ಮಡಿಕೇರಿ ಜು.29 NEWS DESK : ಕೊಡಗು ಜಿಲ್ಲೆಯ ರಸಗೊಬ್ಬರ ದಾಸ್ತಾನು ಕೇಂದ್ರಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ ಅವರು ಭೇಟಿ ನೀಡಿ ಪರಿಶೀಲಿಸಿದರು.
ಲೇಖಕ: admin
ಮಡಿಕೇರಿ ಜು.29 NEWS DESK : ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿದ್ಧವಾಗಿರುವ ಕೊಡಗಿನ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ ‘ಎಲ್ಟು ಮುತ್ತಾ’ ಕನ್ನಡ ಚಲನಚಿತ್ರ ಇದೇ ಆ.1ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರ ನಿರ್ಮಾಪಕ ಸತ್ಯ ಶ್ರೀನಿವಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಚಲನಚಿತ್ರದ ‘ಟೀಸರ್’ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೊಡಗಿನ ನೆಲಜಿ ಗ್ರಾಮದ ಬಾಳಿಯಡ ಮಣಿ ಅಯ್ಯಪ್ಪ ಅವರ ಪುತ್ರ ರಾ.ಸೂರ್ಯ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸುಮಾರು 75 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಚಲನಚಿತ್ರ ಬಿಡುಗಡೆಯಾಗಲಿದೆ. ಕೊಡಗಿನ ಸಿದ್ದಾಪುರ, ಶನಿವಾರಸಂತೆ, ಸುಂಟಿಕೊಪ್ಪ ಚಿತ್ರಮಂದಿರಗಳಲ್ಲು ಚಿತ್ರ ಪ್ರದರ್ಶನ ಅದೇ ದಿನ ನಡೆಯಲಿದೆ ಎಂದರು. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಚಲನಚಿತ್ರದ ಆಡಿಯೋ ಲಾಂಚ್ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ. ಚಲನಚಿತ್ರದಲ್ಲಿ 5 ಹಾಡುಗಳು ಮತ್ತು 2 ಫೈಟ್ ಗಳಿದ್ದು, ಜನರ ಮನರಂಜನೆಗೆ ಪೂರಕವಾದ ಎಲ್ಲಾ ಅಂಶಗಳು ಇರುವುದಾಗಿ ತಿಳಿಸಿದರು. ಚಲನಚಿತ್ರದ ಪ್ರಮುಖ ಪಾತ್ರಗಳಲ್ಲಿ ಶೌರ್ಯ ಪ್ರತಾಪ್, ಪ್ರಿಯಾಂಕ ಮಳಲಿ ಅವರು ನಟಿಸಿದ್ದಾರೆ.…
ಮಡಿಕೇರಿ ಜು.29 NEWS DESK : ಅಸ್ಸಾಂ ರಾಜ್ಯಕ್ಕೆ ಸೇರಿದವರು ಎಂದು ಹೇಳಿಕೊಂಡು ನಕಲಿ ದಾಖಲೆಗಳ ಮೂಲಕ ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಬಾಂಗ್ಲಾ ದೇಶಿಗರನ್ನು ತಕ್ಷಣ ಗಡಿಪಾರು ಮಾಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕಾರ್ಮಿಕರ ಸೋಗಿನಲ್ಲಿ ಅಸ್ಸಾಂ ಮೂಲದವರೆಂದು ಹೇಳಿಕೊಂಡು ಕೊಡಗು ಜಿಲ್ಲೆಯಲ್ಲಿ ಅನೇಕರು ನೆಲೆಸಿದ್ದಾರೆ. ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾಡಳಿತ ಕಾರ್ಮಿಕರ ದಾಖಲೆ ಪತ್ರಗಳನ್ನು ಪರಿಶೀಲಿಸಿ, ಅವುಗಳು ನಕಲಿಯಾಗಿದ್ದರೆ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನುಸುಳುಕೋರರಿಂದ ಗೋ ಸಾಗಾಟ, ಕಳ್ಳತನ, ಹಲ್ಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಮತ್ತು ಆಯಾ ಗ್ರಾಮ ಪಂಚಾಯ್ತಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿರುವ ಹೊರ ರಾಜ್ಯದ ಕಾರ್ಮಿಕರ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಬೇಕು. ಅಕ್ರಮವಾಗಿ ಜಿಲ್ಲೆಯಲ್ಲಿ ನೆಲೆಸಿರುವವರನ್ನು ಗಡಿಪಾರು ಮಾಡಬೇಕು, ನಿರ್ಲಕ್ಷ್ಯ ವಹಿಸಿದರೆ ಮುಂದೊಂದು ದಿನ ಅನಾಹುತ ಸಂಭವಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು. *ಮೂಡ ಮಾಹಿತಿ ನೀಡಲಿ* ಮಡಿಕೇರಿ…
ಬೆಂಗಳೂರು ಜು.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ತಿಳಿಸಿದರು.
