ಮಡಿಕೇರಿ ಸೆ.29 NEWS DESK : ಮಡಿಕೇರಿಯ ದಸರಾ ಜನೋತ್ಸವದ ಸಂಭ್ರಮಗಳ ನಡುವೆಯೇ, ಕ್ರೀಡ ಪ್ರತಿಭೆಗಳ ಉತ್ತೇಜನಕ್ಕೆ ದಸರಾ ಕ್ರೀಡಾ ಸಮಿತಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಶುಕ್ರವಾರದಂದು ನಡೆದ ‘ಚದುರಂಗ ಸ್ಪರ್ಧೆ’ಯಲ್ಲಿ ನೂರಾರು ಮಕ್ಕಳು, ಸಾರ್ವಜನಿಕರು ಪಾಲ್ಗೊಂಡುದು ವಿಶೇಷ. ನಗರದ ಗಾಂಧಿ ಮೈದಾನದ ಬಳಿಯ ರಾಜದರ್ಶನದ ಸಭಾಂಗಣದಲ್ಲಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷರಾದ ಪ್ರದೀಪ್ ಕರ್ಕೆರ ಅವರ ಆಸಕ್ತಿ ಮತ್ತು ಮುತುವರ್ಜಿಯಿಂದ ಆಯೋಜಿತ ಚದುರಂಗ ಸ್ಪರ್ಧೆ ವಿವಿಧ ವಿಭಾಗಗಳಲ್ಲಿ ಸಂಜೆಯವರೆಗು ನಡೆಯಿತು. ಸ್ಪರ್ಧೆಯಲ್ಲಿ ವಿವಿಧ ಶಾಲಾ ಕಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಸೇರಿದಂತೆ 300 ಕ್ಕೂ ಹೆಚ್ಚಿನ ಸ್ಪರ್ಧೆಗಳು ಪಾಲ್ಗೊಂಡಿದ್ದರು. :: ಕ್ರೀಡೆಯನ್ನು ಕಡೆಗಣಿಸದಿರಿ :: ಚದುರಂಗ ಸ್ಪರ್ಧೆಯನ್ನು ಜ್ಯೋತಿ ಬೆಳಗಿ ಉದ್ಘಾಟಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರು ಮಾತನಾಡಿ, ಶೈಕ್ಷಣಿಕ ಹಂತದಲ್ಲಿ ಮಕ್ಕಳಿಗೆ ವ್ಯಾಸಂಗ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಕ್ರ್ರೀಡಾಚಟುವಟಿಕೆಗಳಾಗಿದೆ. ಆರೋಗ್ಯಕರವಾದ ಚಿಂತನೆಗೆ ದೈಹಿಕ ಸ್ವಾಸ್ಥ್ಯವು ಅತ್ಯಂತ ಪ್ರಮುಖ. ಈ ಹಿನ್ನೆಲೆಯಲ್ಲಿ ದೈಹಿಕವಾದ ಉತ್ತಮ ಆರೋಗ್ಯಕ್ಕಾಗಿ ಕ್ರೀಡಾಚಟುವಟಿಕೆಗಳತ್ತ ಆಸಕ್ತರಾಗಬೇಕೆಂದರು.…
ಲೇಖಕ: admin
ಮಡಿಕೇರಿ ಸೆ.26 NEWS DESK : ಬೆಂಗಳೂರಿನ ವಸಂತನಗರದಲ್ಲಿ ಮಾನ್ಯ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ ವಸತಿ ಸಚಿವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ವಸತಿ ಸಚಿವರು ಎ.ಎಸ್ ಪೊನ್ನಣ್ಣ ಅವರ ಕಾರ್ಯ ವೈಕರಿಯನ್ನು ಮುಕ್ತ ಕಂಠದಿಂದ ಹೊಗಳಿದರಲ್ಲದೆ, ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಅಧ್ಯಕ್ಷ ಡಾ.ಎಸ್ ಜಾಫೆಟ್ ಕರ್ನಾಟಕ ಕ್ರಿಶ್ಚಿಯನ್ ಕಮ್ಯೂನಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಆಂಟೋನಿ ಮಾರಿಯ ಇಮ್ಯಾನ್ಯುಎಲ್, ವಿರಾಜಪೇಟೆ ತಾಲೂಕಿನ ಧರ್ಮ ಗುರುಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ, ರಫೀಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಸೆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕøತಿ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ನಗರಸಭೆ ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಜನ್ಮ ವರ್ಷಾಚರಣೆಯು ಅಕ್ಟೋಬರ್ 2 ರಂದು ಬೆಳಗ್ಗೆ 10 :30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ…
