ಲೇಖಕ: admin

ಮಡಿಕೇರಿ NEWS DESK ಸೆ.16 : ರಾಜ್ಯ ಸರ್ಕಾರದ ವತಿಯಿಂದ ಸೆ.22 ರಿಂದ ಅ.12 ರವರೆಗೆ ಹಿಂದುಳಿದ ಆಯೋಗದಿಂದ ನಡೆಯುವ ಜನತೆಯ ಶೈಕ್ಷಣಿಕ ಹಾಗೂ ಸಾಮಾಜಿಕ, ಆರ್ಥಿಕ ಜನಗಣತಿಯಲ್ಲಿ ವೀರಶೈವ ಲಿಂಗಾಯಿತ ಸಮುದಾಯದವರು ತಪ್ಪದೆ “ವೀರಶೈವ ಲಿಂಗಾಯಿತ” ಎಂದು ಬರೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆ ಅನುಸೂಚಿಯ 8ರ ಧರ್ಮದ ಕಾಲಂನಲ್ಲಿ ನೀಡಿರುವ 11ನೇ ಕೋಡ್ ನ ‘ಇತರೆ’ ಎಂದಿರುವ ಸ್ಥಳದಲ್ಲಿ ‘ವೀರಶೈವ ಲಿಂಗಾಯಿತ ಎಂದು ಮತ್ತು 9 ರ ಜಾತಿ ಕಾಲಂ ನಲ್ಲಿ ಲಿಂಗಾಯಿತ ಅಥಾವ ವೀರಶೈವ ಎಂದು ನಿಗದಿತ ಸಂಕೇತ ಸಂಖ್ಯೆಯನ್ನು ನೀಡಿ ನಮೂದಿಸಬೇಕು. 10ರ ಉಪಜಾತಿ ಕಾಲಂ ನಲ್ಲಿ ತಮ್ಮ ಉಪಜಾತಿಗಳನ್ನು ಕೋಡ್ ಸಮೇತ ದಾಖಲಿಸಿ ಮಾಹಿತಿಗಳನ್ನು ತಪ್ಪಿಲ್ಲದಂತೆ ನೀಡಲು ಸಲಹೆ ನೀಡಿದರು. ಸಾರ್ಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜಾತಿಗಣತಿಯ ದತ್ತಾಂಶಗಳನ್ನು ಉಪಯೋಗಿಸಿಕೊಳ್ಳುಲು ಅನುಕೂಲವಾಗುತ್ತದೆ. ಆದ…

Read More

ಮಡಿಕೇರಿ NEWS DESK  ಸೆ.16 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರೂ ಆದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಸಂಸದ ಅಜಯ್ ಮಾರ್ಕನ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಸಾಕಾನೆ ಶಿಬಿರದಲ್ಲಿರುವ ಸೌಲಭ್ಯಗಳು, ಅಗತ್ಯವಿರುವ ವ್ಯವಸ್ಥೆಗಳು ಮತ್ತು ಆಹಾರ, ವಿಹಾರದ ಕುರಿತು ಶಾಸಕರು ಸಿಬ್ಬಂದಿಗಳೊಂದಿಗೆ ಚರ್ಚಿಸಿದರು. ಶಿಬಿರದಲ್ಲಿರುವ ಸಾಕಾನೆಗಳ ಸಂಖ್ಯೆ ಮತ್ತು ಅದಕ್ಕನುಗುಣವಾಗಿ ಇರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಿತಿಮತಿ ವಲಯ ಅಧ್ಯಕ್ಷ ನವೀನ್, ದೇವರಪುರ ವಲಯ ಅಧ್ಯಕ್ಷ ಬಸ್ ವಂತ್, ಕಾಂಗ್ರೆಸ್ ಪ್ರಮುಖರಾದ ಬೆನ್ನಿ, ಪಂಕಜ, ಹರೀಶ್ ಪೂವಯ್ಯ, ಚಿಣ್ಣಪ್ಪ, ಎ.ಜೆ.ಬಾಬು, ರಾಜು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಸೋಮಣ್ಣ, ಅಲಿರ ರಶೀದ್, ಸಂತೋಷ್, ಕುಂಡಚೀರ ಮಂಜು…

Read More

ಮಡಿಕೇರಿ ಸೆ.28 NEWS DESK : ನಾಕೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್  ಸಹಯೋಗದೊಂದಿಗೆ ಸುಂಟಿಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ವ್ಯವಸ್ಥಾಪಕ ಅನಿಕೇತ್,  ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು .ಎರಡನ್ನೂ…

Read More

ಮಡಿಕೇರಿ ಸೆ.16 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಸೆ.24 ರಂದು ಎರಡನೇ ವಷ೯ದ ಕಾಫಿ ದಸರಾ ಪ್ರಯುಕ್ತ ಕಾಫಿಯಿಂದ ತಯಾರಿಸಲ್ಪಡುವ ವೈವಿಧ್ಯಮಯ ಖಾದ್ಯಗಳ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮತ್ತು ಕಾಫಿ ದಸರಾ ಸಮಿತಿ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.  ಕಾಫಿಯ ಮಹತ್ವ ತಿಳಿಸಲು ಮಾಹಿತಿಯುಕ್ತ ಸ್ಪಧೆ೯ಯನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾಫಿ ಫ್ಲೆವರ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಬ್ರೌನಿ ವಿಭಾಗ, ಕಾಫಿ ಫ್ಲೆವರ್ ಬಿಸ್ಕತ್ ವಿಭಾಗ, ಕಾಫಿ ಫ್ಲೆವರ್ ಪುಡ್ಡಿಂಗ್ ವಿಭಾಗ. ವಿಭಿನ್ನ ರುಚಿಯಿರುವ ಕಾಫಿ ಪಾನೀಯವಿಭಾಗ ಮತ್ತು ಕಾಫಿ ಫ್ಲೇವರ್ ಚಾಕಲೇಟ್ ವಿಭಾಗ ಒಳಗೊಂಡಂತೆ 7 ವಿಭಾಗಗಳಲ್ಲಿ ಸ್ಪಧೆ೯ಗಳು ಆಯೋಜಿತವಾಗಿದೆ. ಸೆ.22 ರೊಳಗಾಗಿ ಸ್ಪಧಿ೯ಗಳು ತಮ್ಮ ಹೆಸರು ನೋಂದಾಯಿಸಲು ಸಂಪಕಿ೯ಸಬೇಕಾದ ಸಂಖ್ಯೆ – ಮೇಪಾಡಂಡ ಸವಿತಾ…

Read More

ಸಿದ್ದಾಪುರ ಸೆ.16 NEWS DESK : ಹೈದರಾಬಾದ್‌ ನಲ್ಲಿ ನಡೆದ ರಾಷ್ಟ್ರ ಮಟ್ಟದ ಫ್ಲಾಗ್ ಫುಟ್ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ  ಕರ್ನಾಟಕ ತಂಡದ ನಾಯಕಿಯಾಗಿ ಪ್ರತಿನಿದಿಸಿದ್ದ ಬಿ.ಎಂ.ದೀನಾ ಅಕ್ಟೋಬರ್ ನಲ್ಲಿ ಚೈನಾ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.  ಹಲವು ವರ್ಷಗಳಿಂದಲೂ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಿರುವ ದೀನಾ ತರಬೇತುದಾರರಾಗಿ ಹಾಗೂ ರಾಜ್ಯ ಮಟ್ಟದ ತಂಡಗಳ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ದೀನಾ ರಾಜ್ಯ ಪ್ರಶಸ್ತಿ ವಿಜೇತೆ ಚನ್ನಯ್ಯನ ಕೋಟೆ ಸರ್ಕಾರಿ ಶಾಲಾ ಶಿಕ್ಷಕಿ ಬಿ.ಬಿ.ಜಾಜಿ ಹಾಗೂ ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ಮೋಹನ್ ಕುಮಾರ್ ದಂಪತಿಗಳ ಪುತ್ರಿ.

