ಸೋಮವಾರಪೇಟೆ ಆ.28 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಗಾಂಧಿ ಪ್ರತಿಮೆಯಿಂದ ಮೆರವಣಿಗೆ ಹೊರಟ ನೂರಾರು ಪ್ರತಿಭಟನಾಕಾರರು ಕ್ಷೇತ್ರದ ಪರವಾಗಿ ಜಯಘೋಷ ಮೊಳಗಿಸಿದರು. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಧಿಕ್ಕಾರ ಕೂಗಿ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಜೇಸಿ ವೇದಿಕೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮುಳ್ಳೂರು ಮಠದ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದುಗಳ ಬಗ್ಗೆ ಗೌರವಿದ್ದರೆ, ಕನ್ನಡಿಗರ ಮತ್ತು ಜನರ ಭಾವನೆಗಳಿಗೆ ಬೆಲೆ ಕೊಡುವ ಮನಸ್ಥಿತಿ ಇದ್ದರೆ ಶ್ರೀ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ಐಟಿ ತನಿಖೆಯನ್ನು ನಿಲ್ಲಿಸಬೇಕು. ಕೂಡಲೇ ಕೇಂದ್ರಿಯ ತನಿಖಾದಳದಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…
ಲೇಖಕ: admin
ಕುಶಾಲನಗರ ಆ.26 NEWS DESK : ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಕೊಡಗು ಪ್ರಾದೇಶಿಕ ಕಛೇರಿ, ಮಡಿಕೇರಿ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.,) ಶಾಲೆಯ ನೇಸರ ಇಕೋ ಕ್ಲಬ್ ಸಹಯೋಗದೊಂದಿಗೆ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಆಂದೋಲನ: 2025 ನಡೆಸಲಾಯಿತು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸುವಂತೆ ಮಾಹಿತಿ ನೀಡಿದರು. ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಸ್ಥಾಪನೆ ಮಾಡುವಂತೆ ಮತ್ತು ರಾಸಾಯನಿಕ ಬಣ್ಣದ ಹಾಗೂ ಪಿ.ಓ.ಪಿ.ಗಣೇಶ ಮೂರ್ತಿಯನ್ನು ತ್ಯಜಿಸುವ ಕುರಿತು ಜನಜಾಗೃತಿ ಮೂಡಿಸುವಂತೆ ಪ್ರೇಮಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಜೇಡಿಮಣ್ಣಿನಿಂದ…
ಮೂರ್ನಾಡು ಆ.26 NEWS DESK : ಮೂರ್ನಾಡು ಪಟ್ಟಣ ಮತ್ತು ವಿವಿಧೆಡೆ ಆ.27ರಂದು ವಿವಿಧ ಸಂಘ ಸಂಸ್ಥೆಗಳಿಂದ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ 34ನೇ ವರ್ಷದಗೌರಿ-ಗಣೇಶೋತ್ಸವದ ಗಣೇಶನ ಉತ್ಸವ ಮೂರ್ತಿಯನ್ನು ಬೆ.10 ಗಂಟೆಗೆ ಪ್ರತಿಷ್ಠಾಪಿಸಲಾಗುವುದು. ಮೂರ್ನಾಡುಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ 33ನೇ ವರ್ಷದ ಗೌರಿ-ಗಣೇಶೋತ್ಸವ ಗಾಂಧಿನಗರದ ಶ್ರೀರಾಮ ಮಂದಿರದಲ್ಲಿನಡೆಯಲಿದೆ. ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಮೂರ್ನಾಡು ಪಟ್ಟಣದ ಟಿ ಜಂಕ್ಷನ್ನಲ್ಲಿ 31ನೇ ವರ್ಷದ ಗೌರಿ-ಗಣೇಶೋತ್ಸವ, ಗಜೇಂದ್ರ ಯುವ ಶಕ್ತಿ ಸಂಘದ ವತಿಯಿಂದ 6ನೇ ವರ್ಷದಗೌರಿ-ಗಣೇಶೋತ್ಸವ ನಾಪೋಕ್ಲು ರಸ್ತೆಯ ಹನುಮಾನ್ಟ್ರೇಡರ್ಸ್ನಲ್ಲಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್ ವತಿಯಿಂದ 2ನೇ ವರ್ಷದಗೌರಿ-ಗಣೇಶೋತ್ಸವ ಅಯ್ಯಪ್ಪ ದೇವಸ್ಥಾನದ ವಾಣಿಜ್ಯ ಕಟ್ಟಡದಲ್ಲಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 17ನೇ ವರ್ಷದಗೌರಿ-ಗಣೇಶೋತ್ಸವ ನಡೆಯಲಿದೆ. ಆ.27 ರಿಂದ ಆ.2ರವರೆಗೆ ಪ್ರತಿಷ್ಠಾಪಿಸಲಾದಗಣೇಶ ಮೂರ್ತಿಗಳನ್ನು ಪೂಜಾ ವಿಧಿ-ವಿಧಾನಗಳ ಮೂಲಕ 7 ದಿನಗಳವರೆಗೆ ಶ್ರದ್ಧಾಭಕ್ತಿಯಿಂದ ಪೂಜಿಸಿ, ಆ.2ರಂದು ಅಲಂಕೃತ ಮಂಟಪದಲ್ಲಿ…
ಮಡಿಕೇರಿ ಆ.26 NEWS DESK : ಜಿಲ್ಲೆಯ ವಿವಿಧ ಕಡೆಗಳಲ್ಲಿ ಆ.27 ರಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 27 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಾಕತ್ತೂರು ವ್ಯಾಪ್ತಿಯ 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಬೆಟ್ಟಗೇರಿ ಗ್ರಾಮ ಪಂಚಾಯಿತಿ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 31 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಾಪೋಕ್ಲು ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 2 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮೂರ್ನಾಡು ನಗರದ ಸುತ್ತಮುತ್ತಲಿನ 8 ಕಿ.ಮೀ. ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 4 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಚೆಟ್ಟಳ್ಳಿ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ಹಾಗೂ ಸೆಪ್ಟೆಂಬರ್, 7 ರಂದು…
ಮಡಿಕೇರಿ ಆ.26 NEWS DESK : ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು. ಗೃಹಲಕ್ಷ್ಮಿ ಯೋಜನೆ: ಶಿಶು ಅಭಿವೃದ್ದಿ ಅಧಿಕಾರಿ ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 31,811 ಪಡಿತರ ಚೀಟಿ ಇದ್ದು, ಗೃಹಲಕ್ಷ್ಮಿ ಯೋಜನೆಯಡಿ 31,489 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದರು. 322 ಪಡಿತರ ಚೀಟಿ ನೋಂದಣಿಗೆ ಬಾಕಿ ಇದ್ದು, ಜೂನ್ ಮಾಹೆಗೆ 30,539 ಪಡಿತರ ಚೀಟಿ ಫಲಾನುಭವಿಗಳಿಗೆ ಶಿಶು ಅಭಿವೃದ್ದಿ ಅಧಿಕಾರಿ ಮಡಿಕೇರಿಯವರಿಂದ ನೇರವಾಗಿ ಡಿಬಿಟಿ ಮುಖಾಂತರ ಹಣ ಮಂಜೂರಾಗಿದೆ ಎಂದು ತಿಳಿಸಿದರು. ಒಟ್ಟು ಹಣ ಪಾವತಿಯಾಗಲು ಬಾಕಿ ಇರುವ ಫಲಾನುಭವಿಗಳ ಸಂಖ್ಯೆ 13764, ಐ.ಟಿ/ಜಿ.ಎಸ್.ಟಿ ಪಾವತಿದಾರರೆಂದು 784 ಅರ್ಜಿಗಳು ತಿರಸ್ಕೃತಗೊಂಡಿದ್ದು, NPCI, e-KYC ಮಾಡಿಸಲು ಬಾಕಿ ಉಳಿದಿರುವ ಫಲಾನುಭವಿಗಳ ಸಂಖ್ಯೆ 166, ಮರಣ ನೋಂದಣಿ ಮಾಡಿಸಿದ ಫಲಾನುಭವಿಗಳ ಸಂಖ್ಯೆ 231 ಹಾಗೂ ತಿಂಗಳ ಅಂತ್ಯಕ್ಕೆ ಸಿಡಿಪಿಒ…
