ಲೇಖಕ: admin

ಮಡಿಕೇರಿ ಸೆ.15 NEWS DESK : ಜಿಲ್ಲೆಯಲ್ಲಿ ಕುಲಾಲ (ಕುಂಬಾರ) ಸಮುದಾಯದ ಮೊದಲ ಮಹಿಳಾ ವಕೀಲರೆಂಬ ಹೆಗ್ಗಳಿಕೆ ಪಾತ್ರರಾಗಿರುವ ಎ.ಮಂಜುಳಾ ಅವರನ್ನು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಗರದ ಕೋಟೆ ಮಹಿಳಾ ಸಮಾಜದಲ್ಲಿ ನಡೆದ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಎ.ಮಂಜುಳಾ ಅವರನ್ನು ಸನ್ಮಾನಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರು, ಕುಲಾಲ (ಕುಂಬಾರ) ಸಮುದಾಯದ ಎ.ಮಂಜುಳಾ ಅವರು ಸಮುದಾಯದಿಂದ ಮೊದಲ ವಕೀಲರಾಗಿ ಗುರುತಿಸಿಕೊಂಡಿರುವುದು ಹೆಮ್ಮೆ ಎನಿಸಿದೆ. ವಕೀಲ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಜನಾಂಗದ ಮಕ್ಕಳಿಗೆ ಮಾದರಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಜನಾಂಗ ಬಾಂಧವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳು ಲಭ್ಯವಾಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಶಿಕ್ಷಣವನ್ನು ಪಡೆಯಬೇಕು. ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಕರೆ ನೀಡಿದರು. ಕುಲಾಲ (ಕುಂಬಾರ)…

Read More

ನಾಪೋಕ್ಲು ಸೆ.15 NEWS DESK :  ಅರೆಭಾಷೆ ಸಂಸ್ಕೃತಿ, ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ, ಅವರು ಅವುಗಳನ್ನು ಅನುಸರಿಸಿ ಮುನ್ನಡೆಯುವಂತೆ ಹಿರಿಯರು ಪ್ರೇರಣೆ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕರೆ ನೀಡಿದ್ದಾರೆ. ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಕೈಲ್ ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಉದ್ಘಾಟಿಸಿ ಮಾತನಾಡಿ, ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಅರೆ ಭಾಷೆ ಬೆಳವಣಿಗೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಅಕಾಡೆಮಿಯಿಂದ ಸಾಧ್ಯವಾದಷ್ಟು ಅನುದಾನ ಕೊಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಮಾತನಾಡಿ, ನಮ್ಮ ಸಾಂಪ್ರದಾಯಿಕ ಆಚರಣೆಗಳನ್ನು ಕೇವಲ ಸಾಂಕೇತಿಕವಾಗಿ ಮಾತ್ರ ಆಚರಣೆ ಮಾಡದೆ, ಮನೆ ಮನೆಗಳಲ್ಲೂ ಆಚರಣೆ ಮಾಡಿದಾಗ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮೈಸೂರು ಗೌಡ…

