ಲೇಖಕ: admin

ಮಡಿಕೇರಿ ಜು.25 NEWS DESK : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ.5 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾμÉ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್, 05 ರಂದು ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ,…

Read More

ಮಡಿಕೇರಿ ಜು.25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ, ಸಮೀಕ್ಷೆಯ ರೂಪುರೇಷೆಗಳನ್ನು ಸುದೀರ್ಘವಾಗಿ ಚರ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಪ್ರಮುಖ ಸೂಚನೆ ನೀಡಿದರು. ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ ಆರ್ ನಾಯ್ಕ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಜು.25 NEWS DESK : ಕೊಡಗು ಜಿಲ್ಲೆಯಲ್ಲಿ ಪುಷ್ಯ ಮಳೆ ನಿರಂತರವಾಗಿ ಸುರಿಯುತ್ತಿದೆ. ಅವಧಿಗೂ ಮೊದಲೇ ಅಧಿಕ ಮಳೆಯಾಗಿರುವುದರಿಂದ ಜಿಲ್ಲಾವ್ಯಾಪಿ ಶೀತದ ವಾತಾವರಣವಿದೆ. ಮಡಿಕೇರಿಯಲ್ಲಿ ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದ್ದು, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಮಂಜಿನ ನಗರಿ ಮಡಿಕೇರಿ ದೇಶ, ವಿದೇಶಗಳ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಹಸಿರ ವಾತಾವರಣ ಮತ್ತು ತಂಪಾದ ಹವಾಗುಣ. ಬೇಸಿಗೆಯಲ್ಲಿ ಪ್ರವಾಸಿಗರಿಂದ ತುಂಬಿ ಹೋಗುವ ಮಡಿಕೇರಿ ಮಳೆಗಾಲದಲ್ಲೂ ಮಾನ್ಸೂನ್ ಟೂರಿಸಂ ಹೆಸರಿನಲ್ಲಿ ಆಕರ್ಷಿಸುತ್ತಿತ್ತು. ಆದರೆ ಪ್ರಸ್ತುತ ವರ್ಷ ಅತಿಯಾದ ಗಾಳಿಮಳೆ ಮತ್ತು ಮೈಕೊರೆಯುವ ಚಳಿಯಿಂದ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗಿದೆ. ಇದರಿಂದ ಪ್ರವಾಸೋದ್ಯಮವನ್ನೇ ನಂಬಿ ಬದುಕು ಸಾಗಿಸುತ್ತಿರುವವರ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ನಷ್ಟ ಅನುಭವಿಸುತ್ತಿದ್ದಾರೆ. ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟು ಕಳೆದ ಒಂದು ತಿಂಗಳಿನಿಂದ ಚೇತರಿಕೆ ಕಾಣುತ್ತಿಲ್ಲ. ಅತಿಯಾದ ಮಳೆ, ಮಂಜು ಮತ್ತು ಚಳಿಯಿಂದ ರಸ್ತೆಗಳಲ್ಲಿ ಜನರ…

Read More

ಮಡಿಕೇರಿ ಜು.24 NEWS DESK : ವಿಧಾನಸಭೆಯ ಉಪ ಸಭಾಧ್ಯಕ್ಷರು ಹಾಗೂ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಮತ್ತು ವಿಧಾನಸಭೆಯ ಅರ್ಜಿ ಸಮಿತಿ ತಂಡದ ಸದಸ್ಯರು ನಗರದ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆಯನ್ನು ವೀಕ್ಷಿಸಿದರು. ವಿಧಾನಸಭೆಯ ಅರ್ಜಿ ಸಮಿತಿ ತಂಡದ ಸದಸ್ಯರಾದ ಎ.ಮಂಜು, ಡಾ.ಮಂತರ್ ಗೌಡ, ಯು.ಬಿ.ಬಣಕಾರ್, ಸಿ.ಎನ್.ಬಾಲಕೃಷ್ಣ, ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್, ಕೆ.ಸಿ.ಶ್ರೀನಿವಾಸ, ಮಹೇಶ್ ಟೆಂಗಿನಕಾಯಿ, ಎಸ್.ಮುನಿರಾಜು, ಡಾ.ಅವಿನಾಶ್ ಉಮೇಶ್ ಜಾದವ ಇತರರು ಭೇಟಿ ನೀಡಿ ತಡೆಗೋಡೆ ಪರಿಶೀಲಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ ಇತರರು ಇದ್ದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ತಡೆಗೋಡೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಹೆದ್ದಾರಿ ಹಾಗೂ ತಡೆಗೋಡೆಗೆ ಯಾವುದೇ ರೀತಿ ತೊಂದರೆಯಾಗದಂತೆ ಮಳೆಯ ಮತ್ತು ಚರಂಡಿ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಲಾಗಿದೆ ಎಂದು ಡಾ.ಮಂತರ್…

