ಲೇಖಕ: admin

ಮಡಿಕೇರಿ ಆ.23 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಹಾಗೂ ಪರಿವರ್ತನಾ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ ವನ್ನು ಸಂಸದ ಯದುವೀರ್ ಒಡೆಯರ್ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅಧ್ಯಕ್ಷ ಅರಮಣಮಾಡ ಸುಗುಣ ಗಣಪತಿ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.

Read More

ಮಡಿಕೇರಿ ಆ.25 NEWS DESK : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆ.27 ರಂದು ಬೆಳಗ್ಗೆ 7 ಗಂಟೆಯಿಂದ ಭಕ್ತಾಧಿಗಳಿಗೆ ಗಣಪತಿ ಪೂಜೆ ಹಾಗೂ ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 7.30 ಗಂಟೆಗೆ ಮಹಾಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Read More

ಮಡಿಕೇರಿ ಆ.25 NEWS DESK : ಮಡಿಕೇರಿ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು.  ಉದ್ಯೋಗಾಧಿಕಾರಿ ಮಂಜುನಾಥ್ ಸಿ.ಬಿ ಅವರು ಮಾತಾನಾಡಿ 2023, 2024 ಮತ್ತು 25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಯಡಿ ಭತ್ಯೆ ಪಡೆಯಲು ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ ತ್ರೈಮಾಸಿಕದಂತೆ ತಾನು ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿಲ್ಲವೆಂದು ಮತ್ತು ಸ್ವಯಂ ಉದ್ಯೋಗ ಮಾಡುತ್ತಿಲ್ಲವೆಂದು, ಉನ್ನತ ವ್ಯಾಸಂಗವನ್ನು ಮುಂದುವರಿಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ನೀಡಬೇಕಿದೆ. ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಬಹುದಾಗಿದ್ದು ವೆಬ್‍ಸೈಟ್ ವಿಳಾಸ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 1800- 599-7154 …

Read More

ಮಡಿಕೇರಿ ಆ.25 NEWS DESK : ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.  ಸಭೆಯಲ್ಲಿ ಪ್ರಮುಖವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಿಗೆ ಸರ್ಕಲ್ ನಲ್ಲಿ ಶಾಶ್ವತವಾಗಿ ನೂತನ ತಂತ್ರಜ್ಞಾನದ ಮೂಲಕ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುವ ಬಗ್ಗೆ ಜಾಗವನ್ನು ಗುರುತಿಸಿ ಅದರ ಮೂಲಕ ನಿರ್ಮಾಣ ಕಾಮಗಾರಿಯ ಕೈಗೊಳ್ಳುವ ಬಗ್ಗೆ ಸಭೆಯು ಒಕ್ಕೊರಲಿನ ತೀರ್ಮಾನ ಕೈಗೊಂಡಿತು.  ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ‌ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಎಲ್ಲಾ ವಾರ್ಡ್ ಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚೆಗಳು ನಡೆದವು. ಬೀದಿ ನಾಯಿಗಳ ಹಾವಾಳಿಗಳ ಬಗ್ಗೆ ಸಾರ್ವಜನಿಕರಿಂದ ಬಂದ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು.  ಸಭೆಯಲ್ಲಿ ಅಧ್ಯಕ್ಷ ಕೆ.ಟಿ.ಗಿರೀಶ್ ಮಾತಾನಾಡಿ, ಸಭೆಯಲ್ಲಿ ಚರ್ಚೆಗೊಂಡ…

Read More

ಮಡಿಕೇರಿ ಆ.25 NEWS DESK : ಮಡಿಕೇರಿ ನಗರ ಯುವ ದಸರಾ ಸಮಿತಿ ವತಿಯಿಂದ ಆಯೋಜಿಸುವ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗೆ ಸೆ.6 ರಂದು ತಂಡಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಯುವ ದಸರಾ ಸಮಿತಿಯ ಅಧ್ಯಕ್ಷ ಕವನ್ ಕೊತ್ತೋಳಿ ತಿಳಿಸಿದ್ದಾರೆ. ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದ ತಂಡಗಳ ನಡುವೆ ಸೆ.27 ರಂದು ನಗರದ ಗಾಂಧಿ ಮೈದಾನದ ವೇದಿಕೆಯಲ್ಲಿ ಸ್ಪರ್ಧೆಯನ್ನು ಆಯೋಜಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಇದು ರಾಜ್ಯ ಮಟ್ಟದ ಸ್ಪರ್ಧೆಯಾಗಿದ್ದು, ಸ್ಪರ್ಧಿಗಳು ಶಾಸ್ತ್ರೀಯ ಪ್ರಕಾರ ಹಾಗೂ ದೇವರಿಗೆ ಸಂಬಂಧಪಟ್ಟ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿರ್ಬಂಧವಿಲ್ಲ, ತಂಡವು ಕನಿಷ್ಠ 12 ಹಾಗೂ ಗರಿಷ್ಟ 30 ಮಂದಿ ಕಲಾವಿದರನ್ನು ಹೊಂದಿರಬೇಕು. ನೃತ್ಯಗಳು ಸಾಮಾಜಿಕ ಪರಿಕಲ್ಪನೆ ಹಾಗೂ ಸಂದೇಶಗಳನ್ನು ಹೊಂದಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ ತೊಡುಗೆಗಳು ಸಭ್ಯವಾಗಿರಬೇಕು, ಯಾರ ನಂಬಿಕೆ ಹಾಗೂ ಭಾವನೆಗೆ ನೋವುಂಟು ಮಾಡಬಾರದು. 10+2…

