ಲೇಖಕ: admin

ನಾಪೋಕ್ಲು ಆ.29 NEWS DESK : ಚೆನ್ನೈನಲ್ಲಿ ನಡೆದ ಬ್ರೈನೋಬ್ರೈನ್  ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಡ್ಲೇರ ಲಿಖಿತ್ ಸೋಮಣ್ಣ ಚಾಂಪಿಯನ್ ಟ್ರೋಫಿ ತನ್ನದಾಗಿಸಿಕೊಂಡಿದ್ದಾನೆ.  ಬ್ರೈನೋಬ್ರೈನ್  ನಲ್ಲಿ ಒಟ್ಟು ಹತ್ತು  ಹಂತಗಳಿದ್ದು, ಎಂಟು ಹಂತಗಳಲ್ಲಿ ಭಾಗವಹಿಸಿ, ರಾಜ್ಯಮಟ್ಟದಲ್ಲಿ 3 ಬಾರಿ, ರಾಷ್ಟ್ರಮಟ್ಟದಲ್ಲಿ 2 ಬಾರಿ ಅಂತಾರಾಷ್ಟ್ರಮಟ್ಟದಲ್ಲಿ 2 ಬಾರಿ ಭಾಗವಹಿಸಿ 4 ಚಾಂಪಿಯನ್ ಟ್ರೋಫಿ, ಮೂರು ಚಿನ್ನದ ಪದಕ ಪಡೆದುಕೊಂಡಿರುವ ಲಿಖಿತ್ ಸೋಮಣ್ಣ ಬ್ರೈನೋಬ್ರೈನ್  ಸ್ಪರ್ಧೆಗಳಲ್ಲಿ ಭಾಗವಹಿಸಿ 25 ರಿಂದ 40 ಸಮಸ್ಯೆಗಳನ್ನು ಆಫ್ ಲೈನ್ ನಲ್ಲಿ ಮೂರು ನಿಮಿಷ ಹಾಗೂ ಆನ್ಲೈನ್ ನಲ್ಲಿ ನಾಲ್ಕು ನಿಮಿಷಗಳಲ್ಲಿ ಮುಗಿಸುವ ನೈಪುಣ್ಯತೆ ಹೊಂದಿದ್ದಾನೆ.  ಲಿಖಿತ್ ಸೋಮಣ್ಣ ಬೆಟ್ಟಗೇರಿ ಗ್ರಾಮದ ಕಡ್ಲೇರ ಲೋಕೇಶ್ ಕುಮಾರ್ ಮತ್ತು ವೃಂದಾ ದಂಪತಿಯ ಪುತ್ರ. ಕೊಟ್ಟೂರು ಚೇರಂಬಾಣಿ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ.  ಇವನು ಮಡಿಕೇರಿಯ  ಮಾಪಂಗಡ ಕವಿತಾ ಕರುಂಬಯ್ಯ ಅವರ  ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ಬೆಂಗಳೂರು ಆ.29 NEWS DESK : ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದ ಕ್ರೀಡಾ ಪಟುಗಳಿಗೆ ನೇರ ನಗದು ಪುರಸ್ಕಾರ ನೀಡಿ, ಸನ್ಮಾನಿಸಿ ಅವರು ಮಾತನಾಡಿದರು. ಉತ್ತರಾಖಂಡದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಜ್ಯಕ್ಕೆ ಐದನೇ ಸ್ಥಾನವನ್ನು ದೊರಕಿಸಿಕೊಟ್ಟಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ದೊರಕಲೆಂದು…

Read More

ಬೆಂಗಳೂರು ಆ.29 NEWS DESK : ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಆಹ್ವಾನಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Read More