Read More

ನಾಪೋಕ್ಲು ಸೆ.15 NEWS DESK : ಚೆನ್ನೈನಲ್ಲಿ ನಡೆದ ಇಂಡಿಯಾ – ಶ್ರೀಲಂಕಾ ಇನ್ವಿಟೇಶನ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಚೇರಂಬಾಣೆಯ ಭವಿತ್ ರೈ  ಕಟ್ಟಾಸ್ ನಲ್ಲಿ  ತೃತೀಯ ಸ್ಥಾನ ಹಾಗೂ ಫೈಟಿಂಗ್ ನಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾನೆ. ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಭವಿತ್ ರೈ, ಚೇರಂಬಾಣೆ ಗ್ರಾಮದ ನಿವಾಸಿ ಪ್ರದೀಪ್ ರೈ ಹಾಗೂ ಪ್ರಮೀಳಾ ರೈ ದಂಪತಿಯ ಪುತ್ರ. ಭವಿತ್ ರೈಹೆ ಶಿಹಾನ್ ಮಹಮ್ಮದ್ ಇಕ್ಬಾಲ್ ಮಾರ್ಗದರ್ಶನ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.15 NEWS DESK  : ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಿರಿಯ ಪ್ರಾಥಮಿಕ ಹಂತದ ಬಾಲಕ, ಬಾಲಕಿಯರು ಹಾಗೂ ಪ್ರೌಢಶಾಲಾ ಬಾಲಕಿಯರು ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಮೇಲಾಟದಲ್ಲಿ ಪ್ರೌಢಶಾಲಾ ಬಾಲಕ, ಬಾಲಕಿಯರು ಓಟದ ಸ್ಪರ್ಧೆ, ಭಾರದ ಗುಂಡು ಎಸೆತ, ಭರ್ಜಿ ಎಸೆತ, ತಟ್ಟೆ ಎಸೆತದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ಮಟ್ಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಬಾಲಕರ ಹಾಕಿ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ನಲ್ಲಿ ವಿಜೇತರಾಗಿ ಜಿಲ್ಲಾ ಹಂತಕ್ಕೆ ಪ್ರವೇಶಿಸಿದ್ದಾರೆ. ಪ್ರೌಢಶಾಲಾ ಬಾಲಕಿಯರು ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ನಲ್ಲಿ ವಿಜೇತರಾಗಿದ್ದಾರೆ. ಪ್ರಾಥಮಿಕ ಶಾಲಾ ಬಾಲಕಿಯರು ಶಟಲ್ ಬ್ಯಾಡ್ಮಿಂಟನ್ ನಲ್ಲಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದರೆ. ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಬಾಲಕಿಯರು ಹಾಗೂ ಬಾಲಕರು ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ನಲ್ಲಿ ದ್ವಿತೀಯ ಸ್ಥಾನವನ್ನು…

Read More

ಸುಂಟಿಕೊಪ್ಪ ಸೆ.15 NEWS DESK : ಐಗೂರು ಕೃಷಿ ಪತ್ತಿನ ಸಹಕಾರ ಸಂಘವು 1,12,07,041 ರೂಗಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಬಿ.ಶಿವಕುಮಾರ್ ತಿಳಿಸಿದರು. ಸಂಘದ ಸಭಾಂಗಣದಲ್ಲಿ ನಡೆದ 49ನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. 2024-25ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರಾ.ಕೃ.ಪ.ಸ.ಸಂಘಗಳ ಪೈಕಿ ಉತ್ತಮ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿ ಕೆಡಿಸಿಸಿ ಬ್ಯಾಂಕಿನ ಸದಸ್ಯ ಸಹಕಾರ ಸಂಘಗಳಿಗೆ ನೀಡುವ ಬಹುಮಾನ ಮತ್ತು ಪ್ರಶಸ್ತಿಗೆ ಆಯ್ಕೆಯಾಗಿ, ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಥಮ ಬಹುಮಾನ ಮತ್ತು ಪ್ರಶಸ್ತಿ ದೊರಕಿದೆ. ಅಪೆಕ್ಸ್ ಬ್ಯಾಂಕಿನಿಂದಲೂ ಉತ್ತಮ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿದಕ್ಕಾಗಿ ಬಹುಮಾನ ದೊರೆತ್ತಿದೆ ಎಂದು ಅವರು ಹೇಳಿದರು. ಸಂಘವು ಉತ್ತಮ ಸೇವೆ ನೀಡುವುದರೊಂದಿಗೆ ರೂ. 200 ಕೋಟಿಗಳಷ್ಟು ವ್ಯವಹಾರ ನಡೆಸಿ ರೂ. 1 ಕೋಟಿ 12 ಲಕ್ಷÀ್ಷ ನಿವ್ವಳ ಲಾಭಗಳಿಸಿದ್ದು ವರ್ಷದಿಂದ ವರ್ಷಕ್ಕೆ ಸಂಘ ಲಾಭದತ್ತ ದಾಪುಗಾಲು ಇಡುತ್ತಿದ್ದು, ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ. ಬರುವ ವರ್ಷ ಸುವರ್ಣ ಮಹೋತ್ಸವ ಆಚರಿಸಲಿದ್ದು, ಆ…

