ಮಡಿಕೇರಿ ಆ.28 NEWS DESK : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲ, 33/11 ಕೆವಿ ಮೂರ್ನಾಡು ಹಾಗೂ 33/11ಕೆವಿ ಸಿದ್ದಾಪುರ ವಿದ್ಯುತ್ ಉಪ ಕೆಂದ್ರದಲ್ಲಿ ನಿರ್ವಾಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಆಗಸ್ಟ್, 30 ರಂದು ಬೆಳಗ್ಗೆ 09.30 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ, ಆರ್ಜಿ, ಬೇಟೋಳಿ, ಕದನೂರು, ಕಾಕೋಟುಪರಂಬು, ಕೆದಮುಳ್ಳೂರು, ಬಿಟ್ಟಂಗಾಲ, ಬಿ.ಶೆಟ್ಟಗೇರಿ, ಅಮ್ಮತ್ತಿ, ಚೆಂಬೆಬೆಳ್ಳೂರು, ಕಣ್ಣಂಗಾಲ, ಹಾಲುಗುಂದ, ಕೊಂಡಂಗೇರಿ, ಅಮ್ಮತ್ತಿ, ಬಿಳುಗುಂದ, ಮಾಲ್ದಾರೆ, ಕರಡಿಗೋಡು, ಗುಹ್ಯಾ, ಚೆನ್ನಯ್ಯನಕೋಟೆ, ಅಬ್ಬೂರು ತಾರಿಕಟ್ಟೆ, ಚೆನ್ನಂಗಿ, ಇಂಜಲಗೇರಿ, ಪುಲಿಯೇರಿ, ಮೂರ್ನಾಡು, ಪಾರಾಣೆ, ನಾಪೋಕ್ಲು, ಹೊದ್ದೂರು, ಮರಗೋಡು, ಹಾಕತ್ತೂರು, ಹೊಸ್ಕೇರಿ, ನರಿಯಂದಡ, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ…
ಲೇಖಕ: admin
ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲಾ ಸೆಷನ್ ನ್ಯಾಯಾಲಯ ಮತ್ತು ತಾಲ್ಲೂಕು ಸೆಷನ್ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಪಾರ್ಟ್ ಟೈಮ್ ಕೆಲಸಕ್ಕೆ ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಕೋರ್ಟ್, ಮಡಿಕೇರಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಮಡಿಕೇರಿ ಇಲ್ಲಿಗೆ ತಲಾ ಒಬ್ಬರು ಬೇಕಾಗಿದ್ದಾರೆ. ಹಾಗೆಯೇ ವಿರಾಜಪೇಟೆ ಮತ್ತು ಪೊನ್ನಂಪೇಟೆ ನ್ಯಾಯಾಲಯದಲ್ಲೂ ಸಹ ಮೂರು ವಿಭಾಗಕ್ಕೆ ತಲಾ ಒಬ್ಬರು, ಹಾಗೂ ಸೋಮವಾರಪೇಟೆ ಮತ್ತು ಕುಶಾಲನಗರದಲ್ಲಿ ತಲಾ ಒಬ್ಬರು ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸಲು ಬೇಕಾಗಿದ್ದಾರೆ. ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನವಾಗಿದೆ. ನಿಬಂಧನೆ ಹಾಗೂ ಷರತ್ತುಗಳಿಗೆ ಹತ್ತಿರದ ನ್ಯಾಯಾಲಯದಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಆ.28 NEWS DESK : ಕುಂಜಿಲ ಕಕ್ಕಬೆ ಗ್ರಾಮದಲ್ಲಿ ಡೆಂಗ್ಯೂ, ಇಲಿ ಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿ ಇಟ್ಟುಕೊಂಡರೆ ಡೆಂಗ್ಯೂ, ಇಲಿ ಜ್ವರ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ ಎಂದು ಜಿಲ್ಲಾ ಎಂಟಮಾಲಿಜಿಸ್ಟ್ ಮಂಜುನಾಥ್ ಅವರು ಸಾರ್ವಜನಿಕರಿಗೆ ಆರೋಗ್ಯ ಮಾಹಿತಿ ನೀಡಿದರು. ಯಾವುದೇ ಜ್ವರವಿರಲಿ ಹತ್ತಿರದ ಆಸ್ಪತ್ರೆ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮುಚ್ಚಳದಿಂದ ಮುಚ್ಚಬೇಕು. ಸೊಳ್ಳೆಗಳ ನಿಯಂತ್ರಣಕ್ಕಾಗಿ ಸೊಳ್ಳೆ ನಾಶಕ ಮತ್ತು ಸೊಳ್ಳೆ ಪರದೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜನರಿಗೆ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಡೆಂಗ್ಯೂ ಮತ್ತು ಇಲಿ ಜ್ವರ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿ, ಮನೆಯ ಸುತ್ತಮುತ್ತ ಸ್ವಚ್ಛ…
ಬೆಂಗಳೂರು ಆ.28 NEWS DESK : ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಉದ್ಯಮಿ ರೋಷನ್ ಜೊತೆ ಸಪ್ತಪದಿ ತುಳಿದಿದ್ದಾರೆ. ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ಶಿವರಾಜ್ ಕುಮಾರ್, ರಾಜ್ ಬಿ ಶೆಟ್ಟಿ, ಶರಣ್, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ಶುಭ ಹಾರೈಸಿದ್ದಾರೆ.
ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರು ನಗರದ ಅತಿ ಶ್ರೇಷ್ಠ ಹಾಗೂ ಪವಿತ್ರವಾದ ಸ್ಥಳ. ಇದು ಬೆಂಗಳೂರಿನ ಹಳೆಯ ದೇವಸ್ಥಾನಗಳಲ್ಲಿ ಒಂದು. ಈ ದೇವಾಲಯವನ್ನು ಮೊದಲು ದಿಗಂಬರ ದೇವಸ್ಥಾನ ಎಂದು ಕರೆಯಲಾಗುತ್ತಿತ್ತು. ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಇದೆ. ಈ ದೇವಾಲಯದ ದೇವರು ತುಂಬಾ ಶಕ್ತಿಶಾಲಿಯಾಗಿರುವುದರಿಂದ ತಮ್ಮ ಎಲ್ಲಾ ಕೋರಿಕೆಗಳು ಈಡೇರುತ್ತವೆ ಎಂದು ಅನೇಕ ಭಕ್ತರು ನಂಬುತ್ತಾರೆ. ಇಡೀ ವರ್ಷ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ ಹಾಗೂ ಧಾರ್ಮಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಗಾಳಿ ಆಂಜನೇಯ ದೇವರ ಆಶೀರ್ವಾದ ಪಡೆಯಲು ಮತ್ತು ತಮ್ಮ ಜೀವನದ ತೊಂದರೆಗಳನ್ನು ನಿವಾರಿಸಿಕೊಳ್ಳಲು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ಆಂಜನೇಯನ ಆಶೀರ್ವಾದ ಪಡೆಯಲು ಭಕ್ತರು ಬೇರೆ ಬೇರೆ ಊರುಗಳು ಹಾಗೂ ರಾಷ್ಟ್ರಗಳಿಂದೆಲ್ಲಾ ಬರುತ್ತಾರೆ. ಇತಿಹಾಸ :: ಈ ದೇವಾಲಯವನ್ನು 1425ರಲ್ಲಿ ನಿರ್ಮಿಸಲಾಗಿದ್ದು ಇದು ಸುಮಾರು 600 ವರ್ಷಗಳ ಇತಿಹಾಸವನ್ನು ಹೊಂದಿದೆ. ವೃಷಭಾವತಿ ಮತ್ತು ಪಶ್ಚಿಮಾವತಿ ನದಿಗಳ ಸಂಗಮವಾದದ್ದರಿಂದ ವ್ಯಾಸರಾಜನು ಇಲ್ಲಿ ಪ್ರತಿಮೆಯನ್ನು ಸ್ಥಾಪಿಸಿದನೆಂದು ಪುರಾಣ…
ಬೇಕಾಗುವ ಪದಾರ್ಥಗಳು :: ಮಶ್ರೂಮ್- 1 ಬಟ್ಟಲು, ಬೆಣ್ಣೆ- 1 ಚಮಚ, ಬೆಳ್ಳುಳ್ಳಿ- ಸ್ವಲ್ಪ (ಸಣ್ಣಗೆ ಕತ್ತರಿಸಿದ್ದು), ಕಾಳುಮೆಣಸು- 1 ಚಮಚ (ತರಿತರಿಯಾಗಿ ಪುಡಿ ಮಾಡಿದ್ದು), ಉಪ್ಪು-ರುಚಿಗೆ ತಕ್ಕಷ್ಟು, ಕೊತ್ತಂಬರಿಸೊಪ್ಪು-ಸ್ವಲ್ಪ, ಮಿಕ್ಸಡ್ ಹರ್ಬ್ಸ್- 1 ಚಮಚ ಮಾಡುವ ವಿಧಾನ :: ಮಶ್ರೂಮ್ ಅನ್ನು ಚೆನ್ನಾಗಿ ತೊಳೆದು ಚಿಕ್ಕದ್ದಾಗಿ ಕತ್ತರಿಸಿಕೊಳ್ಳಿ. ನಂತರ ಗ್ಯಾಸ್ ಮೇಲೆ ಪ್ಯಾನ್ ಇಟ್ಟು ಅದಕ್ಕೆ ಬೆಣ್ಣೆ ಹಾಕಿ ಅದು ಕರಗುತ್ತಿದ್ದಂತೆ ಬೆಳ್ಳುಳ್ಳಿ ಸೇರಿಸಿ 2 ನಿಮಿಷಗಳ ಕಾಲ ಫ್ರೈ ಮಾಡಿ. ನಂತರ ಅದಕ್ಕೆ ಮಶ್ರೂಮ್ ಸೇರಿಸಿ ಮಿಶ್ರಣ ಮಾಡಿ. ಸ್ವಲ್ಪ ಹೊತ್ತಿನ ನಂತರ ಮಶ್ರೂಮ್ ನೀರು ಬಿಡುತ್ತದೆ. ನೀರು ಆವಿಯಾಗುವವರೆಗೆ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಇದಕ್ಕೆ ಕಾಳುಮೆಣಸಿನ ಪುಡಿ, ಮಿಕ್ಸಡ್ ಹರ್ಬ್ಸ್ ಸೇರಿಸಿ ಮಿಕ್ಸ್ ಮಾಡಿ. ಬಳಿಕ ಉಪ್ಪು, ಕೊತ್ತಂಬರಿಸೊಪ್ಪು ಸೇರಿಸಿದರೆ ರುಚಿಕರವಾದ ಗಾರ್ಲಿಕ್ ಮಶ್ರೂಮ್ ಸವಿಯಲು ಸಿದ್ಧ.
