ಲೇಖಕ: admin

ಮಡಿಕೇರಿ ಸೆ.15 NEWS DESK : ದಸರಾ ದಶಮಂಟಪ ಸಮಿತಿ ವತಿಯಿಂದ ನಗರದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದಸರಾ ಯಶಸ್ವಿಗಾಗಿ ಹಾಗೂ ಮಳೆಯಿಂದ ಯಾವುದೇ ರೀತಿ ತೊಂದರೆ ಭಾರದಂತೆ ಸಮಿತಿ ಪ್ರಮುಖರು ಹಾಗೂ ಸದಸ್ಯರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ NEWS DESK ಸೆ.14 : ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ವಿಜೇತ ತಂಡಗಳಿಗೆ ನಸುಕಿನಲ್ಲಿ ಬಹುಮಾನ ನೀಡುವ ಸ್ಥಳವನ್ನು ಗಾಂಧಿ ಮೈದಾನದಿಂದ ಬನ್ನಿಮಂಟಪದ ಎ.ವಿ ಶಾಲೆಯ ಬಳಿಗೆ ಸ್ಥಳಾಂತರ ಮಾಡಬೇಕು ಎಂದು ಮಡಿಕೇರಿ ದಸರಾ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರು ಹಾಗೂ ಪುರಸಭೆಯ ಮಾಜಿ ಸದಸ್ಯ ಎಂ.ಪಿ.ಕೃಷ್ಣರಾಜು ಒತ್ತಾಯಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದಶಮಂಟಪಗಳ ಪೈಕಿ ಹಲವು ಮಂಟಪಗಳು ಬನ್ನಿಮಂಟಪಕ್ಕೆ ಬರುತ್ತಿಲ್ಲ. ಸಂಪ್ರದಾಯ ನಿಯಮಬದ್ಧವಾಗಿ ಪಾಲನೆಯಾಗುತ್ತಿಲ್ಲ. ಅಲ್ಲದೆ ಗಾಂಧಿ ಮೈದಾನದ ಆಸುಪಾಸಿನಲ್ಲೇ ಅಪಾರ ಜನದಟ್ಟಣೆ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಬಹುಮಾನ ಘೋಷಿಸುವ ಸ್ಥಳವನ್ನು ಬದಲಾವಣೆ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಮುಖವಾಗಿ ಬನ್ನಿಮಂಟಪದ ವ್ಯಾಪ್ತಿಯ ಎ.ವಿ. ಶಾಲೆಯ ಬಳಿಯೇ ಬಹುಮಾನ ಘೋಷಣೆ ಮತ್ತು ಬಹುಮಾನ ನೀಡುವ ಕಾರ್ಯಕ್ರಮ ನಡೆದರೆ ಅನಿವಾರ್ಯವಾಗಿ ಎಲ್ಲಾ 10 ಮಂಟಪಗಳು ಇಲ್ಲಿಗೆ ಬರುತ್ತವೆ. ಆ ಮೂಲಕ ಸಂಪ್ರದಾಯ ಕೂಡ ಪಾಲನೆಯಾಗುತ್ತದೆ ಮತ್ತು ಜನಸಂದಣಿ ಉಂಟಾಗುವುದನ್ನೂ ತಪ್ಪಿಸಬಹುದಾಗಿದೆ. ಈ ಕುರಿತು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು…