Read More

ಮಡಿಕೇರಿ ಸೆ.15 NEWS DESK : ಕೊಡಗಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಉನ್ನತ ಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯ, ವಿ.ಬಾಡಗದಲ್ಲಿ ಮೀಸಲಿಟ್ಟಿರುವ ಸ್ಥಳವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಅಜ್ಜಿಕುಟ್ಟಿರ ಎಸ್.ಪೆÇನ್ನಣ್ಣ ಅವರು ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್ ಅವರೊಂದಿಗೆ ವೀಕ್ಷಣೆ ಮಾಡಿದರು. ವೀಕ್ಷಣೆ ಹಾಗೂ ಪರಿಶೀಲನೆ ಸಂದರ್ಭದಲ್ಲಿ ಶಾಸಕರು ರಾಜ್ಯಸಭಾ ಸದಸ್ಯರಿಗೆ ಈ ಸ್ಥಳದಲ್ಲಿ ಉನ್ನತ ಮಟ್ಟದ ತರಬೇತಿ ವಸತಿ ನಿಲಯ ಸ್ಥಾಪಿಸಿದಲ್ಲಿ ರಾಜ್ಯದ ಹಾಗೂ ಅದರಲ್ಲೂ ವಿಶೇಷವಾಗಿ ಕೊಡಗಿನ ಕ್ರೀಡಾಪಟುಗಳಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಇಲ್ಲಿ ಕಲ್ಪಿಸಲು ಉದ್ದೇಶಿಸಿರುವ ಕ್ರೀಡಾ ಸವಲತ್ತುಗಳ ಬಗ್ಗೆ ವಿವರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರಾದ ಎ.ಎಸ್.ಪೆÇನ್ನಣ್ಣ£ ಅವರು ತಾವು ಈ ಹಿಂದೆ ಸಂಸದರೊಂದಿಗೆ ಬೇಡಿಕೆ ಇಟ್ಟ ಸಂದರ್ಭ ಅವರು ಕೊಡಗು ಜಿಲ್ಲೆಯ ಬಗ್ಗೆ ಹೆಮ್ಮೆಯಿಂದ ಕ್ರೀಡೆ ಮತ್ತು ಸೈನ್ಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುತ್ತಾ ಖಂಡಿತವಾಗಿಯೂ ತನ್ನ ಕೈಲಾದ ಅನುದಾನವನ್ನು ಒದಗಿಸುವ ಭರವಸೆ ನೀಡಿದ್ದರು. ಅದೇ ರೀತಿ…

Read More

ವಿರಾಜಪೇಟೆ ಸೆ.15 NEWS DESK : ದಂತ ವೈದ್ಯಕೀಯ ಕ್ಷೇತ್ರ ಹೊಸ ಆವಿಷ್ಕಾರಗಳನ್ನು ಹುಟ್ಟು ಹಾಕುತ್ತಿದೆ. ಈ ನಿಟ್ಟಿನಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ಪ್ರಯೋಗಗಳನ್ನು ಮಾಡುವುದರತ್ತ ಗಮನ ಹರಿಸಬೇಕು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಹೇಳಿದರು. ವಿರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆದ 2025ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ಉದ್ಘಾಟಿಸಿ, ವೈದ್ಯಕೀಯ ಅಧ್ಯಯನ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಪದವಿ ಮುಗಿಸಿದ ವಿದ್ಯಾರ್ಥಿಗಳು ಇನ್ಮುಂದೆ ವೈದ್ಯರಾಗಿ ಕಾರ್ಯನಿರ್ವಹಿಸಲಿದ್ದು, ಆತ್ಮ ವಿಶ್ವಾಸ ಮತ್ತು ಆತ್ಮಸ್ಥೈರ್ಯದ ಮೂಲಕ ಉದ್ಯೋಗ ಮಾಡಬೇಕಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಒತ್ತು ನೀಡಿ ಬಡ ಜನತೆಗೆ ಅನುಕೂಲ ಆಗುವ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಎಂದು ಕರೆ ನೀಡಿದರು. ಕಳೆದ 25 ವರ್ಷಗಳಲ್ಲಿ ಸಂಸ್ಥೆಯ ಅದ್ಭುತ ಪ್ರಗತಿಯನ್ನು ಶ್ಲಾಘಿಸಿದ ಅದರು ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆ ಎನ್ನುವ ಹೆಗ್ಗಳಿಕೆ…

