ಲೇಖಕ: admin

ಮಡಿಕೇರಿ ಜು.29 NEWS DESK : ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಕೊಡಗಿನ ವಿವಿಧೆಡೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯ, ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆ, ಶ್ರೀ ಮುತ್ತಪ್ಪ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಎಳನೀರಭಿಷೇಕ, ಕ್ಷೀರಾಭಿಷೇಕ, ಅಲಂಕಾರ ಪೂಜೆ, ಸಂಕಲ್ಪ ಪೂಜೆ, ಮಹಾಪೂಜೆ, ವಿಶೇಷ ಧಾರ್ಮಿಕ ವಿಧಿ ವಿಧಾನಗಳು, ಮಹಾ ಮಂಗಳಾರತಿ, ಮತ್ತು ಪ್ರಸಾದ ವಿತರಣೆ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ನಾಗನ ಕಲ್ಲಿಗೆ ಪುಷ್ಪಾರ್ಚನೆ ಹಾಗೂ ಹಾಲಿನ ಅಭಿಷೇಕ ಮಾಡಿದರು.

Read More

ಮಡಿಕೇರಿ ಜು.29 NEWS DESK  : ತೋಳೂರು ಶೆಟ್ಟಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಎಎಎಮ್ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮತ್ತು ತಂಡದವರು ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸಿದರು. ಎಂಎಫ್ ಆರ್ ಮತ್ತು ಸಿಪಿಆರ್, ಡೆಂಗಿ ಮುಕ್ತ ಶಾಲಾ ಆವರಣ,  ಒತ್ತಡ ನಿರ್ವಹಣೆ, ಜಂಕ್ ಫುಡ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು. CHOs ನವೀನ್ ಮತ್ತು ಪ್ರಕಾಶ್ ಸಿಪಿಆರ್ ಕುರಿತು ಪ್ರಾತ್ಯಕ್ಷತೆಯನ್ನು ತೋರಿಸಿದರು. ತಂಡದಲ್ಲಿ ಆಶಾ ಕಾರ್ಯಕರ್ತರು ಮತ್ತು 245 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.

Read More

ಮೈಸೂರು, ಜು.29 NEWS DESK : ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವುದಕ್ಕಾಗಿ ಕೇಂದ್ರ ಸರ್ಕಾರ ಈ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಏಕತಾ ಮಾಲ್‌ ವೈವಿಧ್ಯಮಯ ತಾಣವಾಗಿ ಹೊರಹೊಮ್ಮಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಮೈಸೂರು ವಸ್ತುಪ್ರದರ್ಶನದ ಮೈದಾನದಲ್ಲಿ ತಲೆ ಎತ್ತಲಿರುವ ಈ ಏಕತಾ ಮಾಲ್‌ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಂಸದರು ಮಾತನಾಡಿದರು. ಇದು ಕೇಂದ್ರದ ಮಹತ್ವದ ಯೋಜನೆಯಾಗಿದೆ. ಜಿಲ್ಲೆಗಳ ವೈವಿಧ್ಯಮಯ ಮತ್ತು ವಿಶಿಷ್ಠವಾದ ಉತ್ಪನ್ನಗಳು ಒಂದೇ ಸೂರಿನಲ್ಲಿ ಸಿಗಬೇಕು ಎಂಬ ದೃಷ್ಟಿಯಿಂದ ಇದು ನಿರ್ಮಾಣವಾಗಲಿದೆ ಎಂದು ತಿಳಿಸಿದರು. ಭಾರತೀಯ ಉತ್ಪನ್ನಗಳು, ಮೇಕ್‌ ಇನ್‌ ಇಂಡಿಯಾ ಉತ್ಪನ್ನಗಳು, ಸ್ಥಳೀಯ ಪ್ರತಿಭೆಗಳು ತಮ್ಮ ವಸ್ತುಗಳನ್ನು ಪ್ರದರ್ಶಿಸಲು ಇಲ್ಲಿ ಅವಕಾಶ ನೀಡಲಾಗಿದೆ. ವೈವಿಧ್ಯತೆಯನ್ನು ಜಗದಗಲ ಪಸರಿಸಲು ಈ ಏಕತಾ ಮಾಲ್‌ ನೆರವಾಗಲಿದೆ ಎಂದು ಸಂಸದರು ತಿಳಿಸಿದರು. ಒಂದು ಜಿಲ್ಲೆ, ಒಂದು ಉತ್ಪನ್ನ ಎಂಬ ವಿಶೇಷ ಪ್ರೋತ್ಸಾಹ ದೊರೆಯಲಿದೆ. ಗ್ರಾಮೀಣ ಕಲಾವಿದರಿಗೆ, ವಿವಿಧ…

