ಲೇಖಕ: admin

ಮಡಿಕೇರಿ ಸೆ.13 NEWS DESK : ಮಡಿಕೇರಿ ತಾಲ್ಲೂಕಿನ ಗಾಳಿಬೀಡುವಿನಿಂದ ಕೋಳಿಗೂಡು ಪುನರ್ವಸತಿ ಬಡಾವಣೆಯವರೆಗೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಪ್ರತಿದಿನ ಬೆಳಿಗ್ಗೆ 8.30 ಮತ್ತು ಸಂಜೆ 4.45 ಗಂಟೆಗೆ ಕೋಳಿಗೂಡು ಪುನರ್ವಸತಿ ಬಡಾವಣೆಗೆ ಬಸ್ ತಲುಪಲಿದೆ. ಬಸ್ ಸಂಚಾರವನ್ನು ಆರಂಭಿಸಿದ ಹಿನ್ನೆಲೆ ಮಡಿಕೇರಿ ಬಸ್ ಡಿಪೋ ವ್ಯವಸ್ಥಾಪಕರು ಹಾಗೂ ಚಾಲಕರನ್ನು ಕೋಳಿಗೂಡು ಪುನರ್ವಸತಿ ಬಡಾವಣೆಯಲ್ಲಿ ಗ್ರಾಮಸ್ಥರು ಅಭಿನಂದಿಸಿ ಸ್ವಾಗತಿಸಿದರು. ನಂತರ ಗಾಳಿಬೀಡು ಪುನರ್ವಸತಿ ಸಂಘದ ಅಧ್ಯಕ್ಷ ರವಿ ಅಪ್ಪುಕುಟ್ಟನ್, ಉಪಾಧ್ಯಕ್ಷ ಸ್ಟೀವನ್ ಡಿಸೋಜ, ತಾಜ್, ಕಾರ್ಯದರ್ಶಿ ಅಮ್ಮಿ, ಖಜಾಂಚಿ ಸುಮಿತ್ರ ಹಾಗೂ ಬಡಾವಣೆ ನಿವಾಸಿಗಳು ಬಸ್ ಗೆ ಪೂಜೆ ಸಲ್ಲಿಸಿದರು. ಮನವಿಗೆ ತಕ್ಷಣ ಸ್ಪಂದಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಕಾರ್ಯವೈಖರಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಶಾಸಕರು ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭ ಗಾಳಿಬೀಡು ಪುನರ್ವಸತಿ ಸಂಘದಿಂದ ಬಡಾವಣೆಗೆ ಬಸ್ ಸೌಲಭ್ಯ ಕಲ್ಪಿಸುವಂತೆ ನಿವಾಸಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಶೀಘ್ರ…

Read More

ಕಾರ್ಕಳ ಸೆ.13 NEWS DESK : ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕಾರ್ಕಳ ತಾಲೂಕು ಸಂಯುಕ್ತ ಆಶ್ರಯದಲ್ಲಿ  ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ” ನಡೆಯಲಿದೆ. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲೇ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ‘ ಎಂದು ಕಿವಿಮಾತುಗಳನ್ನು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ‘ ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ‘ ಎಂಬ ಸತ್ಯವಾಕ್ಯವನ್ನು ತಮ್ಮ ನಿರರ್ಗಳ ನುಡಿಗಳೊಂದಿಗೆ ತಿಳಿಸಿಕೊಟ್ಟರು. ಅಲ್ಲದೇ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ.ಗಣನಾಥ ಶೆಟ್ಟಿ,  ‘ ಜಾಗೃತಿಯ ಬೆಳಕು ಮೂಡಿದಾಗಲೇ ಸಮಾಜ ಆರೋಗ್ಯ, ಅರಿವು ಮತ್ತು ಪ್ರಗತಿಯನ್ನು ಕಾಣುತ್ತದೆ…

