ಲೇಖಕ: admin

ಮಡಿಕೇರಿ ಆ.25 NEWS DESK : ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಆ.27 ರಿಂದ ಸೆ.12ರ ವರೆಗೆ 47ನೇ ವರ್ಷದ ಅದ್ಧೂರಿ ಗಣೇಶೋತ್ಸವ ನಡೆಯಲಿದೆ. ಆ.27 ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿನಿಕೇತನ ಬಡಾವಣೆಯಲ್ಲಿ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಮಹಾಪೂಜೆ ನಡೆಯಲಿದೆ. ನಂತರ 17 ದಿನಗಳ ಕಾಲ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಭಜನೆ ಮತ್ತು ಮಹಾಪೂಜೆ ಜರುಗಲಿದೆ. ಸೆ.6 ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗ ಪೂಜೆ ನಡೆಯಲಿದ್ದು, ಸೆ.12 ರಂದು ಮಹಾಪೂಜೆ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ದೂರಿ ಶೋಭಾಯಾತ್ರೆಯೊಂದಿಗೆ ಮಡಿಕೇರಿಯ ಮುಖ್ಯ ಬೀದಿಗಳಲ್ಲಿ ಕೊಂಡೊಯ್ದು, ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಂತಿನಿಕೇತನ ಯುವ ಸಂಘ ಮನವಿ ಮಾಡಿದೆ. ಕ್ರೀಡಾಕೂಟ : ಗಣೇಶ ಉತ್ಸವದ ಪ್ರಯುಕ್ತ ಸೆ.7 ರಂದು ಸಾರ್ವಜನಿಕರಿಗೆ ಕ್ರೀಡಾಕೂಟ ನಡೆಯಲಿದ್ದು, ಬೆಳಿಗ್ಗೆ 9…

Read More

ಮಡಿಕೇರಿ ಆ.25 NEWS DESK : ಚೇನಂಡ ಕುಟುಂಬದ ಸಾರಥ್ಯದಲ್ಲಿ 2026ರ ಕೊಡವ ಕೌಟುಂಬಿಕ ಹಾಕಿ ಉತ್ಸವ ನಾಪೋಕ್ಲುವಿನಲ್ಲಿ ನಡೆಯಲಿದೆ. ಏ.5 ರಿಂದ ಮೇ 2 ರವರೆಗೆ ಜನರಲ್ ಕೆ.ಎಸ್.ತಿಮ್ಮಯ್ಯ ಮೈದಾನದಲ್ಲಿ ಹಾಕಿ ಹಬ್ಬವನ್ನು ಆಯೋಜಿಸಲಾಗಿದ್ದು, ‘ಪ್ರತಿ ಒಂದು ಗೋಲಿಗೆ ಒಂದು ಸಸಿ’ ನೆಡುವ ಕಾರ್ಯಕ್ರಮ ಈ ಬಾರಿಯ ವಿಶೇಷ ಎಂದು ಚೇನಂಡ ಕುಟುಂಬದ ಪ್ರಮುಖರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇನಂಡ ಹಾಕಿ ಉತ್ಸವದ ಕಾರ್ಯದರ್ಶಿ ಚೇನಂಡ ಮಧು ಮಾದಯ್ಯ ಅವರು 1997ರಲ್ಲಿ ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾಗಿ ಕರಡ ಗ್ರಾಮದಲ್ಲಿ ಹುಟ್ಟಿದ ಕೊಡವ ಕೌಟುಂಬಿಕ ಹಾಕಿ ಉತ್ಸವ ಇಂದು ಬೃಹದಾಕಾರವಾಗಿ ಬೆಳೆದು ಗಿನ್ನಿಸ್ ಬುಕ್ ಆಫ್ ವಲ್ಡ್ ರೆಕಾಡ್ರ್ಸ್ ಮತ್ತು ವಲ್ರ್ಡ್ ವೈಡ್ ಬುಕ್ ಆಫ್ ರೆಕಾಡ್ರ್ಸ್‍ನ ಇತಿಹಾಸದ ಪುಟಗಳಲ್ಲಿ ರಾರಾಜಿಸುತ್ತಿದೆ. ವಿಶ್ವ ದಾಖಲೆ ಬರೆದಿರುವ ಕೊಡವ ಕೌಟುಂಬಿಕ ಹಾಕಿ ಉತ್ಸವ 2026ರಲ್ಲಿ ಚೇನಂಡ ಕುಟುಂಬದ ನೇತೃತ್ವದಲ್ಲಿ ನಡೆಯಲಿದೆ ಎಂದರು. ಕೊಡಗಿನಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ…

Read More

ಮಡಿಕೇರಿ ಆ.25 NEWS DESK : ಪೊನ್ನಂಪೇಟೆ ತಾಲ್ಲೂಕಿನ ನಾಲ್ಕೇರಿ ಗ್ರಾಮದ ಬೊಮ್ಮಡು ಆಶ್ರಮ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ರೂ.23 ಲಕ್ಷ ವೆಚ್ಚದ ಗ್ರಂಥಾಲಯ ಹಾಗೂ ರೂ.2 ಕೋಟಿ ವೆಚ್ಚದ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ವಿದ್ಯಾಭ್ಯಾಸಕ್ಕೆ ಆಶ್ರಮ ಶಾಲೆಯು ಬಹುದೊಡ್ಡ ಕೊಡುಗೆ ನೀಡುತ್ತಿದೆ. ಸರಕಾರವು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ. ಇದರ ಸದುಪಯೋಗ ನಾಡಿನ ವಿದ್ಯಾರ್ಥಿಗಳಿಗೆ ಲಭಿಸುವಂಥಾಗಲಿ ಎಂದು ಹೇಳಿದರು. ಪ್ರಪಂಚದ ಬಗೆಗಿನ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಲು ಪ್ರತಿಯೊಬ್ಬರು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಈಗ ನಿರ್ಮಿಸಲು ಉದ್ದೇಶಿಸಿರುವ ನೂತನ ಗ್ರಂಥಾಲಯಕ್ಕೆ ಸರಕಾರವು ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಿದೆ. ಇದರ ಸದುಪಯೋಗವನ್ನೂ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ನೂತನ…

Read More

ಕುಶಾಲನಗರ ಆ.25 NEWS DESK :  ಬ್ಯಾಂಕ್ ಗಳು, ಕಾರು, ಬೈಕು, ಹೋಮ್ ಅಪ್ಲೈನ್ಸ್, ಆಹಾರ ಇನ್ನಿತರ ಜನರ ಅವಶ್ಯಗಳನ್ನು ಪೂರೈಸುವ ಕಂಪೆನಿಗಳನ್ನು ಒಂದೇ ವೇದಿಕೆಯಡಿ ಸೇರಿಸಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಜೊತೆಗೆ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದು ಮೆಚ್ಚುವಂತದ್ದು ಎಂದು ಕುಶಾಲನಗರ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎಸ್.ಕೆ.ಸತೀಶ್ ತಿಳಿಸಿದರು. ಕುಶಾಲನಗರದ ಗಣಪತಿ ದೇವಸ್ಥಾನದ ಆವರಣದಲ್ಲಿ  ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಸೆ.6 ರಂದು ನಡೆಯುವ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೊಡ್ಡ ದೊಡ್ಡ ಕಂಪೆನಿಗಳ ಜೊತೆಗೆ ಸ್ಥಳೀಯರಿಗೂ ಅವಕಾಶ ನೀಡಿರುವುದು ಶ್ಲಾಘನೀಯ. ಇದರಿಂದ ಕೊಡಗು ಜಿಲ್ಲೆಯ ವ್ಯಾಪಾರ ವಹಿವಾಟು ಹೆಚ್ಚಳವಾಗುತ್ತೆ. ಮಾರುಕಟ್ಟೆ ವಿಸ್ತರಣೆಗಾಗಿ ಇಂತಹ ಮೇಳಗಳು ಸಹಕಾರಿ. ಅದರಲ್ಲೂ ಕುಶಾಲನಗರದ ಹೆಸರು ರಾಜ್ಯದ ಮೂಲೆ ಮೂಲೆಗೆ ತಲುಪುವ ಮೂಲಕ ನಮ್ಮ ಮಾರುಕಟ್ಟೆಯ ಶಕ್ತಿ ಗೊತ್ತಾಗಲಿದೆ ಎಂದರು. ಚೇಂಬರ್ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಯಾವುದೇ…

