ಲೇಖಕ: admin

ಮಡಿಕೇರಿ ಸೆ.12 NEWS DESK :  ಕೊಡಗು ಪತ್ರಕರ್ತರ ಸಂಘ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯಿಂದ 2025 ರ ಸೆ.19 ರಂದು  ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ 15 ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತ್ರ ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಶ್ರವಣ ಆರೋಗ್ಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು ಮುಂತಾದ 15 ವಿಭಾಗಗಳ ನುರಿತ ತಜ್ಞರು ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಆರೋಗ್ಯಕ್ಕೆ ಸಂಬಂಧಿಸಿದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಆಯುಷ್ಮಾನ್ ಭಾರತ್…

Read More

ಸೋಮವಾರಪೇಟೆ ಸೆ.12 NEWS DESK : ಸೋಮವಾರಪೇಟೆ ತುಳುನಾಡು ಬಿಲ್ಲವ ಮಹಿಳಾ ಸಂಘದ ಸಂಯುಕ್ತ ಆಶ್ರಯದಲ್ಲಿ  ಸೆ.14 ರಂದು ಹತ್ತನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಸೋಮವಾರಪೇಟೆ ಮಾನಸ ಹಾಲ್ ಸಭಾಂಗದಲ್ಲಿ  ಬೆಳಗ್ಗೆ 8 ಗಂಟೆಗೆ ಬಿಲ್ಲವ ಸೇವಾ ಸಮಿತಿ ಕುಟುಂಬದವರಿಗೆ ಆಯೋಜಿಸಲಾದ ವಿವಿಧ ಕ್ರೀಡಾಕೂಟವನ್ನು ಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರು ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಬಿ. ಕೆ ಹರಿಪ್ರಸಾದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲ್ಲೂಕು ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ  ಬಿ.ಆರ್.ಚಂದ್ರಹಾಸ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಮಂತರ್ ಗೌಡ, ಕುದ್ರೋಳಿ ದೇವಾಲಯದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಮಾಜಿ ಸಚಿವ ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಬಿಲ್ಲವ ಸಂಘದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಪ್ರವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತ ಪದ್ಮನಾಭ,…

Read More

ವಿರಾಜಪೇಟೆ ಸೆ.12 NEWS DESK : ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪ್ರತಿಯೊಬ್ಬರು ಕಾನೂನಿನ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸಲು ಬದ್ಧರಾಗಿ ಎಂದು ವಿರಾಜಪೇಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಪೊಲೀಸ್ ಠಾಣೆ ಹಾಗೂ ಪದವಿ ಕಾಲೇಜಿನ ಐಕ್ಯೂಎಸಿ, ಎನ್ ಎಸ್ ಎಸ್, ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಚಾರಿ ನಿಯಮಗಳು ಹಾಗೂ ಮಾದಕ ವಸ್ತು ಸೇವನೆಯ ಪರಿಣಾಮಗಳು, ಕಾಯಿದೆಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಅವರು, ಮಾತನಾಡಿದರು. ಸಂಚಾರಿ ನಿಯಮಗಳು ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ ಉದಾಹರಣೆ ಸಮೇತ ವಿವಿರಿಸಿದ ಅವರು, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಯಥಾವತ್ತಾಗಿ ಪಾಲಿಸಬೇಕು. ವಾಹನ ಚಾಲನೆಯ ವೇಳೆಯಲ್ಲಿ ಸಂಭಂದಿತ ದಾಖಲೆಗಳು ಕಡ್ಡಾಯವಾಗಿ ಇರಬೇಕು ಎಂದರು. ಮಾದಕ ವಸ್ತುಗಳು ಮನುಷ್ಯನ…

Read More

ಮಡಿಕೇರಿ ಸೆ.12 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಗೃಹ ಕಛೇರಿ ಕಾವೇರಿಯಲ್ಲಿ ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಿದರು.

Read More

ಕುಶಾಲನಗರ ಸೆ.11 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಂಸ್ಥೆಯ ವಾರ್ಷಿಕ ಲೆಕ್ಕಪತ್ರವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಎಂ.ಎಸ್.ಗಣೇಶ್ ಮಂಡಿಸಿದರು. ಸ್ಥಳೀಯ ಸಂಸ್ಥೆಯ ವಾರ್ಷಿಕ ವರದಿಯನ್ನು ಸಂಸ್ಥೆಯ ಕೋಶಾಧಿಕಾರಿ ನರೇಶ್ ಮಂಡಿಸಿದರು. ಸಭೆಯಲ್ಲಿ ಮಂಡಿಸಿದ ಲೆಕ್ಕಪತ್ರ ಹಾಗೂ ವಾರ್ಷಿಕ ವರದಿಯನ್ನು ಸಭೆಯು ಒಕ್ಕೊರಲಿನಿಂದ ಅಂಗೀಕರಿಸಿತು. ಸಭೆಯಲ್ಲಿ ಭಾಗವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ…

