ಕುಶಾಲನಗರ ಆ.25 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಹಾಗೂ ಕಬ್, ಬುಲ್ ಬುಲ್ ಮಕ್ಕಳಿಗೆ ದೇಶಭಕ್ತಿ ಗೀತೆಗಳ ತಾಲ್ಲೂಕು ಮಟ್ಟದ ಗೀತ ಗಾಯನ ಸ್ಪರ್ಧೆ ನಡೆಯಿತು. ಗೀತಗಾಯನ ಸ್ಪರ್ಧೆಗೆ ಚಾಲನೆ ನೀಡಿ ಶುಭ ಹಾರೈಸಿದ ನಂತರ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮಕ್ಕಳ ಚಟುವಟಿಕೆಗಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಸದಾ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು. ಗೀತ ಗಾಯನದಂತಹ ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ ರಾಷ್ಟ್ರೀಯ…
ಲೇಖಕ: admin
ಮಡಿಕೇರಿ ಆ.25 NEWS DESK : ಭಾಗಮಂಡಲದಲ್ಲಿ ನಡೆದ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಗಮನ ಸೆಳೆಯಿತು. ಕ್ರೀಡಾಕೂಟದಲ್ಲಿ 500ಕ್ಕೂ ಅಧಿಕ ಮಂದಿ ಪಾಲ್ಗೊಂಡು ಕೆಸರಿನಲ್ಲಿ ಮಿಂದೆದ್ದರು. ಜಿಲ್ಲಾಡಳಿತ, జిల్లా ಪಂಚಾಯಿತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ ವತಿಯಿಂದ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು ಅವರ ಗದ್ದೆಯಲ್ಲಿ ನಡೆದ 33ನೇ ವರ್ಷದ ಕ್ರೀಡಾಕೂಟದಲ್ಲಿ ಉಡುಪಿ, ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಯ ಸ್ಪರ್ಧಿಗಳು ಭಾಗವಹಿಸಿದ್ದರು. ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಕ್ರೀಡಾಕೂಟ ಉದ್ಘಾಟಿಸಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೆಸರುಗದ್ದೆಯ ಆಟೋಟಗಳನ್ನು ವೀಕ್ಷಿಸಿದರು. ನಂತರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದ ಯಶಸ್ ರೈ ಅವರನ್ನು ಸನ್ಮಾನಿಸಿದರು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್, ಕ್ರೀಡಾ ಸಮಿತಿಯ ಸಂಚಾಲಕ ಕಾವೇರಿ…
ಮಡಿಕೇರಿ NEWS DESK ಆ.24 : ವಿಶ್ವ ಹಿಂದೂ ಪರಿಷತ್ ಕುಶಾಲನಗರ ಘಟಕದ ವತಿಯಿಂದ ಕುಶಾಲನಗರದಲ್ಲಿ ಗೋಕುಲೋತ್ಸವ ಕಾರ್ಯಕ್ರಮ ನಡೆಯಿತು. 60ಕ್ಕೂ ಹೆಚ್ಚು ಪುಟಾಣಿಗಳು, ಶ್ರೀಕೃಷ್ಣ ರಾಧೆಯರಾಗಿ ವೇದಿಕೆಯಲ್ಲಿ ಸಂಭ್ರಮಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ಉಪನ್ಯಾಸಕಿ ಕೆ.ಜಯಲಕ್ಷ್ಮಿ ಅವರು ಶ್ರೀ ಕೃಷ್ಣನ ಉಪದೇಶ ಮತ್ತು ಬಾಲ್ಯವನ್ನು ವಿವರಿಸಿದರು. ಶ್ರೀಕೃಷ್ಣನ ಉಪದೇಶ ಪಾಲನೆಯಿಂದ ಜೀವನ ಸಾಕ್ಷಾತ್ಕಾರ ಎಂದು ವಿವರಿಸಿದರು. ತಿರುಪತಿ ಭಜನಾ ಮಂಡಳಿಯ ಮುಖ್ಯಸ್ಥೆ ಪದ್ಮಾ ಪುರುಷೋತ್ತಮ್ ಅಧ್ಯಕ್ಷತೆ ವಹಿಸಿದ್ದರು. ಸುಂಟಿಕೊಪ್ಪದ ಕುಮಾರಿ ಶ್ರೀಶ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪುಟಾಣಿಗಳಿಗೆ ನೆನಪಿನ ಕಾಣಿಕೆ ಮತ್ತು ಪ್ರಶಂಸನಾ ಪತ್ರ ನೀಡಲಾಯಿತು.