Read More

ಮಡಿಕೇರಿ ಆ.25 NEWS DESK : ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಮತ್ತು ಪರಿವರ್ತನಾ ಸಹಕಾರ ಸಂಘದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ  ಶಾಸಕರು, ಸಹಕಾರ ಸಂಘಗಳು ರೈತರ ಹಾಗೂ ನಾಡಿನ ಆರ್ಥಿಕ ಅಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡುತ್ತಿವೆ. ನೂತನ ಕಟ್ಟಡದಲ್ಲಿ, ಪ್ರಸ್ತುತ ಸಂಘವು ಮತ್ತಷ್ಟು ಯಶಸ್ಸನ್ನು ಕಾಣುತ್ತಾ ಲಾಭದೊಂದಿಗೆ ಈ ಭಾಗದ ಎಲ್ಲಾ ರೈತರ ಶ್ರೇಯೋಭಿವೃದ್ಧಿಗೆ ಕೊಡುಗೆ ನೀಡುವಂತಾಗಲಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸದರಾದ ಯದುವೀರ್ ಒಡೆಯರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪೃಥ್ವಿ, ಬಾಳಲೆ ವಲಯ ಅಧ್ಯಕ್ಷ ಕೋದಂಡ ಸೋಮಣ್ಣ, ಬಾಳಲೆ ಪಂಚಾಯಿತಿ ಅಧ್ಯಕ್ಷ ಸ್ಮಿತಾ ಪೊನ್ನಪ್ಪ, ಬಾಳಲೆ ಪಂಚಾಯಿತಿಯ ಮಾಜಿ ಸದಸ್ಯ ವಿನು ಉತ್ತಪ್ಪ, ನಿಟ್ಟೂರು ವಲಯ ಅಧ್ಯಕ್ಷರಾದ ಪವನ್, ಪಂಚಾಯಿತಿ ಅಧ್ಯಕ್ಷರಾದ ಅಮುಣಿ, ಸದಸ್ಯ ಅಪ್ಪಣ್ಣ, ಪೊನ್ನಪ್ಪಸಂತೆ ವಲಯ ಅಧ್ಯಕ್ಷ ಚೆಟ್ಟಿಮಾಡ ರಾಬಿನ್ ಬೋಪಣ್ಣ,…

Read More

ಬೆಂಗಳೂರು ಆ.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಸಿ, ಪ್ರಗತಿ ಪರಿಶೀಲನೆ ನಡೆಸಿದರು. ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.25 NEWS DESK : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಶಾಖೆ ವತಿಯಿಂದ ರಾಜ್ಯಮಟ್ಟದ ಕ್ರೀಡೋತ್ಸವ ನಡೆಯಿತು. ನಗರದ ಜಿಲ್ಲಾ ಒಳಂಗಾಣ ಕ್ರೀಡಾಂಗಣದಲ್ಲಿ ಪಂದ್ಯಾವಳಿಯಲ್ಲಿ  ರಾಜ್ಯದ ವಿವಿಧಡೆಯಿಂದ ಆಗಮಿಸಿದ 50ಕ್ಕೂ ಹೆಚ್ಚಿನ ವೈದ್ಯರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದರು. ವೈದ್ಯರಿಗಾಗಿ ಶಟಲ್ ನಲ್ಲಿ ಪುರುಷರು, ಮಹಿಳೆಯರು, ವಿದ್ಯಾರ್ಥಿಗಳ ವಿಭಾಗ ಹಾಗೂ ಸಂಘಟಿತ ವಿಭಾಗದಲ್ಲಿ ಕ್ರೀಡಾಸ್ಪಧೆ೯ಗಳು ಜರುಗಿದವು. ಇದರೊಂದಿಗೆ ಚೆಸ್ ಹಾಗೂ ಕೇರಂ ಸ್ಪರ್ಧೆಗಳು ಕೂಡ ಆಯೋಜಿಸಲ್ಪಟ್ಟಿದ್ದವು. ಅ.18 ನಡೆಯಲಿರುವ ಬೆಳ್ಳಿ ಹಬ್ಬದ ಆಚರಣೆಯಂದು ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.

Read More

ಮಡಿಕೇರಿ ಆ.25 NEWS DESK : ಸಾಹಿತ್ಯ ಕೃತಿಗಾಗಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಕೆ.ಬಿ.ಸೂಯ೯ಕುಮಾರ್ ಮತ್ತು ವೃತ್ತಿ ಜೀವನದ ಸಾಧನೆಗಾಗಿ ಪ್ರಶಸ್ತಿಗೆ ಭಾಜನರಾದ ಡಾ.ರವಿ ಅಪ್ಪಾಜಿ ಅವರನ್ನು ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಂಗಳಮುಖಿಯ ಜೀವನಗಾಥೆಯಾದ ಮಂಗಳಿ ಕೖತಿಗಾಗಿ ರಾಜ್ಯ ವೈದ್ಯ ಬರಹಗಾರರ ಸಂಘದಿಂದ ಪ್ರಶಸ್ತಿ ಪಡೆದ ಮಡಿಕೇರಿಯ ಡಾ.ಕೆ.ಬಿ.ಸೂಯ೯ಕುಮಾರ್ ಮತ್ತು ರಾಜ್ಯಮಟ್ಟದ ಹೆಲ್ತ್ ಕೇರ್ ಪ್ರಶಸ್ತಿ ಪಡೆದ ಮಡಿಕೇರಿಯ ಡಾ. ರವಿ ಅಪ್ಪಾಜಿ ಅವರನ್ನು ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶ್ರೀಯುತರ ಸಾಧನೆ ಮತ್ತಷ್ಟು ಹೆಚ್ಚಲಿ ಎಂದು ಹಾರೈಸಲಾಯಿತು. ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕದ ಅಧ್ಯಕ್ಷ ಡಾ.ಶಾಮ್ ಅಪ್ಪಣ್ಣ, ಡಾ.ಪಾತಿಮ, ಡಾ. ಕೆ.ಬಿ.ಮುತ್ತಪ್ಪ ಮತ್ತು ಸಂಘದ ಜಿಲ್ಲಾ ಪ್ರಧಾನ ಕಾಯ೯ದಶಿ೯ ಡಾ. ಸಿ.ಆರ್.ಪ್ರಶಾಂತ್ ಅವರು ಸಾಧಕ ವೈದ್ಯರನ್ನು ಗೌರವಿಸಿದರು. ಕಾಯ೯ಕ್ರಮದಲ್ಲಿ ಮೈಸೂರಿನ ನಾರಾಯಣ ಹೖದಯಾಲಯದ ತಜ್ಞ ವೈದ್ಯರಾದ ಡಾ.ಲೇಪಾಕ್ಷಿ, ಡಾ. ವಿದ್ಯಾ,…

