ಲೇಖಕ: admin

ಮಡಿಕೇರಿ NEWS DESK ಸೆ.13 : ಹಾವುಗಳೆಂದ ತಕ್ಷಣ ಆತಂಕಪಡುವ ಅಗತ್ಯವಿಲ್ಲ, ಶಾಂತ ಸ್ವಭಾವದ ಏಕಾಂತ ಬಯಸುವ, ಹಗೆತನವಿಲ್ಲದ ನಾಚಿಕೆ ಸ್ವಭಾವದ ಹಾವುಗಳು ರೈತಸ್ನೇಹಿಯಾಗಿವೆ. ಇವುಗಳನ್ನು ಕೊಲ್ಲದೆ ನೈಸರ್ಗಿಕ ಜೈವಿಕ ಸಮತೋಲನ ಕಾಪಾಡಲು ನಾವು ಸಹಕಾರಿಯಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರರವರು ಕರೆ ನೀಡಿದ್ದಾರೆ. ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಅಳುವಾರದಲ್ಲಿರುವ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ‘ವಿಷಪೂರಿತ ಹಾವುಗಳು ಮತ್ತು ಗುರುತಿಸುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು’ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು. ಹಾವು ಕಚ್ಚಿದ ಗುರುತು ಮೈಮೇಲೆ ಕಂಡಾಗ ಶಾಂತವಾಗಿ ಪ್ರಥಮ ಚಿಕೆತ್ಸೆಯೊಂದಿಗೆ ಆಧುನಿಕ ಸೌಲಭ್ಯದ ಚಿಕಿತ್ಸೆಯನ್ನು ಸಕಾಲದಲ್ಲಿ ಪಡೆಯಿರಿ ಎಂದು ಸಲಹೆ ನೀಡಿದರು. ವಿಷಪೂರಿತ ಹಾವುಗಳ ಬಗ್ಗೆ ಮಾಹಿತಿ, ಹಾವುಗಳನ್ನು ಹಿಡಿಯುವ ಸಲಕರಣೆಗಳು, ಹಾವುಗಳು ಬರದಂತೆ ತಡೆಯುವುದು, ಆಹಾರ, ಪ್ರಥಮ ಚಿಕಿತ್ಸೆ, ಅಪನಂಬಿಕೆಗಳು, ರೈತಸ್ನೇಹಿ ಹಾವುಗಳು, ಇತ್ಯಾದಿ ವಿಷಯದ ಬಗ್ಗೆ ತಜ್ಞರು ನೀಡುವಂತಹ ಮಾಹಿತಿಯನ್ನು ಈ…

Read More

ಮಡಿಕೇರಿ NEWS DESK ಸೆ.13 : ಕನ್ನಡ ಸಾರಸ್ವತ ಲೋಕದ ಮಿನುಗು ತಾರೆ ‘ಕೊಡಗಿನ ಗೌರಮ್ಮ’ ಹೆಸರಿನಲ್ಲಿ ಗೋಕರ್ಣದ ಹವ್ಯಕ ಮಹಾಮಂಡಲದಲ್ಲಿ ಸ್ಥಾಪಿಸಲಾಗಿರುವ ಸಣ್ಣಕತೆಗಳ ದತ್ತಿ ಪ್ರಶಸ್ತಿ, ಈ ಬಾರಿ ಕೊಡಗು ಮೂಲದ ಲೇಖಕಿ ಭಾರತಿ ಕೊಡ್ವಕೆರೆ ಅವರ ಮಡಿಗೇರಿದೆ. ಕೊಡಗಿನ ವಿರಾಜಪೇಟೆ ಸಮೀಪದ ಕೋಟೆಕೊಪ್ಪಲಿನ ಮೂಟೇರಿ ಆರ್. ಗಂಗಾಧರ ಮತ್ತು ಎಂ.ಜಿ.ಸಾವಿತ್ರಿಯವರ ಪುತ್ರಿ, ಕಾಸರಗೋಡಿನ ಕೇಶವ ಪ್ರಸಾದ್ ಅವರ ಪತ್ನಿ ಭಾರತಿ ಕೊಡ್ವಕೆರೆ ಅವರು ಬರೆದಿರುವ ಸಣ್ಣ ಕಥೆ ‘ದಿನಚರಿ ಪುಸ್ತಕ ರಹಸ್ಯ’ಕ್ಕೆ ಹವ್ಯಕ ಮಹಾಮಂಡಲದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ದೊರಕಿದೆ. *ಮಹಿಳಾ ಬರಹಗಾರರ ಉತ್ತೇಜನಕ್ಕೆ ದತ್ತಿ* ಹವ್ಯಕ ಮಹಾ ಮಂಡಲದಲ್ಲಿ ಕೊಡಗಿನ ಗೌರಮ್ಮ ಅವರ ದತ್ತಿಯನ್ನು ಯುವ ಬರಹಗಾರರ ಉತ್ತೇಜನಕ್ಕಾಗಿ ಸ್ಥಾಪಿಸಲಾಗಿದೆ.ಈ ದತ್ತಿ ನಿಧಿಯ ಮೂಲಕ ವರ್ಷಂಪ್ರತಿ ಹವ್ಯಕ ಮಹಿಳಾ ಬರಹಗಾರರಿಗೆ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದ್ದು, ಈ ಬಾರಿಯ ಪ್ರಶಸ್ತಿ ಭಾರತಿ ಕೊಡ್ವಕೆರೆ ಅವರಿಗೆ ಸಂದಿದೆ. ಎಳವೆಯಲ್ಲ್ಲೆ ಸಾಹಿತ್ಯದತ್ತ ಅತೀವ ಆಸಕ್ತಿ ಹೊಂದಿದ್ದ ಭಾರತಿ ಕೊಡ್ವಕೆರೆ ಅವರು,…

