಿರಗಂದೂರು-ಡಿಬಿಡಿ ರಸ್ತೆ ಅಡ್ಡಲಾಗಿ ನಿರ್ಮಿಸಿದ ಸೇತುವೆ ರಸ್ತೆ ನಿರ್ಮಾಣ, ರೂ.25 ಲಕ್ಷ ವೆಚ್ಚದಲ್ಲಿ ಕಿರಗಂದೂರು ದುರ್ಗಾ ಕಾಲೋನಿ ರಸ್ತೆ ಕಾಂಕ್ರಿಟೀಕರಣ ಹಾಗೂ ರೂ.50 ಲಕ್ಷ ವೆಚ್ಚದಲ್ಲಿ ಕಿರಗಂದೂರು…
ಕುಶಾಲನಗರ, ಆ.29 NEWS DESK : ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಘಟಕ ಹಾಗೂ ಶಾಲೆಯ ಪ್ರಕೃತಿ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಗಣೇಶೋತ್ಸವದ ಅಂಗವಾಗಿ ಪರಿಸರ ಜಾಗೃತಿ ಅಭಿಯಾನ: 2025 ವನ್ನು ನಡೆಸಲಾಯಿತು. ಶಾಲೆಯಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾವು ಸ್ವತಃ ತಯಾರಿಸಿದ ವಿವಿಧ ನಮೂನೆಯಲ್ಲಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಪ್ರದರ್ಶನ ಗಮನ ಸೆಳೆಯಿತು. ಪರಿಸರ ಸ್ನೇಹಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಂ.ಎಂ.ಭಾರತಿ, ಪಿ.ಓ.ಪಿ ಮತ್ತು ರಾಸಾಯನಿಕ ಬಣ್ಣದ ಮೂರ್ತಿಗಳನ್ನು ತ್ಯಜಿಸಿ ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಕುರಿತು ಮಾಹಿತಿ ನೀಡಿದರು. ಶಾಲೆಯಲ್ಲಿ ಮಕ್ಕಳು ಜೇಡಿಮಣ್ಣಿನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿರುವ ಕುರಿತು ಮಕ್ಕಳ ಪರಿಸರ ಕಾಳಜಿಯನ್ನು ಅವರು ಶ್ಲಾಘಿಸಿದರು.…
ವಿರಾಜಪೇಟೆ ಆ.29 NEWS DESK : ಕುಶಾಲನಗರ ವಿವೇಕ ಜಾಗೃತ ಬಳಗದ ವತಿಯಿಂದ ವನಿತಾ ಸಂಗಮ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿವೈನ್ ಪಾರ್ಕ್ನ ದಕ್ಷಸೇವಕಿ ದಿವ್ಯ ತೇಜ್ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳೆಯರ ಕುರಿತಾದ ಡಿವೈಸ್ ಪಾರ್ಕ್ನ ವಿಚಾರಗಳನ್ನು ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ನಡೆಯಿತು. ಸುಮಾರು 180 ಜನ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಬಳಗದ ಅಧ್ಯಕ್ಷರಾದ ಲತಾ ಅಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು. ಬಳಗದ ಸದಸ್ಯರುಗಳಾದ ಗಣೇಶ, ಲೋಕಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಅಡುಗೆ ಸ್ಪರ್ಧೆಯ ಬಹುಮಾನ ವಿತರಿಸಿ ತೀರ್ಪುಗಾರರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಮಡಿಕೇರಿ ಆ.29 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಾರ್ಷಿಕ ಎನ್.ಎಸ್.ಎಸ್.ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.30 ರಂದು ನಡೆಯಲಿದೆ. ಕಾಲೇಜಿನ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ವರದಿಗಾರರು ಹಾಗೂ ನಿರೂಪಕರಾದ ಕಿಶೋರ್ ರೈ ಕತ್ತಲೆಕಾಡು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಆ.29 NEWS DESK : ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳ ರಾಜ್ಯ ವಯನಾಡು ಜಿಲ್ಲೆಗೆ ಸಂಪರ್ಕಿಸುವ ರಸ್ತೆಯ ತಮರಶೆರಿ ಘಾಟ್ ಬಳಿ ಭೂಕುಸಿತ ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿರುತ್ತದೆ. ಈ ಸಂಬಂಧ ಕೊಡಗು ಜಿಲ್ಲೆಯ ಗಡಿಭಾಗವಾದ ಕುಟ್ಟ ಮೂಲಕ ವಯನಾಡು ಜಿಲ್ಲೆಗೆ ಗುಡಲೂರು ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಬದಲೀ ಮಾರ್ಗವಾದ ಗೋಣಿಕೊಪ್ಪ -ಕೂಟುಪುಳ ಇರಿಟ್ಟಿ (ಕಣ್ಣೂರು ಜಿಲ್ಲೆ) ಮಾರ್ಗದ ಮೂಲಕ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳಲು ಉಲ್ಲೇಖದ ಪತ್ರದಲ್ಲಿ ಕೇರಳ ವಯನಾಡು ಜಿಲ್ಲಾಧಿಕಾರಿಗಳು ಕೋರಿರುತ್ತಾರೆ. ಆದ್ದರಿಂದ, ಗುಡಲೂರು ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗುವ ವರೆಗೆ ಜಿಲ್ಲೆಯ ಕುಟ್ಟ ಮೂಲಕ ತಮರಶೆರಿ ಘಾಟ್, ಗುಡಲೂರು ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಬದಲೀ ಮಾರ್ಗವನ್ನು ಬಳಸಲು ಸಲಹೆ ನೀಡಿದೆ. ಸಾರ್ವಜನಿಕರು ಬದಲೀ ಮಾರ್ಗವಾದ ಮಾಕುಟ್ಟ ಮುಖಾಂತರ ಕೇರಳ ರಾಜ್ಯಕ್ಕೆ ತೆರಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜು ತಿಳಿಸಿದ್ದಾರೆ.
