ಮಡಿಕೇರಿ NEWS DESK ಜು.25 : ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ,ಸಾದಿಸುವ ಛಲ ಇದ್ದಲ್ಲಿ ಜೀವನದಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವಯ೯ ಹೇಳಿದ್ದಾರೆ. ಮಾದಾಪುರದ ಶ್ರೀಮತಿ ಡಿ. ಚೆನ್ಮಮ್ಮ ಪದವಿ ಪೂವ೯ ಕಾಲೇಜಿನಲ್ಲಿ ವಿದ್ಯಾಥಿ೯ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಎಂತಹುದ್ದೇ ಕಠಿಣ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಎದೆಗುಂದದೆ ಸೋಲು ಗೆಲವುಗಳನ್ನು ಸ್ಥಿತಪ್ರಜ್ಞ ರಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಅವುರು ಕರೆನೀಡಿದರು. ಗರಗಂದೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಮಾತನಾಡಿ ,ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಉತ್ತಮ ನಾಯಕತ್ವ ಗುಣ ಗಳನ್ನು ಮೈಗೂಡಿಸಿಕೊಳ್ಳುವoತೆ ಕಿವಿಮಾತು ಹೇಳಿದರು. ಶ್ರೀಮತಿ ಡಿ. ಚೆನ್ನಮ್ಮ ವಿದ್ಯಾಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ ಜಿ ವಿ ಕುಮಾರ್, ಕಾರ್ಯದರ್ಶಿ ಮಧು ಬೋಪಣ್ಣ, ಪ್ರಾಂಶುಪಾಲ ಮಂದಪ್ಪ, ಆಡಳಿತ ಮಂಡಳಿ ಸದಸ್ಯರಾದ ಟಿ.ಪಿ.ಸಂದೇಶ್ ಮುಖ್ಯ ಶಿಕ್ಷಕಿ ರೀಟಾ ವೇದಿಕೆಯಲ್ಲಿದ್ದರು. ದೈಹಿಕ ಶಿಕ್ಷಕ ಪಾಲಾಕ್ಷ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕಿ ಪವಿತಾ ವಂದಿಸಿದರು. ಕಾಯ೯ಕ್ರಮವನ್ನು ಉಪನ್ಯಾಸಕಿ ಪ್ರಮೀಳಾ…
ಲೇಖಕ: admin
ಮಡಿಕೇರಿ NEWS DESK ಜು.25 : ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ಘೋಷಿಸಿರುವ 10 ಸಾವಿರ ರೂ. ಗೌರವ ಧನವನ್ನು ನೀಡದಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಪಾಧ್ಯಕ್ಷೆ ಎಂ.ಉಮಾದೇವಿ ಹಾಗೂ ಕೊಡಗು ಜಿಲ್ಲಾಧ್ಯಕ್ಷೆ ತೆಕ್ಕಡೆ ಬಿ.ಪೂರ್ಣಿಮಾ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಜಿಲ್ಲಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸಂಘದ ಉಪಾಧ್ಯಕ್ಷೆ ಉಮಾದೇವಿ ಎಂ.ಅವರು ಮಾತನಾಡಿ, ಕಳೆದ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಸೇರಿಸಿ ಕನಿಷ್ಟ 10 ಸಾವಿರ ಗೌರವ ಧನವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಇನ್ಸೆಂಟಿವ್ನ್ನು ಶೀಘ್ರ…
ಮಡಿಕೇರಿ ಜು.25 NEWS DESK : ನಗರ ದಸರಾ ಸಮಿತಿಯ 2024ನೇ ಸಾಲಿನ ಜಮಾ ಖರ್ಚು ಮಂಡನೆ ಹಾಗೂ 2025 ರ ಅಕ್ಟೋಬರ್ ಮಾಹೆಯಲ್ಲಿ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ಧತೆ ಬಗ್ಗೆ ಜು.26 ರಂದು ಸಂಜೆ 4 ಗಂಟೆಗೆ ನಗರ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ರಾಜ್ ದರ್ಶನ್ನಲ್ಲಿ ದಸರಾ ಆಚರಣೆಯ ಪೂರ್ವಭಾವಿ ಸಭೆ ನಡೆಯಲಿದೆ. ಸಂಪ್ರದಾಯದಂತೆ ಜು.26 ರಂದು ಮಧ್ಯಾಹ್ನ 3 ಗಂಟೆಗೆ ಪೇಟೆ ಶ್ರೀರಾಮಮಂದಿರ ದೇವಾಲಯದಲ್ಲಿ ಪ್ರಥಮ ಪೂಜೆ ನಡೆಯಲಿದೆ ಎಂದು ನಗರಸಭೆ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಪಿ.ಕಲಾವತಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.25 NEWS DESK : ಸೆಪ್ಟೆಂಬರ್ 1 ರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು. ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರನ್ನು ಆಹ್ವಾನಿಸಲಾಯಿತು.