Read More

ಮೈಸೂರು ಸೆ.13 NEWS DESK :  ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜೆಎಸ್ಎಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿ ಗೃಹ ನಿರ್ಮಾಣ ಸಂಘವನ್ನು ಸ್ಥಾಪಿಸಿದ್ದಾರೆ. ಸಂಘದ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡಿದ್ದಾರೆ. ಸಂಘವು ಹಿಂದೆ ಜಮೀನು ಕೊಂಡ ದರದಲ್ಲಿಯೇ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಸಹಕಾರ ಸಂಘಗಳ ಇತಿಹಾಸದಲ್ಲಿಯೇ ಪ್ರಥಮ ಎಂದು ತಿಳಿಸಿದ ಮುಖ್ಯಮಂತ್ರಿಗಳು ಸಂಘದ ಸದಸ್ಯರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.…

Read More

ಶನಿವಾರಸಂತೆ ಸೆ.13 NEWS DESK :  ಉತ್ತಮ ಆರೋಗ್ಯವನ್ನು ಆನುಭವಿಸಲು ನಮ್ಮ ಆಹಾರ ಪದ್ದತಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಸಂಸ್ಕರಿಸಿದ ಆಹಾರವನ್ನು ಬದಿಗಟ್ಟಿ ಪೌಷ್ಟಿಕ, ಆರೋಗ್ಯಕರ ಆಹಾರವನ್ನು ರೂಢಿಸಿಕೊಳ್ಳುವುದು ತುಂಬಾ ಅತ್ಯಗತ್ಯ ಎಂದು ಹಂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಧಾ ಈರೇಶ್ ಹೇಳಿದರು. ಹಂಡ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿತ್ತೂರು ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ತಾಯಿ ಮತ್ತು ಮಗುವಿಗೆ ತೊಂದರೆಯಾಗದಿರಲೂ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ. ಇದರ ಬಗ್ಗೆ ಮಹಿಳೆಯರು ಹೆಚ್ಚಿನ ಗಮನಹರಿಸುವಂತೆ ಸಲಹೆ ನೀಡಿದರು. ಪ್ರತಿ ತಿಂಗಳು ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ವಿತರಿಸುವ ದವಸ ಧಾನ್ಯಗಳಿರುವ ಆಹಾರ ಕಿಟ್‌ಗಳನ್ನು ಸರಿಯಾದ ಸಮಯಕ್ಕೆ ಪಡೆದುಕೊಂಡು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.  ಪ್ರತಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಪ್ರತಿ ನಿತ್ಯ ಬರಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಅನೇಕ ಸೌಲಭ್ಯಗಳು ದೊರಕುತ್ತದೆ ಎಂದರು.  ಗ್ರಾಮ ಪಂಚಾಯಿತಿ ಅಭಿವೃದ್ಧಿ…