ಬೆಂಗಳೂರು ಆ.29 NEWS DESK :  ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿಂದು  ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬೋಳಂಡಂಡ ಕಾವೇರಿ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಆ.28 : ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಪೂರ್ವಭಾವಿ ತಯಾರಿಗಳನ್ನು ಮಾಡಿಕೊಳ್ಳುವ ಕುರಿತು ಚರ್ಚಿಸಲು ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಆ.29 ರಂದು ದಸರಾ ಸಭೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ದಸರಾ ಸಮಿತಿ, ದಶಮಂಟಪ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ NEWS DESK ಆ.28 : ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊಂದರಿಂದ 32 ಹೊಸ ಮೊಬೈಲ್ ಫೋನ್ ಗಳು ಮತ್ತು ರೂ.3 ಸಾವಿರ ನಗದು ಕಳ್ಳತನ ಮಾಡಿದ ಅಸ್ಸಾಂ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದ ನಿವಾಸಿ ಜೋಹುರ್ ಆಲಿ (28) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 32 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಇದೇ ಆ.24 ರಂದು ಗೋಣಿಕೊಪ್ಪ ಪಟ್ಟಣದ ಅಂಗಡಿಯೊಂದರ ರೋಲಿಂಗ್ ಶೆಟ್ರಸ್ ಮುರಿದು ವಿವಿಧ ಕಂಪನಿಯ 32 ಹೊಸ ಮೊಬೈಲ್ ಫೋನ್ ಗಳು ಮತ್ತು ರೂ.3 ಸಾವಿರ ನಗದು ಕಳ್ಳತನವಾಗಿರುವ ಕುರಿತು ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೇವಲ ಮೂರು ದಿನಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್. ಗೋಣಿಕೊಪ್ಪ ಸಿಪಿಐ ಶಿವರಾಜ ಆರ್.ಮುಧೋಳ್, ಪಿಎಸ್‌ಐ ಪ್ರದೀಪ್ ಕುಮಾರ್ ಬಿ.ಕೆ. ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ…

Read More

ಕುಶಾಲನಗರ ಆ.28 NEWS DESK :  ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಸಿ.ಕೆ.ಮಲ್ಲಪ್ಪ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಆಡಳಿತ ಮಂಡಳಿಯೊಂದಿಗೆ ಸಂವಾದ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಭೌತಿಕವಾಗಿ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಧಿಕಾರಿಗಳ ತಂಡ ವೈಯಕ್ತಿಕ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸುಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.  ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಧಿಕಾರಿಗಳಾದ ಪರಮೇಶ್ ಕುಮಾರ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾರಾಯಣ ಮೂರ್ತಿ ಅವರು ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

Read More

ವಿರಾಜಪೇಟೆ ಆ.28 NEWS DESK : ಬೆಂಗಳೂರು ಮೂಲದ ಸಿಸ್ಕೋ ಸಂಸ್ಥೆಯ 85 ಮಂದಿ ಸ್ವಯಂ ಸೇವಕರು ಜಾಗೃತಿ ಟ್ರಸ್ಟ್ ನೊಂದಿಗೆ ಕೈಜೋಡಿಸಿ, ವಿರಾಜಪೇಟೆಯ ಆಯ್ದ ಸರಕಾರಿ ಶಾಲೆಗಳ ಮಕ್ಕಳಿಗೆ ಕಲಿಕೆಯ ಅನುಭವ ನೀಡಿದರು. ಸರಕಾರಿ ಮಾದರಿ ಪ್ರಾಥಮಿಕ ಅಮ್ಮತ್ತಿ, ಹೊಸೂರು, ಸಿದ್ದಾಪುರ, ಬಿಳುಗುಂದ, ನಲ್ವತೋಕ್ಲು ಈ 5 ಸರಕಾರಿ ಶಾಲೆಗಳ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನರಂಜನೆಯ ಕ್ರೀಡೆಗಳನ್ನು ನಡೆಸಿ ಭಾಗವಹಿಸಿದ ಮತ್ತು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ಹೈಜೀನ್ ಕಿಟ್‍ಗಳ ವಿತರಣೆಯೊಂದಿಗೆ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಕಲಿಕೋಪಕರಣ ಸಾಮಾಗ್ರಿ, ಬ್ಯಾಂಡ್ ಸೆಟ್ ಕೊಡುಗೆ ನೀಡಲಾಯಿತು. ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು ಕಾಂಪೋಸ್ಟ್ ಗುಂಡಿ ನಿರ್ಮಿಸಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಾದ ಸಿದ್ದಾಪುರ, ಹೊಸೂರು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಹೆಗ್ಗಳ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿ, ವಿಜ್ಞಾನ ಕಲಿಕೋಪಕರಣ ತಯಾರಿಸಿ, ಕ್ರೀಡಾ ಉಪಕರಣ ನೀಡುವುದರ ಮೂಲಕ ಮಕ್ಕಳಲ್ಲಿ ಕ್ರೀಡಾ ಉತ್ಸಾಹ…