ಮಡಿಕೇರಿ ಆ.26 NEWS DESK : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬದ ಪ್ರಯುಕ್ತ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು, ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹಾಗೂ ತಾಯಿ ಹೊನ್ನಮ್ಮ ಕೆರೆಗೆ ಬಾಗಿನ ಸಮರ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿ ವರ್ಷ ಭಕ್ತಾಧಿಗಳು ಆಗಮಿಸುವುದು ವಿಶೇಷ ಎಂದರು. ತಾಯಿ ಹೊನ್ನಮ್ಮನ ಕೆರೆಗೆ ನವ ದಂಪತಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುತ್ತಾರೆ. ಗೌರಿ ಹಬ್ಬ ಆಚರಣೆಯಿಂದ ಕುಟುಂಬದವರೆಲ್ಲರೂ ಒಂದೆಡೆ ಸೇರುವುದು ವಿಶೇಷವಾಗಿದೆ ಎಂದರು. ಈ ಬಾರಿ ಒಳ್ಳೆಯ ಮಳೆಯಾಗಿದ್ದು, ಉತ್ತಮ ಬೆಳೆಯಾಗಲಿದೆ. ಹೆಚ್ಚಿನ ಮಳೆಯಿಂದಾಗಿ ಕೆಲವು ಕಡೆ ತೊಂದರೆಯೂ ಸಹ ಆಗಿದೆ ಎಂದು ಶಾಸಕರು ನುಡಿದರು. ಪ್ರಮುಖರಾದ ಕೆ.ಪಿ.ಚಂದ್ರಕಲಾ, ಲೋಕೇಶ್, ದೇವಾಲಯದ ಆಡಳಿತ ಮಂಡಳಿ…
ಮಡಿಕೇರಿ ಆ.26 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಸಲುವಾಗಿ ರಾಜ್ಯದಲ್ಲಿರುವ ಜಾತಿ ಮತ್ತು ಉಪಜಾತಿಗಳ ಹೆಸರಿನ ಪಟ್ಟಿಯನ್ನು ದಿನಾಂಕ 22-08-2025 ರಂದು ರಾಜ್ಯಮಟ್ಟದ ಪತ್ರಿಕೆಯಲ್ಲಿ ಪ್ರಕಟಿಸಿದೆ. ಕೊಡಗು ಜಿಲ್ಲೆಯಲ್ಲಿರುವ ಜಾತಿ-ಉಪಜಾತಿಗಳ ಹೆಸರು ಪ್ರಕಟಿತ ಪಟ್ಟಿಯಲ್ಲಿದ್ದು ಅದರಲ್ಲಿ ಏನಾದರು ತಪ್ಪಾಗಿ ನಮೂದಾಗಿದ್ದಲ್ಲಿ ಜಾತಿಗಳು ಬಿಟ್ಟು ಹೋಗಿದ್ದಲ್ಲಿ ಪ್ರಕಟನೆಗೊಂಡ 7 ದಿನಗೊಳಗಾಗಿ ಸಾರ್ವಜನಿಕರು/ ಸಂಘ ಸಂಸ್ಥೆಗಳು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಂ 16, 2ನೇ ಮಹಡಿ ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯ, ವಸಂತ ನಗರ ಬೆಂಗಳೂರು, 5660052 ಇಲ್ಲಿಗೆ ಪತ್ರ ಮುಖೇನ ಅಥವಾ kscbcb@gmail.com ಇಲ್ಲಿಗೆ ಇಮೇಲ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಪತ್ರಿಕೆಯಲ್ಲಿ ಪ್ರಕಟಣೆಗೊಂಡ ಜಾತಿಗಳ ಪಟ್ಟಿಯಲ್ಲಿ ಜಿಲ್ಲೆಯ ಜಾತಿ-ಉಪಜಾತಿಗಳ ಹೆಸರು ಬಿಟ್ಟುಹೋಗಿದ್ದಲ್ಲಿ ಕೂಡಲೇ ಲಿಖಿತ ಮನವಿಯನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಲು ಅವಕಾಶವಿದೆ ಎಂದು ಅಹಿಂದ ಒಕ್ಕೂಟ ತಿಳಿಸಿದೆ.