Read More

ಮಡಿಕೇರಿ ಸೆ.13 NEWS DESK : ರಾಜ್ಯ ಸರಕಾರದ ವತಿಯಿಂದ ಸೆ.22 ರಿಂದ ಆರಂಭಗೊಳ್ಳುವ ಜಾತಿ ಜನಗಣತಿ ಸಂದರ್ಭ ಕೊಡವರು ಧರ್ಮ ಮತ್ತು ಜಾತಿಯನ್ನು ‘ಕೊಡವರು’ ಎಂದೇ ನಮೂದಿಸುವಂತೆ ಅಖಿಲ ಕೊಡವ ಸಮಾಜ ಮಾಡಿರುವ ಮನವಿ ಅಧ್ಯಕ್ಷರ ವೈಯುಕ್ತಿಕ ನಿಲುವಾಗಿದ್ದು, ಇವರ ಹೇಳಿಕೆಯಿಂದ ವಿನಾಕಾರಣ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ನಿರ್ದೇಶಕ ಚೆಪ್ಪುಡೀರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಧರ್ಮದ ಹೇಳಿಕೆ ಅಖಿಲ ಕೊಡವ ಸಮಾಜದ ಅಧ್ಯಕ್ಷರ ವೈಯುಕ್ತಿಕ ಹೇಳಿಕೆಯಾಗಿದ್ದು, ಅದು ಎಲ್ಲಾ ಕೊಡವರ ನಿಲುವು ಅಲ್ಲ. ಕೊಡವ ಎಂಬುವುದು ಒಂದು ಜಾತಿಯೇ ಹೊರತು, ಅದು ಒಂದು ಧರ್ಮವಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಷ್ಟು ವರ್ಷ ಯಾವುದೇ ಗೊಂದಲಗಳಿರಲಿಲ್ಲ, ಕೊಡವರು ಹಿಂದೂ ಧರ್ಮದ ಮೂಲಕವೇ ಗುರುತಿಸಿಕೊಳ್ಳುತ್ತಿದ್ದರು. ಹಿರಿಯರು ಕೊಡವರಿಗೆ ಯಾವ ಧರ್ಮಕ್ಕೆ ಸೇರಿದವರೆಂದು ಈಗಾಗಲೇ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದಕ್ಕೆ ಪೂರಕವಾದ ದಾಖಲೆ ಕೂಡ ಇದ್ದು, ಹಿರಿಯರು ದಡ್ಡರಲ್ಲ ಎಂದು ಪ್ರತಿಪಾದಿಸಿದ್ದಾರೆ. ಅಖಿಲ…

Read More

ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ಸೆ.19 ರಂದು ಕಿವುಡರ ಕ್ರೀಡಾಕೂಟ “ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್” ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಗೋಣಿಕೊಪ್ಪಲಿನ ಕರುಂಬಯ್ಯ ಲರ್ನಿಂಗ್ ಅಂಡ್ ಸ್ಪೋಡ್ರ್ಸ್ ಅಕಾಡೆಮಿಯಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷರಾದ ಗೌರು ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಗೌರವ ಅತಿಥಿಗಳಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕೆಎಎಲ್‍ಎಸ್ ಪ್ರಾಂಶುಪಾಲರಾದ ಗೌರಮ್ಮ ನಾಚಪ್ಪ, ಬೆಂಗಳೂರು ಕೊಡವ ಸಮಾಜದ ಪ್ರಧಾನ ಕಾರ್ಯದರ್ಶಿ ಲೆಫ್ಟಿನೆಂಟ್ ಕರ್ನಲ್ ಸಿ.ವಿವೇಕ್ ಮುತ್ತಣ್ಣ, ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಸಿ.ಪಿ.ಬೋಪಣ್ಣ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ ರೈ, ಮೈಸೂರು ಜಿಲ್ಲಾ ಕಿವುಡರ ಸಂಘದ…

Read More

ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಮಹಾಬೋಧಿ ಪತ್ತಿನ ಸಹಕಾರ ಸಂಘದ 10ನೇ ಮಹಾಸಭೆಯು ಸೆ.14 ರಂದು ಸಂಘದ ಅಧ್ಯಕ್ಷರಾದ ಎಸ್.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಹ್ನ 10.30 ಗಂಟೆಗೆ ನಗರದ ಬಾಲ ಭವನದಲ್ಲಿ ಸಭೆ ನಡೆಯಲಿದ್ದು, ಮಹಾಸಭೆಯಲ್ಲಿ ನಿರ್ದೇಶಕರುಗಳು ಹಾಗೂ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಕ್ಕಿ ಮನವಿ ಮಾಡಿದ್ದಾರೆ. ಸಭೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು.

Read More

ಹಾಸನ ಸೆ.13 NEWS DESK : ಹಾಸನ ಗಣೇಶ ಮೆರವಣಿಗೆಯಲ್ಲಿ ಜರುಗಿದ ದುರಂತದಲ್ಲಿ ಗಾಯಗೊಂಡು HIMS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಹಾಸನ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಭೇಟಿಯಾಗಿ ಸಾಂತ್ವನ ಹೇಳಿದರು. ಅಲ್ಲದೆ, ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸುವ ಭರವಸೆ ನೀಡಿದರು.

