ಮಡಿಕೇರಿ ಸೆ.15 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನೀಮಾ)ನ ಕೊಡಗು ಘಟಕವು ಇಪ್ಪತ್ತೈದನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಮುಂದಿನ ಅ.18ರ ಧನ್ವಂತರಿ ಜಯಂತಿಯಂದು ಸಂಸ್ಥೆಯ ‘ಬೆಳ್ಳಿ ಹಬ್ಬ’ವನ್ನು ಆಚರಿಸಿಕೊಳ್ಳಲಿದೆಯೆಂದು ನೀಮಾ ಅಧ್ಯಕ್ಷ ಡಾ. ರಾಜಾರಾಮ ಎ.ಆರ್. ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಧನ್ವಂತರಿ ಜಯಂತಿಯ ಬಳಿಕ ನೀಮಾ ಕೊಡಗು ಘಟಕದ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ವೈವಿಧ್ಯಮಯವಾದ ಇಪ್ಪತ್ತೈದು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದೀಗ ಬೆಳ್ಳಿ ಹಬ್ಬದ ಸಮಾರಂಭವನ್ನು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ತಿಳಿಸಿದರು. :: 25 ಮಂದಿ ಸಾಧಕರಿಗೆ ಸನ್ಮಾನ :: ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ನೀಮಾ ಪ್ರಕೃತಿಗಾಗಿ, ನೈಸರ್ಗಿಕ ಚಿಕಿತ್ಸೆಗಾಗಿ ಅಥವಾ ಜನರ ಆರೋಗ್ಯಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ 25 ಸಾಧಕರನ್ನು ಗುರುತಿಸಿ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಸನ್ಮಾನಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಸೂಕ್ತ ಹೆಸರನ್ನು ಸೂಚಿಸುವಂತೆ ಕೊಡಗು ನೀಮಾ ಅಧ್ಯಕ್ಷ ಡಾ. ರಾಜಾರಾಮ ಅವರು…
ಲೇಖಕ: admin
ಮಡಿಕೇರಿ ಸೆ.15 NEWS DESK : ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಹಳೆಮುಡಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಸೆ.15 NEWS DESK : ಸುಂಟಿಕೊಪ್ಪ ಹೃದಯಭಾಗದಲ್ಲಿರುವ ಫ್ಯಾಷನ್ ಜ್ಯುವೆಲ್ಲರಿ ಶಾಪ್ನಿಂದ 22 ಗ್ರಾಂ. ತೂಕದ ಚಿನ್ನದ ಸರ ಕಳುವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಮಳಿಗೆ ಮುಚ್ಚುವ ಮೊದಲು ದಾಸ್ತಾನು ಪರಿಶೀಲಿಸುವ ಸಂದರ್ಭ ಚಿನ್ನದ ಸರ ಕಳುವು ಆಗಿರುವುದು ಅಂಗಡಿಯವರ ಗಮನಕ್ಕೆ ಬಂದಿದೆ. ತಕ್ಷಣ ಸಿಸಿ ಕ್ಯಾಮರ ಪರಿಶೀಲಿಸಿದಾಗ ಸಂಜೆ 5 ರ ಸುಮಾರಿಗೆ ಮಗುವಿನೊಂದಿಗೆ ಬಂದಿದ್ದ ಮೂವರು ಮಹಿಳೆಯರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಅಂಗಡಿ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಳಿಗೆಗೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
*ಕಾವೇರಿ ತೀರ್ಥೋದ್ಭವದ ಸಮಯ*
