ಮಡಿಕೇರಿ ಜ.27 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಪ್ರಯುಕ್ತ ಜನವರಿ, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರತಿಮೆ ಬಳಿ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಜನವರಿ 28 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ಶಾಲಾ-ಕಾಲೇಜು, ಸೈನಿಕ ಶಾಲೆ, ಎನ್ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಾರ್ಚ್ ಪಾಸ್ಟ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಲೇಖಕ: admin
ಸುಂಟಿಕೊಪ್ಪ,ಜ.27 NEWS DESK : ಬಾಳೆಕಾಡು ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ಸೇವಾ ಸಮಿತಿಗೆ 2026-27ನೇ ಸಾಲಿನ ಅಧ್ಯಕ್ಷರಾಗಿ ಹರೀಶ್(ಹರೀ), ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್(ಕುಟ್ಟಿ) ಆಯ್ಕೆಯಾಗಿದ್ದಾರೆ. ದೇವಾಲಯದ ಆವರಣದಲ್ಲಿ ಅಧ್ಯಕ್ಷ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹರೀಶ, ಸಹ ಉಪಾಧ್ಯಕ್ಷರಾಗಿ ವಸಂತ, ಸಹ ಕಾರ್ಯದರ್ಶಿಯಾಗಿ ಅರುಣ, ಖಜಾಂಚಿಯಾಗಿ ಸತೀಶ್, ಸಹ ಖಜಾಂಚಿಯಾಗಿ ಸುಜಯ್, ಗೌರವ ಅಧ್ಯಕ್ಷರುಗಳಾಗಿ ಅಶೋಕ, ಶಶಿ, ಉನ್ನಿಕೃಷ್ಣ, ತಂಗಪ್ಪ, ಅಶೋಕ್, ಕುಮಾರ, ವಾಸು, ಮುರುಗೇಶ್, ರಾಮಚಂದ್ರ ನೇಮಗೊಂಡಿದ್ದಾರೆ. ಸಲಹೆಗಾರರಾಗಿ ಪ್ರವೀಣ್, ಸುರೇಶ್, ಸಂದೀಪ್ (ರಾಜೇಶ್) ಮೋಹನ್ ಪ್ರದೀಪ್, ವಿನು, ಬಿ,ರವಿ,ಸಿ, ಮೋಹನ್, ಆರ್.ಸುಧಿ ಅವರನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜ.27 NEWS DESK : 2026-27ನೇ ಸಾಲಿನ ಮಡಿಕೇರಿ ನಗರಸಭೆ ಆಯವ್ಯಯ ತಯಾರಿಸುವ ಸಲುವಾಗಿ ಈ ಸಾಲಿನ ಆದಾಯ ಮತ್ತು ವ್ಯಯದ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಲು ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಚುನಾಯಿತ ಆಡಳಿತ ಸದಸ್ಯರ ಉಪಸ್ಥಿತಿಯಲ್ಲಿ ಜನವರಿ, 28 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಈ ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಎನ್ಜಿಒಗಳು ಮತ್ತು ಚುನಾಯಿತ ಸ್ಥಳೀಯ ಸಂಸ್ಥೆಯ ಮಾಜಿ ಜನಪ್ರತಿನಿಧಿಗಳು ಹಾಗೂ ಆಸಕ್ತಿಯುಳ್ಳ ಸಾರ್ವಜನಿಕರು ಹಾಜರಾಗಿ ತಮ್ಮ ಸೂಕ್ತ ಸಲಹೆ ಸೂಚನೆ ನೀಡುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.
ಮಡಿಕೇರಿ ಜ.27 NEWS DESK : ನಗರಸಭೆ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ದನಗಳು ನಿರ್ಬಂಧವಿಲ್ಲದೆ ಓಡಾಡುತ್ತಿವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಬಿಡಾಡಿ ಜಾನುವಾರುಗಳಿಂದ ರಸ್ತೆ ಅಪಘಾತಗಳು, ಜೀವಹಾನಿ ಹಾಗೂ ಆಸ್ತಿನಷ್ಟ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಬೀಡಾಡಿ ದನಗಳಿಗೆ ಸಂಬಂಧಿಸಿದ ವಾರಸುದಾರರು ದನ/ ಹಸುಗಳನ್ನು ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಡುವುದನ್ನು ತಕ್ಷಣವೆ ನಿಲ್ಲಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಸಂಬಂಧಿಸಿದ ವಾರಸುದಾರರ ವಿರುಧ್ಧ ಬಿಎನ್ಎಸ್ 2023 ಸೆಕ್ಚನ್ 291 ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಇದು ಕಡ್ಡಾಯ ಆದೇಶವಾಗಿದ್ದು ಸಾರ್ವಜನಿಕ ಸುರಕ್ಷಿತ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಈ ಪ್ರಕಟಣೆಯನ್ನು ಹೊರಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.