Read More

ಮಡಿಕೇರಿ ಸೆ.13 NEWS DESK : ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಇಂದಿಗೂ ಆದಿ ದ್ರಾವಿಡ ಸಮಾಜದ ಜನಾಂಗವನ್ನು ಕಡೆಗಣಿಸುತ್ತಿರುವ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಆದಿ ದ್ರಾವಿಡ ಸಮಾಜದ ರಾಜ್ಯಾಧ್ಯಕ್ಷ ಎಚ್. ಎಂ.ಸೋಮಪ್ಪ ಎಚ್ಚರಿಕೆ ನೀಡಿದ್ದಾರೆ. ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಕೊಡಗು ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮಾಲ್ದಾರೆ ಘಟಕದ ನೇತೃತ್ವದಲ್ಲಿ ಆಯೋಜಿತ ಸಮುದಾಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆದಿ ದ್ರಾವಿಡ ಜನಾಂಗ ದಕ್ಷಿಣ ಕನ್ನಡ ಜಿಲ್ಲೆಯ ಮೂಲ ನಿವಾಸಿಗಳಾಗಿದ್ದು, ಅಲ್ಲಿನ ಜಾತಿ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿ ಆದಿ ದ್ರಾವಿಡ ಎಂದು ನಮೂದಿಸಲಾಗಿದೆ. ಹಲವು ವರ್ಷಗಳ ಹಿಂದೆ ಅಲ್ಲಿಂದ ಕೂಲಿ ಕೆಲಸಕ್ಕಾಗಿ ಕೊಡಗು, ಚಿಕ್ಕಮಂಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಆದಿ ದ್ರಾವಿಡ ಜನಾಂಗದ ಕುಟುಂಬ ನೆಲೆಸಿದ್ದಾರೆಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಮಂದಿ ನೆಲೆಸಿದ್ದಾರೆ. ಸರ್ಕಾರ ಇತರ ಜಿಲ್ಲೆಗಳಲ್ಲಿ ವಾಸವಾಗಿರುವ ಆದಿ ದ್ರಾವಿಡ…

Read More

ಸೋಮವಾರಪೇಟೆ ಸೆ.13 NEWS DESK : ಕೃಷಿ ಸಂಶೋಧನಾ ಅರ್ಹತಾ ಪರೀಕ್ಷೆಯಲ್ಲಿ ಸೋಮವಾರಪೇಟೆಯ ಬಿ.ಎಂ.ಸೃಜನ್ ದೇಶಕ್ಕೆ 34ನೇ ರ‍್ಯಾಂಕ್ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೈಕಿ 18ನೇ ರ‍್ಯಾಂಕ್ ಪಡೆದು ಸಾಧನೆ ತೋರಿದ್ದಾರೆ. ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯಕ್ಕೆ ಒಳಪಡುವ ಮೈಸೂರು ತೋಟಗಾರಿಕಾ ಕಾಲೇಜಿನಲ್ಲಿ ಬಿ.ಎಸ್.ಸಿ (ಹಾನರ್ಸ)ವ್ಯಾಸಾಂಗ ಮಾಡಿದ್ದ ಶ್ರೇಯಸ್, ಕಳೆದ ಜುಲೈ ತಿಂಗಳಿನಲ್ಲಿ ನಡೆದ ಕೃಷಿ ಸಂಶೋದನಾ ಸ್ನಾತಕೋತ್ತರ ಅರ್ಹತಾ ಪರೀಕ್ಷೆಯಲ್ಲಿ ದೇಶದ ಒಟ್ಟು 42 ಸಾವಿರ ವಿದ್ಯಾರ್ಥಿಗಳ ಪೈಕಿ ಸೃಜನ್ 34ನೇ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಲ್ಲಿ 18ನೇ ರ‍್ಯಾಂಕ್  ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ಸೋಮವಾರಪೇಟೆ ಪಟ್ಟಣದ ಬಸ್ಸ್ ಚಾಲಕ ಮೋನಪ್ಪ ಹಾಗೂ ಶ್ರೇಯಾ ಬಟ್ಟೆ ಅಂಗಡಿ ಮಾಲೀಕರು ಹಾಗೂ ಸೋಮವಾರಪೇಟೆ ಮಂಡಲ ಬಿಜೆಪಿ ಕಾರ್ಯದರ್ಶಿ ಇಂದಿರಾ ದಂಪತಿಗಳ ಪುತ್ರ. ಸೃಜನ್ ಸ್ಥಳೀಯ ಸಾಂದೀಪನಿ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

Read More