Read More

ಕಾರ್ಕಳ ಜು.29 NEWS DESK : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆದ ಕಾರ್ಯಾಗಾರವನ್ನು ಉದ್ಯಮಿ ಸೂರಜ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ “ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆಯ ಉಪನಿರ್ದೇಶಕ ಮಾರುತಿ ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ…

Read More

ಮಡಿಕೇರಿ ಜು.29 NEWS DESK : ಕಳೆದ ಒಂದು ವಾರದಿಂದ ಕೊಡಗಿನ ಜನರನ್ನು ಕಾಡಿದ ಮಹಾಮಳೆ ಇಂದು ಕೊಂಚ ಇಳಿಮುಖಗೊಂಡಿತು. ಆದರೆ ಗಾಳಿಯ ತೀವ್ರತೆ ಹಾಗೇ ಇದ್ದು, ಕೆಲವು ಭಾಗಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಶೀತ ಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ. ಸೋಮವಾರಪೇಟೆ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮಳೆ ಕಡಿಮೆಯಾಗಿದೆ. ನಿರಂತರ ಮಳೆಯ ಕಾರಣ ನದಿಗಳು ತುಂಬಿ ಹರಿಯುತ್ತಿದ್ದು, ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೂಡಿಗೆ ಸೇತುವೆಯಲ್ಲಿ ಸಂಚಾರವನ್ನು ನಿಷೇಧಿಸಿ ಬಂದ್ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಗಾಳಿಯಿಂದ ಮರ ಮತ್ತು ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ಮನೆಗಳಿಗೆ ಹಾನಿಯಾಗಿದೆ. ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ವಾಸವಿರುವ ಕುಟುಂಬಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಮಾರ್ಗಗಳ ದುರಸ್ತಿಯಲ್ಲಿ ಚೆಸ್ಕಾಂ ಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲೆ ಬೆಟ್ಟಗುಡ್ಡಗಳ ಪ್ರದೇಶವಾಗಿರುವುದರಿಂದ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ…

Read More

ಮಡಿಕೇರಿ ಜು.28 NEWS DESK : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.  ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು.  ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಲ್ಲಿ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಯಾರಿಗೂ ಸಹ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.  ಸರ್ಕಾರ ಶಕ್ತಿ, ಗೃಹಜ್ಯೋತಿ, ಗೃಹಭಾಗ್ಯ, ಯುವನಿಧಿ, ಅನ್ನಭಾಗ್ಯ ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರು ಸಹ ಉತ್ತಮ ಬದುಕು ನಡೆಸುವಂತಾಗಲು ಹಲವು ಸಮಾಜಪರ ಕಾರ್ಯಕ್ರಮಗಳನ್ನು ನೀಡಿದೆ. ಅವುಗಳನ್ನು ಸ್ಮರಿಸುವಂತಾಗಬೇಕು ಎಂದರು.  ಕಾಡಾನೆ ಮತ್ತು…

Read More

ಮಡಿಕೇರಿ ಜು.28 NEWS DESK : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ಜೊತೆಗೆ ರಸ್ತೆ ತಿರುವು, ಉಬ್ಬು ರಸ್ತೆ ಮತ್ತಿತರ ಬಗ್ಗೆ ಸೂಚನಾ ಫಲಕ ಅಳವಡಿಸಿ, ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಎಂಜಿನಿಯರ್‍ಗಳಿಗೆ ತಾಕೀತು ಮಾಡಿದರು. ಚಾಲಕರಿಗೆ ರಸ್ತೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಬೇಕು. ಇದರಿಂದ ವೇಗ ನಿಯಂತ್ರಣಕ್ಕೆ ಸಹಕಾರಿಯಾಗಿ ಅಪಘಾತ ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಕುಶಾಲನಗರದಿಂದ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವು…

Read More

ಮಡಿಕೇರಿ ಜು.28 NEWS DESK : ಗ್ರಾಮ ಪಂಚಾಯ್ತಿಗಳ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿತು. ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ನೌಕರರು ಇಂದು ಬೆಳಗ್ಗೆ ಜಿಲ್ಲಾಡಳಿತದ ಭವನದ ಎದುರು ಸೇರಿ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪಿ.ಆರ್.ಭರತ್ ಮಾತನಾಡಿ, ಗ್ರಾಮ ಪಂಚಾಯ್ತಿಯ ಕರವಸೂಲಿಗಾರ, ಗುಮಾಸ್ತ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಮೂಲ ವೇತನವನ್ನು 38,021-86 ಎಂದು ನಿಗದಿ ಪಡಿಸಬೇಕು, ವಾಟರ್‍ಮೆನ್, ಪಂಪ್ ಆಪರೇಟರ್ ಕಂ ಮೆಕ್ಯಾನಿಕ್ ಹುದ್ದೆಗಳಿಗೆ ಮೂಲ ವೇತನವನ್ನು 33,062-50 ಎಂದು ಹಾಗೂ ಅಟೆಂಡರ್, ಜವಾನರುಗಳ ಮೂಲ ವೇತನವನ್ನು 28,750 ಎಂದು ನಿಗದಿ ಪಡಿಸಿ ಪ್ರಸಕ್ತ ಸಾಲಿನ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಜಾರಿ…