Read More

ಮಡಿಕೇರಿ NEWS DESK ಸೆ.16 : ಜಾತಿ ಜನಗಣತಿಯ ದಾಖಲೆಯಲ್ಲಿ “ಕೊಡವ” ಎಂದು ನಮೂದಿಸುವುದರಿಂದ ಕೊಡವರ ಶಾಸನಬದ್ಧ ಮತ್ತು ಸಾಂವಿಧಾನಿಕ ಹಕ್ಕುಗಳ ಅನುಮೋದನೆಗೆ ಮಹತ್ವದ ಮೈಲಿಗಲ್ಲಾಗಲಿದೆ. ಇದು ಕೊಡವರ ಹಕ್ಕನ್ನು ನಿರ್ಧರಿಸುತ್ತದೆ ಮತ್ತು ಸರ್ವತೋಮುಖ ಸಬಲೀಕರಣವನ್ನು ಖಚಿತಪಡಿಸುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪ್ರತಿಪಾದಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವರ ಆನಿಮಿಸ್ಟಿಕ್ ನಂಬಿಕೆಗಳು ಪ್ರಕೃತಿಯೊಂದಿಗಿನ ಅವರ ಸಂಪರ್ಕ ಮತ್ತು ನೈಸರ್ಗಿಕ ಪ್ರಪಂಚದ ವಿವಿಧ ಅಂಶಗಳಿಗೆ ಅವರು ಹೊಂದಿರುವ ಗೌರವದಲ್ಲಿ ಆಳವಾಗಿ ಬೇರೂರಿವೆ. ಅವರ ಆಧ್ಯಾತ್ಮಿಕ ಅಭ್ಯಾಸಗಳು ವ್ಯಾಪಕ ಶ್ರೇಣಿಯ ಅಂಶಗಳನ್ನು ಒಳಗೊಂಡಿವೆ ಎಂದು ವಿವರಿಸಿದ್ದಾರೆ. *ಪ್ರಕೃತಿ ಆರಾಧನೆ* ಭೂಮಿ ತಾಯಿ, ಪ್ರಕೃತಿ ಮಾತೆ ಮತ್ತು ದೈವಿಕ ನದಿ ಕಾವೇರಿಯನ್ನು ಪೂಜಿಸುವುದು. *ಪವಿತ್ರ ಸ್ಥಳಗಳು* ಸಮಾಧಿ ಸ್ಥಳಗಳು, ಪವಿತ್ರ ಮಂದ್, ದೈವಿಕ ಕಾಡುಗಳು ಮತ್ತು ಪವಿತ್ರ ಪರ್ವತಗಳನ್ನು ಗೌರವಿಸುವುದು.  *ಪೂರ್ವಜರ ಪೂಜೆ* ಅಗಲಿದ ಆತ್ಮಗಳು ಮತ್ತು ಪೂರ್ವಜರಿಗೆ ಗೌರವ ಸಲ್ಲಿಸುವುದು. ಸಾಂಕೇತಿಕ ಅಂಶಗಳು* ಸಂಸ್ಕಾರದ ಆಯುಧಗಳನ್ನು…