Read More

ಮಡಿಕೇರಿ ಆ.28 NEWS DESK : ಉಡೋತ್ ಮೊಟ್ಟೆ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಮತ್ತು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 37ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಅರ್ಚಕರಾದ  ಜಗದೀಶ್ ಅವರ ನೇತೃತ್ವದಲ್ಲಿ ಗೌರಿ ಗಣೇಶನ ಪ್ರತಿಷ್ಠಾಪನೆ ನೆರವೇರಿತು. ಬಳಿಕ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಇದೇ ಸಂದರ್ಭ ಗ್ರಾಮದ ಮಕ್ಕಳ ಸಾಂಪ್ರದಾಯಿಕ ಕುಣಿತ, ಭಜನೆ ಗಮನ ಸೆಳೆಯಿತು. ಮಧ್ಯಾಹ್ನ ಮಹಾಪೂಜೆಯನ್ನು ನೆರವೇರಿಸಿ ಉಪಸ್ಥಿತ ಎಲ್ಲರಿಗೂ ಅನ್ನ ಸಂತರ್ಪಣೆಯನ್ನು ಮಾಡಲಾಯಿತು. ಸಾಮಾಜಿಕ ಕಾರ್ಯಕರ್ತರಾದ ಚಿ.ನಾ.ಸೋಮೇಶ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ದೇವಸ್ಥಾನ, ಮಠ-ಮಂದಿರಗಳು ಹಿಂದೂ ಸಮಾಜದ ಶ್ರದ್ಧಾ ಕೇಂದ್ರಗಳಾಗಿದೆ. ನಮ್ಮ ಆಚಾರ ವಿಚಾರ ಸಂಸ್ಕೃತಿಯನ್ನು ಉಳಿಸುವಲ್ಲಿ ಧಾರ್ಮಿಕ ಆಚರಣೆಗಳು ಮಹತ್ವದ ಸ್ಥಾನವನ್ನು ಪಡೆದಿದೆ. ಇಂದು ನಮ್ಮ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪನಂಬಿಕೆಗಳನ್ನು ಹೆಚ್ಚಿಸುವಂತಹ ಷಡ್ಯಂತ್ರಗಳು ಎಲ್ಲೆಡೆ ನಡೆಯುತ್ತಿದೆ. ಇದರ ಬಗ್ಗೆ ಹಿಂದೂ ಸಮಾಜ ಜಾತಿ ಭಾಷೆ ಎಲ್ಲೆಯನ್ನು…

Read More

ಮಡಿಕೇರಿ ಆ.28 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷರಾದ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕರಾದ ವೀಣಾ ನಾಯ್ಕ್ ಅವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ  ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಮುಂದಿನ‌ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು ಬರದಂತೆ ಗಮನಹರಿಸಬೇಕು ಎಂದು ದಿನಕರ ಶೆಟ್ಟಿ ಅವರು ಸೂಚಿಸಿದರು. ವಸತಿ ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿಗಳು ಇದ್ದರು.

Read More