Read More

ಚೆಟ್ಟಳ್ಳಿ ಸೆ.13 NEWS DESK : ಅಂತರಾಷ್ಟ್ರೀಯ ಮಟ್ಟದ ರ‍್ಯಾಲಿಯಲ್ಲಿ ವಿಜೇತರಾದ ಕೊಂಗೆಟ್ಟಿರ ಬೋಪಯ್ಯ ಅವರನ್ನು ಚೆಟ್ಟಳ್ಳಿಯ ಅವರ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಕ್ಲಬ್ ನ ಅಧ್ಯಕ್ಷರಾದ ಮುಳ್ಳಂಡ ಶೋಭಾ ಚಂಗಪ್ಪ ಹಾಗೂ ಪದಾಧಿಕಾರಿಗಳು ಬೋಪಯ್ಯ  ಬೋಪಯ್ಯ ಅವರಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿದರೆ, ಹಿರಿಯ ಸದಸ್ಯರಾದ ಪುತ್ತರಿರ ಪ್ರೇಮಾ ಭೀಮಯ್ಯ,  ಐಚೆಟ್ಟೀರ ಚೋಂದಮ್ಮ ಹೂಗುಚ್ಚ‌ ನೀಡಿ ಗೌರವಿಸಿದರು. ಕೊಂಗೇಟೀರ ಸಂಗೀತ ಅಚ್ಚಪ್ಪ ಕಿರುಪರಿಚಯಿಸಿದರು. ಹಿರಿಯರಾದ ಕೊಂಗೇಟಿರ ಕುಸುಮ‌ ಪೊನ್ನಪ್ಪ ಹಾಗೂ ಕೊಂಗೇಟಿರ ವೀಣಾ ಅಪ್ಪಣ್ಣ ರ‍್ಯಾಲಿ ಸಾಧನೆಯ ಬಗ್ಗೆ ಪ್ರಶಂಸಿದರು. ಕೊಂಗೇಟೀರ ಬೋಪಯ್ಯ ಮಾತನಾಡಿ, ಸಣ್ಣ ವಯಸ್ಸಿನಲ್ಲೇ ರ‍್ಯಾಲಿಯಲ್ಲಿ ಸಾಧನೆ ಮಾಡಬೇಕೆಂಬ ಗುರಿಹೊಂದಿದ್ದು, ಹಲವು ರ‍್ಯಾಲಿಯಲ್ಲಿ‌ ಸಾಧನೆಯನ್ನು ತೋರಿದ್ದೇನೆ. ತನ್ನ ತಾಯಿ ಹಾಗೂ ಪತ್ನಿ ನನ್ನ ಸಾಧನೆಗೆ ಸಂಪೂರ್ಣ ಸಹಕಾರ‌ ನೀಡುತ್ತಿರುವುದರಿಂದ ಈ ಬಾರಿಯ ಅಂತರ ರಾಷ್ಟ್ರೀಯ ರ‍್ಯಾಲಿಯಲ್ಲಿ ಸಾಧನೆಗೈಯಲ್ಲು ಸಾಧ್ಯ ವಾಗಿದೆಂದರು. ಶೋಭ ಚಂಗಪ್ಪ ಸ್ವಾಗತಿಸಿದರು. ಮನೆಪಂಡ ಅಂಜಲಿ…

Read More

ಕಣಿವೆ ಸೆ.13 NEWS DESK : ಪೌಷ್ಟಿಕ ಸಮತೋಲನ ಆಹಾರ ಸೇವನೆಯಿಂದ ಗರ್ಭಿಣಿ ಮತ್ತು ಮಗು ಇಬ್ಬರು ಆರೋಗ್ಯವಂತರಾಗಿರಲು ಸಾಧ್ಯ ಎಂದು ಕೂಡಿಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಿಕಾ ಮೂರ್ತಿ ತಿಳಿಸಿದರು. ಪಟ್ಟಣದ ಗುಮ್ಮನಕೊಲ್ಲಿಯ ವಿನಾಯಕ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆ ಆಶ್ರಯದಲ್ಲಿ ಗರ್ಭಿಣಿ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಸೀಮಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಗರ್ಭಿಣಿಯರ ದೈಹಿಕ ಆರೋಗ್ಯದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸುತ್ತಿದ್ದು, ಮಾನಸಿಕ ಆರೋಗ್ಯದ ಕಡೆಗೂ ಅತಿ ಹೆಚ್ಚಿನ ಗಮನ ಕೊಡಬೇಕಿದೆ. ಗರ್ಭಿಣಿಯರು ಧನಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು. ಶಾಂತಿಯಿಂದ ಧ್ಯಾನ, ಶ್ಲೋಕ ಹೇಳಿಕೊಂಡಲ್ಲಿ ಜನಿಸುವ ಮಗುವಿನ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ತಾಯಿಯ ಮನಸ್ಸು ಚಿಂತೆ, ದುಗುಡ, ದುಃಖ, ಹಿಂಸೆಯಿಂದ ಕೂಡಿದ್ದರೆ ಮಗುವಿನ ಮನಸ್ಥಿತಿಯೂ ಹಾಗೇ ಇರುತ್ತದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿರುವಾಗ ತಾಯಂದಿರ ವಿಚಾರಧಾರೆ ಉತ್ತಮವಾಗಿರಬೇಕು ಎಂದರು.  ಗುಮ್ಮನಕೊಲ್ಲಿ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಮಮತಾ…

