ಮಡಿಕೇರಿ ಆ.26 NEWS DESK : ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ವಿದ್ಯಾನಗರದ ನೂತನ ಬಸ್ ತಂಗುದಾಣವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು 6.50 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣಗೊಂಡ ಬಸ್ ತಂಗುದಾಣವು, ಸ್ಥಳೀಯ ಪ್ರಯಾಣಿಕರಿಗೆ ಅನುಕೂಲ ಮಾಡುವುದರೊಂದಿಗೆ, ಮಳೆ ಹಾಗೂ ಬಿಸಿಲಿನ ತಾಪಕ್ಕೆ ರಕ್ಷಣೆ ಒದಗಿಸುವಲ್ಲಿ ಸಹಕಾರಿಯಾಗಲಿದೆ. ಈ ಭಾಗದ ಅನೇಕ ಜನರು ಹಾಗೂ ಕಾರ್ಮಿಕರು ತಮ್ಮ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಬಸ್ ಪ್ರಯಾಣವನ್ನೇ ಅವಲಂಬಿಸುತ್ತಿದ್ದು, ಇಂತಹ ಪ್ರಯಾಣಿಕರಿಗೆ ಇದು ಅತ್ಯಂತ ಅನುಕೂಲ ಒದಗಿಸಲಿದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಕೋಲಿರ ಜಯ, ವಾಸು, ನಾಯಂದಿರ ಶಿವಾಜಿ ನಗರ ಉಪಾಧ್ಯಕ್ಷರು, ಧ್ಯಾನ್ ಸುಬ್ಬಯ್ಯ, ಕುಸುಮ, ಧನ್ಯ, ಗಣೇಶ್ ಕೆ ಎಂ, ಗ್ಯಾರಂಟಿ ಅನುಷ್ಠಾನ ಸದಸ್ಯರು ಕಲೀದ್,…
ಲೇಖಕ: admin
ಮಡಿಕೇರಿ ಆ.26 NEWS DESK : ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಗೆ ಅಗತ್ಯ ವಿದ್ದ ಲ್ಯಾಪ್ಟಾಪ್ ಅವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿತರಿಸಿದರು. ವಿರಾಜಪೇಟೆ ನಿವಾಸಿ ಸಂಜಯ್ ಎಂಬ ವಿದ್ಯಾರ್ಥಿಗೆ ತಮ್ಮ ಸ್ವಂತ ವೆಚ್ಚದಲ್ಲಿ ಲ್ಯಾಪ್ಟಾಪ್ ವಿತರಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ತಾಲ್ಲೂಕು ಕೆಡಿಪಿ ಸದಸ್ಯರಾದ ಮಾಳೆಟೀರ ಪ್ರಶಾಂತ್ ಉಪಸ್ಥಿತರಿದ್ದರು.
ಭಾಗಮಂಡಲ ಆ.26 NEWS DESK : ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪ್ರಥಮ, ಥ್ರೋಬಾಲ್ ಪ್ರಥಮ, ಕಬಡ್ಡಿ ಪ್ರಥಮ. ಬಾಲಕಿಯರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ಥ್ರೋಬಾಲ್ ಪ್ರಥಮ, ಪ್ರಾಥಮಿಕ ವಿಭಾಗದ ಬಾಲಕರ ವಿಭಾಗದಲ್ಲಿ ವಾಲಿಬಾಲ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ಥ್ರೋಬಾಲ್ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ಅಥೇಟಿಕ್ಸ್ ವಿಭಾಗದಲ್ಲಿ ಧನ್ಯ 3000 ಮೀಟರ್, ಹೈಜಂಪ್, ಲಾಂಗ್ ಜಂಪ್ನಲ್ಲಿ ಪ್ರಥಮ. ವರ್ಷಿಣಿ 100 ಮೀ ಪ್ರಥಮ, 200ಮೀ ಪ್ರಥಮ, ತ್ರಿಪಲ್ ಜಂಪ್ ದ್ವಿತೀಯ. ವರ್ಷ 400 ಮೀ ಪ್ರಥಮ, ಡಯಾನಾ ಶಾಟ್ ಪುಟ್ ತೃತಿಯ, ತಟ್ಟೆ ಎಸೆತ ಪ್ರಥಮ, ಸನಿತಾ ಜಾವೇಲಿನ ಥ್ರೋ ಪ್ರಥಮ, ಸುಕನ್ಯಾ 1,500 ಪ್ರಥಮ, ತ್ರಿಪಲ್ ಜಂಪ್ ತೃತಿಯ, ರಿಲೇ 4*400 ಪ್ರಥಮ,…