ಮಡಿಕೇರಿ ಜ.27 NEWS DESK : ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡುವ ಅಂಕಿ ಅಂಶ ವಿವರವನ್ನು ಮುಂದಿನ ಯೋಜನೆಗಳಿಗೆ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದ್ದು, ವರದಿಗೆ ಸಂಬಂಧಿಸಿದ ನಿಖರವಾದ ಮಾಹಿತಿಯನ್ನು ಫೆಬ್ರವರಿ-2026 ರೊಳಗೆ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಳಾದ ಡಾ.ಗಣೇಶ್ ಪ್ರಸಾದ್ ಅವರು ಮಾತನಾಡಿ, ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ವರದಿಗಾಗಿ 117 ಅಂಶಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಾನವ ಅಭಿವೃದ್ಧಿ ವರದಿ ಆಧಾರದ ಮೇಲೆ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಅನುದಾನ ಹಂಚಿಕೆಯಾಗುತ್ತದೆ. ಶಿಶು ಮತ್ತು ತಾಯಂದಿರ ಮರಣ, ಶಾಲೆ ಬಿಟ್ಟ ಮಕ್ಕಳ ಸಂಖ್ಯೆಗಳನ್ನು ನಿಖರವಾಗಿ ದಾಖಲಿಸಬೇಕು ಎಂದರು. ಮೈಸೂರು ವಿಶ್ವವಿದ್ಯಾನಿಲಯದ…
ನಾಪೋಕ್ಲು ಜ.27 NEWS DESK : ಚೆರಿಯಪರಂಬು ದರ್ಗಾದ ವಾರ್ಷಿಕ ಮಖಾಂ ಉರೂಸ್ ಸಮಾರಂಭದ ಪೋಸ್ಟರ್ ಅನ್ನು ಬಿಡುಗಡೆಗೊಳಸಲಾಯಿತು. ಪ್ರತಿ ವರ್ಷ ಜರುಗುವ ಉರೂಸ್ ಈ ವರ್ಷ ಫೆ.6 ರಿಂದ 10 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇದರ ಪೋಸ್ಟರ್ ಅನ್ನು ಜುಮಾ ನಮಾಜಿನ ಬಳಿಕ ಜುಮಾ ಮಸೀದಿಯ ಆವರಣದಲ್ಲಿ ಆಯೋಜಿಸಲಾದ ಸರಳ ಸಮಾರಂಭದಲ್ಲಿ ಮಸೀದಿಯ ಸಹಾಯಕ ಖತೀಬರಾದ ರಫೀಕ್ ಸಖಾಫಿ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚೆರಿಯಪರಂಬು ಜಮಾಯತಿನ ಹಾಲಿ ಹಾಗೂ ಮಾಜಿ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಹಾಗೂ ಮತ ಬಾಂಧವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.27 NEWS DESK : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಹಿಂದಿ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿಷ್ಟಪ್ಪ ಹನಮಂತಪ್ಪ ತಳವಾರ ಅವರಿಗೆ ಪಿ.ಹೆಚ್.ಡಿ ಪದವಿ ಲಭಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜ್ ನ ಹಿಂದಿ ಪ್ರಾಧ್ಯಾಪಕರಾದ ಡಾ.ಸುಮಾ ಟಿ.ರೋಡನ್ನವರ ಅವರ ಮಾರ್ಗದರ್ಶನದಲ್ಲಿ ನಡೆದ “ಸಮಕಾಲೀನ ಪ್ರಮುಖ ಹಿಂದಿ ದಲಿತ ಮಹಿಳಾ ಕಥಾ ಸಾಹಿತ್ಯ ಮೇ ವ್ಯಕ್ತ ದಲಿತ ವಿಮರ್ಶ” ಎಂಬ ವಿಷಯದ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ. ಅತ್ಯುತ್ತಮ ಹಿಂದಿ ಪ್ರಾಧ್ಯಾಪಕರಾಗಿ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿರುವ ಡಾ.ಬಿಷ್ಟಪ್ಪ ಹನಮಂತಪ್ಪ ತಳವಾರ ಅವರು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹಿರೂರ ಗ್ರಾಮದ ದ್ಯಾಮವ್ವ ಹಾಗೂ ದಿ.