Read More

ಮಡಿಕೇರಿ ಜು.28 NEWS DESK : 17ನೇ ಶತಮಾನದ ಉತ್ತರಾರ್ಧದಲ್ಲಿ ಅರಸ ಮುದ್ದುರಾಜರು ನಿರ್ಮಿಸಿದ ಐತಿಹಾಸಿಕ ಮಡಿಕೇರಿ ಕೋಟೆಯ ಹೆಬ್ಬಾಗಿಲು ಕಳೆದ ಎರಡು ದಿನಗಳು ಬೀಸಿದ ಬಿರುಗಾಳಿಗೆ ಮುಚ್ಚಿಕೊಂಡವು. ಸುಮಾರು 50 ಅಡಿ ಎತ್ತರದ ಶಿಥಿಲಾವಸ್ಥೆಯಲ್ಲಿರುವ ಎರಡು ಬಾಗಿಲು ಗಾಳಿಯ ರಭಸಕ್ಕೆ ಮುಚ್ಚಿಕೊಂಡವು. ಆದರೆ ಮತ್ತೆ ಬಾಗಿಲನ್ನು ತೆರೆಯಲು ಸಾಧ್ಯವಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ನಂತರ ಅಧಿಕಾರಿಗಳು ಜೆಸಿಬಿ ಯಂತ್ರದ ಸಹಾಯದಿಂದ ಬಾಗಿಲನ್ನು ತೆರೆಯುವಲ್ಲಿ ಯಶಸ್ವಿಯಾದರು. ಈ ಐತಿಹಾಸಿಕ ಆಕರ್ಷಕ ಮಡಿಕೇರಿ ಕೋಟೆಗೆ ಪ್ರತಿದಿನ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಭಾರತೀಯ ಪುರಾತತ್ವ ಇಲಾಖೆಯ ಅಧೀನದ ಕೋಟೆಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕೋಟೆ ಮತ್ತಷ್ಟು ಆಕರ್ಷಣೆಯನ್ನು ಪಡೆದುಕೊಳ್ಳಲಿದೆ ಮತ್ತು ಹೆಬ್ಬಾಗಿಲು ಕೂಡ ದುರಸ್ತಿ ಕಾಣಲಿದೆ.

Read More

ಚೆಯ್ಯಂಡಾಣೆ ಜು.28 NEWS DESK : ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ಶಾಲೆಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಆಂಗ್ಲ ಮಾಧ್ಯಮ ಶಾಲೆಗೆ ದಾಖಲಾತಿಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು. ಶಾಲೆಯ ಪ್ರಬಾರಿ ಮುಖ್ಯ ಶಿಕ್ಷಕಿ ರಝೀನ ಪ್ರಸ್ತಾವಿಕವಾಗಿ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಯ ಜೊತೆಯಲ್ಲಿ ಆಂಗ್ಲ ಮಾದ್ಯಮ ಪ್ರಾರಂಭಿಸಲು ಸರಕಾರದಿಂದ ಆದೇಶ ಬಂದಿದೆ. ಅದು ನಮ್ಮಗೆಲ್ಲರಿಗೂ ಸಂತೋಷದ ವಿಚಾರ ಎಂದ ಅವರು ಆಂಗ್ಲ ಮಾಧ್ಯಮ ಶಾಲೆಗೆ ಈ ವ್ಯಾಪ್ತಿಯ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಯಾಗುವಂತಾಗಲಿ ಎಂದರು. ಶಾಲಾ ಎಸ್ ಡಿಎಂಸಿ ಅಧ್ಯಕ್ಷ  ಅರುಣ್ ಕಾರ್ಯಪ್ಪ  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕುಂಜಿಲ ಕಕ್ಕಬೆ ಗ್ರಾ.ಪಂ ಸದಸ್ಯರಾದ ಇಂದಿರಾ, ಶೈಲಾ, ಅತಿಥಿ ಶಿಕ್ಷಕರಾದ ಸಾಜೀದ, ಮಮತ, ಆಶಿಕಾ, ಎಸ್ ಡಿ ಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ…

Read More