ಮಡಿಕೇರಿ ಆ.26 NEWS DESK : ಚೇನಂಡ ಕುಟುಂಬದ ಸಾರಥ್ಯದಲ್ಲಿ 2026ರ ಕೊಡವ ಕೌಟುಂಬಿಕ ಹಾಕಿ ಉತ್ಸವದ ಕರಪತ್ರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಶಾಸಕರು, ಕೌಟುಂಬಿಕ ಹಾಕಿ ಪಂದ್ಯಾವಳಿಗಳು ಕೇವಲ ಕ್ರೀಡೆ ಮಾತ್ರವಲ್ಲದೆ ಪ್ರತಿಷ್ಠೆಯ ಸಂಕೇತ ಕೂಡ ಆಗಿದೆ. ಕೊಡಗು ಜಿಲ್ಲೆಯು ಅಂತರಾಷ್ಟ್ರೀಯ ಮಟ್ಟದ ಹಾಕಿ ಪಟುಗಳ ತವರೂರಾಗಿದ್ದು, ಈ ಹಾಕಿ ಪಂದ್ಯಾವಳಿ ಕೂಡ ಯಶಸ್ಸಿನ ಹಾದಿ ತುಳಿಯಲಿ ಹಾಗೂ ಅನೇಕ ಯುವ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಗುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜ್, ಚೇನಂಡ ಕುಟುಂಬದ ಅಧ್ಯಕ್ಷರಾದ ಕಂಬನಿ ಕರುಂಬಯ್ಯ, ಕುಟುಂಬದ ಸದಸ್ಯರು, ಸಂಪನ್ ಅಯ್ಯಪ್ಪ, ವಿನೋದ್, ಪೊನಂಪೇಟೆ ತಹಸೀಲ್ದಾರ್ ಮೋಹನ್, ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್ ಹಾಗೂ ಚೇನಂಡ ಕುಟುಂಬದ ಪಟ್ಟಿದಾರರು ಹಾಗೂ ಪ್ರಮುಖರು, ಹಾಕಿ ಪಂದ್ಯಾವಳಿಯ ಸಮಿತಿಯವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಆ.26 NEWS DESK : ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ 18ನೇ ಪುಣ್ಯಸ್ಮರಣೆಯ ಅಂಗವಾಗಿ ಮಡಿಕೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಮಡಿಕೇರಿಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬ್ರಹ್ಮಾಕುಮಾರಿ ಲೈಟ್ಹೌಸ್ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಂಡು ರಕ್ತದಾನ ಮಾಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಶಿಬಿರ ಉದ್ಘಾಟಿಸಿದರು. ಬ್ರಹ್ಮಾಕುಮಾರಿ ಲೈಟ್ ಹೌಸ್ ನ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ರಕ್ತದಾನದ ಮಹತ್ವದ ಕುರಿತು ವಿವರಿಸಿದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಪೊಲೀಸ್ ಅಧಿಕಾರಿ ರಾಮಪ್ಪ ಹಾಗೂ ಸಮಾಜ ಸೇವಕ ಕಲೀಲ್ ಅವರನ್ನು ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ ಆ.26 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ , ಶಿರಂಗಾಲ ಕರ್ನಾಟಕ ಗ್ರಾಮೀಣ ಬ್ಯಾಂಕ್ , ಹೆಬ್ಬಾಲೆ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಮಹೇಶ್ ಕುಮಾರ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ. ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ. ಗಳ ವಿಮಾಮೊತ್ತ…
ಮಡಿಕೇರಿ ಆ.26 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಆಟೋಟಗಳಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ಪ್ರೌಢವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ಗೆದ್ದುಕೊಂಡಿದ್ದಾರೆ. 400 ಮೀಟರ್ ಓಟದ ಸ್ಪರ್ಧೆಯಲ್ಲಿ 9ನೇ ತರಗತಿಯ ಕರ್ನಂಡ ಕೃತಿಕಾ ಅಕ್ಕಮ ಚಿನ್ನದ ಪದಕ, 200 ಮೀಟರ್ ಓಟದ ಸ್ಪರ್ಧೆಯಲ್ಲಿ 9ನೇ ತರಗತಿ ಬೊವ್ವೆರಿಯಂಡ ಹನ್ಸಿಕ ಪೊನ್ನಪ್ಪ ಚಿನ್ನದ ಪದಕ, ಗುಂಡು ಎಸೆತ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಮುಲ್ಲೆಂಗಡ ಪೂರ್ವಿಕ ಪೂವಮ್ಮ ಎಂ.