ಬೆಂಗಳೂರು NEWS DESK ಆ.24 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ ರವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪರಿಶೀಲನಾ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪಾಲ್ಗೊಂಡು ಯೋಜನೆ ಕಾರ್ಯಗತಗೊಳಿಸುವ ಸಂಭಂಧ ಸಚಿವರೊಂದಿಗೆ ಚರ್ಚಿಸಿದರು. ಸಚಿವರು ಯೋಜನೆ ಪ್ರಗತಿ ವಿವರವನ್ನು ಪರಿಶೀಲಿಸಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್ ಲ್ಯಾಬ್ ಸ್ಥಾಪಿಸುವ ಸಂಬಂಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ ಟೆಂಡರ್ ಆಹ್ಚಾನಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ಡಾ. ವೆಂಕಟೇಶ್ ಮೂರ್ತಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕಾರದ ಡಾ. ಸುಜಾತ ರಾಥೋಡ್, ರಾಜ್ಯ ಪಿಪಿಪಿ ಕೋಶದ ನಿರ್ದೇಶಕಾರದ ಪುರುಷೋತ್ತಮ್ ಸಿಂಗ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ…
ವಿರಾಜಪೇಟೆ NEWS DESK ಆ.24 : ಗೋಣಿಕೊಪ್ಪಲುವಿನ ಕಾಲ್ಸ್ ಶಾಲಾ ಮೈದಾನದಲ್ಲಿ ಸೆ.19 ರಂದು ಕಿವುಡರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಗೌರವ ಅಧ್ಯಕ್ಷ ಜೋಸೆಫ್ ಸ್ಯಾಮ್ ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಿವುಡ ಸಮುದಾಯದ ಸಬಲಿಕರಣಕ್ಕಾಗಿ ನಮ್ಮ ಸಂಘವು ಎಂಟು ವರ್ಷಗಳ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ಕಿವುಡ ರ ವಯುಕ್ತಿಕ ಬೆಳವಣಿಗೆ ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ 2025ರ ಸೆಪ್ಟೆಂಬರ್ 19 ರಂದು ಗೋಣಿಕೊಪ್ಪಲುವಿನ ಕಾಲ್ಸ್ ವಿದ್ಯಾ ಸಂಸ್ಥೆಯ ಮೈದಾನದಲ್ಲಿ ರಾಜ್ಯ ಮಟ್ಟದ ಕಿವುಡರ ಕ್ರೀಡಾಕೂಟವನ್ನು ಆಯೋಜನೆ ಮಾಡಲು ತೀರ್ಮಾನಿಸಿರುತ್ತೇವೆ. ಕರ್ನಾಟಕದಾದ್ಯಂತ 15 ಜಿಲ್ಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ಕಿವುಡ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ವಸತಿ ಮತ್ತು ಊಟ, ಚಿಕಿತ್ಸಾ ವ್ಯವಸ್ಥೆ, ಕ್ರೀಡಾ ಕಿಟ್ ಗಳು, ಉಪಕರಣಗಳು, ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಟ್ರೋಫಿ, ಪದಕಗಳು, ಪ್ರಮಾಣ ಪತ್ರ…
ಮಡಿಕೇರಿ NEWS DESK ಆ.24 : ರಬೀಉಲ್ ಅವ್ವಲ್ ಚಂದ್ರದರ್ಶನವಾಗಿದೆ, ಆದ್ದರಿಂದ ನಾಳೆ ಆಗಸ್ಟ್ 25 ರಂದು ರಬೀಉಲ್ ಅವ್ವಲ್ ಒಂದು ಆಗಿರುತ್ತದೆ. ಜಿಲ್ಲೆಯಲ್ಲಿ ಈದ್ ಮಿಲಾದ್ ನ್ನು ಸೆಪ್ಟೆಂಬರ್ 5 ಶುಕ್ರವಾರದಂದು ಆಚರಿಸಲಾಗುತ್ತದೆ ಎಂದು ಕೊಡಗು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ NEWS DESK ಆ.24 : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಆ.27ರಂದು ವಿರಾಜಪೇಟೆಯಲ್ಲಿ 11ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬುಧವಾರ ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಮಾನವ ಸರಪಳಿ ನಿರ್ಮಿಸಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ…
ಮಡಿಕೇರಿ NEWS DESK ಆ.23 : ಕೊಡಗು ವಿಶ್ವವಿದ್ಯಾಲಯದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಹತ್ತು ದಿನಗಳಲ್ಲಿ ಮೌಲ್ಯಮಾಪನದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅದೇ ದಿನ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ. ಇದೇ ಅಗಸ್ಟ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು 200 ವಿದ್ಯಾರ್ಥಿಗಳು ಹಾಜರಾಗಿದ್ದರು. ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ಮತ್ತು ಹೊರಗಿನ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್ಸೈಟ್ KUK.Karnataka.gov.in…
ಮಡಿಕೇರಿ NEWS DESK ಆ.23 : ಸೋಮವಾರಪೇಟೆ ತಾಲ್ಲೂಕಿನ ಹುದಗೂರು ಗ್ರಾಮದಲ್ಲಿ ನಡೆದ ನಾಟಿ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಅವರು ನಾಟಿ ಕಾರ್ಯ ಮಾಡಿ ಗಮನ ಸೆಳೆದರು. ಐಮುಡಿಮಂಡ ಗಣೇಶ್ ಅವರ ಗದ್ದೆಯಲ್ಲಿ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೆಷನ್ ಸೋಮವಾರಪೇಟೆ ಇವರ ವತಿಯಿಂದ ಆಯೋಜಿಸಿದ್ದ 7ನೇ ವರ್ಷದ ನಾಟಿ ಹಬ್ಬ ಮತ್ತು ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಪಾಲ್ಗೊಂಡಿದ್ದರು.
ಮಡಿಕೇರಿ NEWS DESK ಆ.23 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಇವರ ಸಹಯೋಗದಲ್ಲಿ ಇಂದು ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿ ಮಾತನಾಡಿ ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಪೊಂಜಂಡ ಎ.ಗಣಪತಿ, ಮೈಸೂರು ಮಹಾ ನಗರಪಾಲಿಕೆ ಮಾಜಿ ಸದಸ್ಯರಾದ ಮಾಳೇಟಿರ ಸುಬ್ಬಯ್ಯ, ಅಕಾಡೆಮಿ ಸದಸ್ಯರು ಇದ್ದರು. ಮಂಗಳೂರು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಡಾ.ಬೋಡುಕುಟ್ಟಡ ರಾಧಿಕ ಕುಟ್ಟಪ್ಪ ಅವರು “ನಾ ಪುಟ್ಟ್ನ ಮಣ್ಣ್” ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಿದರು. ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ನಾಟಕ ಪ್ರದರ್ಶನ…