Read More

ಕುಶಾಲನಗರ ಜು.24 NEWS DESK :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರದ ಕೊಡವ ಸಮಾಜದ ಆವರಣದಲ್ಲಿ 1954ನೇ ಮದ್ಯವರ್ಜನ ಶಿಬಿರ ಹಮ್ಮಿಕೊಳ್ಳಲಾಗಿದ್ದು, 7ನೇ ದಿನ ಕಾವೇರಿ ಮಹಾ ಆರತಿ ಬಳಗ ಹಾಗೂ ನಮಾಮಿ ಕಾವೇರಿ ಸಹಯೋಗದಲ್ಲಿ ಮದ್ಯವರ್ಜನ  ಶಿಬಿರಾರ್ಥಿಗಳು ಕಾವೇರಿ ನದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಕಾವೇರಿಗೆ ಆರತಿ ಬೆಳಗಿದರು. ಪಟ್ಟಣದ ಕೊಡವ ಸಮಾಜದಿಂದ ಹೊರಟು ರಥಬೀದಿಯ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಶಿಬಿರಾರ್ಥಿಗಳು ಮಧ್ಯ ವ್ಯಸನದಿಂದ ಆಗುವ ದುಷ್ಪರಿಣಾಮದ ಕುರಿತು ಬಿತ್ತಿಫಲಕಗಳನ್ನು ಹಿಡಿಯುವುದರೊಂದಿಗೆ ಘೋಷಣೆ ಕೂಗಿದರು. ನಂತರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿದರು. ಈ ವೇಳೆ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿಯ ಸಂಚಾಲಕ ಚಂದ್ರಮೋಹನ್ ಮಾತನಾಡಿ, ಯಾವುದೇ ಚಟ ಮನುಷ್ಯನನ್ನು ಅಂಧನನ್ನಾಗಿ ಮಾಡುತ್ತದೆ. ಮನುಷ್ಯ ಜೀವನವನ್ನು ಸಂಪೂರ್ಣವಾಗಿ…

Read More

ಮಡಿಕೇರಿ ಜು.24 NEWS DESK  : ನಾಪೊಕ್ಲುವಿನಲ್ಲಿ ಸಿಎಂ ಟ್ರಾವೆಲ್ಸ್ ಮತ್ತು ಹಮದಾನಿ ಕಲೆಕ್ಷನ್ಸ್ ಅನ್ನು ಚೀಫ್ ಅಮೀರ್ ಸಯ್ಯಿದ್ ಶರಫುದ್ದೀನ್ ತಂಙಳ್ ಅಲ್ ಹಿಮಮಿ ಎರುಮಾಡ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಶ್ರಫ್ ಅಹ್ಸನೀ ಉಸ್ತಾದ್ ಅನ್ವಾರುಲ್ ಹುದ ವಿರಾಜಪೇಟೆ ಪ್ರಾರ್ಥನೆ ಸಲ್ಲಿಸಿದರು. ನಾಪೋಕ್ಲು ಟೌನ್ ಶಾಫಿ ಮಸ್ಜಿದ್ ಅಧ್ಯಕ್ಷರಾದ ಎಂ.ಎಚ್ ಅಬ್ದುಲ್ ರಹಿಮಾನ್, ಶಾದುಲಿ ಸಕಾಫಿ ಕೊಳಕೇರಿ ಹಾಗೂ ಹಲವಾರು ಹಲವರು ಪಾಲ್ಗೊಂಡಿದ್ದರು. ಪವಿತ್ರ ಉಮ್ರಾ ನಿರ್ವಹಣೆಯಲ್ಲಿ 20 ವರ್ಷಗಳ ಅನುಭವ ಹೊಂದಿರುವ ಸಿ.ಎಂ ಮುಹಮ್ಮದ್ ಮುಸ್ಲಿಯಾರ್ ಮತ್ತು ಮುಹಮ್ಮದ್ ಯಾಸೀನ್ ಸ‌ಅದಿ ಅಲ್ ಅಫ್ಲಲೀ ರ ನೇತೃತ್ವದಲ್ಲಿ ಉಮ್ರಾ ಗ್ರೂಪ್ ಎಲ್ಲಾ ತಿಂಗಳೂ ಕಲ್ಲಿಕೋಟೆ ವಿಶ್ವವಿದ್ಯಾನಿಲಯದ ಅಧೀನದಲ್ಲಿ ನಡೆಯಿತ್ತಿರುವ ಮರ್ಕಜ್ ಟ್ರ್ಯಾವೆಲ್ ಮಾರ್ಟ್ ಉಮ್ರಾ ಗ್ರೂಪ್ ಇನ್ನು ಮುಂದೆ ನಾಪೋಕ್ಲುವಿನಿಂದಲೇ ಹೊರಡಲಿದೆ.

