ಕುಶಾಲನಗರ ಆ.29 NEWS DESK : ಗಣೇಶೋತ್ಸವ ಅಂಗವಾಗಿ ಕುಶಾಲನಗರ ರಥ ಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ 101 ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಲಾಯಿತು. ಕುಶಾಲನಗರ ವಾಸವಿ ಯುವಕ ಸಂಘ ವತಿಯಿಂದ ಆರ್ಯವೈಶ್ಯ ಮಂಡಳಿ ಸಹಯೋಗದೊಂದಿಗೆ ದೇವಾಲಯದಲ್ಲಿ ಗಣಪತಿ ಮೂರ್ತಿಗಳಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್, ವಾಸವಿ ಯುವಕ ಸಂಘದ ಅಧ್ಯಕ್ಷರಾದ ಪ್ರವೀಣ್ ಮತ್ತು ಪದಾಧಿಕಾರಿಗಳು ಇದ್ದರು.
ಲೇಖಕ: admin
ಸುಂಟಿಕೊಪ್ಪ ಆ.29 NEWS DESK : 7ನೇ ಹೊಸಕೋಟೆ ಗಳೆಯರ ಬಳಗದ ವತಿಯಿಂದ 40ನೇ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಎಮ್ಮಗುಂಡಿ ಶ್ರೀ ಬಾಲಗಣಪತಿ ಮಿತ್ರ ಮಂಡಳಿ ವತಿಯಿಂದ ಪ್ರಥಮ ವರ್ಷದ ಗೌರಿ ಗಣೇಶೋತ್ಸವದ ಪ್ರಯುಕ್ತ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸುಂಟಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಾಲಯದ ಆರ್ಚಕ ಗಣೇಶ್ ಭಟ್ ನೇತೃತ್ವದಲ್ಲಿ ಗಣಹೋಮ ಮತ್ತು ವಿಶೇಷ ಪೂಜಾ ವಿಧಿವಿಧಾನಗಳನ್ನು ನೇರವೇರಿಸಿದರು. ಇದೇ ವೇಳೆ ಮಹಿಳೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆಯೊಂದಿಗೆ ತೀರ್ಥ ಪ್ರಸಾದದೊಂದಿಗೆ ಭಕ್ತಾಧಿಗಳಿಗೆ ಲಘುಉಪಹಾರ ನೀಡಲಾಯಿತು. ಸಮಿತಿಯ ಗೌರವಧ್ಯಕ್ಷ ಸಂಜೀವ, ಅಧ್ಯಕ್ಷ ಸಜಿತ್, ಕಾರ್ಯದರ್ಶಿ ಪ್ರವೀಣ ಹಾಗೂ ಗ್ರಾಮಸ್ಥರು ಇದ್ದರು.
ಸುಂಟಿಕೊಪ್ಪ ಆ.29 NEWS DESK : ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ಗೌರಿ ಗಣೇಶೋತ್ಸವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಿವಿಧ ಧಾರ್ಮಿಕ ವಿಧಿ ವಿಧಾನದೊಂದಿಗೆ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ಸಂಜೆ ಗಂಟೆಯಿಂದ ಕೊಡಗರಹಳ್ಳಿ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಸುಂಟಿಕೊಪ್ಪ ಆ.29 NEWS DESK : ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ 12ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಮುಂಜಾನೆ ಗಿರಿಯಪ್ಪ ಅವರ ಮನೆಯ ಗೌರಮ್ಮ ಬಾವಿಯಿಂದ ಗಂಗಾ ಜಲದೊಂದಿಗೆ ನಾದಸ್ವರ ಚಂಡೆ ವಾದನಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಗಣಹೋಮದೊಂದಿಗೆ ಆರಂಭಗೊಂಡು ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು. ದಿನದ ವಿಶೇಷ ಪೂಜಾ ಕೈಂಕರ್ಯಗಳನ್ನು ಕೆದಕಲ್ ಈಶ್ವರ ಮಹದೇವ ದೇವಾಲಯದ ಹಿರಿಯ ಅರ್ಚಕರಾದ ಲೋಕೇಶ್ ಆರಾಧ್ಯ ಹಾಗೂ ಅವಿನಾಸ್ ಆರಾಧ್ಯ ನೆರವೇರಿಸಿದರು. ಮಹಾಮಂಗಳಾರತಿಯೊಂದಿಗೆ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಸಲಾಯಿತು. ಅಧ್ಯಕ್ಷ ಎಂ.ಜೆ.ಆಕಾಶ್, ಕಿರಣ್, ಕಾರ್ತಿಕ್ಸುಧಿ, ಮೋಹನ್, ಬಿ.ಕೆ.ರಾಜೇಶ್, ಬಿ.ಡಿ.ರಾಜುರೈ, ಶರತ್, ವಿವೇಕ್ರೈ, ಕುಶಾಲಪ್ಪ ಪಿ.ಆರ್.ಸುನಿಲ್ಕುಮಾರ್ ಮತ್ತಿತರರು ಇದ್ದರು.