Read More

ಮಡಿಕೇರಿ ಆ.25  NEWS DESK : ಮಡಿಕೇರಿ ನಗರದ ಚೈನ್ ಗೇಟ್ ನ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಳಿಯ 18ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಹಿರಿಯರಿಗೆ ಹಾಗೂ ಕಿರಿಯರಿಗೆ ಕ್ಯಾರಮ್ ಬೋರ್ಡ್ ಹಾಗೂ ಚೆಸ್ ಪಂದ್ಯಾವಳಿ ನಡೆಯಿತು. ಡಾ.ಕೆ.ಬಿ.ಸೂರ್ಯ ಕುಮಾರ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಮಡಿಕೇರಿ ಮೂಡ ಸದಸ್ಯ ಆರ್.ಪಿ.ಚಂದ್ರಶೇಖರ್, ಸಂಘದ ಅಧ್ಯಕ್ಷರಾದ ರಾಹುಲ್, ರಾಘವೇಂದ್ರ, ಮಧುಗೌಡ, ಸಚಿನ್, ಸುನಿಲ್, ಲೋಕೇಶ್ ಎಸ್, ಆರ್.ಸಿ.ಗೌರವ್, ಬಿ.ಬಿ.ದರ್ಶನ್ , ಪ್ರಶಾಂತ್, ಪುನೀತ್ ಕುಮಾರ್, ಯತೀಶ್ ರಂಜಿತ್ ಹಾಗೂ ರಾಜೇಶ್ ಮತ್ತು ಸಂಘದ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಆ.25 NEWS DESK : ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಭಾಗಮಂಡಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕೊಟ್ಟೂರು ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿದ್ಯಾಸಂಸ್ಥೆಯ ಪಿ.ಎನ್.ಜೀವ ನಾಣಯ್ಯ 400 ಮೀಟರ್ ಓಟದಲ್ಲಿ ಪ್ರಥಮ, 800 ಮೀಟರ್ ಓಟದಲ್ಲಿ ಆದರ್ಶ್ ಕೆ.ಬಿ.ದ್ವಿತೀಯ, 400 ಮೀಟರ್ ಓಟದಲ್ಲಿ ಕೆ.ಎಲ್.ಯಶ್ವಿನ್ ಎರಡನೇ ಸ್ಥಾನ, ಬಾಲಕರ 4×400 ರೀಲೆಯಲ್ಲಿ ದ್ವಿತೀಯ ಸ್ಥಾನ ಭಾರದ ಗುಂಡು ಹಾಗೂ ತಟ್ಟೆ ಎಸೆತದಲ್ಲಿ ಪಿ. ಸಿ ಶರಣ್ ಚಂಗಪ್ಪ ಪ್ರಥಮ ಸ್ಥಾನ, ಜಾವೇಲಿನ್ ಎಸೆತದಲ್ಲಿ ಆಶಿಕ್ ಮಂದಣ್ಣ ಕೆ. ಪಿ ಪ್ರಥಮ ಸ್ಥಾನ, ಬಾಲಕಿಯರ ಭಾರದ ಗುಂಡು ಎಸೆತದಲ್ಲಿ ಚಸ್ಮಿತಾ ಪ್ರಥಮ, ತಟ್ಟೆ ಎಸೆತದಲ್ಲಿಶಿವಾನಿ ಕೆ. ಸಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಬಾಲಕಿಯರ 200 ಮೀಟರ್ ಓಟದಲ್ಲಿ ವರುಣಿಕ ಪಿ. ಎಂ. ಮೂರನೇ, ಬಾಲಕರ ಫುಟ್’ಬಾಲ್ ಹಾಗೂ ಕಬಡ್ಡಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಾಲ್ಲೂಕು ಮಟ್ಟದ ಚೆಸ್…

Read More