Read More

ಮಡಿಕೇರಿ NEWS DESK ಸೆ.14 : ನೂರಾರು ವರ್ಷಗಳ ಇತಿಹಾಸವಿರುವ ಮಡಿಕೇರಿ ದಸರಾ ಜನೋತ್ಸವಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿದೆ. ದಸರಾ ಹಬ್ಬದ ಪ್ರಮುಖ ಧಾರ್ಮಿಕ ಆಚರಣೆಯಾದ ಕರಗಗಳ ನಗರ ಸಂಚಾರ ಮುಂದಿನ ವಾರದಿಂದ ಆರಂಭವಾಗುತ್ತದೆ. ಆದರೆ ನಗರದ ಎಲ್ಲಾ ರಸ್ತೆಗಳು ಹೊಂಡ, ಗುಂಡಿಗಳಿಂದ ಕೂಡಿರುವುದರಿಂದ ದಸರಾ ಸಮಿತಿಗಳು ಬೇಸರ ವ್ಯಕ್ತಪಡಿಸಿವೆ. ಪ್ರತಿವರ್ಷ ಮಡಿಕೇರಿ ಮಹೋತ್ಸವ ಆರಂಭವಾಗುವುದೇ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ. ಸುಮಾರು ಒಂಭತ್ತು ದಿನಗಳ ನಗರ ಸಂಚಾರದ ಮೂಲಕ ಕರಗಗಳು ಭಕ್ತರಿಂದ ಪೂಜೆಯನ್ನು ಸ್ವೀಕರಿಸುತ್ತವೆ. 10 ನೇ ದಿನವಾದ ವಿಜಯದಶಮಿಯಂದು ಹತ್ತು ದೇವಾಲಯಗಳ ದಶಮಂಟಪಗಳ ಶೋಭಾಯಾತ್ರೆ ವೈಭವದಿಂದ ಸಾಗುತ್ತದೆ. ಆದರೆ ಮಡಿಕೇರಿ ನಗರದ ರಸ್ತೆಗಳು ಕರಗಗಳ ನಗರ ಸಂಚಾರ ಮತ್ತು ದಶಮಂಟಪಗಳ ಶೋಭಾಯಾತ್ರೆಗೆ ಯೋಗ್ಯವಾಗಿಲ್ಲ. ಕಳೆದ ಮೂರು ತಿಂಗಳ ಕಾಲ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ನಗರಸಭಾ ವ್ಯಾಪ್ತಿಯ ಎಲ್ಲಾ 23 ವಾರ್ಡ್ಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೊಂಡ, ಗುಂಡಿಗಳಿಂದ ಕೂಡಿದೆ. ನಗರದ ಹೃದಯ ಭಾಗದ…

Read More

ಮಡಿಕೇರಿ NEWS DESK ಸೆ.14 : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, 2025 ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ತನಕ ಒಟ್ಟು 15 ದಿನ ನಡೆಯಲಿರುವ ರಾಜ್ಯ ಸರ್ಕಾರದ ಜಾತಿವಾರು ಗಣತಿಯ ಜಾತಿ-ಭಾಷೆ-ಧರ್ಮ ಕಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆಪ್ಟೆಂಬರ್ 18 ರಂದು ಮೂರ್ನಾಡಿನಲ್ಲಿ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು…

Read More

ಗೋಣಿಕೊಪ್ಪ NEWS DESK ಸೆ.13 : 37ನೇ ವರ್ಷದ ಸ್ತಬ್ಧ ಚಿತ್ರ ಮೆರವಣಿಗೆಗೆ ನಾಡಹಬ್ಬ ದಸರಾ ಸಮಿತಿ, ಪೂರ್ವ ತಯಾರಿ ಮಾಡಿಕೊಂಡಿದೆೆ ಎಂದು ನಾಡ ಹಬ್ಬ ದಸರಾ ಸಮಿತಿ ಅಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ತಿಳಿಸಿದ್ದಾರೆ. ಸಮಿತಿ ಕಚೇರಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ, ಪೌರಾಣಿಕ, ವಿಭಾಗಗಳಲ್ಲಿ ಸ್ತಬ್ಧ ಚಿತ್ರ ಮೆರವಣಿಗೆ ಆಕರ್ಷಣೆ ಆಗಲಿದೆ. ದಸರಾ ಆಚರಣೆಯ ಪ್ರಮುಖವಾಗಿ ಸ್ಥಬ್ಧ ಚಿತ್ರ ಗಮನ ಸೆಳೆಯುತ್ತಿರುವುದು ವಿಶಿಷ್ಟ. ಈ ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಸ್ಥಬ್ಧ ಚಿತ್ರಗಳ ಮಾದರಿ ತಯಾರಿಗಳನ್ನು ಮಾಡಿ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದಾರೆ. ಕೆಲ ವರ್ಷಗಳ ಹಿಂದೆ 32ಕ್ಕೂ ಹೆಚ್ಚು ಸ್ಥಬ್ಧ ಚಿತ್ರ ಭಾಗವಹಿಸಿ ಗಮನ ಸೆಳೆದಿದ್ದವು. ತದನಂತರ 25ಕ್ಕೂ ಹೆಚ್ಚು ಸ್ಥಬ್ಧ ಚಿತ್ರಗಳ ಮೆರವಣಿಗೆ ಆಕರ್ಷಣೆಯನ್ನು ಕಂಡಿದೆ. ಈ ವರ್ಷ ವಿಶೇಷವಾಗಿ ನಾಡಹಬ್ಬ ದಸರಾ ಸಮಿತಿಯ ಸ್ಥಬ್ಧಚಿತ್ರ ಮೆರವಣಿಗೆಯನ್ನು ಜನಕರ್ಷಣೆಯಾಗಿ ಮಾಡಲು, ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳು ಮಾದರಿ ತಯಾರಿಕೆಗಳ ಮೂಲಕ ಸ್ಥಬ್ಧಚಿತ್ರ ಮೆರವಣಿಗೆಯಲ್ಲಿ…

Read More

ಗೋಣಿಕೊಪ್ಪ NEWS DESK ಸೆ.13 : ಮಕ್ಕಳ ಕಲಿಕೆಯ ಆಸಕ್ತಿಯನ್ನು ಉತ್ತೇಜಿಸಲು ಎ.ಐ ತಂತ್ರಜ್ಞಾನದ ಬಳಕೆಯಿಂದ ಸಾಧ್ಯವಾಗವಲ್ಲದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಮತ್ತು ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಕೇಂದ್ರ, ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆದ ಎಲ್.ಎಂ.ಸಿ ಸ್ವಯಂ ಚಾಲನೆ ಮತ್ತು ಎ.ಐ ಕುರಿತು ಶಿಕ್ಷಕರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ತಂತ್ರಜ್ಞಾನದ ಮಾದರಿಗಳಿಂದ ಮಕ್ಕಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಬಹುದು ಆ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯೋಗ ಕಾರ್ಯಗಳು ಉತ್ತಮ ಬೆಳವಣಿಗೆಯಾಗಿದೆ ಎಂದರು.‌ ಗ್ರಾಮ ಪಂಚಾಯತಿ ಸದಸ್ಯ ಬಿಎನ್ ಪ್ರಕಾಶ್ ಮಾತನಾಡಿ, ಮುಂದುವರೆಯುತ್ತಿರುವ ದೇಶದ ಪ್ರಗತಿಯಾಗಿ ಶಿಕ್ಷಣದ ಕಲಿಕೆಯ ಮಾರ್ಗವನ್ನು ಬದಲಾಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ತಂತ್ರಜ್ಞಾನಗಳ ಬಳಕೆಗೆ ಮುಂದಾಗುವುದು ಉತ್ತಮ ಎಂದು ಸಲಹೆ ನೀಡಿದರು. ಶಾಲೆ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ…