Read More

ಸೋಮವಾರಪೇಟೆ ಸೆ.15 NEWS DESK : ಚೌಡ್ಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಟಿ.ಪರಮೇಶ್, ಪ್ರಸಕ್ತ ಸಾಲಿನಲ್ಲಿ ಸಂಘ 27,29,526 ರೂ.ಗಳ ಲಾಭಗಳಿಸಿದೆ. ಶೇ.5ರ ಲಾಭಂಶವನ್ನು ಸದಸ್ಯರಿಗೆ ನೀಡುವಂತೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು. ಅಪೂರ್ಣ ಷೇರು ಹೊಂದಿರುವ ಸದಸ್ಯರು ಸಂಘದ ಗುರುತಿನ ಚೀಟಿ ತಂದು ಸರಿಹೊಂದಿಸಿಕೊಳ್ಳಬೇಕು ಎಂದು ಹೇಳಿದರು. ಸಂಘದದಲ್ಲಿ 2731 ಸದಸ್ಯರಿದ್ದಾರೆ. 2024-25ನೇ ಸಾಲಿನಲ್ಲಿ 1360 ಸದಸ್ಯರಿಗೆ ಕೆಪಿಸಿ ಸಾಲ ನೀಡಲಾಗಿದೆ. 295 ಸದಸ್ಯರಿಗೆ ಅಡಮಾನ ನೀಡಲಾಗಿದೆ. ಪಿಗ್ಮಿ, ಚಿನ್ನಾಭರಣ ಸೇರಿದಂತೆ ಇನ್ನಿತರ ಸಾಲವನ್ನು ನೀಡಲಾಗಿದೆ. ಶೇ.95 ರಷ್ಟು ಸಾಲ ಮರುಪಾವತಿಯಾಗಿದೆ. ಸಾಲಗಾರಿ ನಿಗದಿತ ಸಮಯದಲ್ಲಿ ಸಾಲ ಮರುಪಾವತಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಉಪಾಧ್ಯಕ್ಷ ಎ.ಜೆ.ಕೃಷ್ಣಪ್ಪ, ನಿರ್ದೇಶಕರಾದ ಜಾನಕಿ ವೆಂಕಟೇಶ್, ಕೆ.ಪಿ.ಭಾನುಪ್ರಕಾಶ್, ವಿ.ಹರೀಶ್, ಪದ್ಮಾವತಿ, ಸಿ.ಎಸ್.ಧರ್ಮಪ್ಪ, ಎಚ್.ಆರ್.ಪೃಥ್ವಿ, ವಿ.ಜೆ.ಭಾರತಿ, ಸಿ.ಕೆ.ರಾಘವೇಂದ್ರ, ಡಿ.ಎಸ್.ಸುರೇಶ್, ಎಚ್.ಎಚ್.ಹೂವಯ್ಯ, ಸಿಇಒ ಹರೀಶ್ ಇದ್ದರು.