Read More

ನಾಪೋಕ್ಲು ಸೆ.13 NEWS DESK : ಮುರ್ನಾಡು ಮಾರುತಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸುವ ಸಲುವಾಗಿ “ಗುರುವಂದನಾ” ಕಾರ್ಯಕ್ರಮವನ್ನು ಆಯೋಜಿಸಿದ್ದರು. ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸ್ಪಂದನಾ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಅಧ್ಯಾಪನ ವೃತ್ತಿ, ಮಾರ್ಗದರ್ಶನ ಅವರಿಗಿದ್ದ ತಾತ್ವಿಕ ಚಿಂತನೆ ಇಂದಿನ ಶಿಕ್ಷಕರ ಸ್ಫೂರ್ತಿಯ ಸೆಲೆಯಾಗಿದೆ. ಗುರುಗಳ ವಿನಃ ಯಾವ ವಿದ್ಯಾರ್ಥಿಯೂ ಪರಿಪೂರ್ಣನಾಗಲಾರ ಎಂದರು. ವಿದ್ಯಾರ್ಥಿನಿ ಮಯೂರಿ ಮಾತನಾಡಿ ಶಿಕ್ಷಕರ ಕರ್ತವ್ಯ ನಿಷ್ಠೆ, ನಿಷ್ಪಕ್ಷಪಾತ ಮನೋಭಾವ, ಶ್ರದ್ಧೆ, ಶಿಸ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಕಿರುಕಾಣಿಕೆಯನ್ನು ನೀಡಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮುಂಡಂಡ ಕೆ.ಅಪ್ಪಚ್ಚು, ಉಪಾಧ್ಯಕ್ಷರಾದ ಚೇಂದ್ರಿಮಾಡ ಗಿಲ್ ಸೋಮಯ್ಯ, ಗೌರವ ಕಾರ್ಯದರ್ಶಿ ಬಡುವಂಡ ಎಂ.ಅರುಣ್ ಅಪ್ಪಚ್ಚು, ಉಪಪ್ರಾಂಶುಪಾಲರು, ಶಿಕ್ಷಕವೃಂದ, ಶಿಕ್ಷಕೇತರ ಸಿಬ್ಬಂದಿಗಳ ಉಪಸ್ಥಿತರಿದ್ದರು. ಸೌಜನ್ಯ ತಂಡದವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಆರ್.ಪ್ರಕೃತಿ ಸ್ವಾಗತಿಸಿದರು, ಹಬೀಬ ನಿರೂಪಿಸಿ…