Read More

ಮಡಿಕೇರಿ ಆ.25 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ಆಯೋಜನೆಗೊಂಡಿರುವ ವಿರಾಜಪೇಟೆ ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ಮಾನಸಿಕ ಸಮತೋಲನ ವೃದ್ಧಿಸಿಕೊಂಡು ವಿದ್ಯಾಭ್ಯಾಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಹಕಾರಿಯಾಗಿದೆ. ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಯು ಬಹುಮುಖ್ಯವಾಗಿದೆ. ಪ್ರತಿಯೊಂದು ಕ್ರೀಡೆಯಲ್ಲಿಯೂ ಸೋಲು ಗೆಲುವಿನೊಂದಿಗೆ ಭಾಗವಹಿಸುವಿಕೆಯೂ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉನ್ನತ ಪ್ರದರ್ಶನವನ್ನು ನೀಡಿ ಜೀವನದಲ್ಲಿ ಯಶಸ್ಸು ಕಾಣುವಂತಾಗಬೇಕೆಂದು ಶುಭ ಹಾರೈಸಿದರು. ಈ ಸಂದರ್ಭ ಪ್ರಗತಿ ಶಾಲೆಯ ಸಂಸ್ಥಾಪಕರು, ಮಾದಂಡ ಎಸ್.ಪೂವಯ್ಯ, ಮಾದಂಡ ತಿಮ್ಮಯ್ಯ ಆಡಳಿತ ಅಧಿಕಾರಿ, ಸುಷ್ಮ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ,ಪುರಸಭೆ ಸಾಯಿ ಸಮಿತಿ ಅಧ್ಯಕ್ಷ ಅಬುದುಲ್ ಜಲಿಲ್, ಬಿ.ಇ.ಆನಂದ್, ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪುರಸಭೆ ಸದಸ್ಯರಾದ ರಾಜೇಶ್,…

Read More

ಸಿದ್ದಾಪುರ ಆ.25 NEWS DESK :  ಪಾಲಿಬೆಟ್ಟ ವರ್ತಕರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಯು.ಮುನೀರ್ ಅವಿರೋಧವಾಗಿ ಆಯ್ಕೆ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರುಗಳಾಗಿ ಟಿ.ಜಿ.ವಿಜೇಶ್, ಮೈಕಲ್, ಪ್ರಧಾನ ಕಾರ್ಯದರ್ಶಿ ಎಂ.ಹೆಚ್.ಸಮೀರ್, ಕಾರ್ಯದರ್ಶಿಗಳಾಗಿ ಸಿ.ಎ.ಫೈಝಲ್ ಹಾಗೂ ಅಯ್ಯಪ್ಪ, ಖಜಾಂಚಿಯಾಗಿ ಕೆ.ಹೆಚ್ ಅಬೂಬಕ್ಕರ್, ಸಲಹೆಗಾರರಾಗಿ ಪುತ್ತಂ ಪ್ರದೀಪ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಎ.ಎಲ್.ರವಿಕುಮಾರ್ ಅನಿಲ್, ಜಕ್ರಿಯ, ಹರೀಶ್, ರಶೀದ್, ಫೈಝಲ್ ರೆಹಮಾನ್, ಶೈಲಾ, ಮುಬಾರಕ್, ನಳಿನಿ, ನಸೀಫ್, ಲೋಕೇಶ್, ಮೂರ್ತಿ ಸೇರಿದಂತೆ ಮತ್ತಿತರರು ಆಯ್ಕೆಯಾದರು. ಸಭೆಯಲ್ಲಿ ನೂತನ ಅಧ್ಯಕ್ಷ ಮುನೀರ್ ಮಾತನಾಡಿ ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಪಾಲಿಬೆಟ್ಟ ಗ್ರಾಮದಲ್ಲಿ ಎಲ್ಲಾ ವರ್ತಕರು ಒಗ್ಗೂಡಿ ನೂತನ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಎಲ್ಲಾ ವರ್ತಕರು ಸಂಘದೊಂದಿಗೆ ಕೈಜೋಡಿಸುವ ಮೂಲಕ ಸಂಘದ ಸದಸ್ಯರುಗಳ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ, ಆರೋಗ್ಯ, ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಸಹಾಯ ಸೇರಿದಂತೆ ಹಲವಾರು ಕಾರ್ಯ ಯೋಜನೆಗಳನ್ನು ರೂಪಿಸಲಾಗಿದ್ದು, ಎಲ್ಲಾ ವರ್ತಕರು ಸಂಘದೊಂದಿಗೆ ಕೈಜೋಡಿಸುವುದರ ಮೂಲಕ ಸಹಕಾರ ನೀಡಬೇಕೆಂದರು. ಈ ಸಂದರ್ಭ ಹಿರಿಯ ವರ್ತಕರು ಸಭೆಯಲ್ಲಿ ಹಾಜರಿದ್ದರು.