Read More

ಸೋಮವಾರಪೇಟೆ ಸೆ.16 NEWS DESK :  ಶ್ರೀ ನಾರಾಯಣ ಗುರು ಸೇವಾ ಸಮಿತಿ, ಸೋಮವಾರಪೇಟೆ ತುಳುನಾಡು ಬಿಲ್ಲವ ಮಹಿಳಾ ಸಂಘ ಸಂಯುಕ್ತ ಆಶ್ರಯದಲ್ಲಿ 10ನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ನಡೆಯಿತು. ಸೋಮವಾರಪೇಟೆ  ಮಾನಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಮಾತನಾಡಿ ಜನಾಂಗದ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದೆ. ಪೋಷಕರು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಹೇಳಿದರು. ಶ್ರೀನಾರಾಯಣ ಗುರು ಒಬ್ಬ ತತ್ವಜ್ಞಾನಿ, ಸಮಾಜ ಸುಧಾರಕರಾಗಿದ್ದರು. ಸೋಮವಾರಪೇಟೆಯಲ್ಲಿ ಶ್ರೀ ನಾರಾಯಣ ಗುರು ಸೇವಾ ಸಮಿತಿ ಕಟ್ಟಡೆ ನಿರ್ಮಾಣಕ್ಕೆ 5ಲಕ್ಷ ರೂ.ಗಳ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಒಂದು ಜಾತಿ, ಒಂದು ಧರ್ಮ, ಎಲ್ಲಾ ಮಾನವರಿಗೆ ಒಂದೇ ದೇವರು ಎಂದು ಬೋಧನೆ ಮಾಡಿದರು. ಶಿಕ್ಷಣ ಮತ್ತು ಕೃಷಿಯನ್ನು ಪ್ರೋತ್ಸಾಹಿಸಿದರು ಎಂದು ಹೇಳಿದರು. ಕುದ್ರೋಳಿ…

Read More

ಮಡಿಕೇರಿ ಸೆ.16 NEWS DESK  : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಸುಣ್ಣದ ಬೀದಿಯಲ್ಲಿರುವ ಪ್ರಸಿದ್ಧ ತುಳಸಿ ಮಾರಿಯಮ್ಮ ದೇವಸ್ಥಾನಕ್ಕೆ ವಿರಾಜಪೇಟೆ ಪುರಸಭೆ ವತಿಯಿಂದ ಕುರ್ಚಿಗಳನ್ನು ನೀಡಲಾಯಿತು. ದೇವಸ್ಥಾನ ಸಮಿತಿಯವರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಕುರ್ಚಿಗಳನ್ನು ವಿತರಿಸಿ, ಮಾತನಾಡಿ ಭಕ್ತಾದಿಗಳಿಗೆ ಅನುಕೂಲ ಆಗಲಿ ಎಂದು ಪುರಸಭೆಯವರು ಮಾಡುತ್ತಿರುವ ಈ ಸತ್ಕಾರ್ಯ ಶ್ಲಾಘನೀಯ. ತಾಯಿ ತುಳಸಿ ಮಾರಿಯಮ್ಮ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಮುಖ್ಯ ಅಧಿಕಾರಿ ನಾಚಪ್ಪ, ಪುರಸಭೆ ಸದಸ್ಯರಾದ ರಾಜೇಶ್ ಪದ್ಮನಾಭ, ಹಮೀದ್, ಸಾಯಿ ಸಮಿತಿ ಅಧ್ಯಕ್ಷರಾದ ಜಲೀಲ್, ಪುರಸಭೆ ಅಧಿಕಾರಿಗಳು, ತುಳಸಿ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ನಾಪೋಕ್ಲು ಸೆ.16 NEWS DESK : ಕೊಡಗಿನ ವಿಶಿಷ್ಟ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೇರಂಬಾಣೆ ಗೌಡ ಸಮಾಜದಲ್ಲಿ ಆಯೋಜಿಸಲಾಗಿದ್ದ ಕೈಲ್ ಮುಹೂರ್ತ ಸಂತೋಷಕೂಟ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕೊಡಗಿನಲ್ಲಿ ವಿವಿಧ ಜನಾಂಗದವರು ತಮ್ಮ ಆಚಾರ, ವಿಚಾರ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿದ್ದಾರೆ. ಗೌಡ ಸಮಾಜ ಕೊಡಗಿನಲ್ಲಿ ಮಾತ್ರವಲ್ಲ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಗೌಡ ಜನಾಂಗದವರು ರಾಜಕೀಯ, ಕ್ರೀಡೆ, ಸೈನ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಕೊಡುಗೆಯನ್ನು ಸಮಾಜಕ್ಕೆ ನೀಡಿದ್ದಾರೆ ಎಂದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಗೌಡ ಸಮಾಜದ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಭಾಗದ ಜನರು ಒಗ್ಗೂಡಬೇಕು. ಶಿಸ್ತುಬದ್ಧ ಕಾರ್ಯಕ್ರಮ ಸಂತಸ ತಂದಿದೆ. ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕು. ಬೇರೆ ಸಮಾಜದವರೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯ. ಗೌಡ ಸಮಾಜದವರು…