ಮಡಿಕೇರಿ ಜು.29 NEWS DESK : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಹೈಪಟೈಟಿಸ್ ದಿನಾಚರಣೆಯನ್ನು ಆಚರಿಲಾಯಿತು. ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವೈರಲ್ ಹೈಪಟೈಟಿಸ್ ನೋಡಲ್ ಅಧಿಕಾರಿ ಡಾ. ಜಿ.ಕೆ.ಸನತ್ ಕುಮಾರ್ ಮಾತನಾಡಿ, ವೈರಲ್ ಹೈಪಟೈಟಿಸ್ ರೋಗದ ಲಕ್ಷಣ, ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ಫಿಜಿಷಿಯನ್ ಡಾ.ರಾಜೇಶ್ ಮಾತನಾಡಿ, ವೈರಲ್ ಹೈಪಟೈಟಿಸ್ ಕಾಯಿಲೆ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವಿಶ್ವನಾಥ್ ಸಿಂಪಿ ಅವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವೈರಲ್ ಹೈಪಟೈಟಿಸ್ ಕಾಯಿಲೆಯ ಅರಿವು ಮೂಡಿಸುವ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ನಂತರ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೆ ಹೈಪಟೈಟಿಸ್ ಲಸಿಕೆಯನ್ನು ನೀಡಲಾಯಿತು. ಶಿಬಿರದಲ್ಲಿ ಒಟ್ಟು 51 ಮಂದಿ ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಪ್ರಜ್ಷಲ್, ಶ್ರೂಶ್ರೂ಼ಷಣಾಧಿಕಾರಿ ಹಂಸ ಮತ್ತು ಕಾವೇರಿ, ಸಮಾರಂಭದಲ್ಲಿ ಜಿಲ್ಲಾ ಕ್ಷಯರೋಗ…
ಸೋಮವಾರಪೇಟೆ ಜು.29 NEWS DESK : ಇಂದು ನಡೆದ ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಕಡತ ನಾಪತ್ತೆ ಪ್ರಕರಣ ಸದ್ದು ಮಾಡಿತು. ಪ.ಪಂ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಡತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸದಸ್ಯರು ಒತ್ತಾಯಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ತಪ್ಪಿತಸ್ಥರನ್ನು ವಜಾಗೊಳಿಸಿ ಹೊಸ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಗುತ್ತಿಗೆ ಆಧಾರದ ಸಿಬ್ಬಂದಿಗಳನ್ನು 3 ವರ್ಷಕ್ಕೊಮ್ಮೆ ಬದಲಾಯಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯ ಅಧಿಕಾರಿಗಳು ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಮಡಿಕೇರಿ ಜು.29 NEWS DESK : ದೇಶ ರಕ್ಷಣೆಗಾಗಿ ತ್ಯಾಗ ಮಾಡಿದ ಯೋಧರನ್ನು ದಿನನಿತ್ಯ ಸ್ಮರಿಸುವ ಮೂಲಕ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯೋಧರಿಗಾಗಿ ಪ್ರಾರ್ಥಿಸಬೇಕು ಮತ್ತು ಪ್ರತಿಯೊಬ್ಬರು ಗೌರವಿಸುವಂತಾಗಬೇಕೆಂದು ಗಣ್ಯರು ಕರೆ ನೀಡಿದರು. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಚನ್ನಯ್ಯನಕೋಟೆ ಬಸ್ ನಿಲ್ದಾಣದ ಬಳಿ ನಿರ್ಮಿಸಲಾದ ಬೃಹತ್ ಕಾರ್ಗಿಲ್ ವಿಜಯೋತ್ಸವ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ಪುಣ್ಯ ಸ್ಮರಣೆ ಫ್ಲಕ್ಸ್ ಗೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಗ್ರಾಮದಲ್ಲಿರುವ ಸರ್ವಸಹಾಯಿ ಮಿತ್ರ ಮಂಡಳಿ ಹಲವು ವರ್ಷಗಳಿಂದ ದೇಶ ಅಭಿಮಾನದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ದೇಶ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದರೊಂದಿಗೆ ಅವರ ಕುಟುಂಬವನ್ನು ಗೌರವಿಸುವ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಶ ಸೇವೆಯಲ್ಲಿರುವ ಯೋಧರಿಗೆ ಸ್ಪೂರ್ತಿ ತುಂಬಬೇಕೆಂದರು. ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ…
ಮಡಿಕೇರಿ ಜು.29 NEWS DESK : ಕರಿಕೆ ಗ್ರಾಮದ ವನಶಾಸ್ತವ್ ನಾಗ ಬನದಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅರ್ಚಕರು ಶ್ರೀ ನಾಗ ಮೂರ್ತಿಗೆ ವಿಶೇಷ ಅಲಂಕಾರ ಸೇವೆಯನ್ನು ಸಲ್ಲಿಸಿ, ಶಾಸ್ತಪೂಜೆ ಮತ್ತು ಸಂಕಲ್ಪ, ಹಾಲಿನ ಅಭಿಷೇಕ, ಕುಂಕುಮಾರ್ಚನೆ ಸೇವೆಯನ್ನು ಸಲ್ಲಿಸಿದರು. ನಂತರ ಮಹಾಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.
ಮಡಿಕೇರಿ ಜು.29 NEWS DESK : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 46.68 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2099.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1996.15 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.18 ಮಿ.ಮೀ. ಕಳೆದ ವರ್ಷ ಇದೇ ದಿನ 61.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3144.82 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2697.24 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 43.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1917.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1819.35 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ…
ಮಡಿಕೇರಿ ಜು.29 NEWS DESK : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮ ಪಂಚಾಯಿತಿಯ ಅಲೆಕಟ್ಟೆ ನಿವಾಸಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಅವರ ತಂದೆ ನಿಧನರಾಗಿದ್ದಾರೆ. ಮಾಹಿತಿ ತಿಳಿದು ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ, ಕುಟುಂಬಕ್ಕೆ ಸಾಂತ್ವನ ಹೇಳಿ, ದೈರ್ಯ ತುಂಬಿದರು.