Read More

ಮಡಿಕೇರಿ, ಆ.25 NEWS DESK :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೂಡಿಗೆ ಮತ್ತು ಹೆಬ್ಬಾಲೆ ಪ್ರಾಥಮಿಕ ಶಾಲೆಯ   ವಲಯ ಮಟ್ಟದ ಕ್ರೀಡಾಕೂಟವು ಕೂಡಿಗೆ ಡಯಟ್ ಮೈದಾನದಲ್ಲಿ ಆರಂಭಗೊಂಡಿತು. ಕ್ರೀಡಾಕೂಟವನ್ನು  ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಕರಾದ ಸದಾಶಿವಯ್ಯ ಎಸ್.ಪಲ್ಲೆದ್ ಉದ್ಘಾಟಿಸಿ, ಮಾತನಾಡಿ ಶಿಸ್ತು, ಸಂಯಮ ಜೊತೆಗೆ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ ಸಹಕಾರಿಯಾಗಿದ್ದು,  ಬದುಕಿನ ಜೀವನಕ್ಕೆ ಪೂರಕವಾದ ಅಂಶಗಳನ್ನು ಒದಗಿಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಸಹಕಾರ ಸಂಘದ ಮಾಜಿ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ ಮಾತಾನಾಡಿ, ಪ್ರಾಥಮಿಕ ಹಂತದಲ್ಲಿ ತನ್ನ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಅದರ ಮೂಲಕ   ಮುಂದುವರಿದು ಉನ್ನತ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ   ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಪ್ರಾಥಮಿಕ ಹಂತದ ಕ್ರೀಡೆ ಬಹುಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಧ್ವಜವಂದನೆ ಮತ್ತು ಕ್ರೀಡಾ ಜ್ಯೋತಿ  ಸ್ವೀಕರಿಸಿದ ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಯೋಗೇಶ್ ಮಾತಾನಾಡಿ, ವಿದ್ಯಾರ್ಥಿಗಳು  ಸೋಲಿಗೆ ಹೆದರುವ ಅವಶ್ಯಕತೆ ಇಲ್ಲ. ಪ್ರಯತ್ನದಲ್ಲಿ …

Read More

ಕುಶಾಲನಗರ ಆ.25 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ  ನಮ್ಮ ನಡೆ ಹಸಿರೆಡೆಗೆ*”: ಗ್ರೋ ಗ್ರೀನ್ ಅಭಿಯಾನದಡಿ ಗೌರಿ-ಗಣೇಶೋತ್ಸವ ಹಬ್ಬ ಆಚರಣೆ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಪರಿಸರ ಸ್ನೇಹಿ ನೈಸರ್ಗಿಕ ಜೇಡಿಮಣ್ಣಿನ ಗಣೇಶ ಮೂರ್ತಿಯನ್ನು ಸ್ಥಾಪಿಸುವ ಕುರಿತು ಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್. ವತಿಯಿಂದ ಜನ ಜಾಗೃತಿ ಮಂಡಿಸಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ “ಪರಿಸರ ಸ್ನೇಹಿ ಗಣೇಶೋತ್ಸವ” “ಜನಜಾಗೃತಿ ಆಂದೋಲನ” : 2025 ದ ಅಂಗವಾಗಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯ ಮಹತ್ವ ಕುರಿತು ಜಾಗೃತಿ ನಡೆಸಲಾಯಿತು. “ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ” ಕುರಿತು ಮಾಹಿತಿ ನೀಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಪ್ರೌಢಶಾಲಾ ಮುಖ್ಯ ಶಿಕ್ಷಕ ಹಾಗೂ  ಪರಿಸರ ಕಾರ್ಯಕ್ರಮದ ಸಂಘಟಕ ಟಿ.ಜಿ. ಪ್ರೇಮಕುಮಾರ್, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ…

Read More

ಮಡಿಕೇರಿ ಆ.25 NEWS DESK : ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ರೂಢಿ ಸಂಪ್ರದಾಯದಂತೆ ಪ್ರತೀ ವರ್ಷ ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಆ.27 ರಂದು ಗಣೇಶ ಚತುರ್ಥಿ ಪೂಜಾ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ಕೋರಿದ್ದಾರೆ.  ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಆಗಸ್ಟ್, 27 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.  ಶ್ರೀ ತಲಕಾವೇರಿ ದೇವಾಲಯದಲ್ಲಿ ಆಗಸ್ಟ್, 27 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

Read More