ಜಿ ಚಿನ್ನದ ಪದಕ, 100 ಮೀಟರ್ ಓಟದ ಸ್ಪರ್ಧೆಯಲ್ಲಿ ಅಮ್ಮಂಡ ಸ್ಪೂರ್ತಿ ದೇಚಮ್ಮ ಬೆಳ್ಳಿ ಪದಕ, 400 ಮೀ ಓಟದ ಸ್ಪರ್ದೆಯಲ್ಲಿ 8 ನೇ ತರಗತಿ ಕರ್ನಂಡ ಶತಕ ಕಾವೇರಮ್ಮ ಬೆಳ್ಳಿ ಪದಕ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಹನಾ ಫಲಕ್ ಬೆಳ್ಳಿಪದಕ, 800ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿ ಫಾತಿಮತ್ ಫಿಧಾ ಕಂಚಿನ ಪದಕ, 4100ಮೀ ರಿಲೇಯಲ್ಲಿ ಬೊವ್ವೆರಿಯಂಡ ಹನ್ಸಿಕಾ ಪೊನ್ನಪ್ಪ, ಅಮ್ಮೆಂಡ…
ಮಡಿಕೇರಿ ಆ.26 NEWS DESK : ಸಾರ್ವಜನಿಕ ವಲಯದ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ದಲ್ಲಿ ಖಾಲಿ ಇರುವ 500 ಸ್ಪೆಷಲಿಸ್ಟ್ ಸ್ಕೇಲ್ -2 ರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.ಒಟ್ಟು ಹುದ್ದೆಗಳ ಪೈಕಿ ಎಸ್ಸಿ ಅಭ್ಯರ್ಥಿಗಳು -75.ಎಸ್ ಟಿ ವರ್ಗದವರಿಗೆ 37, ಒಬಿಸಿ ಅಭ್ಯರ್ಥಿಗಳಿಗೆ 135, ಆರ್ಥಿಕ ದುರ್ಬಲ ವರ್ಗದವರಿಗೆ 50 ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 203 ಹುದ್ದೆಗಳನ್ನು ಮೀಸಲಿಡಲಾಗಿದೆ. ಒಟ್ಟು ಹುದ್ದೆಗಳ ಸಂಖ್ಯೆ : 500, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 30, 2025 ವಿದ್ಯಾರ್ಹತೆಗಳೇನು ? : ಅಭ್ಯರ್ಥಿಗಳು ಪದವೀಧರ ರಾಗಿದ್ದು,ಇಂಟಿಗ್ರೇಟೆಡ್ ಡ್ಯುಯಲ್ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ. 60 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್ ಸಿ/ಎಸ್ಟಿ/ ಒಬಿಸಿ, ಮತ್ತು ವಿಶೇಷಚೇತನ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇ.55 ಅಂಕಗಳೊಂದಿಗೆ ತೇರ್ಗಡೆಯಾಗಿರುವುದು ಕಡ್ಡಾಯವಾಗಿದೆ, ಯಾವುದೇ ಬ್ಯಾಂಕ್ನಲ್ಲಿ ಕನಿಷ್ಠ 3 ವರ್ಷಗಳ ಸೇವಾನುಭವ ಇದ್ದಲ್ಲಿ ನೇಮಕಾತಿಗೆ ಮೊದಲ…
ಕಾರ್ಕಳ ಆ.26 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಆದರ್ಶ…
ಸೋಮವಾರಪೇಟೆ ಆ.26 NEWS DESK : ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ ಭಾರಿ ಪ್ರಮಾಣದ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಬಡಜನರ ಅನುಕೂಲಕ್ಕಾಗಿ ಸರ್ಕಾರ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಕಡಿಮೆಬೆಲೆಯಲ್ಲಿ ಬೇರೆಡೆ ಸಾಗಿಸುತ್ತಿರುವ ಬಗ್ಗೆ ಮಾಹಿತಿ ತಿಳಿದ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಪಟ್ಟಣದ ತೋಟಗಾರಿಕೆ ಇಲಾಖೆ ಸಮೀಪ ದಾಳಿ ನಡೆಸಿ ಲಾರಿ ಸಹಿತ 142970 ರೂಮೌಲ್ಯದ 4200ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡು, ಆರೋಪಿ ಕೊಣನೂರಿನ ಇದ್ರೀಸ್ ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆಹಾರ ನಿರೀಕ್ಷಕಿ ಯಶಸ್ವಿನಿ, ಸಿಬ್ಬಂದಿಗಳಾದ ವಿನೋದ್, ಗ್ರಾಮಆಡಳಿತಾದಿಕಾರಿ ನಾಗೇಂದ್ರ ಹಾಗೂ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.