ಸುಂಟಿಕೊಪ್ಪ ಆ.29 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ 61ನೇ ಸ್ವರ್ಣ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಿವಿಧ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯಗಳೊಂದಿಗೆ ಶ್ರೀ ರಾಮ ಮಂದಿರದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಯಿತು. ದಿನದ ವಿಶೇಷ ಪೂಜಾ ಕೈಂಕರ್ಯಗಳನ್ನು ಹಿರಿಯ ಹಾ.ಮ.ಗಣೇಶ್ ಶರ್ಮಾ, ಮಂಜುನಾಥ್ ಶರ್ಮಾ ನೆರವೇರಿಸಿದರು. ಮದ್ಯಾಹ್ನ ಮಹಾಪೂಜೆ, ಮಂಗಳಾರತಿ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಶ್ರೀರಾಮ ಸೇವಾ ಸಮಿತಿ ಟ್ರಸ್ಟಿ ಕಾರ್ಯದರ್ಶಿ ಅಶೋಕ್ ಶೇಟ್, ಟ್ರಸ್ಟಿ ಎ.ಲೋಕೇಶ್ಕುಮಾರ್, ಶಾಂತರಾಂ ಕಾಮತ್, ಬಿ.ಎಂ.ಸುರೇಶ್, ಧನು ಕಾವೇರಪ್ಪ, ಎಂ.ಎಸ್.ಸುನಿಲ್, ಪಟ್ಟೆಮನೆ ಉದಯಕುಮಾರ್, ಪಟ್ಟೆಮನೆ ಸದಾಶಿವ, ಪಟ್ಟೆಮನೆ ಅನಿಲ್ಕುಮಾರ್, ಬಿ.ಕೆ.ಮೋಹನ್, ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ವಿಘ್ನೇಶ್,ಉಪಾಧ್ಯಕ್ಷರುಗಳಾದ ಬಿ.ಕೆ.ಪ್ರಶಾಂತ್, ಸಿ.ಸಿ.ಸುನಿಲ್ಕುಮಾರ್, ಎಂ.ಗಣೇಶ್, ಪ್ರಧಾನ ಕಾರ್ಯದರ್ಶಿ ಹೆಚ್.ಎಂ.ನಿಖಿಲ್, ಖಜಾಂಚಿ ಪದ್ಮನಾಭ, ಪದಾಧಿಕಾರಿ ಎಂ.ಪಾಂಡ್ಯನ್, ಹೆಚ್.ನವೀನ್, ಜಿ.ಹೃತಿಕ್, ಆರ್.ಮಣಿ, ಕೆ.ಎಂ.ಅಜಿತ್, ಆರ್.ಪ್ರಶಾಂತ್, ಎಸ್.ರಾಜೇಶ್, ಬಿ.ಡಿ.ಅಶ್ವಥ್,…
ಮಡಿಕೇರಿ ಆ.29 NEWS DESK : ಕೊಡಗು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಯುವ ಸಮೂಹವನ್ನು ನಿರುದ್ಯೋಗ ಸಮಸ್ಯೆಯಿಂದ ಮುಕ್ತಿ ಕಾಣಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತಾತ್ಮಕ ಯುವ ಫೆಡರೇಷನ್ ನ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಸದಸ್ಯರು ಉದ್ಯೋಗ ಬೇಕೆಂದು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಆರ್.ರಾಚಪ್ಪಾಜಿ ಮಾತನಾಡಿ, ಸುಮಾರು ಆರೂವರೆ ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಕೊಡಗು ಜಿಲ್ಲೆಯ ಕಾರ್ಮಿಕ ವರ್ಗ, ಸಣ್ಣ ರೈತರು, ಮಧ್ಯಮ ವರ್ಗದ ಜನತೆ ಹಾಗೂ ವಿದ್ಯಾರ್ಥಿಗಳು ತಮ್ಮ ಕೆಲಸ ಕಾರ್ಯಗಳಿಗಾಗಿ ನಿತ್ಯ ಸರಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಆದರೆ ಸಿಬ್ಬಂದಿಗಳ ಕೊರತೆಯಿಂದಾಗಿ ಅರ್ಜಿಗಳು ವಿಲೇವಾರಿಯಾಗದೆ ಮತ್ತು ಅಗತ್ಯ ಕೆಲಸಗಳನ್ನು ಮಾಡಿಸಿಕೊಳ್ಳಲಾಗದೆ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಿಕ್ಷಣ ಮುಗಿಸಿರುವ ಯುವ ಸಮೂಹ ಉದ್ಯೋಗಕ್ಕಾಗಿ…