Read More

ಮಡಿಕೇರಿ ಸೆ.12 NEWS DESK : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಬಾಳೆ ಕೃಷಿಯಲ್ಲಿ ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು” ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವವನ್ನು ಆಯೋಜಿಸಲಾಗಿತ್ತು. ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಜಿ.ಜನಾರ್ಧನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು, ಕೃಷಿಯತ್ತ ಅವರ ಒಲವನ್ನು ಬಿಂಬಿಸುತ್ತದೆ. ಇದು ಬಹಳ ಸಂತಸದ ವಿಷಯ ಎಂದು ಪ್ರಶಂಸಿದರು. ಬಾಳೆ ಬೆಳೆಯ ಎಲ್ಲಾ ಭಾಗವು ಉಪಯುಕ್ತವಾಗಿದು,್ದ ಬಾಳೆ ದಿಂಡಿನಿಂದ ಕೂಡ ಸಾಕಷ್ಟು ತಿನಿಸು ಹಾಗೂ ಕರಕುಶಲ ವಸ್ತುಗಳನ್ನು ಮಾಡಬಹುದಾಗಿದೆ. ಕೃಷಿಯಲ್ಲಿ ಸಾವಯವ ಹಾಗೂ ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುತ್ತಾ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡುವುದು ಮಣ್ಣಿನ ಹಾಗೂ ಮಾನವನ ಆರೋಗ್ಯಕ್ಕೆ ಅತ್ಯವಶ್ಯಕ ಎಂದು ತಿಳಿಸಿದರು. ತಾಂತ್ರಿಕ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಡಾ. ಹೆಚ್.ಆರ್.ಮನುಕುಮಾರ್, ಬಾಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳು ಮತ್ತು…

Read More

ಬೆಂಗಳೂರು NEWS DESK ಸೆ.11 : ಮಡಿಕೇರಿ ದಸರಾ ಜನೋತ್ಸವಕ್ಕೆ 1.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಮಡಿಕೇರಿ ದಸರಾ ಸಮಿತಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅದ್ದೂರಿ ದಸರಾ ಆಚರಣೆಗೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೋರಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗಾಗಲೇ 1.50 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದರು. ನಿಯೋಗದ ನೇತೃತ್ವ ವಹಿಸಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಕಳೆದ ವರ್ಷದಂತೆ ಈ ಬಾರಿಯೂ 1.50 ಕೋಟಿ ರೂ. ಬಿಡುಗಡೆ ಮಾಡುವ ಭರವಸೆ ದೊರೆತ್ತಿದೆ. ಹೆಚ್ಚಿನ ಅನುದಾನದ ನಿರೀಕ್ಷೆ ಇತ್ತಾದರೂ ಕಳೆದ ವರ್ಷದ ಮೊತ್ತವನ್ನೇ ನೀಡಲು ಸರಕಾರ ನಿರ್ಧರಿಸಿ ಆಗಿತ್ತು ಎಂದರು. ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬಿತ, ಉಪಾಧ್ಯಕ್ಷ ಡಿಶು, ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ, ಸಹ ಕಾರ್ಯದರ್ಶಿ ಮುದ್ದುರಾಜು,…

Read More

ಮಡಿಕೇರಿ NEWS DESK ಸೆ.11 : ರಾಜ್ಯ ಸರಕಾರದ ವತಿಯಿಂದ ನಡೆಯುವ ಜಾತಿ ಜನಗಣತಿ ಸಂದರ್ಭ ನಗಣ್ಯ ಆ್ಯನಿಮಿಸ್ಟೆಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಜಾತಿ, ಭಾಷೆ, ಮಾತೃಭಾಷೆ ಮತ್ತು ಧರ್ಮದ ಕಾಲಂ ನಲ್ಲಿ ಸರ್ವ ಕೊಡವರು “ಕೊಡವ” ಎಂದು ನಮೂದಿಸುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಇದೇ ಸೆ.22 ರಿಂದ ನಡೆಸುವ ಜಾತಿ ಜನಗಣತಿಯಲ್ಲಿ ಉತ್ತಮ ನಾಳೆಗಾಗಿ ಮತ್ತು ಕೊಡವರ ಸಮಗ್ರ ಸಬಲೀಕರಣಕ್ಕಾಗಿ “ಕೊಡವ” ಎಂದು ನಮೂದಿಸುವುದು ಅತ್ಯವಶ್ಯಕವಾಗಿದೆ. ಆದಿಮಸಂಜಾತ ಏಕ-ಜನಾಂಗೀಯ ಕೊಡವರ ಹಕ್ಕುಗಳು ಖಾತ್ರಿಯಾಗಬೇಕಾದಲ್ಲಿ ಕೊಡವ ಎಂದು ದಾಖಲಿಸಿ ಎಂದು ಕರೆ ನೀಡಿದ್ದಾರೆ. ಕೊಡವರು ಯಾವುದೇ ಪಂಥಗಳು ಅಥವಾ ಉಪಪಂಗಡಗಳಿಲ್ಲದ ಏಕೈಕ, ಏಕ-ಜನಾಂಗೀಯ ಗುಂಪಾಗಿದ್ದಾರೆ. ವಿಭಿನ್ನ ಗುರುತು, ಭಾಷೆ ಮತ್ತು ಸಂಸ್ಕöÈತಿಯನ್ನು ಹೊಂದಿರುವ ವಿಶಿಷ್ಟ ಜನಾಂಗೀಯ ಸಮುದಾಯವಾಗಿದ್ದಾರೆ. ಜನಗಣತಿದಾರರು ನಿಮ್ಮ ಮನೆ ಮನೆಗೆ ಭೇಟಿ ನೀಡುವಾಗ, ಪ್ರತಿಯೊಬ್ಬ…

