ಲೇಖಕ: admin

ಮಡಿಕೇರಿ ಆ.28 NEWS DESK :  ಕರಿಕೆ ಚೆತ್ತುಕಾಯದಲ್ಲಿ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಭಜನೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಸಂಜೆ ಮಕ್ಕಳ ದೀಪದ ಮೆರವಣಿಗೆ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಕುಶಾಲನಗರ ಆ.28 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆಯು ಸೆ.14 ರಂದು ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ  ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಬಸವ ಭವನದಲ್ಲಿ  ಸಭೆ ನಡೆಯಲಿದೆ. ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರಿಗೆ ಈಗಾಗಲೇ ಕೇಂದ್ರ ಕಛೇರಿಯಿಂದ ಸಭೆಯ ಆಹ್ವಾನವನ್ನು ಅಂಚೆಯಲ್ಲಿ ಕಳಿಸಲಾಗಿದೆ. ಸಭೆಯಲ್ಲಿ ಪಾಲ್ಗೊಳ್ಳುವವರಿಗೆ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಹಮ್ಮಿಕೊಳ್ಳಲಾಗಿದ್ದು, ಆಗಮಿಸುವವರು ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಮೊಬೈಲ್ ಸಂಖ್ಯೆ 94821 92798 ಗೆ ಸೆ.5 ರ ಒಳಗಾಗಿ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಮಡಿಕೇರಿ ಆ.28 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ 43ನೇ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀ ಗಣೇಶೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಅರ್ಚಕರು ಗಣಪತಿ ಹೋಮ ನೆರವೇರಿಸಿ,  ಶ್ರೀ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ನಂತರ ಪ್ರಾರ್ಥನೆ, ವಿವಿಧ ಅಭಿಷೇಕ, ಕುಂಕುಮಾರ್ಚನೆ, ಪಂಚಕಜ್ಜಾಯ ಪ್ರಸಾದ ಅರ್ಪಣೆ, ನೈವೇದ್ಯ ಪ್ರಸಾದವನ್ನು ಅರ್ಪಿಸಿ ಮಹಾಪೂಜೆಯನ್ನು ನೆರವೇರಿಸಿದರು. ಭಕ್ತಾದಿಗಳು ಸಂಕಲ್ಪವನ್ನು ಮಾಡಿಸಿ ಮಹಾಗಣಪತಿ ಪೂಜಾ ಸೇವೆಯನ್ನು ನಡೆಸಿ ಕೊಟ್ಟರು. ನಂತರ ಪ್ರಸಾದ ವಿತರಣೆ ಹಾಗೂ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಸೇವೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ರುದ್ರಮ್ ಚಂಡೆ ಬಳಗದವರಿಂದ ಚಂಡೆ ಸೇವೆ ಹಾಗೂ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆದವು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು,…

Read More

ವಿರಾಜಪೇಟೆ ಆ.28 NEWS DESK : ಜಿಲ್ಲೆಯಲ್ಲಿನ 14 ತುಳು ಭಾಷಿಕ ಸಮುದಾಯಗಳನ್ನು ಒಂದುಗೂಡಿಸಿ, ಪರಸ್ಪರ ಸಹಕಾರದಿಂದ, ಒಗ್ಗಟ್ಟಾಗಿ ತುಳುವೆರೆ ಜನಪದ ಕೂಟವನ್ನು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಲಾಗುವುದು ಎಂದು ತುಳುವೆರೆ ಜನಪದ ಕೂಟದ ಜಿಲ್ಲಾ ಘಟಕದ ಉಪಾಧ್ಯಕ್ಷ ಆನಂದ ರಘು ಪೂಜಾರಿ ಹೇಳಿದರು. ಪಟ್ಟಣದ ಪುರಭವನದಲ್ಲಿ ನಡೆದ ತುಳುವೆರೆ ಜನಪದ ಕೂಟದ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತುಳುವೆರೆ ಜನಪದ ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಶಬರೀಶ್ ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಭಾಷಿಕ ಸಮುದಾಯದ ಎಲ್ಲರನ್ನು ಒಟ್ಟಾಗಿ ಸೇರಿಸಿಕೊಂಡು ಕೂಟದ ವತಿಯಿಂದ ಹಲವು ಸಮುದಾಯ ಹಾಗೂ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ತುಳುವರೆ ಜನಪದ ಕೂಟದಿಂದ ಸ್ಥಾಪನೆಯಾದ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸುವ ಕಾರ್ಯ ಮುಂದಿನ ದಿನಗಳಲ್ಲಿ ಆಗಲಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿ ಸಹಕಾರ ಸಂಘದ ಆರ್ಥಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. ಕೂಟದ ನಿರ್ದೆಶಕ ಮದನ್ ಶೆಟ್ಟಿ ಮಾತನಾಡಿ ಕೂಟದ ಸದಸ್ಯರಿಗೆ ಅವರ ಅವಲಂಬಿತರಿಗೆ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂದುವರಿಯಲು…