Read More

ಗೋಣಿಕೊಪ್ಪ NEWS DESK ಸೆ.13 : ಜೈ ಭೀಮ್ ಯುವಕ ಸಂಘ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಗೌರವಾರ್ಥ ಧ್ವಜಸ್ತಂಭ ನಿರ್ಮಿಸಲು ಗ್ರಾಮ ಪಂಚಾಯಿತಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದ ಬಲಭಾಗದಲ್ಲಿ ಧ್ವಜಸ್ತಂಭ ಹಾಕುವ ಮೂಲಕ ಡಾ. ಬಿಆರ್ ಅಂಬೇಡ್ಕರ್ ರವರ ಚಿಂತನ ಮಂಥನ, ಗೌರವಾರ್ಥ ಕಾರ್ಯಕ್ರಮಗಳು ಈ ಧ್ವಜ ಕಂಬದಡಿಯಲ್ಲಿ ನಡೆಸಲು ಸಮಿತಿ ನಿರ್ಧರಿಸಲಾಗಿದೆ. ಈ ಉದ್ದೇಶದೊಂದಿಗೆ ಪಂಚಾಯಿತಿ ಧ್ವಜಸ್ತಂಭ ನೆಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಯುವಕ ಸಂಘದ ಸಂಚಾಲಕ ಕುಮಾರಪ್ಪ ಹಾಗೂ ಮಧು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಸೆ.13 : ಇದೇ ಅಕ್ಟೋಬರ್‌ 17 ರಂದು ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಕುರಿತು ಪೂರ್ವಭಾವಿ ಸಭೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್.‌ಭೋಸರಾಜು  ಅವರ  ಅಧ್ಯಕ್ಷತೆಯಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಹಳೆಮುಡಿ ಕಟ್ಟಡದಲ್ಲಿ ನಡೆಯಲಿದೆ. ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು ಕೋರಿದ್ದಾರೆ.

Read More

ಸುಂಟಿಕೊಪ್ಪ NEWS DESK  ಸೆ.13 : ಕೂಡಿಗೆಯ ಏಂಜಲ್ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಂಟಿಕೊಪ್ಪದ ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಯೋಮಿತಿ 14ರ 60ಕೆಜಿ ಒಳಗಿನ ವಿಭಾಗದಲ್ಲಿ ಸ್ವಸ್ತಿಕ್ ಪ್ರಥಮ ಸ್ಥಾನ ಹಾಗೂ60ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಡಿ.ಎಂ. ಮನೀಶ್ ಪ್ರಥಮ ಸ್ಥಾನ ಹಾಗೂ 17ರ ವಯೋಮಿತಿ ಬಾಲಕರ 62 ಕೆಜಿ ಯೊಳಗಿನ ವಿಭಾಗದಲ್ಲಿ ಎಂ.ಎಸ್. ದಿಗಂತ್ ಈ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದ 62 ಕೆಜಿಯೊಳಗಿನ ವಿಭಾಗದಲ್ಲಿ ಸಂತ ಮೇರಿ ಶಾಲೆಯ ಆರ್.ಜೀವಿಕ ಪ್ರಥಮ 48 ಕೆಜಿ ವಿಭಾಗದಲ್ಲಿ ಯಾನಚಂಗಪ್ಪ ಪ್ರಥಮ, 44 ಕೆಜಿ ಯೊಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರೆ, ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯ ಅಮೂಲ್ಯ 52 ಕೆ.ಜಿ ಯೊಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ಸಾರೆ. ಕಾಲೇಜು ವಿಭಾಗದ 19ರ ವಯೋಮಿತಿಯ ಕರಾಟೆ ಸ್ಪರ್ಧೆಯಲ್ಲಿ ಕುಶಾಲನಗರ ವಿವೇಕಾನಂದ ಕಾಲೇಜಿನ ಹರಿಪ್ರಿಯಾ 48ಕೆ.ಜಿಯೊಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಎಲ್ಲ ಸ್ಪರ್ಧಿಗಳು…

Read More

ಮಡಿಕೇರಿ ಸೆ.13 NEWS DESK : ವಿಕಲಚೇತನರ ವಿವಿಧೋದ್ದೇಶ ಸಹಕಾರ ಸಂಘದ  ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಬಿ.ಎಂ.ತಿರುಮಲೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ವಿಶೇಷಚೇತನರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಘದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಹಾಗೂ ಸದಸ್ಯತ್ವ ಹೆಚ್ಚಿಸಲು ತೀರ್ಮಾನಿಸಲಾಯಿತು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ವಿಶೇಷ ಚೇತನರ ಮನೆ ಬಾಗಿಲಿಗೆ ತಲುಪಿಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.

Read More