ಹನಮಂತಪ್ಪ ತಳವಾರ ದಂಪತಿಯ ಪುತ್ರ. ಪಿಹೆಚ್ಡಿ ಪದವಿ ಪಡೆದ ಇವರಿಗೆ ಕಾಲೇಜ್ ನ ಪ್ರಾಂಶುಪಾಲರು, ಎಲ್ಲಾ ಭೋದಕ, ಬೋಧಕೇತರ ಸಿಬ್ಬಂದಿ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ನಾಪೋಕ್ಲು ಜ.27 NEWS DESK : ಶಿಕ್ಷಣ ಇಲಾಖೆಯು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಪೂರಕ ಕಲಿಕೆಗೆ ಸಿದ್ಧಗೊಳಿಸುವ ಸಲುವಾಗಿ ಕಲಿಕಾಹಬ್ಬವನ್ನು ಆಯೋಜಿಸುತ್ತಿದ್ದು ಇದರಲ್ಲಿ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ ಎಂದು ನಾಪೋಕ್ಲು ಗ್ರಾಮ ಪಂಚಾಯತಿಯ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ಕರ್ನಾಟಕ ಪಬ್ಲಿಕ್ (ಕೆಪಿಎಸ್) ಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಪೋಕ್ಲು ಕ್ಲಸ್ಟರ್ ನ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಆರ್ ಪಿ.ಮಂಜುಳ ಚಿತ್ರಾಪುರ ಮಾತನಾಡಿ ಎಫ್ಎಲ್ಎನ್ ಚಟುವಟಿಕೆಗಳ ಬಲವರ್ಧನೆಗೆ ಕಲಿಕಾ ಹಬ್ಬವು ಸಂತೋಷದಾಯಕ ಹಾಗೂ ಅನುಭವಯುಕ್ತ ಕಲಿಕೆಯ ವಾತಾವರಣವನ್ನು ಪ್ರೇರೇಪಿಸುತ್ತದೆ. ಮಕ್ಕಳ ಕಲಿಕೆಯ ಒತ್ತಡವನ್ನು ಕಡಿಮೆಗೊಳಿಸಲು ಹಾಗೂ ಎಫ್.ಎಲ್.ಎನ್ ನಲ್ಲಿ ಮಕ್ಕಳು ಸಾಧಿಸಿರುವ ಕಲಿಕಾ ಫಲಗಳನ್ನು ತಿಳಿಯಲು ಇದು ವೇದಿಕೆಯನ್ನು ಒದಗಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಸಮಿತಿಯ ಸದಸ್ಯರಾದ ಕೆಟೋಳಿರ ರಾಜ ಗಣಪತಿ, ಇತರ ಸದಸ್ಯರು, ಕಕ್ಕಬೆ ಸಿ.ಆರ್.ಪಿ ಕಲ್ಪನಾ, ಶಿಕ್ಷಕರು, ಸಿಬ್ಬಂದಿಗಳು ಹಾಗೂ ಪೋಷಕರು ಹಾಜರಿದ್ದರು. ಶಾಲೆಯ ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕಿ…
ಮಡಿಕೇರಿ ಜ.27 NEWS DESK : ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ “ರಿಪಬ್ಲಿಕ್ ಸೇಲ್” ಜ.22ರಿಂದ 26ರವರೆಗೆ ಆಯೋಜಿಸಿತ್ತು. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ ಎಲ್ ರಿಪಬ್ಲಿಕ್ ಸೇಲ್ನಿಂದಾಗಿ ಮೇಕಿಂಗ್ ಚಾರ್ಜಸ್ನ ಮೇಲೆ ವಿಶೇಷ ರಿಯಾಯಿತಿ ದರವು ಗ್ರಾಹಕರಿಗೆ ಹೆಚ್ಚಿನ ಲಾಭದಾಯಕವಾಗಿದೆ ಹಾಗೂ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.
ಮಡಿಕೇರಿ ಜ.27 NEWS DESK : ಮೈಸೂರಿನಲ್ಲಿ ನಡೆದ ಇಂಟರ್ ಡೋಜೊ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಚೇರಂಬಾಣೆಯ ತನುಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾಳೆ. ತನುಶ್ರೀ ಚೇರಂಬಾಣೆಯ ಬೇಂಗೂರುವಿನ ಹೆಚ್.ಜಿ.ದಿನೇಶ್ ಹಾಗೂ ಹೆಚ್.ಡಿ.ಮೀನಾಕ್ಷಿ ದಂಪತಿಯ ಪುತ್ರಿ. ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ತರಬೇತುದಾರರಾದ ಡಾ.ದೀಲಿತ್ ಉತ್ತಪ್ಪ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.