Read More

ಸೋಮವಾರಪೇಟೆ ಸೆ.15 NEWS DESK : ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಅಧ್ಯಕ್ಷ ಜಿ.ಬಿ.ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಸಂಘ 1.23ಕೋಟಿ ರೂ,.ಗಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ.20 ಲಾಭಾಂಶ ನೀಡಲಾಗುವುದು ಎಂದು ಹೇಳಿದರು. ಸಂಘದ ದುಡಿಯುವ ಬಂಡವಾಳ 89.62 ಕೋಟಿ ರೂ.ಗಳಾಗಿರುತ್ತದೆ. 5438 ಸದಸ್ಯರಿದ್ದು, ಸದಸ್ಯರು ಮತ್ತು ಗ್ರಾಹಕರಿಗೆ 99.87ಕೋಟಿ ರೂ.ಗಳ ಸಾಲ ವಿತರಿಸಲಾಗಿದೆ. ಸಾಲ ಮರುಪಾವತಿ ಶೇ.98.57ರಷ್ಟಿದೆ ಎಂದು ಹೇಳಿದರು. 2024-25ನೇ ಸಾಲಿನಲ್ಲಿ ಏಳನೆ, ಹತ್ತನೆ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಪಡೆದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ಹಾಗು ಸಂಘದ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಎಚ್.ಕೆ. ಚಂದ್ರಶೇಖರ್, ನಿದೇಶಕರುಗಳಾದ ರೂಪ ಸತೀಶ್, ಬಿ.ಎಂ.ಸುರೇಶ್, ಪಿ.ಕೆ.ರವಿ, ಬಿ.ಜೆ.ದೀಪಕ್, ಶುಭಾಶ್ ತಿಮ್ಮಯ್ಯ, ಬಿ.ಶಿವಪ್ಪ, ಬಿ.ಕೆ.ಉದಯಕುಮಾರ್, ಕೆ.ಕೆ.ಚಂದ್ರಿಕಾ, ಎಂ.ಈ.ದೇವರಾಜ್, ಕೆ.ಆರ್.ಕಿರಣ್, ಸಿಇಒ ರವೀಂದ್ರ ಇದ್ದರು.

Read More

ವಿರಾಜಪೇಟೆ ಸೆ.15 NEWS DESK : ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫಾ ಸಲ್ಲಲ್ಲಾಹು ಅಲೈವಸಲ್ಲಂ ಅವರ 1500 ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ವಿರಾಜಪೇಟೆಯಲ್ಲಿ ಬೃಹತ್ ಕಾಲ್ನಡಿಗೆ ಸಂದೇಶ ಜಾಥಾ ನಡೆಯಿತು. ವಿರಾಜಪೇಟೆ ಶಾಫಿ ಜುಮ್ಮಾ ಮಸೀದಿ ಹಾಗೂ ವಿರಾಜಪೇಟೆ ಗೌರಿ ಕೆರೆ ಬಳಿಯ ನಸ್ರತ್ತುಲ್ ಉಲುಂ ಮದ್ರಸ ಇವರ ಸಂಯುಕ್ತ ಆಶ್ರಯದಲ್ಲಿ ರೂಹೇ ಮದೀನ ಮಿಲಾದ್ ರ್ಯಾಲಿ ಇದರ ಅಂಗವಾಗಿ ನಡೆದ ಬೃಹತ್ ಜಾಥಾಕ್ಕೆ ಗೌರಿಕೆರೆ ಬಳಿಯ ನಸ್ರತ್ತುಲ್ ಉಲುಂ ಮದ್ರಸ ಬಳಿ ಚಾಲನೆ ನೀಡಲಾಯಿತು. ಬೃಹತ್ ಮಿಲಾದ್ ಸಂದೇಶ ಜಾಥದ ನೇತೃತ್ವವನ್ನು ಶಾಪಿ ಜುಮ್ಮಾ ಮಸೀದಿಯ ಅದ್ಯಕ್ಷರಾದ ಕೆ.ಪಿ.ರಷೀದ್ ಹಾಜಿ ವಹಿಸಿದ್ದರು. ಶಾದಲಿ ಶಾಫಿ ಜುಮ್ಮಾ ಮಸೀದಿ ಉಪಾಧ್ಯಕ್ಷ ಮಹಮ್ಮದ್ ರಾಫಿ, ಡೊನೆಟರ್ಸ್ ಚಾರಿಟಬಲ್ ಟ್ರಸ್ಟ್ ಅದ್ಯಕ್ಷರಾದ ಆಲಿರ ಪವಿಲ್ ಉಸ್ಮಾನ್, ಸದಸ್ಯರಾದ ಸುಬೇರ್, ಸಲಿಂ, ಅಬ್ದುಲ್ ರಜಾಕ್, ಮಿಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಸಿ.ಎಚ್ ಆಲಿ, ವಿರಾಜಪೇಟೆ ಶಾಫಿ ಜುಮ್ಮಾ ಮಸಿದಿ ಖತೀಬರಾದ ಆರಿಷ್ ಬಾಕವಿ ಅವರ…

Read More