ಮಡಿಕೇರಿ ಸೆ.11 NEWS DESK : ಕರ್ನಾಟಕ ಅರಣ್ಯ ಇಲಾಖೆ ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ನಗರದ ಅರಣ್ಯ ಭವನದಲ್ಲಿರುವ ಅರಣ್ಯ ಹುತಾತ್ಮಕರ ಸ್ಮಾರಕಕ್ಕೆ ಗಣ್ಯರು ಪುಷ್ಪಗುಚ್ಛ ಸಮರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿ.ಅಭಿಷೇಕ್, ಎನ್.ಎಚ್.ಜಗನ್ನಾಥ, ಕೆ.ಎ.ನೆಹರು, ಸಂದೀಪ್ ಪಿ.ಅಭಯಂಕರ್, ಸೈಯದ್ ಅಹಮದ್ ಷಾ ಹುಸೈನಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿ.ಸೆಂದಿಲ್ ಕುಮಾರ್, ತಹಶೀನ್ ಬಾನು ದವಡಿ, ವಿ.ಪಿ.ಕಾರ್ಯಪ್ಪ, ವಲಯ ಅರಣ್ಯ ಸಂರಕ್ಷಣಾಧಿಕಾರಿ ತ್ಯಾಗರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಂ.ಸಿ.ಅರುಣ್ ಕುಮಾರ್, ಕೊಡಗು ವೃತ್ತ ಪತ್ರಾಂಕಿತ ವ್ಯವಸ್ಥಾಪಕರಾದ ಪಿ.ಪಿ.ಸರೋಜ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ, ಗಸ್ತು ಅರಣ್ಯ ಪಾಲಕರಾದ ನಾಗರಾಜ ರಡಾರಟ್ಟಿ, ಅರಣ್ಯ ವೀಕ್ಷಕರಾದ ಸಚಿನ್ ತಳವಾರ, ಕಚೇರಿ ಜಮೆದಾರರಾದ ಎಚ್.ಎಸ್.ಕಣ್ಣಯ್ಯ, ಆನೆ…
ಲೇಖಕ: admin
ಮಡಿಕೇರಿ ಸೆ.11 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕುಂಜಿಲ-ಕಕ್ಕಬೆ ಪಂಚಾಯತ್ ವ್ಯಾಪ್ತಿಯ ಪುದಿಯೋಡಿ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೆ ಸಜ್ಜಾಗಿ ನಿಂತಿದೆ. ಇಗ್ಗುತ್ತಪ್ಪ ದೇವಸ್ಥಾನ ಬಳಿಯ ರಸ್ತೆಗೆ ಈ ಹಿಂದೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದ ಸಂದರ್ಭ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವ ಭರವಸೆಯನ್ನು ನೀಡಿದ್ದರು. ಅದರಂತೆ ರಸ್ತೆಯ ಕಾಂಕ್ರೀಟೀಕರಣಕ್ಕೆ 5 ಲಕ್ಷವನ್ನು ಬಿಡುಗಡೆ ಮಾಡಿದ್ದರು. ಈಗ ಕಾಮಗಾರಿ ಗುಣಮಟ್ಟದಲ್ಲಿ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆ ಗೊಳ್ಳಲಿದೆ. ಇದಕ್ಕೆ ಸಹಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೆಡಿಪಿ ಸದಸ್ಯರಾದ ಬಾಚಮಾಂಡ ಲವ ಚಿಣ್ಣಪ್ಪ, ಕಕ್ಕಬೆ ಪಂಚಾಯಿತಿ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ ಮತ್ತು ಪ್ರಮುಖರಿಗೆ ಸ್ಥಳೀಯರು ಧನ್ಯವಾದ ಅರ್ಪಿಸಿದ್ದಾರೆ.