ಬೆಳಗಾವಿ ಆ.28 NEWS DESK : ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕನ ಅಜಾಗರೂಕ ಚಾಲನೆ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಬಸ್ ಘಾಟ್ ಪ್ರದೇಶದಲ್ಲಿ ತೀವ್ರ ತಿರುವು ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೈಸೂರು ಆ.28 NEWS DESK : ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ. (ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರ ಹಾಕುವ insertion) ಎಂದರು. ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು…
ಬೆಂಗಳೂರು ಆ.28 NEWS DESK : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ಸಿಂಗ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ…
ಕುಶಾಲನಗರ ಆ.28 NEWS DESK : ಕೂಡುಮಂಗಳೂರು ಗ್ರಾ.ಪಂ ಸುಂದರನಗರದಲ್ಲಿ ವಿನಾಯಕ ಯುವಕರ ಸಂಘದ ವತಿಯಿಂದ 31ನೇ ವರ್ಷದ ಅದ್ದೂರಿ ಗಣೇಶೋತ್ಸವವನ್ನು ಆಚರಿಸಲಾಯಿತು. ಮುಂಜಾನೆಯಿಂದಲೇ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಗಣೇಶನನ್ನು ಪ್ರತಿಷ್ಠಾಪಿಸಲಾಯಿತು. ಗಣಪತಿ ಮಂಟಪವನ್ನು ವಿದ್ಯುತ್ ಅಲಂಕೃತಗಳಿಂದ ಸಿಂಗರಿಸಲಾಯಿತು. ಮೂರು ದಿನಗಳ ಕಾಲ ವಿನಾಯಕನಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದು, ನಂತರ ಅದ್ದೂರಿ ಮೆರವಣಿಗೆ ಸಾಗಿ ಗಣೇಶನನ್ನು ವಿಸರ್ಜಿಸಲಾಗುವುದು. ಭಕ್ತಾಧಿಕಾರಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ ಎಂದು ವಿನಾಯಕ ಯುವಕರ ಸಂಘದವರು ತಿಳಿಸಿದ್ದಾರೆ. ಪ್ರತಿ ವರ್ಷ ಶಾಮಿಯಾನ ಹಾಕಿ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿತ್ತು. ಈ ಬಾರಿ ಗಣಪತಿ ಪ್ರತಿಷ್ಠಾಪನೆಗೆ ಶಾಶ್ವತವಾದ ಕಟ್ಟಡ ನಿರ್ಮಿಸಬೇಕು ಎಂಬ ಉದ್ದೇಶದಿಂದ ಶೆಡ್ ನಿರ್ಮಿಸಲಾಗಿದೆ. ಎಲ್ಲರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಕಟ್ಟಡವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಕೆಲಸಕ್ಕೆ ಸಂಘ ಮುಂದಾಗಲಿದೆ. ಇದಕ್ಕೆ ಸಹಕರಿಸಿದ ಗಣಪತಿ ಸೇವಾ ಸಮಿತಿ, ಬಣ್ಣಾರಮ್ಮಾ ಸೇವಾ ಸಮಿತಿ, ಹನುಮ ಸೇವಾ ಸಮಿತಿ, ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಗ್ರಾ.ಪಂ ಸದಸ್ಯರಾದ ಆಶಾ ವೆಂಕಟೇಶ್, ದೀಪಾ ಹಾಗೂ ಕೆ.ಬಿ.ಶಂಶುದ್ಧೀನ್, ಗ್ರಾಮಸ್ಥರು ಹಾಗೂ ಸರ್ವ…