Read More

ಮಡಿಕೇರಿ ಜು.16 NEWS DESK : ದೇವಾಲಯಗಳು ಹಿಂದೂಗಳ ಶ್ರದ್ಧಾಭಕ್ತಿಯ ಧಾರ್ಮಿಕ ಕೇಂದ್ರಗಳಾಗಿದ್ದು, ಸಾಮಾಜಿಕ ಸಾಮರಸ್ಯದ ಜೊತೆಗೆ ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ ರಾಜ್ಯ ಸಂಯೋಜಕ ಮನೋಹರ ಮಠದ್ ಹೇಳಿದರು. ನಗರದ ನಂದನ ಸಭಾಂಗಣದಲ್ಲಿ ನಡೆದ ದೇವಾಲಯಗಳ ಅರ್ಚಕರು ಮತ್ತು ಸಮಿತಿ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇವಾಲಯಗಳು ಹಿಂದಿನಿಂದಲೂ ಶೈಕ್ಷಣಿಕ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಿ ವಿದ್ಯಾರ್ಜನೆಯ ಕೇಂದ್ರಗಳಾಗಿತ್ತು. ರಾಜ ಮಹಾರಾಜರುಗಳ ಕಾಲದಿಂದಲೂ ಧಾರ್ಮಿಕ ಕೇಂದ್ರಗಳು ಅನೇಕ ವಿಶ್ವವಿದ್ಯಾನಿಲಯಗಳಾಗಿ ವಿದ್ಯಾರ್ಜನೆಯನ್ನು ನೀಡುವ ಮೂಲಕ ಜ್ಞಾನಕ್ಕೆ ಹೆಚ್ಚು ಒತ್ತು ನೀಡಿದ್ದವು. ಅದರ ಜೊತೆಗೆ ಸಾಂಸ್ಕೃತಿಕ ಪರಂಪರೆಯ ಕೇಂದ್ರಗಳು ಆಗಿದ್ದವು. ಅನೇಕ ಗುರುಕುಲ ಶಿಕ್ಷಣ ಪದ್ಧತಿಯು ದೇವಾಲಯದ ಅಧೀನದಲ್ಲಿ ನಡೆಯುತ್ತಿದ್ದವು. ಹೊಯ್ಸಳರು, ಚಾಲುಕ್ಯರು ಸೇರಿದಂತೆ ಅನೇಕ ರಾಜ ಮನೆತನಗಳು ಜ್ಞಾನಕ್ಕೆ ಒತ್ತು ನೀಡಿ ಅನೇಕ ವಿದ್ಯಾ ಕೇಂದ್ರಗಳನ್ನು ಸ್ಥಾಪಿಸಿದ್ದ ಉದಾಹರಣೆಗಳು ಇತಿಹಾಸದಲ್ಲಿ ಸಿಗುತ್ತವೆ. ಅಂತಹ ಅನೇಕ ವಿಶ್ವವಿದ್ಯಾನಿಲಗಳು ಈಗಲೂ ನಮ್ಮ ಕಣ್ಣಮುಂದಿವೆ ಎಂದು…

Read More