*ಸೋಮವಾರಪೇಟೆಯಲ್ಲಿ ನವ್-ವೈಭವ್* ಸೋಮವಾರ ಸೆಪ್ಟೆಂಬರ್ 22 ರಂದು ಸೋಮವಾರಪೇಟೆಯ ಸಾಕ್ಷಿ ಕನ್ವೆಷನ್ ಹಾಲ್ ನಲ್ಲಿ ಲಾಸ್ಯ -ರಿಧಿ ಆಯೋಜಿಸಿರುವ ಪ್ರದರ್ಶನ ಹಾಗೂ ಮಾರಾಟ. ನಾಡಹಬ್ಬವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಸುವರ್ಣಾವಕಾಶ. ನಾಡಿನ ಸುಪ್ರಸಿದ್ದ ಸಂಸ್ಥೆಗಳಿಂದ ವಿನ್ಯಾಸಗೊಂಡ ರೆಡಿಮೇಡ್ ಉಡುಪುಗಳು – ಮಹಿಳೆಯರ ಡಿಸೈನರ್ ಸೀರೆಗಳು ಹಾಗೂ ಉಡುಗೆಗಳು – ಗೃಹಬಳಕೆ ಸಾಮಗ್ರಿಗಳು – ಆರ್ಗಾನಿಕ್ ಉತ್ಪನ್ನಗಳು – ಆಯ್ದ ವಿನೂತನ ಶೈಲಿಯ ಆಭರಣಗಳು – ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯ ಇರುತ್ತವೆ. ಬಳಸಿದ ಜರಿರೇಶ್ಮೆ ಸೀರೆಗಳನ್ನು ಜರಿಯ ಮೌಲ್ಯ ನಿರ್ಧರಿಸಿ ಖರೀದಿಸಲಾಗುತ್ತದೆ. ಗ್ರಾಹಕರಿಗೆ ಆಹ್ಲಾದ ನೀಡಲು ಕಾಫಿ ಶಾಪ್ ವಿವಿಧ ಬಗೆಯ ವಿಶೇಷ ಕೇಕ್ ಮುಂತಾದ ಬೇಕಿಂಗ್ ಉತ್ಪನ್ನಗಳು ಕೊಡಗಿನ ಸಾಂಪ್ರದಾಯಿಕ ಶೈಲಿಯಲ್ಲಿ ಸಿದ್ಧಪಡಿಸಿದ ವೆಜ್ ಹಾಗೂ ನಾನ್ ವೆಜ್ ಖಾದ್ಯಗಳು. ಇನ್ ಡೋರ್ ಗಿಡಗಳನ್ನು ಬೆಳೆಸುವ ಮಣ್ಣು ಹಾಗೂ ಸೆರಾಮಿಕ್ ಪಾಟ್ ಗಳು. ಮರ ಹಾಗೂ ಲೋಹದಿಂದ ತಯಾರಿಸಿದ ಅಲಂಕಾರಿಕ ಕರಕುಶಲ ವಸ್ತುಗಳು. ಬನ್ನಿ… ದಸರಾ ನವರಾತ್ರಿಯ ಪವಿತ್ರ ನಾಡಹಬ್ಬಕ್ಕೆ ಮೆರಗು ನೀಡುವ ನವ್-ವೈಭವ್ ಪ್ರದರ್ಶನ ಹಾಗೂ ಮಾರಾಟಕ್ಕೆ ನಿಮ್ಮ ಆತ್ಮೀಯರನ್ನೂ ಕರೆತನ್ನಿ. ನೆನಪಿಡಿ ಸೆಪ್ಟೆಂಬರ್ 22,…
ಮಡಿಕೇರಿ ಸೆ.15 NEWS DESK : ಕನ್ನಡ ನಾಡಿನ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಸೆ.21 ರಂದು ಮಡಿಕೇರಿಯಲ್ಲಿ ‘ಕರುನಾಡು ಗಾಟ್ ಟ್ಯಾಲೆಂಟ್ ಸೆಷನ್-ಸೀಸನ್-2’ ಆಡಿಷನ್ ಆಯೋಜಿತವಾಗಿದೆಯೆಂದು ಕಾರ್ಯಕ್ರಮದ ಸಹಾಯಕ ನಿರ್ದೇಶಕರಾದ ಪಿ.ಎನ್.ದಿನೇಶ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಈವೆಂಟ್ ಕ್ಯುರೇಟರ್ಗಳಾದ ಕಿಂಬರ್ಲಿ ಕೂರ್ಗ್ ಸಹಯೋಗದಲ್ಲಿ, ನಗರದ ರಾಜಾಸೀಟ್ ರಸ್ತೆಯಲ್ಲಿನ ಹೋಟೆಲ್ ನ್ಯೂ ರಾಜದರ್ಶನ್ನಲ್ಲಿ ಸೂಚಿತ ದಿನದಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಆಡಿಷನ್ ಆಯೋಜಿತವಾಗಿದೆ. ಆಸಕ್ತರು ಅಂದು ಬೆಳಗ್ಗೆ ತಮ್ಮ ಪ್ರದರ್ಶನಕ್ಕೆ ಅಗತ್ಯವಾದ ಸಲಕರಣೆಗಳೊಂದಿಗೆ, ನಿಗದಿತ ಶುಲ್ಕ ಪಾವತಿಸಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.6362250778, 9164831989ನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಆಡಿಷನ್ನಲ್ಲಿ ನೃತ್ಯ, ಹಾಡುಗಾರಿಕೆ, ಮಿಮಿಕ್ರಿ, ಯೋಗ, ಜಾದು, ನಾಟಕ, ಹಾಡುಗಾರಿಕೆ, ಸಂಗೀತ ವಾದ್ಯ, ಕಲೆ, ಸಾಹಿತ್ಯ ಮತ್ತು ಇನ್ನಿತರ ಯಾವುದೇ ಪ್ರಾಕಾರಗಳಲ್ಲಿನ ತಮ್ಮ ಪ್ರತಿಭೆಯನ್ನು ಪ್ರಸ್ತುತ ಪಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ತೀರ್ಪುಗಾರರಾಗಿ ಸುಮಿತ್ ಅಮೀನ್, ಸುರಕ್ಷಾ…