ನಾಪೋಕ್ಲು ಆ.29 NEWS DESK : ಹಳೆ ತಾಲೂಕು ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ಭತ್ತದ ನಾಟಿ (ನೇಡುವ) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂಕುರ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ ಚರ್ಮಣ ಅವರ ಗದ್ದೆಯಲ್ಲಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಇಳಿದು ನಾಟಿ ನೇಡುವುದರ ಮೂಲಕ ಭತ್ತದ ಬೇಸಾಯದ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ತಮ್ಮ ಹೊಸ ಅನುಭವವನ್ನು ಹಂಚಿಕೊಂಡರು ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ರತ್ನಾ ಚರ್ಮಣ ಮಕ್ಕಳ ಜೊತೆಗೆ ಪಾಲ್ಗೊಂಡು ಹೇಗೆ ಭತ್ತದ ಸಸಿ (ಅಗೆ) ತೆಗೆಯುವುದು ನಾಟಿ ಮಾಡುವುದು, ಕಳೆ ಕೀಳುವುದು, ಭತ್ತ ಬೆಳೆಯುವುದು ಎಂಬುದರ ಬಗ್ಗೆ ಗದ್ದೆಯಲ್ಲಿ ಪ್ರಾತ್ಯಕ್ಷತೆಯನ್ನು ಮಾಡಿ ವಿದ್ಯಾರ್ಥಿಗಳಲ್ಲಿ ಭತ್ತದ ಬೇಸಾಯದ ಬಗ್ಗೆ ಆಸಕ್ತಿ ಮೂಡಿಸಿದರು. ಭೂಮಿಯನ್ನು ಬೇಸಾಯ ಮಾಡದೆ ಬಂಜರು ಬಿಡಬಾರದು ಎಂದು ಮನಮುಟ್ಟುವಂತೆ ಸಮಗ್ರ ಮಾಹಿತಿಯನ್ನು ನೀಡಿದರು. ಶಿಕ್ಷಕಿಯರಾದ ಶೈಲಾ ನರೇಶ್ ಮತ್ತು ಶೃತಿ ಭತ್ತದ ನಾಟಿಯ ಬಗ್ಗೆ ಮಾರ್ಗದರ್ಶನ…
ಸಿದ್ದಾಪುರ ಆ.29 NEWS DESK : ಸಿದ್ದಾಪುರದ ಶ್ರೀ ರಾಮ ಮಂದಿರದಲ್ಲಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪನೆ ಮಾಡಲಾಯಿತು. ಕಳೆದ 86 ವರ್ಷಗಳಿಂದ ದಿ.ಶಿವನಂಜಪ್ಪ ಅವರ ಕುಟುಂಬಸ್ಥರು ಗೌರಿ ಗಣೇಶ ಉತ್ಸವವನ್ನ ಎಲ್ಲಾ ಬಾಂಧವರನ್ನ ಒಗ್ಗೂಡಿಸಿ ಸೌಹಾರ್ದತವಾಗಿ ಆಚರಿಸಿಕೊಂಡು ಬರುತ್ತಿರುವುದು ಇಲ್ಲಿನ ವಿಶೇಷ. ವಿಶೇಷ ಪೂಜಾ ಕಾರ್ಯಗಳೊಂದಿಗೆ ಅಲಂಕೃತ ಬೆಳ್ಳಿರಥದ ಮಂಟಪದಲ್ಲಿ ಮೂರ್ತಿಗಳನ್ನು ಕುಳ್ಳಿರಿಸಿ ಮೈಸೂರಿನ ಪ್ರಖ್ಯಾತ ಬ್ಯಾಂಡ್ ಸೆಟ್ ವಾದ್ಯಗೋಷ್ಠಿಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಮೆರವಣಿಗೆಯ ಉದ್ದಕ್ಕೂ ಭಕ್ತರು ಕುಣಿದು ಕುಪ್ಪಳಿಸಿ ಸಂಭ್ರಮಿಸಿ ಗೌರಿ ಗಣೇಶ ಉತ್ಸವಕ್ಕೆ ಜೈಕಾರ ಕೂಗಿದರು. ಈ ಸಂದರ್ಭ ಶ್ರೀರಾಮ ಮಂದಿರ ಸಮಿತಿಯ ಪ್ರಮುಖರು, ಸ್ಥಳೀಯರು, ಕಾರ್ಯಕರ್ತರು, ಭಕ್ತಾದಿಗಳು ಹಾಜರಿದ್ದರು.