Read More

ಮಡಿಕೇರಿ ಆ.28 NEWS DESK :  ಚೆಟ್ಟಳ್ಳಿ ವಿನಾಯಕ ಯುವಕ ಸಂಘದ ವತಿಯಿಂದ  ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅರ್ಚಕರಿಂದ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಮಹಾಂಗಳಾರತಿ ನಂತರ ಪ್ರಸಾದ ವಿತರಣೆ ನೆರವೇರಿತು.

Read More

ಮಡಿಕೇರಿ ಆ.28 NEWS DESK : ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪಂಜರಪೇಟೆಯಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು  ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ ಈ ಹಬ್ಬವು ನಾಡಿನ ಸರ್ವ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಹಾರೈಸಿದರು. ಈ ಸಂದರ್ಭ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.28 NEWS DESK : ಹಿರಿಯ ರಾಜಕರಣಿ ದಿ.ಎ.ಕೆ.ಸುಬ್ಬಯ್ಯ ಅವರ  6ನೇ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ತಮ್ಮ ತಂದೆಗೆ ಗೌರವ ನಮನ ಸಲ್ಲಿಸಿದರು. ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಬೆಳ್ಳೂರಿನಲ್ಲಿರುವ ತಮ್ಮ ತಂದೆಯವರ ಸಮಾಧಿ ಬಳಿಗೆ ತೆರಳಿದ ಶಾಸಕರು, ಪುಷ್ಪ ನಮನ ಸಲ್ಲಿಸಿ, ಗೌರವಾರ್ಪಣೆ ಸಲ್ಲಿಸಿದರು. ಈ ಸಂದರ್ಭ ಶಾಸಕರ ಹಿರಿಯ ಸಹೋದರರಾದ ಅಜ್ಜಿಕುಟ್ಟಿರ ನರೇನ್ ಎಸ್.ಕಾರ್ಯಪ್ಪ ದಂಪತಿಗಳು, ಶಾಸಕರ ತಾಯಿಯ ಹಿರಿಯ ಸಹೋದರಿ, ಅಜ್ಜಿಕುಟ್ಟಿರ ಕುಟುಂಬದ ಸದಸ್ಯರುಗಳು, ಶಾಸಕರ ಆಪ್ತರು, ಪಕ್ಷದ ಪ್ರಮುಖರು ಹಾಗು ಇತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.28 NEWS DESK : ವಿರಾಜಪೇಟೆಯ ಕುಂಜಲಗೇರಿ ನಿವಾಸಿಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಅಳವಡಿಸಿದ ನೂತನ ವಿದ್ಯುತ್ ಮಾರ್ಗ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಹಿಂದೆ ಕುಂಜಲಗೇರಿ ನಿವಾಸಿಗಳಿಗೆ/ಗ್ರಾಹಕರಿಗೆ ಪಾರಣೆ-ಬೊಳ್ಳುಮಾಡು 11 ಕೆವಿ HT ಫೀಡರಿನ ಮೂಲಕ ವಿದ್ಯುತ್ ಸರಬರಾಜು ಮಾಡಲಾಗಿತ್ತು. ಆದರೆ ಮಳೆಗಾಲದಲ್ಲಿ ಮತ್ತು ಪಾರಣೆಯಲ್ಲಿ-ಮೂರ್ನಾಡು 33/11 ಕೆವಿ ಉಪಕೇಂದ್ರದಲ್ಲಿ ಅಡಚಣೆಯಾದಾಗ, ಕುಂಜಲಗೇರಿ ಗ್ರಾಹಕರಿಗೆ ಹಲವು ದಿನಗಳ ಕಾಲ ವಿದ್ಯುತ್ ಸಂಪರ್ಕ ಇರುತ್ತಿರಲಿಲ್ಲ. ಇದನ್ನು ಮನಗಂಡ ಶಾಸಕರು ವಿರಾಜಪೇಟೆ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸಲು, ಬೊಳ್ಳುಮಾಡು ಸೇತುವೆಯಿಂದ ಕುಂಜಲಗೇರಿ ಮೊದಲ ಟ್ರಾನ್ಸ್ಫರ್ ವರೆಗೆ ಸುಮಾರು 3 ಕಿಲೋ ಮೀಟರ್ ಉದ್ದಕ್ಕೆ, ಇನ್ಸಲೇಟೆಡ್ ಕವರ್ಡ್ ಕಂಡಕ್ಟರ್ (Insulated Covered Conductor) ಆಳವಡಿಸುವುದರ ಮೂಲಕ ಹಾಗೂ 85 ಹೊಸ ವಿದ್ಯುತ್ ಕಂಬಗಳನ್ನು ಉಪಯೋಗಿಸಿ, ಸುಮಾರು  1 ಕೋಟಿ ವೆಚ್ಚದಲ್ಲಿ ವಿದ್ಯುತ್ ಪೂರೈಸಲು ಕ್ರಮ ಕೈಗೊಂಡಿದ್ದರು. ಸ್ಥಳೀಯ ಗ್ರಾಮಸ್ಥರು ಹಾಗೂ…