Read More

ಮಡಿಕೇರಿ ಜು.24 NEWS DESK : ಮಡಿಕೇರಿಯಲ್ಲಿರುವ ಯುವ ಭವನವನ್ನು ಕೊಡಗು ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರ ಮಾಡುವಂತೆ ಯುವ ಘಟಕದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ಮನವಿ ಮಾಡಿದರು. ನಗರದ  ಸುದರ್ಶನ ಅತಿಥಿಗೃಹದಲ್ಲಿ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾದ ಪಿ.ಪಿ.ಸುಕುಮಾರ್ ಯುವ ಭವನದ ಕುರಿತಾಗಿ ಚರ್ಚೆ ನಡೆಸಿದರು.

Read More

ಮಡಿಕೇರಿ ಜು.24 NEWS DESK : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್(ಎನ್‍ಎಂಓ)ನ ಕೊಡಗು ಘಟಕ ಮತ್ತು ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ನ ಸಂಯುಕ್ತಾಶ್ರಯದಲ್ಲಿ ಜು.27ರಂದು ನಗರದಲ್ಲಿ ಪೌರ ಕಾರ್ಮಿಕರು ಹಾಗೂ ಇತರ ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಟ್ರಸ್ಟ್ ನ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ತಿಳಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ  ನಗರಸಭೆಯ ಸ್ಥಾಯಿ ಸಮಿತಿಗೆ ಮೀಸಲಾದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದೆ ಎಂದರು. ಸಂಸ್ಕೃತಿ ಸಿರಿ ಬಳಗ ಆರೋಗ್ಯದ ಅರಿವು, ಶಿಕ್ಷಣ ಮತ್ತು ಸಂಸ್ಕೃತಿಯ ಅರಿವು ಮೂಡಿಸುವ ಪ್ರಮುಖ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ.ಟ್ರಸ್ಟ್ ಈಗಾಗಲೆ ಎನ್‍ಎಂಓ ಸಹಕಾರದೊಂದಿಗೆ ಕೆಲ ಆರೋಗ್ಯ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ಇದೀಗ ನಗರ ಸ್ವಚ್ಛತೆಯ ಕಾರ್ಯದಲ್ಲಿ ತಮ್ಮನ್ನು ಬಿರು ಮಳೆಯ ನಡುವೆಯೂ ತೊಡಗಿಸಿಕೊಂಡಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಶಿಬಿರವನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು. ಎನ್‍ಎಂಓ ಜಿಲ್ಲಾಧ್ಯಕ್ಷ ಡಾ.ಮೋಹನ್ ಅಪ್ಪಾಜಿ ಮಾತನಾಡಿ, ಶಿಬಿರದಲ್ಲಿ 35…

Read More

ಮಡಿಕೇರಿ ಜು.24 NEWS DESK : ಕೊಡಗು ಹಿಂದು ಜಾಗರಣ ವೇದಿಕೆ ಮತ್ತು ಮಡಿಕೇರಿ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.26 ರಂದು ಮಡಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಮುಖ್ಯ ರಸ್ತೆಯಲ್ಲಿರುವ ಹುತಾತ್ಮ ಸೈನಿಕ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ  ಭಾರತೀಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿ, ಯೋಧರಿಗೆ ಪುಪ್ಪನಮನ ಸಲ್ಲಿಸಲಾಗುವುದು.  ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಮೇಜರ್ ಓ.ಎಸ್.ಚಿಂಗಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಬಾಲವಾಗ್ಮಿ ಶ್ರೀಶಾ ದಿಕ್ಸೂಚಿ ಭಾಷಣ ಮಾಡಲಿದ್ದಾಳೆ. ಮಾಜಿ ಸೇನಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ದೇಶಾಭಿಮಾನಿಗಳು, ಮಾಜಿ ಯೋಧರು, ಸಂಘ, ಸಂಸ್ಥೆಗಳ ಪ್ರಮುಖರು, ಯುವಕರು, ವಿದ್ಯಾರ್ಥಿಗಳು, ಸಮೂಹ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಮಡಿಕೇರಿ ಜು.24 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ರ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಎ, ಬಿ.ಕಾಂ ಮತ್ತು ಬಿ.ಬಿ.ಎ ಪದವಿ ತರಗತಿ ಪ್ರವೇಶಾತಿಗೆ ಜು.31 ಕಡೆಯ ದಿನವಾಗಿರುತ್ತದೆ. ಪ್ರಥಮ ವರ್ಷದ ಬಿ.ಬಿ.ಎ ಪದವಿಗೆ ಪ್ರವೇಶಾತಿ ಉಚಿತವಾಗಿರಯತ್ತದೆ ಎಂದು ಪ್ರಾಂಶುಪಾಲರಾದ ಪ್ರೊ ದಯಾನಂದ ಕೆ.ಸಿ ತಿಳಿಸಿದ್ದಾರೆ.

Read More