Read More

ನಾಪೋಕ್ಲು ಸೆ.13 NEWS DESK : ಸುನ್ನೀ ಮುಹಿಯದ್ದೀನ್ ಜುಮಾ ಮಸೀದಿ ವತಿಯಿಂದ ಇಂದಿನಿಂದ ಮೂರು ದಿನ ಆಯೋಜಿಸಿರುವ “ಮದದೇ ಮದೀನ” ಮಿಲಾದ್ ಬೃಹತ್ ಸಮಾವೇಶ ಕಾರ್ಯಕ್ರಮದ ಧ್ವಜಾರೋಹಣವನ್ನು ಮಸೀದಿ ಆವರಣದಲ್ಲಿ ನೆರವೇರಿಸಲಾಯಿತು. ಜುಮುಅ ನಮಾಜ್ ನಂತರ ಜಮಾಯತ್ ಅಧ್ಯಕ್ಷರಾದ ಎಂ.ಹೆಚ್.ಅಬ್ದುಲ್ ರಹಮಾನ್ ಅವರು ಧ್ವಜಾರೋಹನವನ್ನು ನೆರವೇರಿಸಿ, ಖತೀಬ್ ರದ ಹಾಫಿಳ್ ಶೌಕತಲಿ ಪ್ರಾರ್ಥನೆಯನ್ನು ನೆರವೇರಿಸಿದರು. ಈ ಸಂದರ್ಭ ಕೆ.ಎ.ಇಸ್ಮಾಯಿಲ್, ಪಿ.ಎ.ಮನ್ಸೂರ್ ಆಲಿ, ಪಿ.ಎಂ.ಯುನಸ್, ಅಬ್ದುಲ್ ಅಜೀಜ್ ಪಿ.ಎಂ.ಇಸ್ಮಾಯಿಲ್ ಸಖಾಫಿ ಕುಂಡಂಗೇರಿ, ಸಲೀಂ ಹ್ಯಾರಿಸ್, ಶಂಸು ಕಾರೆಕಾಡು, ಅರಫತ್ ಪಿ.ಎಂ, ಹುಸೇನಾರು ತಿರೋವತ್, ಹಮೀದ್ ಸಿ.ಹೆಚ್, ಜಬ್ಬರ್, ಆಸಿಫ್ ಆಲಿ, ಫಾರೂಕ್, ನೌಫಲ್, ಅಬೂಬಕರ್ ಎಂ.ಎಂ, ಅಶ್ರಫ್ ಅಲಿ, ಪಿ.ಎಂ.ಬಜರುದ್ದೀನ್ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಮಾತನಾಡಿದರು. ಮೌಲಿದ್ ಬುರ್ದು, ದಫ್ ಮತ್ತು ಧಾರ್ಮಿಕ ಪ್ರಭಾಷಣ ಸಮಾರಂಭ ಮೀಲಾದ್ ಸಮಿತಿಯ ಅಧ್ಯಕ್ಷರಾದ ಅರಫತ್ ಪಿ.ಎಂ. ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಖತೀಬ್ ಖಲೀಲ್ ಸಖಾಫಿ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟನೆ…

Read More

ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಮಹಿಳಾ ಬ್ಯಾಂಕ್ 2024-25ನೇ ಸಾಲಿನಲ್ಲಿ ರೂ.9.45 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸೆ.18 ರಂದು ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷೆ ಅರವಿಂದ ಅಣ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕೊಡವ ಸಮಾಜದಲ್ಲಿ ಮಹಾಸಭೆ ನಡೆಯಲಿದ್ದು, ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಜಿಲ್ಲೆಯ ಏಕೈಕ ಮಹಿಳಾ ಬ್ಯಾಂಕ್ ಇದಾಗಿದ್ದು, 1997ರಲ್ಲಿ ಸ್ಥಾಪನೆ ಮಾಡಲಾಯಿತು. ಜಿಲ್ಲೆಯ ಹಿರಿಯ ಮಹಿಳೆ ಗಂಗಮ್ಮ ಬೋಪಯ್ಯ ಮತ್ತು ಪ್ರೇಮ ಸೋಮಯ್ಯ ಅವರು ಮಹಿಳೆಯರಿಗಾಗಿ ಬ್ಯಾಂಕ್ ಅಗತ್ಯವಿದೆ ಎಂದು ಭಾವಿಸಿ ಅಂದು ಸ್ಥಾಪನೆ ಮಾಡಿದರು ಎಂದು ತಿಳಿಸಿದರು. ಬ್ಯಾಂಕಿನಲ್ಲಿ ಒಟ್ಟು 2376 ಸದಸ್ಯರಿದ್ದು, ಪಾಲುಬಂಡವಾಳ 44.06 ಲಕ್ಷ ರೂ ಆಗಿದೆ. ಬ್ಯಾಂಕ್‍ನ ನಿಧಿಗಳು 32.31 ಲಕ್ಷ ರೂ, ಒಟ್ಟು ಠೇವಣಿ 10.07 ಕೋಟಿ ರೂ. ಆಗಿದೆ. ಒಟ್ಟು ಸಾಲ 7.27 ಕೋಟಿ ಹೊರಬಾಕಿ ಆಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.98.67 ರಷ್ಟು…