ಮಡಿಕೇರಿ ಜು.25 NEWS DESK : 2025-26 ನೇ ಸಾಲಿನ ಕಾರ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾರ್ಯಾಧ್ಯಕ್ಷರಾಗಿ ಕೋಟೆಮಾರಿಯಮ್ಮ ದೇವಾಲಯದ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ಮಡಿಕೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಯು ಮಡಿಕೇರಿಯ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆಯಿತು. ಬಹಳ ಕುತುಹಲ ಕೆರಳಿಸಿದ್ದ ಕಾರ್ಯಧ್ಯಕ್ಷ ಸ್ಥಾನಕ್ಕೆ ತೆರೆಬಿದ್ದಿದ್ದು, ಮುಂದಿನ ಎರಡು ವರ್ಷ ಬಿ.ಕೆ.ಅರುಣ್ ಕುಮಾರ್ ಅಧಿಕಾರ ವಹಿಸಲಿದ್ದಾರೆ. ಈ ಒಂದು ಸ್ಥಾನಕ್ಕೆ ನಾಲ್ಕು ಜನರ ನಡುವೆ ಬಹಳ ಪೈಪೋಟಿ ನಡೆದಿದ್ದು, ಚುನಾವಣೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಕೋಟೆಮಾರಿಯಮ್ಮ ದೇವಾಲಯದ ಜಿ.ಸಿ.ಜಗದೀಶ್, ಕೋದಂಡ ರಾಮ ದೇವಾಲಯದ ಜಯಂತಿ ಶೆಟ್ಟಿ ರೈ, ಕೋಟೆ ಮಾರಿಯಮ್ಮ ದೇವಾಲಯದ ಅರುಣ್ ಕುಮಾರ್ ಹಾಗೂ ದೇಚೂರು ಶ್ರೀ ರಾಮಮಂದಿರ ದೇವಾಲಯದ ಟಿ.ಎಂ.ಅಯ್ಯಪ್ಪ ಅವರುಗಳ ನಡುವೆ ಪೈಪೋಟಿ ನಡೆಯಿತು. ಚುನಾವಣೆಯಲ್ಲಿ ಕೋಟೆ ಮಾರಿಯಮ್ಮ ದೇವಾಲಯದ ಅರುಣ್ ಕುಮಾರ್ 6 ಮತಗಳನ್ನ ಪಡೆಯುವ ಮೂಲಕ ಮುಂದಿನ ಎರಡು ವರ್ಷ ಅಧಿಕಾರ ಹಿಡಿದಿದ್ದಾರೆ. ಇದರ ಜೊತೆಗೆ ಉಪಾಧ್ಯಕ್ಷರಾಗಿ ಪೇಟೆ…
ಮಡಿಕೇರಿ ಜು.25 NEWS DESK : ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಇತರರು ಇದ್ದರು.
ವಿರಾಜಪೇಟೆ ಜು.25 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಪಂಜರಪೇಟೆಯಲ್ಲಿರುವ ಸರ್ವೋದಯ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಕಳೆದ 50 ವರ್ಷಗಳಿಂದ ನಾಡಿನ ಯುವಜನತೆಗೆ ವಿದ್ಯಾರ್ಜನೆ ಮಾಡುತ್ತಾ ಯಶಸ್ಸು ಕಂಡಿರುವ ಈ ವಿದ್ಯಾಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಕಾಣುತ್ತಾ ನಾಡಿನ ಯುವಕ ಯುವತಿಯರಿಗೆ ಉತ್ತಮ ಶಿಕ್ಷಣ ನೀಡುವಂಥಾಗಲಿ ಎಂದು ಶುಭ ಹಾರೈಸಿದರು. ಕಲಿಕೆಯೇ ದೇಶದ ಅಭಿವೃದ್ಧಿಗೆ ಮೂಲ ಮಂತ್ರವಾಗಿದ್ದು, ಕಾಲೇಜು ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಮುಂದಿನ ಗುರಿ ಸಾಧನೆ ತಮ್ಮ ಗಮನವನ್ನು ಕೇಂದ್ರೀಕರಿಸಲು ಈ ಹಂತದ ವಿದ್ಯಾಭ್ಯಾಸ ಪ್ರಮುಖವಾಗಿರುತ್ತದೆ ಎಂಬ ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕುಲ ಸಚಿವರಾದ ಪ್ರೊ ಅಶೋಕ ಸಂಗಪ್ಪ ಆಲೂರ, ಶಕ್ತಿ ದಿನ ಪತ್ರಿಕೆ ಸಂಪಾದಕ ಚಿದ್ವಿಲಾಸ್ ಜಿ, ಪುರಸಭೆ ಅಧ್ಯಕ್ಷೆ…