ಕುಶಾಲನಗರ ಆ.29 NEWS DESK : ವಿದ್ಯುತ್ ಅವಘಡದಿಂದ ಹಸುವೊಂದು ಸಾವನ್ನಪ್ಪಿದ ಘಟನೆ ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದ ವೃಂದಾ ಬಡಾವಣೆಯಲ್ಲಿ ನಡೆದಿದೆ. ವೃಂದಾ ಬಡಾವಣೆಯ ನಿವಾಸಿಗಳಾದ ಸುಮಿತ್ರಾ ಸುದಿಕುಮಾರ್ ಅವರ ಹಸು ಸಾವನ್ನಪ್ಪಿದೆ. ವೃಂದಾ ಬಡಾವಣೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಟಿ.ಸಿಯಿಂದ ವಿದ್ಯುತ್ ಪ್ರವಹಿಸಿ ಹಸು ಸಾವಿಗೀಡಾಗಿದೆ. ಸ್ಥಳಕ್ಕೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಿಸಿದ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ಟಿ.ಸಿ ಶಿಥಿಲಾವಸ್ಥೆಯಲ್ಲಿದೆ. ವಿದ್ಯುತ್ ತಂತಿಗಳ ಮೇಲ್ಪದರ ಸುಟ್ಟು ತಂತಿಗಳು ಕಾಣುತ್ತಿದೆ. ಈ ಬಗ್ಗೆ ಚೆಸ್ಕಾಂ ಗೆ ದೂರು ನೀಡಲಾಗಿತ್ತು. ಚೆಸ್ಕಾಂ ನ ನಿರ್ಲಕ್ಷ್ಯದಿಂದ ಮೂಖಪ್ರಾಣಿ ಸಾವನ್ನಪ್ಪಿದೆ. ಪಕ್ಕದಲ್ಲಿಯೇ ಗಣೇಶನ ಪೂಜೆ ನಡೆಯುತ್ತಿದೆ. ನೂರಾರು ಜನ ಆಗಮಿಸುತ್ತಿರುತ್ತಾರೆ. ಸಾರ್ವಜನಿಕರಿಗೆ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು, ಕೂಡಲೇ ಚೆಸ್ಕಾಂ ನವರು ಟಿ.ಸಿ ದುರಸ್ತಿಗೊಳಿಸಬೇಕು. ಟಿ.ಸಿ ಬಳಿ ಸಾರ್ವಜನಿಕರು ನುಸುಳದಂತೆ ಬೇಲಿ ಅಳವಡಿಸಬೇಕು. ಹಾಗೆಯೇ 4 ತಿಂಗಳ…
ಮಡಿಕೇರಿ ಆ.29 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್.ಶಿವಪ್ರಸಾದ್ ಮತ್ತು ಚಂಪಕ ದಂಪತಿಯು ತಮ್ಮ ಮಕ್ಕಳಾದ ಕೃತಿಕಾ ಮತ್ತು ಭರತೇಶ್ ಜತೆಗೂಡಿ ತಮ್ಮ ಮನೆಯಲ್ಲಿ ಜೇಡಿಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ಗ್ರಾಮಸ್ಥರ ಗಮನ ಸೆಳೆದಿದ್ದಾರೆ. ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಪರಿಸರ ಸ್ನೇಹಿ ಗಣೇಶೋತ್ಸವದ ಆಂದೋಲನಕ್ಕೆ ಕೈಜೋಡಿಸಿರುವ ರೈತರಾದ ಎಸ್.ಆರ್.ಶಿವಪ್ರಸಾದ್ ಮತ್ತು ಚಂಪಕ ದಂಪತಿಯು ತಮ್ಮ ಮಕ್ಕಳಾದ ಕೃತಿಕಾ ಮತ್ತು ಭರತೇಶ್ ಅವರಿಗೆ ಜೇಡಿಮಣ್ಣಿನಿಂದ ಹೇಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಬೇಕು ಎಂಬ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ. ತಮ್ಮ ಪೋಷಕರ ಮಾರ್ಗದರ್ಶನ ಹಾಗೂ ಸಹಕಾರದಿಂದ ಇಬ್ಬರು ಮಕ್ಕಳು ಮನೆಯಲ್ಲಿ ಜೇಡಿಮಣ್ಣಿನಿಂದ ತಯಾರಿಸಿರುವ ಪರಿಸರ ಸ್ನೇಹಿ ಗಣೇಶ ಮೂರ್ತಿಯು ನೆರೆಹೊರೆಯವರನ್ನು ಮತ್ತು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ. ನಾವು ಪರಿಸರಕ್ಕೆ ಹಾನಿಕಾರಕವಾದ ಪಿಓಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಯನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು. ಆದ್ದರಿಂದ ಪ್ರತಿವರ್ಷ…