ಮಡಿಕೇರಿ ಸೆ.11 NEWS DESK : ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ಕರ್ನಾಟಕ ವಿಧಾನ ಪರಿಷತ್ ನ ನೂತನ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಡಾ.ಆರತಿ ಕೃಷ್ಣ ಅವರಿಗೆ ಮಾದಾಪುರದ ಜೇನ್ ಕಾಡು ‘ಎ’ ಎಸ್ಟೇಟ್ ನ ವರದನ್ ಅರುಣ್ ಕುಮಾರ್ ಮತ್ತು ಮನೆಯವರು, ಹಾಕತ್ತೂರಿನ ಬಿಳಿಗೇರಿ ಗ್ರಾಮದ ಹೊಸಬಾಣೆ ಎಸ್ಟೇಟ್ ನ ದಂಬೆಕೋಡಿ ಲವಕುಮಾರ್ ಮತ್ತು ಮನೆಯವರು ಹಾಗೂ ಮಕ್ಕಂದೂರು ಗ್ರೈನ್ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಮಕ್ಕಂದೂರು ವಿಎಸ್ಎಸ್ಎನ್ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಕುಂಭಗೌಡನ ಟಿ.ಪ್ರಸನ್ನ ಅವರು ಶುಭಕೋರಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಉತ್ತಮ ಜನಪರ ಕಾರ್ಯಗಳನ್ನು ಮಾಡಲಿ, ಇದಕ್ಕೆ ಎಲ್ಲಾ ದೇವತೆಗಳ ಆಶೀರ್ವಾದ ಇರಲಿ ಎಂದು ಹಾರೈಸಿದ್ದಾರೆ.
ಗೋಣಿಕೊಪ್ಪ ಸೆ.11 NEWS DESK : ಗೋಣಿಕೊಪ್ಪಲು ಸ್ನೇಹಿತ ಬಳಗ ಕೊಪ್ಪದ 36ನೇ ವರ್ಷದ ದಶಮಂಟಪಗಳ ಅಧ್ಯಕ್ಷರಾಗಿ ಸುದೀಶ್ ರೈ ಆಯ್ಕೆಯಾಗಿದ್ದಾರೆ. ಕೊಪ್ಪ ಸಮಿತಿಯ ಸಭೆಯಲ್ಲಿ ಸರ್ವ ಸದಸ್ಯರು ಸುದೀಶ್ ರೈ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದ್ದಾರೆ. ಕಾರ್ಯಧ್ಯಕ್ಷರಾಗಿ ಕಾಡ್ಯಮಾಡ ಚೇತನ್, ಪ್ರಧಾನ ಕಾರ್ಯದರ್ಶಿ ಪ್ರದೀಪ್, ಖಜಾಂಚಿಯಾಗಿ ಅನೀಸ್ ಆಯ್ಕೆಯಾಗಿದ್ದಾರೆ.
ಬೆಂಗಳೂರು ಸೆ.11 NEWS DESK : ಮಾನವರ ಅಳಿವು – ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ರಕ್ಷಣೆಯ ಕಾರ್ಯದಲ್ಲಿ ಹುತಾತ್ಮರಾದವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ, ಹುತಾತ್ಮರಾದ ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ವನ್ಯಜೀವಿ – ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದರು. ಕಾಡು ಪ್ರಾಣಿಗಳ ಮತ್ತು ಮಾನವರ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್ ಗಳನ್ನು ನಿರ್ಮಿಸಲು ಮತ್ತು ಇವುಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ಮಾಡಲು ನಾವು ಸ್ಪಷ್ಟ ಸೂಚನೆ ನೀಡಿದ್ದೇವೆ. ಅರಣ್ಯ ಇಲಾಖೆ ಬಳಿಯೂ ಸಾಕಷ್ಟು ಹಣ ಇದೆ. ಅಗತ್ಯಬಿದ್ದರೆ ಸರ್ಕಾರ…
ಮಡಿಕೇರಿ ಸೆ.11 NEWS DESK : ದಿ ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ವರದಿಯನ್ನು ಪರಿಶೀಲಿಸಿ ಮುಂದಿನ ಸಾಲಿಗೆ ಬೇಕಾದಂತಹ ಅಗತ್ಯ ಸಲಹೆ ಸೂಚನೆಗಳನ್ನು ಚರ್ಚಿಸಿ, ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಕಾಫಿ ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರಿಕೆ ಸೆ.11 NEWS DESK : ಕರಿಕೆ ಗಾಮದ ಚೆಂಬೇರಿ ಗಡಿ ಭಾಗ ಕೇರಳದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೇವಾಲಯದ ಮುಖ್ಯದ್ವಾರ ಸ್ಥಾಪನಾ ಮುಹೂರ್ತ ನಡೆಯಿತು. ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.11 NEWS DESK : ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ವತಿಯಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ “ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ” ನಾಲ್ಕು ದಿನದ ತರಬೇತಿಗೆ ಚಾಲನೆ ದೊರೆಯಿತು. ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ನಡೆಯುವ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಇವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ, ನೀತಿ, ನಿರ್ಣಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ ಆಡಳಿತ ನೀಡುವ ಕುರಿತು ಸೂಕ್ತ ತರಬೇತಿಯನ್ನು 4 ದಿನದ ತರಬೇತಿಯಲ್ಲಿ ಪಡೆದು ತಾಲೂಕು ಹಂತದಲ್ಲಿ ನೀಡಲು ಸೂಚಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಮಹಿಳಾ ನಾಯಕರ ಸಬಲೀಕರಣಕ್ಕಾಗಿ…
ಮಡಿಕೇರಿ ಸೆ.11 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಇವರ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ನಡೆಯಿತು. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಹುತಾತ್ಮರನ್ನು ಸ್ಮರಿಸಿದರು. ಪೊಲೀಸ್ ತಂಡದವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಿದರು.
ನಾಪೋಕ್ಲು ಸೆ.11 NEWS DESK : ಕುಂಜಿಲ ಕಕ್ಕಬೆ ಸಂಜೀವಿನಿ ಒಕ್ಕೂಟ ಹಾಗೂ ಪಂಚಾಯಿತಿ ವತಿಯಿಂದ ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ವಿಎಸ್ಎಸ್ಎನ್ ಸಭಾಂಗಣದಲ್ಲಿ ಮಾದಕ ವಸ್ತು ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರು ಮಾತನಾಡಿ, ಮಾದಕ ವಸ್ತು ಸೇವನೆ ಮತ್ತು ಮಾರಾಟ ಬಗ್ಗೆ ಕಾನೂನಿನ ಅರಿವು ಮೂಡಿಸಿದರು. ಇದರ ಸಂಪೂರ್ಣ ನಿರ್ಮೂಲನೆಗೆ ಎಲ್ಲರ ಸಹಕಾರ ಅವಶ್ಯ ಎಂದರು. ಪಂಚಾಯಿತಿ ಸದಸ್ಯರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್, ಆಡಳಿತ ಮಂಡಳಿಯ ಸದಸ್ಯರುಗಳಾದ ಚೋಯಮಾಡಂಡ ಹರೀಶ ಮೊಣ್ಣಪ್ಪ, ಮಹಮದ್ ಬಶೀರ್, ಭರತ್ ಚಂದ್ರ ದೇವಯ್ಯ, ಕುಂಡಂಡ ರಜಾಕ್, ಕೆ.ಡಿ.ಪಿ ಸದಸ್ಯರಾದ ರೈನಾ ಕಾರ್ಯಪ್ಪ ಮತ್ತು ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಕರ್ತಂಡ ಶೈಲಾ ಕುಟ್ಟಪ್ಪ ಹಾಗೂ ಶಿಕ್ಷಕರು ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಶಾಲಾ ವಿದ್ಯಾರ್ಥಿಗಳು, ಆಟೋ ಚಾಲಕರು ಮತ್ತಿತರರು ಕಾರ್ಯಕ್ರಮದಲ್ಲಿ…