ಮಡಿಕೇರಿ ಜು.25 NEWS DESK : ವಿರಾಜಪೇಟೆಯ ಪುರಸಭೆ ಕಾಮಗಾರಿಗಳಿಗೆ ನೂತನವಾಗಿ ಖರೀದಿಸಿದ ಬ್ಯಾಕ್ ಹೋಲ್ ಲೋಡರ್ ಯಂತ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಪುರಸಭೆ ಕಚೇರಿ ಆವರಣದಲ್ಲಿ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕರು, ತೀವ್ರ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ವಿರಾಜಪೇಟೆ ಪುರಸಭೆಗೆ ಈ ಯಂತ್ರದ ಅವಶ್ಯಕತೆ ಇದ್ದು, ಇದರ ಸೇರ್ಪಡೆಯೊಂದಿಗೆ ಪುರಸಭೆಯ ಕಾಮಗಾರಿಗಳು ಮತ್ತಷ್ಟು ವೇಗ ಪಡೆಯಲು ಸಹಕಾರಿಯಾಗಲಿದೆ. ಇದರ ಸದುಪಯೋಗವನ್ನು ಪುರಸಭೆಯ ಅಧಿಕಾರಿಗಳು ಉಪಯೋಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದ ಮಾನ್ಯ ಶಾಸಕರು, ಜನಸಾಮಾನ್ಯರಿಗೆ ಅನುಕೂಲ ಆಗುವಂತೆ ಕಾರ್ಯನಿರ್ವಹಿಸಬೇಕೆಂದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಉಪಾಧ್ಯಕ್ಷೆ ಫಜಿಯ ತಬಸಂ, ಮುಖ್ಯ ಅಧಿಕಾರಿ ನಾಚಪ್ಪ, ಪುರಸಭೆ ಸದಸ್ಯರುಗಳು, ನಾಮನಿರ್ದೇಶಿತ ಸದಸ್ಯರು, ಸಿಬ್ಬಂದಿ ವರ್ಗದವರು, ಪುರಸಭೆ ಕಾರ್ಮಿಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಜು.25 NEWS DESK : 2025 -26ನೇ ಸಾಲಿನ ದಸರ ದಶಮಂಟಪ ಸಮಿತಿಯ ಮೊದಲ ಸಭೆಯು ಕೋಟೆಮಹಾಗಣಪತಿ ದೇವಾಲಯದ ಸಮಿತಿಯ ನೇತೃತ್ವದಲ್ಲಿ ಮಡಿಕೇರಿಯ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನ ದೀಪ ಬೆಳಗುವ ಮೂಲಕ ಗಣ್ಯ ಅಥಿಗಳು ಉದ್ಘಾಟಿಸಿದರು. ಸಭೆಯಲ್ಲಿ ಕರಗೋತ್ಸವ ವ್ಯವಸ್ಥೆಯಲ್ಲಿ ಆಗಬೇಕಾದ ಬದಲಣೆಯ ಕುರಿತು ಚರ್ಚೆ ನಡೆದಿದ್ದು, ಇದರಲ್ಲಿ ರಸ್ತೆಗಳ ಅಭಿವೃದ್ಧಿ, ಲೈಟಿಂಗ್ ವ್ಯವಸ್ಥೆ, ಸಮಯಕ್ಕೆ ಸರಿಯಾಗಿ ಬಹುಮಾನ ವಿತರಣೆ, ಕರಗಳ ಮುಂದೆ ಕುಣಿವುದನ್ನ ತಡೆಯಬೇಕು, ಬಹುಮಾನ ತೀರ್ಪನ್ನು ಗೌಪ್ಯವಾಗಿಟ್ಟು ಪ್ರಕಟಿಸಬೇಕು, ಕರಗ ಕಟ್ಟುವ ಸ್ಥಳದ ಶುದ್ಧತೆಯನ್ನ ಕಾಪಾಡುವ ನಿಟ್ಟಿನಲ್ಲಿ ದಶಮಂಟಪ ಸಮಿತಿ ಎಚ್ಚರ ವಹಿಸಬೇಕು. ಕರಗಗೋತ್ಸವ ಆರಂಭವಾದ ದಿನದಿಂದ ದಸರಾ ಕೊನೆಯ ದಿನದವರೆಗೆ ಲೈಟಿಂಗ್ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು, ಹೆಚ್ಚು ಅನುದಾನತರುವಲ್ಲಿ ಸಮಿತಿ ಪ್ರಮುಖ್ಯತೆ ವಹಿಸಬೇಕು ಸೇರಿದಂತೆ ಹಲವು ಬದಲಾವಣೆಗಳ ಕುರಿತು ಚರ್ಚೆ ನಡೆಸಲಾಯಿತು. ಕೋಟೆ ಮಹಾಗಣಪತಿ ದೇವಾಲಯದ ಗೌರವ ಅಧ್ಯಕ್ಷರಾದ ಬಿ.ಎಂ.ರಾಜೇಶ್ ಮಾತನಾಡಿ, ಈ ಬಾರಿ ದಸರಾವನ್ನ ಬಹಳ ಅಚ್ಚುಕಟ್ಟಾಗಿ ಮಾಡುವ…
ಮಡಿಕೇರಿ ಜು.25 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ 2025 ರ ಅಕ್ಟೋಬರ್, 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು. ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ದಿನಾಂಕ:…