ಮಡಿಕೇರಿ ಆ.29 NEWS DESK : ಭಾರತ್ ಕೆರಿಯರ್ ನೆಕ್ಟ್ ಸೊಲ್ಯೂಶಶನ್ಸ್ ಸಹಯೋಗದಲ್ಲಿ ಅಶೀರ್ವಾದ್ ಪ್ಲಂಬಿಂಗ್ ಸ್ಕೂಲ್ ಸಂಸ್ಥೆ ಬೆಂಗಳೂರಿನಲ್ಲಿ 75 ದಿನಗಳ ಪ್ಲಂಬಿಂಗ್ ತರಬೇತಿಯನ್ನು 18-45 ವರ್ಷದ ಅರ್ಹ ಪುರುಷ ಅಭ್ಯರ್ಥಿಗಳಿಗೆ ಅಂತಾರಾಷ್ಟೀಯ ಮಟ್ಟದ ಉಚಿತ ತರಬೇತಿ ,ಉಚಿತ ವಸತಿ, ಆಹಾರದೊಂದಿಗೆ ನೀಡುತ್ತಿದೆ. ಕನಿಷ್ಠ 8 ನೇ ತರಗತಿ ಪಾಸ್ ಆಗಿರಬೇಕು ಹಾಗೂ 2000 ಮೌಲ್ಯಮಾಪನ ಶುಲ್ಕವಿದ್ದು. ತರಬೇತಿ ನಂತರ (ಡಬ್ಲ್ಯುಎಂಎಸ್ಪಿಸಿ) ಪ್ರಮಾಣಪತ್ರ ಮತ್ತು ಉದ್ಯೋಗ ಸಹಾಯ ಲಭ್ಯವಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9535602888/6362902311/ 6362902834 ನ್ನು ಸಂಪರ್ಕಿಸಬಹುದು.
ಮಡಿಕೇರಿ ಆ.29 NEWS DESK : ಭಾರತ್ ಕೆರಿಯರ್ ನೆಕ್ಟ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಅಪೋಲೊ ಮೆಡ್ ಸ್ಕಿಲ್ಸ್ ಸಂಸ್ಥೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ) ತರಬೇತಿ ಬೆಂಗಳೂರಿನಲ್ಲಿ ನೀಡಲಾಗುತ್ತಿದೆ. 18-30 ವರ್ಷ ವಯಸ್ಸಿನ ಕನಿಷ್ಠ 10 ನೇ ತರಗತಿ ಉತ್ತೀರ್ಣರು ಅರ್ಹರಾಗಿದ್ದು ಆಸ್ಪತ್ರೆ ಹಾಗೂ ಆರೈಕೆ ಕ್ಷೇತ್ರಗಳಿಗೆ ಸಂಬಂಧಿಸಿದ ಕೆಲಸ ಒಳಗೊಂಡ ತರಬೇತಿಯ ಬಳಿಕ ಖಾಸಗಿ ಆಸ್ಪತ್ರೆ ವೃದ್ದಾಶ್ರಮ ಹಾಗೂ ಹಿರಿಯರ ಆರೈಕೆ ಕೇಂದ್ರಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ 9535602888/ 6362902311/ 6332902335 ಸಂಪರ್ಕಿಸಬಹುದು ಎಂದು ಸಿ.ಇ.ಒ ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಎಲ್.ಎಲ್.ಪಿ. ವಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ನಾಪೋಕ್ಲು ಆ.29 NEWS DESK : ಶ್ರೀ ಗೌರಿ ಗಣೇಶೋತ್ಸವದ ಅಂಗವಾಗಿ ನಾಪೋಕ್ಲುವಿನ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಶ್ರೀ ಗೌರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲು 4 ಗಣೇಶ ಸೇವಾ ಸಮಿತಿಗಳ ವತಿಯಿಂದ ಸಂತೆ ಮೈದಾನದಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿಸಿ ವಾದ್ಯ ಮೇಳಗಳೊಂದಿಗೆ ಕೊಂಡೊಯ್ಯಲಾಯಿತು. ಮಳೆಯ ನಡುವೆಯೇ ಪಟ್ಟಣದ ಮುಖ್ಯ ರಸ್ತೆಯಲ್ಲಿ ಭವ್ಯ ಮೆರವಣಿಗೆಯಲ್ಲಿ ಸಾಗಿ ನಂತರ ವಿವಿಧ ಕಡೆಯ ದೇವಾಲಯ ಆವರಣ ಹಾಗೂ ಪೆಂಡಾಳುಗಳಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಗಣೇಶೋತ್ಸವ ಸಮಿತಿಗಳ ಪ್ರಮುಖ ಕಲಿಯಂಡ ವಿಠಲ ಅವರು ಸಂತೆ ಮೈದಾನದಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಎಲ್ಲರೂ ಸೇರಿ ವಿಘ್ನೇಶನನ್ನು ಭಕ್ತಿ ಭಾವದಿಂದ ಪೂಜಿಸಿ ವಿಸರ್ಜಿಸುವುದು ಸಂಸ್ಕೃತಿ ನಮ್ಮದಾಗಿದ್ದು ಇದಕ್ಕೆ ಎಲ್ಲರೂ ಭಾಗವಹಿಸಿ ಸಹಕಾರ ನೀಡಬೇಕು ಎಂದರು. ಆ.31 ರಂದು ಎಲ್ಲ ಗಣಪತಿ ಸೇವಾ ಸಮಿತಿಗಳು ಒಟ್ಟು ಸೇರಿ ವಿವಿಧ ಅಲಂಕೃತ ಮಂಟಪ, ಸಂಸ್ಕೃತಿಕ ಕಾರ್ಯಕ್ರಮ, ವಾದ್ಯಗೋಷ್ಠಿಗಳೊಂದಿಗೆ ಅದ್ದೂರಿ…
ಮಡಿಕೇರಿ ಆ.29 NEWS DESK : ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಂದ್ರೀರ ಎನ್.ತೇಜಸ್ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 2024-25ನೇ ಸಾಲಿನಲ್ಲಿ ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘವು 43.94 ಲಕ್ಷ ನಿವ್ವಳ ಲಾಭವನ್ನು ಸರ್ವ ಸದಸ್ಯರ ಸಹಕಾರದಿಂದ ಪಡೆದುಕೊಂಡಿದೆ. ಲಭಾಂಶದಲ್ಲಿ ಸದಸ್ಯರಿಗೆ ಶೇ.11.50 ಡಿವಿಡೆಂಡನ್ನು ನೀಡಲು ನಿರ್ಧರಿಸಲಾಗಿದೆಯೆಂದು ತಿಳಿಸಿದರು. ಸಂಘÀವು ಒಟ್ಟು 1,333 ಸದಸ್ಯರನ್ನು ಹೊಂದಿದ್ದು, 181.32 ಲಕ್ಷ ಪಾಲು ಬಂಡವಾಳವನ್ನು ಹೊಂದಿದೆ. 2024-25ನೇ ಸಾಲಿನಲ್ಲಿ ಒಟ್ಟು 306.75 ಲಕ್ಷ ವ್ಯಾಪಾರ ವಹಿವಾಟು ನಡೆಸಿ, 17.61 ಲಕ್ಷ ವ್ಯಾಪಾರ ಲಾಭವನ್ನು ಗಳಿಸಿದೆಯೆಂದು ತಿಳಿಸಿದರು. :: ಶೇ.99 ಸಾಲ ವಸೂಲಾತಿ :: ಸಂಘದ ಒಟ್ಟಾರೆ ಸಾಲ ಮರುಪಾವತಿ ಕಳೆದ ಮಾರ್ಚ್ ಅಂತ್ಯಕ್ಕೆ ಶೇ.99 ರಷ್ಟಿದೆ. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪಡೆದ ಕೃಷಿ ಸಾಲದ ಮರುಪಾವತಿ…