Read More

ಬೆಂಗಳೂರು ಸೆ.13 NEWS DESK : ರಾಜ್ಯದಲ್ಲಿನ ಪೌರಕಾರ್ಮಿಕರ ಸಮಸ್ಯೆಗಳ ಹಾಗೂ ವಿವಿಧ ಬೇಡಿಕೆಗಳ ಕುರಿತು  ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಪೌರ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಸೆ.13 NEWS DESK : ನಗರದ ಶಾಂತಿನಿಕೇತನ ಬಡಾವಣೆಯ ಶಾಂತಿನಿಕೇತನ ಯುವಕ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಉತ್ಸವ ಮೂರ್ತಿಯ ವಿಸರ್ಜನೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಗೌರಿ-ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ  ನಗರದ ಗೌರಿಕೆರೆಯಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು. : ಗಮನ ಸೆಳೆದ ಮಂಟಪ : ಗಣೇಶ ಮೂರ್ತಿ ವಿಸರ್ಜನೋತ್ಸವ ಅಂಗವಾಗಿ  ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಗಣೇಶನಿಂದ ಶತಮಹಿಷಿಯನ್ನು ಸಂಹರಿಸುವ ಕಥಾ ಹಂದರ ಹೊಂದಿದ್ದ ಚಲನ ವಲನಗಳನ್ನೊಳಗೊಂಡ ಭವ್ಯ ಮಂಟಪದ ಪ್ರದರ್ಶನ ಜನಮನ ಸೂರೆಗೊಂಡಿತು. ಧ್ವನಿ ಬೆಳಕಿನ ಅಬ್ಬರದೊಂದಿಗೆ ಮಡಿಕೇರಿಯಲ್ಲಿ ಕಿನ್ನರ ಲೋಕವನ್ನೆ ಸೃಷ್ಟಿಸಿದಂತಿತ್ತು. ಶಾಂತಿಕೇತನ ಬಡಾವಣೆಯಿಂದ ಮುಖ್ಯ ರಸ್ತೆಯ ಒಂದು ಬದಿಯಲ್ಲಿ ಸಾಗಿಬಂದ ಶೋಭಾಯಾತ್ರೆ ಜನರಲ್ ತಿಮ್ಮಯ್ಯ ವೃತ್ತದ ಬಳಿ ಆಗಮಿಸುತ್ತಿರುವಂತೆ ಸಹಸ್ರಾರು ಮಂದಿ ನೆರೆದಿದ್ದರು. ಶೋಭಾಯಾತ್ರೆಯಲ್ಲಿ ಜನರು ಕುಣಿದು ಕುಪ್ಪಳಿಸಿದರು. ವಿಸರ್ಜನೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ಆಗಮಿಸಿದ್ದರು.

Read More

ವಿರಾಜಪೇಟೆ ಸೆ.13 NEWS DESK :  ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘ ಬೆಂಗಳೂರು, ಕೇಂದ್ರ ಸಮಿತಿ ವತಿಯಿಂದ ವಿರಾಜಪೇಟೆಯ ಸದಸ್ಯರಾದ ಎಂ.ಡಿ.ರಫೀಕ್ ಅವರಿಗೆ ಅನಾರೋಗ್ಯಗೊಂಡ ಕಾರಣಕ್ಕೆ 10, 000 ರೂ ಮೊತ್ತದ ಆರ್ಥಿಕ ನೆರವು ನೀಡಲಾಯಿತು. ಜಿಲ್ಲಾ ಸಮಿತಿಯ ಮೂಲಕ ಚೆಕ್ಕನ್ನು ನೀಡಲಾಗಿದ್ದು, ತಾಲ್ಲೂಕು ಸಮಿತಿ ವತಿಯಿಂದ ವಿರಾಜಪೇಟೆಯ ಸಮಿತಿಯ ಕಚೇರಿಯಲ್ಲಿ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎಂ.ಗಣೇಶ್ ಹಾಗೂತಾಲ್ಲೂಕು ಸಮಿತಿ ಅಧ್ಯಕ್ಷರಾದ ಬಿ.ಸಿ. ಭರತ್ ಅವರ ಮೂಲಕ ಎಂ.ಡಿ ರಫೀಕ್ ಅವರಿಗೆ ಚೆಕ್ಕನ್ನು ಹಸ್ತಾಂತರ ಮಾಡಿದರು. ಈ ಸಂದರ್ಭ ವಿರಾಜಪೇಟೆ ಸಮಿತಿಯ ಕಾರ್ಯದರ್ಶಿ ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಬಿ.ಎನ್.ರಮೇಶ್ ಹಾಗೂ ಸದಸ್ಯರಾದ ಮನು, ಬಿ.ಸಿ.ಕಿರಣ್, ಇಮ್ರಾನ್ ಉಪಸ್ಥಿತರಿದ್ದರು.

Read More