ಗೋಣಿಕೊಪ್ಪ ಆ.26 NEWS DESK : ಶ್ರೀ ಕಾವೇರಿ ದಸರಾ ಸಮಿತಿಯ 47ನೇ ವರ್ಷದ ದಸರಾ ಜನೋತ್ಸವದ ಆಚರಣೆಗೆ ಆ.30ರಂದು ನೂತನ ಸಮಿತಿ ರಚಿಸಲಾಗುವುದು ಎಂದು ಅಧ್ಯಕ್ಷ ರಾಮಕೃಷ್ಣ ಮಾಹಿತಿ ನೀಡಿದ್ದಾರೆ. ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕರಲ್ಲಿಗೆ ನಿಯೋಗ ತೆರಳಿ ಶಾಸಕರ ಸಲಹೆ ಸೂಚನೆಯಂತೆ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕಳೆದ 21ರಂದು ನಡೆದ ಗ್ರಾಮ ಪಂಚಾಯಿತಿಯ ಸಾಮಾನ್ಯ ನಡುವಳಿಯಲ್ಲಿ ಈಗಾಗಲೇ ಸಮಿತಿಯ ಬೈಲಾ ನಿಯಮದಂತೆ ಪಂಚಾಯಿತಿ ಸದಸ್ಯರ ಒಮ್ಮತದ ನಿರ್ಧಾರದಂತೆ ದಸರಾ ಆಚರಣೆಯ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರು, ಪಂಚಾಯಿತಿ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿಗಳ ಸಮ್ಮುಖದಲ್ಲಿ ಈ ಆಯ್ಕೆ ನಡೆದಿದೆ. ಇದು ದೇವರ ಸೇವೆಗೆ ಸಿಕ್ಕಿದ ಪುಣ್ಯವಾಗಿದೆ. ಈ ಕಾರ್ಯವನ್ನು ಧಾರ್ಮಿಕ ವಿಚಾರಕ್ಕೆ ಒಳಪಟ್ಟಂತೆ, ಶಾಸಕರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ರಾಮಕೃಷ್ಣ ಮಾಹಿತಿ ಹಂಚಿಕೊಂಡಿದ್ದಾರೆ.
ನಾಪೋಕ್ಲು ಆ.26 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ನಾಪೋಕ್ಲು ಸರಕಾರಿ ಪದವಿ ಕಾಲೇಜಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಕಾಲೇಜಿನ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡಗಂಟಿಗಳನ್ನು ಕಡಿದು, ಪೇಪರ್, ಪ್ಲಾಸ್ಟಿಕ್ಗಳನ್ನು ಘಟಕದ ಪದಾಧಿಕಾರಿಗಳು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ನಾಪೋಕ್ಲು ಮಡಿಕೇರಿ ತಾಲ್ಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ದಿವ್ಯ ಮಂದಪ್ಪ, ಸದಸ್ಯರಾದ ಉಮಾಲಕ್ಷ್ಮಿ, ಚಂದ್ರಕಲಾ, ಶಂಕರ, ದಿಲಿಶ್,,ರಮ್ಯಾ, ಪೊನ್ನಮ್ಮ, ಸುನಿತಾ, ಶರವಣ, ಮಾಯಿಲಪ್ಪ, ನಾರಾಯಣ, ಆಶಾಲತಾ ಉಪಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಬೇಬ, ಸಬಾ, ಕಾಲೇಜು ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು, ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.26 NEWS DESK : ವಿ.ಬಾಡಗ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕ್ರೀಡೆಗಳ ತರಬೇತಿ ಕೇಂದ್ರದ ಕಾಮಗಾರಿ ಸ್ಥಳವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿ, ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಸ್ಥಳೀಯ ಕ್ರೀಡಾ ಪ್ರತಿಭೆಗಳ ಅನುಕೂಲಕ್ಕೆಂದು ಕಾಮಗಾರಿಯನ್ನು ಕೈಗೊಂಡಿದ್ದು, ಗುಣಮಟ್ಟದ ಕ್ರೀಡಾಂಗಣ ಅತಿ ಶೀಘ್ರದಲ್ಲಿ ಲಭ್ಯವಾಗುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜ್, ವಿರಾಜಪೇಟೆ ಹಾಗೂ ಪೊನಂಪೇಟೆ ತಹಶೀಲ್ದಾರ್ ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಪಕ್ಷದ ಪ್ರಮುಖರಾದ ಕಂಜಿತಂಡ ಪೂವಣ್ಣ, ಗಿಣಿ ಮೊಣ್ಣಪ್ಪ, ಕೊಂಗಂಡ ಕಾಶಿ ಕಾರ್ಯಪ್ಪ, ಗಿರೀಶ್ ಮುದ್ದಯ್ಯ, ದವನ್ ದೇವಯ್ಯ, ಪ್ರಕಾಶ್ ಪೂವಯ್ಯ,ಕುಂದಚೀರ ಮಂಜು ದೇವಯ್ಯ, ಅಯೂಬ್, ಮೊದಲಾದವರು ಉಪಸ್ಥಿತರಿದ್ದರು.






