ಕುಶಾಲನಗರ ಜು.28 NEWS DESK : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಹೆಚ್.ಜಿ.ಕುಮಾರ್, ಕಾರ್ಯದರ್ಶಿ ಎಸ್.ಎಂ.ಮಹೇಂದ್ರ ಅವರನ್ನು ತಾಲ್ಲೂಕು ಸಂಘದಿಂದ ಸನ್ಮಾನಿಸಲಾಯಿತು. ನೂತನವಾಗಿ ಪದಾಧಿಕಾರಿಗಳಾಗಿ ದಿನೇಶ್ ಗೌಡಳ್ಳಿ, ಹೂಬಟ್೯ ಡಯಾಸ್, ಸಿ.ಡಿ.ಲೋಕೇಶ್, ವಿಕ್ರಾಂತ್ ಕೇಳ್ಕರ್, ವಿಜಯ್ ಕುಮಾರ್, ಅರುಣ್ ಕುಮಾರ್ ಅವರನ್ನು ಆಯ್ಕೆಮಾಡಿಕೊಳ್ಳಲಾಯಿತು. ಅನುದಾನಿತ ಶಾಲಾ ಶಿಕ್ಷಕರು ಅನುಭವಿಸುತ್ತಿರುವ ವೇತನದ ಸಮಸ್ಯೆ, ಇನ್ಕ್ರಮೆಂಟ್, ಟೈಂ ಬಾಂಡ್,ಇನ್ನಿತರ ವಿಷಯಗಳ ಬಗೆ ಚರ್ಚಿಸಿ, ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರನ್ನು ಭೇಟಿ ಮಾಡಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಸಹಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಪರಿಹಾರ ಮಾಡುವ ಬಗ್ಗೆ ಚರ್ಚಿಸಲಾಯಿತು. ತಾಲ್ಲೂಕಿನ ಪದಾಧಿಕಾರಿಗಳು ತಾಲ್ಲೂಕಿನ ಕಾರ್ಯಕಾರಿಣಿ ಸಭೆಯನ್ನು ಶನಿವಾರಸಂತೆ, ಕುಶಾಲನಗರ ಹಾಗೂ ಸೋಮವಾರಪೇಟೆಯಲ್ಲಿ ನಡೆಸಲು ತೀರ್ಮಾನ ಮಾಡಲಾಯಿತು. ಜೂಮ್ ಮೀಟಿಂಗ್ ಮುಖಾಂತರ…
ಲೇಖಕ: admin
ನಾಪೋಕ್ಲು ಜು.28 NEWS DESK : ಹೋಬಳಿ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಬಿರುಸಿನ ಮಳೆಯಾಗಿದ್ದು ಭಾನುವಾರ ಕೊಂಚ ಕಡಿಮೆಯಾಗಿದೆ. ಗಾಳಿ ಮಳೆಯಿಂದ ಅಲ್ಲಲ್ಲಿ ವಾಸದ ಮನಗಳಿಗೆ ಹಾನಿ ಉಂಟಾಗಿದ್ದು, ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ನಾಪೋಕ್ಲು, ಮೂರ್ನಾಡು ಸಂಪರ್ಕ ರಸ್ತೆಯ ಬೋಳಿಬಾಣೆ ಎಂಬಲ್ಲಿ ಕಾವೇರಿ ಪ್ರವಾಹ ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ಸಂಪರ್ಕ ಸ್ಥಗಿತಗೊಂಡಿದೆ, ಕೊಟ್ಟಮುಡಿ ಜಂಕ್ಷನ್ ಸಮೀಪ ಮೂರ್ನಾಡು ರಸ್ತೆಯಲ್ಲಿ ಕಾವೇರಿ ನದಿ ದಡದಲ್ಲಿರುವ ಶೆಡ್ ಜಲಾವೃತವಾಗಿ ಮುಳುಗಡೆಯಾಗಿದೆ. ನಾಪೋಕ್ಲು, ಕಲ್ಲುಮೊಟ್ಟೆ ಸಂಪರ್ಕ ರಸ್ತೆಯಲ್ಲಿರುವ ಚೆರಿಯಪರಂಬು ಎಂಬಲ್ಲಿ ರಸ್ತೆಯೂ ಕಾವೇರಿ ಪ್ರವಾಹದಿಂದ ಜಲಾವೃತವಾಗಿ ಸಂಪರ್ಕ ಕಡಿತಗೊಂಡು ಇಲ್ಲಿಯ ನಿವಾಸಿಗಳು ಕೊಡವ ಸಮಾಜ ರಸ್ತೆಯನ್ನು ಅವಲಂಬಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಕಕ್ಕಬೆ ಗ್ರಾಮ ಪಂಚಾಯಿತಿಯ ಕುಂಜಿಲ ಗ್ರಾಮದ ವೈಕೋಲ್ ನಿವಾಸಿ ಅಶ್ರಫ್ ಎಂಬವರ ವಾಸದ ಮನೆಯ ಸಮೀಪ ಬರೆ ಕುಸಿದು ಸಂಕಷ್ಟ ಎದುರಾಗಿದೆ. ಇದೇ ಕುಂಜಿಲ ಗ್ರಾಮದ ನಿವಾಸಿ ಉಮ್ಮರ್ ಎಂಬವರ ಮನೆಯ ಒಂದು ಭಾಗದ ಗೋಡೆ ಮಳೆ ಗಾಳಿಯಿಂದಾಗಿ ರಾತ್ರಿ…
ಮಡಿಕೇರಿ ಜು.28 NEWS DESK : ಬೆಂಗಳೂರಿನ ಕ್ಗ್ಗಟ್ನಾಡ್ ಕೊಡವ ಸಂಘದ 5ನೇ ವರ್ಷದ ಒತ್ತೋರ್ಮೆ ಕೂಟವು ಸಂಭ್ರಮದಿಂದ ನಡೆಯಿತು. ಬೆಂಗಳೂರು ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕೊಡಗಿನ ಹಾಗೂ ಕೊಡವರ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ, ನಾಡಿನದ್ಯಂತ ಪಸರಿಸಲು ಇಂತಹ ಸಮ್ಮಿಲನ ಕಾರ್ಯಕ್ರಮವು ಪ್ರಮುಖ ಪಾತ್ರ ವಹಿಸುತ್ತದೆ. ಇಂದಿನ ಯುವ ಪೀಳಿಗೆಯ ಮೇಲೆ ನಮ್ಮ ಸಂಸ್ಕೃತಿ ಪರಂಪರೆ ಹಾಗೂ ಆಚರಣೆಗಳನ್ನು ಮುಂದುವರಿಸುವ ಗುರುತರ ಜವಾಬ್ದಾರಿ ಇದೆ. ಆಧುನಿಕತೆಗೆ ಹೊಂದಿಕೊಂಡು ನಮ್ಮ ಸಂಸ್ಕೃತಿಯನ್ನು ಪೋಷಿಸುವುದು ನಮ್ಮೆಲ್ಲರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು. ನಾಡಿನ ಏಳಿಗೆಗಾಗಿ ತನ್ನ ಕೈಲಾದ ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ಇದೇ ಸಂದರ್ಭದಲ್ಲಿ ಶಾಸಕರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಹಿರಿಯ ಪತ್ರಕರ್ತ ಎಂ.ಎ.ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಗ್ಗಟ್ನಾಡ್ ಕೊಡವ ಸಂಘದ…
ನಾಪೋಕ್ಲು ಜು.28 NEWS DESK : ನೆಲಜಿ ಗ್ರಾಮದ ತೋಟಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ದ್ವಂಸ ಮಾಡಿ ನಷ್ಟ ಉಂಟು ಮಾಡಿರುವ ಘಟನೆ ಜರುಗಿದೆ. ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ದಾಂಧಲೆ ನಡೆಸಿದ್ದು, ತೆಂಗು, ಅಡಿಕೆ, ಕಾಫಿ ಗಿಡಗಳನ್ನು ನಾಶಪಡಿಸಿವೆ. ನೆಲಜಿ ಗ್ರಾಮದ ಕೋಟೆರ ಸತೀಶ್ ಮತ್ತು ಸಹೋದರ ಪ್ರಸಾದ್ ಜೋಯಪ್ಪ, ಫಾರ್ಮರ್ಸ್ ಕ್ಲಬ್, ಕೋಟೆರ ಐನ್ ಮನೆ ಹಾಗೂ ಸುತ್ತಮುತ್ತಲಿನ ತೋಟದಲ್ಲಿನ ಕೃಷಿ ಗಿಡಗಳನ್ನು ನಾಶಪಡಿಸಿವೆ. ಅಲ್ಲದೆ ಕಕ್ಕಬ್ಬೆ, ಕುಂಜಿಲ, ಯವಕಪಾಡಿಯ ತೋಟಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕಾಫಿ, ಬಾಳೆ, ಅಡಿಕೆ ಗಿಡಗಳನ್ನು ಧ್ವಂಸಮಾಡಿದ್ದವು. ಕಾಡಾನೆಗಳನ್ನು ಒಂದು ಭಾಗದಿಂದ ಓಡಿಸಿದರೆ ಮತ್ತೊಂದು ಭಾಗದಿಂದ ನುಸುಳುತ್ತವೆ. ಗ್ರಾಮದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕೆಂದು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜು.28 NEWS DESK : ಕೊಡಗು ಪತ್ರಕತ೯ರ ಸಂಘ (ರಿ) ಹಾಗೂ ರೋಟರಿ ಮಿಸ್ಟಿ ಹಿಲ್ಸ್ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಕಾಗಿ೯ಲ್ ವಿಜಯ್ ದಿವಸ್ ಕಾರ್ಯಕ್ರಮ ಮತ್ತು ಯೋಧರಿಗೆ ಗೌರವ ನಮನ ಸಲ್ಲಿಸುವ ಕಾಯ೯ಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭಾಗವಹಿಸಿ ವೀರ ಯೋಧರಿಗೆ ಗೌರವಾರ್ಪಣೆ ಮಾಡಿದರು. ದೇಶ ರಕ್ಷಣೆಯಲ್ಲಿ ವೀರ ಯೋಧರ ಕೊಡುಗೆಯನ್ನು ಸ್ಮರಿಸಿದ ಪೊನ್ನಣ್ಣ ವೀರತ್ವಕ್ಕೆ ಕೊಡಗು ಹೆಸರುವಾಸಿಯಾಗಿದ್ದು, ಕೊಡಗಿನ ಸಾವಿರಾರು ಜನ ಸೈನಿಕರ ಕೊಡುಗೆ ಈ ದೇಶದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಬಣ್ಣಿಸಿದರು. ದೇಶದ ಪ್ರತಿಯೊಬ್ಬರು ದೇಶಭಕ್ತಿಯನ್ನು ಬೆಳೆಸಿಕೊಂಡಲ್ಲಿ, ನಮ್ಮ ನಾಡು, ನಮ್ಮ ದೇಶ ಸಮೃದ್ಧವಾಗುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಪೊನ್ನಣ್ಣ ಅಭಿಪ್ರಾಯಪಟ್ಟರು. ನಮ್ಮ ದೇಶವನ್ನು ಕಾಯುವ ಯೋಧರನ್ನು ನಾವು ಸದಾ ಸ್ಮರಿಸುತ್ತಾ ಅವರಿಗೆ ಚಿರಋಣಿಯಾಗಿರಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಕಿವಿಮಾತು ಹೇಳಿದರು. ಕೊಡಗಿನಿಂದ ದೇಶದ ಸೈನ್ಯಕ್ಕೆ ನೀಡಲಾದ ಯೋಧರ ಕೊಡುಗೆ ಬೇರೆ ಯಾವ ರಾಜ್ಯದಿಂದಲೂ ಇಲ್ಲ ಎಂದು ಹೇಳಿದ…
ಮಡಿಕೇರಿ ಜು.28 NEWS DESK : ಹಣತೆ ಉರಿಸಿ, ಪುಪ್ಪಗಳನ್ನು ಅಪಿ೯ಸಿ, ದೇಶಭಕ್ತಿಯ ಹಾಡುಗಳೊಂದಿಗೆ ಯೋಧರು, ಹಾಗೂ ಭಾರತ ಮಾತೆಗೆ ಜೈಘೋಷಗಳ ಮೂಲಕ ವಿನೂತನ ರೀತಿಯಲ್ಲಿ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 75 ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಅಮರ್ ಜವಾನ್ ಸ್ಮಾರಕದ ಪ್ರತಿಕೖತಿಗೆ ಪುಪ್ಪಾಚ೯ನೆ ಮಾಡಿ, ಹಣತೆ ಬೆಳಗಿ ಯೋಧರಿಗೆ ಭಾವಪೂಣ೯ ಗೌರವ ನಮನ ಸಲ್ಲಿಸಿದರು. ಯೋಧರೆ ನಾವೆಂದೂ ಮರೆಯೋದಿಲ್ಲ ನಿಮ್ಮನ್ನು ಎಂಬ ಸಂದೇಶ ಸಾರುವ ಕಾಯ೯ಕ್ರಮವನ್ನು ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪ ಅವರ ಪತ್ನಿ ಪೆಮ್ಮಂಡ ಶೋಭಾ ಕಾವೇರಪ್ಪ ದೀಪಬೆಳಗಿಸಿ ಉದ್ಘಾಟಿಸಿದರು. ರೋಟರಿ ಜಿಲ್ಲೆಯ ನಿಕಟಪೂವ೯ ಗವನ೯ರ್ , ಮಾಜಿ ನೌಕದಳದ ಅಧಿಕಾರಿ ವಿಕ್ರಂದತ್ತ, ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಕಾಯ೯ದಶಿ೯ ಸುರೇಶ್ ಬಿಳಿಗೇರಿ, ರೋಟರಿ…
ಮಡಿಕೇರಿ NEWS DESK ಜು 27 : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ ಹಲವೆಡೆ ಪ್ರವಾಸಿ ತಾಣಗಳ ಮಾಹಿತಿ ಫಲಕಗಳನ್ನು ಅಳವಡಿಸುವ ಯೋಜನೆಗೆ ರಾಜಾಸೀಟ್ ಹೊರಬದಿಯಲ್ಲಿ ಫಲಕ ಅನಾವರಣಗೊಳಿಸುವ ಮೂಲಕ ಚಾಲನೆ ದೊರಕಿದೆ. ನಗರದ ಹೆಸರಾಂತ ಪ್ರವಾಸೀ ತಾಣ ರಾಜಾಸೀಟ್ ನಲ್ಲಿ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ರಾಜಾಸೀಟ್ ನಿಂದ ಇರುವ ದೂರದ ಮಾಹಿತಿಯುಳ್ಳ ಬೖಹತ್ ಹೋಡಿ೯ಂಗ್ ನ್ನು ಅನಾವರಣಗೊಳಿಸಲಾಯಿತು. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ, ಪ್ರಧಾನ ಕಾಯ೯ದಶಿ೯ ನಾಸೀರ್, ನಗರಸಭೆಯ ಪೌರಾಯುಕ್ತ ರಮೇಶ್ ಹಾಜರಿದ್ದರು. ಇಂಥ ಮಾಹಿತಿ ಫಲಕಗಳನ್ನು ಪ್ರವಾಸಿಗರ ಅನುಕೂಲತೆಗಾಗಿ ಜಿಲ್ಲೆಯ 12 ಪ್ರಮುಖ ಪ್ರವಾಸಿ ತಾಣಗಳಲ್ಲಿ ಅಳವಡಿಸಲಾಗುತ್ತಿದ್ದು, ಆಯಾ ಪ್ರವಾಸಿ ತಾಣದಿಂದ ಬೇರೆ ಕಡೆಗಳಲ್ಲಿನ ಪ್ರವಾಸಿ ತಾಣಕ್ಕೆ ಎಷ್ಟು ದೂರವಾಗಲಿದೆ. ಆ ಪ್ರವಾಸಿ ತಾಣದ ವಿಶೇಷ ಏನೆಂಬ ಮಾಹಿತಿ ಈ ಹೋಡಿ೯ಂಗ್ ನಲ್ಲಿರಲಿದೆ ಎಂದು ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದರು.…
ಸೋಮವಾರಪೇಟೆ NEWS DESK ಜು.27 : ಸೋಮವಾರಪೇಟೆ ಸಮೀಪದ ಶಾಂತಳ್ಳಿ ಜೇಡಿಗುಂಡಿ ಸಮೀಪ ರಸ್ತೆಯ ಮೇಲೆ ಬರೆ ಕುಸಿಯುವ ಸಂದರ್ಭ ಸುದ್ದಿ ಮಾಡುತ್ತಿದ್ದ ಪತ್ರಕರ್ತ ಹರಗ ಶರಣ್ ಎಂಬುವವರ ಓಮಿನಿ ವ್ಯಾನ್ ಮೇಲೆ ಮರ ಬಿದ್ದು ಹಾನಿಯಾಗಿದೆ. ಬರೆ ಕುಸಿತದ ಫೋಟೋ ತೆಗೆಯುತ್ತಿದ್ದ ಸಂದರ್ಭ, ವಾಹನದ ಮೇಲೆ ಮರವೊಂದು ಬಿದ್ದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡಿದೆ. ಶರಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರಪೇಟೆ NEWS DESK ಜು.27 : ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಮಳೆಯ ಆರ್ಭಟ ಭಾನುವಾರವೂ ಮುಂದುವರಿದಿದ್ದು, ಗ್ರಾಮೀಣ ಭಾಗದ ಬಹುತೇಕ ಗ್ರಾಮಗಳು ಕತ್ತಲೆಯಲ್ಲಿವೆ. ವಿದ್ಯುತ್ ಮಾರ್ಗದ ಮೇಲೆ ಮರಗಳು ಬಿದ್ದಿದ್ದು ಕಂಬಗಳು ನೆಲಕ್ಕುರುಳಿವೆ. ಸೋಮವಾರಪೇಟೆ, ಶಾಂತಳ್ಳಿ, ಸಕಲೇಶಪುರ ರಾಜ್ಯ ಹೆದ್ದಾರಿಯ ಶಾಂತಳ್ಳಿ-ಜೇಡಿಗುಂಡಿ ಬಳಿಯಲ್ಲಿ ರಸ್ತೆಯ ಮೇಲೆ ಬರೆ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಗೌಡಳ್ಳಿ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಶೀಟ್ಗಳು ಗಾಳಿಗೆ ಹಾರಿಹೋಗಿವೆ. ಬಳಗುಂದ ಗ್ರಾಮದ ಮಣಿ ಎಂಬವರ ಮನೆಯ ತಡೆಗೋಡೆ ಕುಸಿದು ಹಾನಿಯಾಗಿದೆ. ಸೋಮವಾರಪೇಟೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಬರೆ ಕುಸಿಯಲು ಪ್ರಾರಂಬಿಸಿದ್ದು, ಪಟ್ಟಣ ಪಂಚಾಯಿತಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಅಂಗಡಿಯವರು ಸೂಕ್ತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದಾರೆ. ಚಿಕ್ಕತೋಳೂರು ಗ್ರಾಮದ ಸಿ.ಎನ್.ಪ್ರಕಾಶ್ ಅವರ ಕೊಟ್ಟಿಗೆಯ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಸಿ.ಈ.ಸುಬ್ಬಯ್ಯ ಅವರ ಮನೆ ಮೇಲೆ ಬೈನೆ ಮರ ಬಿದ್ದಿದೆ. ಯಡೂರು ಗ್ರಾಮದ ಎಂ.ಎಸ್.ಹೊನ್ನಪ್ಪ ಅವರ ಮನೆ ಸಮೀಪದ ಬರೆಕುಸಿದಿದೆ. ಸೂರ್ಲಬ್ಬಿ ಪ್ರೌಢಶಾಲೆಯ ವೇದಿಕೆ ಕಟ್ಟಡದ ಮೇಲ್ಚಾವಣಿ…
ಮಡಿಕೇರಿ NEWS DESK ಜು.27 : ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರ ನೇತೃತ್ವದ ನಿಯೋಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿತು. ಗೌಡ ಸಮಾಜಕ್ಕೆ ಭೂಮಿ ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಶಾಸಕರಾದ ಎ.ಎಸ್ .ಪೊನ್ನಣ್ಣ, ಡಾ.ಮಂತರ್ ಗೌಡ ಉಪಸ್ಥಿತರಿದ್ದರು. ಪ್ರಮುಖರಾದ ಕೊಲ್ಯದ ಗಿರೀಶ್, ಕುಯ್ಯಮುಡಿ ವಸಂತ ದಂಬೆಕೋಡಿ ಆನಂದ, ಹುದೇರಿ ರಾಜೇಂದ್ರ, ಪೊನ್ನಚ್ಚನ ಮಧು, ಅಮೆ ಸೀತಾರಾಮ ಮತ್ತಿತರರು ಹಾಜರಿದ್ದರು.