Read More

ಮಡಿಕೇರಿ ಸೆ.11 NEWS DESK : ಶಾಲಾ ಹಂತದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಅತ್ಯಗತ್ಯ ಎಂದು ಕೂಡಿಗೆ ಡಯಟ್ ಪ್ರಾಂಶುಪಾಲರಾದ ಡಿ.ಉದಯ ಕುಮಾರ್ ಅವರು ಹೇಳಿದರು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಲೋಕ ಶಿಕ್ಷಣ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಇವರ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದ ಸಭಾಭವನದಲ್ಲಿ ನಡೆದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾಗರಿಕ ಪ್ರಪಂಚಗಳ ಮೂಲಕ ಸಾಕ್ಷರತೆ ಬೆಳವಣಿಗೆ ಆಗಿದೆ. ಶಿಕ್ಷಣ ಎಂಬುದು ಮನುಷ್ಯರ ಒಂದು ಅಕ್ಷರ ಜ್ಞಾನ, ಸಾಕ್ಷರತೆಯನ್ನು ವಸ್ತುನಿμÉ್ಠಯಿಂದ ನೋಡಬೇಕು ಎಂದು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡಿ ಸಾಕ್ಷರತೆಯು ತಂತ್ರಜ್ಞಾನಗಳಲ್ಲಿ ಮುಂದುವರೆಯುವ ಒಂದು ರಾಷ್ಟ್ರವಾಗಿದೆ ಹಾಗೂ ಕಾಲೇಜುಗಳಿಗೆ ಆಗಮಿಸುವುದು ಪುಣ್ಯದ ಕೆಲಸ ಎಂದರು. ಅನಕ್ಷರಸ್ಥರಿಗೆ ಅಕ್ಷರ ಕಲಿಸುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬ ನಾಗರಿಕರಿಗೆ ಓದಲು ಮತ್ತು ಬರೆಯಲು ಕಲಿಸುವುದು ಪುಣ್ಯಕಾರ್ಯ. ಸಾಕ್ಷರತೆ…

Read More

ಮಡಿಕೇರಿ ಸೆ.11 NEWS DESK : ಕೃಷಿ ಕ್ಷೇತ್ರದ ನಂತರ ಸಿವಿಲ್ ಮತ್ತು ಕಟ್ಟಡ ಕ್ಷೇತ್ರದಲ್ಲಿ ರಾಷ್ಟ್ರದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದೆ ಎಂದು ಸುಳ್ಯ ಕೆವಿಜಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಚಂದ್ರಶೇಖರ್ ಅವರು ಹೇಳಿದರು. ನಗರದ ಕೊಡಗು ನಿರ್ಮಿತಿ ಕೇಂದ್ರ ವತಿಯಿಂದ ಸಿಎಸ್‍ಆರ್ ಉಪ ಕಾರ್ಯಕ್ರಮಗಳ ಅಡಿಯಲ್ಲಿ ಎಫ್‍ಒಎಸ್‍ಆರ್‍ಒಸಿ ಕೆಮಿಕಲ್ಸ್ ಇಂಡಿಯಾ ಪ್ರೈ.ಲಿ.ನ ಪ್ರಾಯೋಜಕತ್ವದಲ್ಲಿ ಇನ್‍ಸ್ಟ್ರಕ್ಟ್ ಸಂಸ್ಥೆ ಸಹಕಾರದಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ‘ಮೇಸನ್ ಮತ್ತು ಟೈಲ್ಸ್ ಲೇಯರ್’ ಕಾರ್ಮಿಕರಿಗೆ ಎರಡು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಸಮಾಜದಲ್ಲಿನ ಎಲ್ಲಾ ಸ್ತರಗಳಲ್ಲಿ ಹೆಚ್ಚು ಜನರಿಗೆ ಕೆಲಸ ನೀಡುವಲ್ಲಿ ಸಿವಿಲ್ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದು ಚಂದ್ರಶೇಖರ್ ನುಡಿದರು. ಭಾರತದಿಂದ ಕಟ್ಟಡ ಕಾರ್ಮಿಕರನ್ನು ಇಸ್ರೇಲ್, ಗಾಲ್ಫ್ ರಾಷ್ಟ್ರಗಳಿಗೆ ಕರೆಸಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಕಟ್ಟಡ ವೃತ್ತಿ ಕೌಶಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ ಕಟ್ಟಡಕ್ಕೆ ಎಂಸ್ಯಾಂಡ್ ಬಳಸಲಾಗುತ್ತದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕೆಂಪುಕಲ್ಲನ್ನು…

Read More