ಮಡಿಕೇರಿ ಸೆ.15 NEWS DESK : ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಆಯೋಜನೆ ಕೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ದಸರಾ ಉತ್ಸವದ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಪ್ರಸಿದ್ಧ ಉತ್ಸವಕ್ಕೆ ಕೈಗೊಂಡ ತಯಾರಿಯ ಬಗ್ಗೆ ಹಾಗೂ ಆಗಬೇಕಾಗಿರುವಂತಹ ಎಲ್ಲಾ ವ್ಯವಸ್ಥೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರೊಂದಿಗೆ ಚರ್ಚಿಸಿದರು. ಜನಸಾಮಾನ್ಯರಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಹಾಗೂ ಸಂಬಂಧ ಪಟ್ಟ ಎಲ್ಲಾ ಇಲಾಖೆಗಳು ದಸರಾ ಉತ್ಸವವನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಕ್ರಮಕೈಗೊಳ್ಳಬೇಕೆಂದು ಶಾಸಕ ಎ.ಎಸ್.ಪೊನ್ನಣ್ಣ ಅವರುಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಾಮರಾಜನ್, ಜಿ.ಪಂ…
ಮಡಿಕೇರಿ ಸೆ.15 NEWS DESK : ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲೆಯಲ್ಲಿನ ಮಳೆಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಳೆಗಾಲದಲ್ಲಿ ಉಂಟಾದ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಬಗ್ಗೆ ಚರ್ಸಿಸಲಾಯಿತು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ರಾಮರಾಜನ್, ಜಿ.ಪಂ ಸಿಇಓಆನಂದ್ ಪ್ರಕಾಶ್ ಮೀನಾ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಸೆ.15 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.16 ರಂದು ಸೈನಿಕ ಶಾಲೆಗೆ ವಿದ್ಯಾಥಿ೯ಗಳ ಸೇಪ೯ಡೆ ಸಂಬಂಧಿತ ಮಾಹಿತಿ ಉಪನ್ಯಾಸವನ್ನು ಆಯೋಜಿಸಲಾಗಿದೆ. ಸಂಜೆ 7 ಗಂಟೆಗೆ ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಮತ್ತು ಉಪ ಮುಖ್ಯಕಾಯ೯ನಿವ೯ಹಣಾಧಿಕಾರಿ ಪ್ರವೀಣ್ ಕುಮಾರ್ ಸಯ್ಯಪ್ಪ ರಾಜು ಸೈನಿಕ ಶಾಲೆಗೆ ವಿದ್ಯಾಥಿ೯ಗಳ ಸೇಪ೯ಡೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲಿದ್ದಾರೆ. ಸಾವ೯ಜನಿಕರು, ವಿದ್ಯಾಥಿ೯ಗಳು, ಫೋಷಕರು, ಶಿಕ್ಷಕ ವೃಂದ ಮತ್ತು ಆಸಕ್ತರು ಕಾಯ೯ಕ್ರಮದಲ್ಲಿ ಪಾಲ್ಗೊಂಡು ಸೈನಿಕ ಶಾಲೆಗಳ ಮಾಹಿತಿ ಪಡೆಯಬಹುದಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಕೋರಿದ್ದಾರೆ.
ಮಡಿಕೇರಿ ಸೆ.15 NEWS DESK : 47ನೇ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಶ್ರೀ ಕಾವೇರಿ ದಸರಾ ಸಮಿತಿಯಿಂದ ಆಹ್ವಾನಿಸಲಾಯಿತು. ಈ ಸಂದರ್ಭ ಸಮಿತಿಯ ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪ್ರಧಾನ ಕಾರ್ಯದರ್ಶಿ ಕಂದ ದೇವಯ್ಯ, ಖಜಾಂಚಿ ಧ್ಯಾನ್ ಸುಬ್ಬಯ್ಯ, ಸಂಯೋಜಕ ಚಂದನ್ ಕಾಮತ್, ವೇದಿಕೆ ಸಮಿತಿಯ ಗುರು, ಯುವ ದಸರಾ ಅಧ್ಯಕ್ಷ ಅಂಕಿತ್ ಪೊನ್ನಪ್ಪ ಉಪಸ್ಥಿತರಿದ್ದರು.