Read More

ಚೆಟ್ಟಳ್ಳಿ ಆ.28 NEWS DESK :  ಚೆಟ್ಟಳ್ಳಿ ವೀರಾಂಜನೇಯ ಯುವಕ ಸಂಘದ ವತಿಯಿಂದ 11ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪೂರ್ವಾಹ್ನ ಅರ್ಚಕರಿಂದ ಗಣಪತಿ ಹೋಮ ನಡೆಯಿತು. ನಂತರ ಗಣಪತಿಯ ಉತ್ಸವ ಮೂರ್ತಿಯನ್ನು ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಪ್ರತಿಷ್ಠಾಪಿಸಿ, ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.

Read More

ನಾಪೋಕ್ಲು ಆ.28 NEWS DESK : ಕೊಡಗು ಜಿಲ್ಲೆ ತಲತಲಾಂತರ ತನ್ನದೇ ಆದ ವಿಶೇಷ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ ಪರಂಪರೆಯನ್ನು ಹೊಂದಿದೆ. ಇವುಗಳಲ್ಲಿ ಸಾಮೂಹಿಕವಾಗಿ ಭಾಗವಹಿಸಿ ಆಚರಿಸಲ್ಪಡುವ ಕಾವೇರಿ ಸಂಕ್ರಮಣ, ಹುತ್ತರಿ(ಪುತ್ತರಿ) ಪ್ರಮುಖ ಹಬ್ಬಗಳಲ್ಲಿ ಕೈಲ್ ಪೊಳ್ದ್  ಒಂದು. ಇದನ್ನು  ನಾಲ್ಕು ನಾಡು ವ್ಯಾಪ್ತಿಯಲ್ಲಿ ಆ.28 ರಂದು ಈ ಹಬ್ಬವನ್ನು ಆಚರಿಸುವುದು ಸಾಂಪ್ರದಾಯಿಕವಾಗಿ ಬಂದಿದೆ. ಕೈಲ್ ಎಂದರೆ ಆಯುಧ. ಪೊಳ್ದ್ ಎಂದರೆ ಪೂಜೆ ಎಂದರ್ಥ. ಅಂತೆಯೇ “ಕೈಲ್ ಪೊಳ್ದ್ ” ಎಂದರೆ ಆಯಧ ಪೂಜೆ. ಹಿಂದೆ ಪ್ರಾಣಿಗಳ ಬೇಟೆಗೆ ಕೋವಿ ಕತ್ತಿ ವಿವಿಧ ಆಯುಧಗಳನ್ನು ಬಳಸುತ್ತಿದ್ದರು. ಆದರೆ ವ್ಯವಸಾಯದ ಸಂದರ್ಭದಲ್ಲಿ ಅಂದರೆ ಸಿಂಹ ಮಾಸದಲ್ಲಿ ಈ ಆಯುಧಗಳನ್ನು ಉಪಯೋಗಿಸುವುದಿಲ್ಲ. ಕೃಷಿ ಕಾರ್ಯ ಮುಗಿದ ನಂತರ  ಕೃಷಿ ಪರಿಕರಗಳಿಗೆ ಹಾಗೂ ಆಯುಧಗಳಿಗೆ ಪೂಜೆ. ಈ ಕೆಲವು ಆಯುಧಗಳನ್ನು ದೇವರ ಕೋಣೆ (ಕನ್ನಿಕೋಂಬರೆ) ಯಿಂದ ಹೊರ ತೆಗೆದು ಸಾಂಪ್ರದಾಯದೊಂದಿಗೆ ಶ್ರದ್ಧಾ ಭಕ್ತಿಯಿಂದ ಪೂಜಿಸುತ್ತಾರೆ. ಕೋವಿಯನ್ನು ಪೂಜಿಸಲು ಈ ಸಂದರ್ಭ ವಿಶೇಷವಾಗಿ ಕಾಡಿನಲ್ಲಿ ದೊರಕುವ…

Read More