ಮಡಿಕೇರಿ ಸೆ.26 NEWS DESK : ಲೋಕೋಪಯೋಗಿ ಇಲಾಖೆ ಮೂಲಕ 186 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳು ಅಭಿವೃದ್ಧಿ ಕಾಣಲಿವೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮಳೆ ನಿಂತ ತಕ್ಷಣ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಶಾಸಕರುಗಳೇ ಇದ್ದ 25 ವರ್ಷಗಳ ಅವಧಿಯಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಆಡಳಿತದ ಈ ಅವಧಿಯಲ್ಲಿ ನಡೆಯುತ್ತಿದೆ. ಇದನ್ನು ಸಹಿಸದ ಬಿಜೆಪಿ ಪ್ರಚಾರಕ್ಕಾಗಿ ಜಿಲ್ಲೆಯ ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆ. ರಸ್ತೆ ಕಾಮಗಾರಿಗಾಗಿ ಒತ್ತಾಯಿಸಿ ಮಳೆಗಾಲದಲ್ಲಿ ಪ್ರತಿಭಟನೆ ನಡೆಸುವುದು ಹಾಸ್ಯಾಸ್ಪದ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇವಲ ಎರಡು ವರ್ಷಗಳಲ್ಲಿ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರು ಸರಕಾರದಿಂದ ದೊಡ್ಡ ಮೊತ್ತದ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, ಅವರನ್ನು ಬಿಜೆಪಿಗರು ಅಭಿನಂದಿಸಲಿ ಎಂದು ಒತ್ತಾಯಿಸಿದರು.ಮಡಿಕೇರಿ ಭಾಗಮಂಡಲ ರಸ್ತೆ, ಮಡಿಕೇರಿ ವಿರಾಜಪೇಟೆ ಗೋಣಿಕೊಪ್ಪ ರಸ್ತೆ,…
ಮಡಿಕೇರಿ ಸೆ.26 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 22ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸೆ.24ರ ಸಂಜೆಯಿಂದ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ವಾರ್ಷಿಕೊತ್ಸವದ ಅಂಗವಾಗಿ ಮುಂಜಾನೆಯಿಂದ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವ ಪ್ರಯುಕ್ತ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು. ನಂತರ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿತ್ತು.
ಮಡಿಕೇರಿ ಸೆ.26 NEWS DESK : ಸರಕಾರಿ ಕಾರ್ಯಕ್ರಮ ಸೇರಿದಂತೆ ಎಲ್ಲಾ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆಯನ್ನು ನಿಷೇಧಿಸಬೇಕು ಮತ್ತು ನಗರಸಭೆ ನಗರದ 10 ಸ್ಥಳಗಳಲ್ಲಿ ಕುಡಿಯುವ ನೀರಿನ ಫಿಲ್ಟರ್ ಗಳನ್ನು ಅಳವಡಿಸಬೇಕು ಎಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಜಿಲ್ಲಾ ನಿರ್ದೇಶಕ ಧನಂಜಯ ಎಂ. ಅವರು ಸ್ವತ: ಸರಕಾರದ ಕಾರ್ಯದರ್ಶಿಗಳೇ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು ಮತ್ತು ಪ್ಲಾಸ್ಟಿಕ್ ಲೋಟಗಳನ್ನು ಬಳಸಬಾರದೆಂದು ಆದೇಶ ಮಾಡಿದ್ದರೂ ಸರಕಾರಿ ಕಾರ್ಯಕ್ರಮಗಳಲ್ಲಿ ಕೂಡ ಇವುಗಳನ್ನು ಬಳಸಲಾಗುತ್ತಿದೆ. ಸ್ವಚ್ಛ ಪರಿಸರಕ್ಕಾಗಿ ತಕ್ಷಣ ಇದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಸಗಟು ವ್ಯಾಪಾರಸ್ಥರು ಹಾಗೂ ಚಿಲ್ಲರೆ ಮಾರಾಟ ಅಂಗಡಿ ಮಾಲೀಕರಲ್ಲಿ ಕಳೆದ ಜನವರಿಯಿಂದ ಮನವಿ ಮಾಡಿಕೊಂಡು ಬರಲಾಗಿದೆ. ಇದೇ ಆ.1 ರಿಂದ ಈ…
ಮಡಿಕೇರಿ NEWS DESK ಸೆ.26 : ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಕೇಂದ್ರ ಸರಕಾರ ನಡೆಸಲು ಉದ್ದೇಶಿಸಿರುವ ಜಾತಿ ಸಮೀಕ್ಷೆಗಳಲ್ಲಿ ಎಲ್ಲಾ ಅರೆಭಾಷಿಕ ಗೌಡರು ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಅಭಿವೃದ್ಧಿ ಸಂಘದ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಮತ್ತು ಕೇಂದ್ರ ಸರಕಾರದ ಎರಡೂ ಗಣತಿಯಲ್ಲೂ ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಮಾತನಾಡುವವರು ಅರೆಭಾಷೆ ಗೌಡ, ತುಳುಭಾಷೆ ಮಾತನಾಡುವವರು ತುಳುಭಾಷೆ ಗೌಡ ಎಂದು ಹಾಗೂ ಮಾತೃಭಾಷೆಯ ಕಾಲಂನಲ್ಲಿ ಅರೆಭಾಷೆ/ ತುಳುಭಾಷೆ ಎಂದು ಕಡ್ಡಾಯವಾಗಿ ಬರೆಸುವಂತೆ ತಿಳಿಸಿದ್ದಾರೆ. ಈ ಕುರಿತು ಈಗಾಗಲೇ ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಅಭಿವೃದ್ಧಿ ಸಂಘ ಅರೆಭಾಷೆ ಹಾಗೂ ತುಳುಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ ವಿಸ್ತೃತವಾದ…
ಮಡಿಕೇರಿ NEWS DESK ಸೆ.26 : ರಾಜ್ಯ ಸರಕಾರದ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ “ಕೊಡವ” ಎಂದು ನಮೂದಿಸಬೇಕು ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲು ಮತ್ತು ಸರಕಾರದ ಗಮನ ಸೆಳೆಯಲು ಸೆ.30 ರಂದು ಬೇಂಗ್ ನಾಡಿನ ಚೇರಂಬಾಣೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ 14ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಲಾಗುವುದು ಮತ್ತು ರಾಜ್ಯ ಸರಕಾರದ ವತಿಯಿಂದ ಅ.7ರ ವರೆಗೆ 15 ದಿನಗಳ ಕಾಲ ನಡೆಯಲಿರುವ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ…
ಮಡಿಕೇರಿ ಸೆ.26 NEWS DESK : ಕೊಡಗು ಜಾನಪದ ಪರಿಷತ್ ವತಿಯಿಂದ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಸಹಯೋಗದಲ್ಲಿ ಸೆ.29 ರಂದು 5ನೇ ವಷ೯ದ ಜಾನಪದ ದಸರಾ ಆಯೋಜಿತವಾಗಿದ್ದು, ಜಾನಪದ ಕಲಾ ತಂಡಗಳಿಂದ ವೈವಿಧ್ಯಮಯ ಜಾನಪದ ಕಲಾ ಪ್ರದಶ೯ನದ ಸೊಬಗು ಕಲಾಪ್ರೇಮಿಗಳ ಮನಸೂರೆಗೊಳ್ಳಲಿದೆ ಎಂದು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ ಮಾಹಿತಿ ನೀಡಿದ್ದಾರೆ. ಸೆ.29 ರಂದು ಸೋಮವಾರ ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಸಕಾ೯ರಿ ಅತಿಥಿಗೖಹದ ಆವರಣದಿಂದ ಸಾಗಲಿರುವ ರಾಮನಗರದ ವೈವಿಧ್ಯಮಯ ತಂಡಗಳೂ ಸೇರಿದಂತೆ ಜಿಲ್ಲೆಯ ಕಲಾತಂಡಗಳ ಕಲಾ ಜಾಥಾವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಉದ್ಘಾಟಸಲಿದ್ದಾರೆ ಬೆಳಗ್ಗೆ 10 ಗಂಟೆಗೆ ಗಾಂದಿ ಮೈದಾನದ ಕಲಾ ಸಂಭ್ರಮ ವೇದಿಕೆ ಮುಂಭಾಗದಲ್ಲಿ ಪೊನ್ನಚ್ಚನ ಮಧೂಸೂದನ್ ಅವರ ಸಂಗ್ರಹದಲ್ಲಿನ ಜಾನಪದ ವಸ್ತುಗಳ ಪ್ರದಶ೯ನ ಉದ್ಘಾಟನೆಗೊಳ್ಳಲಿದೆ. ಬೆಳಗ್ಗೆ 10.15 ಗಂಟೆಗೆ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾವನ್ನು ವೀರಾಜಪೇಟೆ ಕ್ಷೇತ್ರ ಶಾಸಕ…
ಮಡಿಕೇರಿ ಸೆ.26 NEWS DESK : ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಸೇನಾನಿ ವೀರ ಭಗತ್ ಸಿಂಗ್ ಜನ್ಮದಿನದ ಪ್ರಯುಕ್ತ ಸೆ.28 ರಂದು ಆಮ್ ಆದ್ಮಿ ಪಾರ್ಟಿಯಿಂದ ಕೊಡಗು ಸೇರಿದಂತೆ ರಾಜ್ಯವ್ಯಾಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಇದೇ ಸೆ.28 ರಂದು ರಾಜ್ಯಾದ್ಯಂತ ಆಮ್ ಆದ್ಮಿ ಪಾರ್ಟಿ “ಒಂದು ದಿನ ಭಗತ್ ಗಾಗಿ” ಎಂಬ ಘೋಷವಾಕ್ಯದೊಂದಿಗೆ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಜಿಲ್ಲಾ, ತಾಲ್ಲೂಕು ಕೇಂದ್ರಗಳ ಪಕ್ಷದ ಕಛೇರಿಯಲ್ಲಿ ಭಗತ್ ಸಿಂಗ್ ಗೆ ಪುಷ್ಪನಮನ ಸಲ್ಲಿಸಿ, ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ ಭಗತ್ ಸಿಂಗ್ ಅವರ ಸ್ವಾತಂತ್ರ್ಯ ಹೋರಾಟ ಮತ್ತು ಆದರ್ಶಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗುವುದು. ಆಕಾಶವಾಣಿ, ಟಿವಿ ಮಾಧ್ಯಮ, ಪತ್ರಿಕಾ ಸಂವಾದ, ಬೈಕ್ ರ್ಯಾಲಿ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಮಾತ್ರವಲ್ಲದೆ ಸಾರ್ವಜನಿಕರು ಕೂಡ…






