ಮಡಿಕೇರಿ ಜು.24 NEWS DESK : ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಜುಲೈ, 25 ರಂದು ಕೊಡಗಿಗೆ ಭೇಟಿ ನೀಡಲಿದ್ದಾರೆ. ಸಚಿವರು ಜುಲೈ, 25 ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ. ತಿರ್ಲಾಪುರ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.24 NEWS DESK : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಲಯನ್ಸ್ ಸಂಸ್ಥೆ ಮಡಿಕೇರಿ ವತಿಯಿಂದ ಜು.26ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮದನ್ ಮಾದಯ್ಯ ಹಾಗೂ ಕಾರ್ಯದರ್ಶಿ ಮಧುಕರ್ ಕೆ. ತಿಳಿಸಿದ್ದಾರೆ. ಕ್ಲಿಯರ್ ಮೆಡಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಮೈಸೂರು ಇವರ ಸಹಯೋಗದೊಂದಿಗೆ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಮಡಿಕೇರಿಯ ಲಯನ್ಸ್ ಸಭಾಂಗಣದಲ್ಲಿ ಆರೋಗ್ಯ ಶಿಬಿರ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಮೂತ್ರ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಅನ್ವೇಶ್ ಅವರು ಮೂತ್ರನಾಳದ ಸೋಂಕು, ಮೂತ್ರಪಿಂಡದ ಕಲ್ಲು, ಹೆಚ್ಚಿದ ಮೂತ್ರವಿಸರ್ಜನೆ ಮತ್ತು ಸೋರಿಕೆ, ಲೈಂಗಿಕ ಶಕ್ತಿಯ ಸಂಬಂಧಿತ ತೊಂದರೆಗಳು ಹಾಗೂ ಪ್ರಾಸ್ಟೇಟ್ ಸಂಬಂಧಿತ ಸಮಸ್ಯೆಗಳ ಕುರಿತು ತಪಾಸಣೆ ನಡೆಸಲಿದ್ದಾರೆ. ಜನರಲ್ ಮೆಡಿಸಿನ್ ಡಾ.ಅನಿತಾ ಶೇಷಾದ್ರಿ ಅವರು ಜ್ವರ, ಆಯಾಸ, ದೇಹದ ನೋವು, ಜೀರ್ಣಕ್ರಿಯೆ ಹಾಗೂ ಉಸಿರಾಟದ ತೊಂದರೆಗಳು, ತೂಕದ ಅಪರೂಪದ ಬದಲಾವಣೆ, ಚರ್ಮದಲ್ಲಾಗುತ್ತಿರುವ ವ್ಯತ್ಯಾಸ ಮತ್ತು ಮಾನಸಿಕ ಆರೋಗ್ಯದ…
ಮಡಿಕೇರಿ ಜು.24 NEWS DESK : ದೆಹಲಿಯಲ್ಲಿ ಆ.15 ರಂದು ನಡೆಯುವ ಸ್ವಾತಂತ್ರ್ಯ ಉತ್ಸವದಲ್ಲಿ ವಿಶೇಷ ಯುವ ರಾಯಭಾರಿಯಾಗಿ ಪ್ರಧಾನ ಮಂತ್ರಿ ಸೇರಿದಂತೆ ಗಣ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ ಪಡೆದ ಕೊಡಗು ಜಿಲ್ಲೆಯ ಪ್ರತಿಭಾನ್ವಿತ ಯುವಕ ಯಶಸ್ ರೈನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸನ್ಮಾನಿಸಿದರು. ಸುದರ್ಶನ ಅತಿಥಿಗೃಹದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಸನ್ಮಾನಿಸಿ, ಗೌರವಿಸಿದರು. ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಡಾ.ಮಂತರ್ ಗೌಡ ಶ್ಲಾಘಿಸಿದ್ದಾರೆ. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಹೆಚ್.ಎ.ಹಂಸ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಯಶಸ್ ತಾಯಿ ಬಿ.ಬಿ.ಜಯಂತಿ ಉಪಸ್ಥಿತರಿದ್ದರು. ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ಲವ ಕುಮಾರ್ ಹಾಗೂ ಜಯಂತಿ ದಂಪತಿಯರ ಪುತ್ರ. ಯಶಸ್ ರೈ ಸುಳ್ಯ…
ಸೋಮವಾರಪೇಟೆ ಜು.24 NEWS DESK : ಸೋಮವಾರಪೇಟೆ ತಾಲ್ಲೂಕು ಹೋಂಸ್ಟೇ ಮತ್ತು ಟೂರಿಸಂ ಅಸೋಸಿಯೇಷನ್ ವತಿಯಿಂದ ಸುಂಟಿಕೊಪ್ಪ ಸರ್ಕಾರಿ ಶಾಲಾ ಮುಂಭಾಗ ರಸ್ತೆಯಲ್ಲಿ “ಶಾಲಾ ಆವರಣ ನಿಧಾನವಾಗಿ ಚಲಿಸಿ” ಎಂಬ ಎರಡು ಸೂಚನಾ ಫಲಕವನ್ನು ಅಲವಡಿಸಲಾಯಿತು. ಈ ಸಂದರ್ಭ ಅಸೋಸಿಯೇಷನ್ ಅಧ್ಯಕ್ಷರಾದ ಸಿ.ಕೆ.ರೋಹಿತ್, ದಾನಿಗಳಾದ ಸಿ.ಎಂ.ಧರ್ಮಪ್ಪ ಮತ್ತು ಅವರ ಪತ್ನಿ, ಸುಂಟಿಕೊಪ್ಪ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಕೆ.ಹೆಚ್.ಭಾರತಿ, ಎ.ಎಸ್.ಐ ಸೈಮನ್ ದಿಕ್ಕುನ್ನ, ಅಭಿನಂದ್ ಹಾಗೂ ಪ್ರತೀಕ್ ಉಪಸ್ಥಿತರಿದ್ದರು.
ಕುಶಾಲನಗರ ಜು.24 NEWS DESK : ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ನ ವತಿಯಿಂದ ಸಮವಸ್ತ್ರ ಹಾಗೂ ಶೂ ವಿತರಿಸಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ಮನು ಪೇಮಯ್ಯ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಲಿಕೆಯ ಮೂಲಕ ತಮ್ಮ ಪ್ರತಿಭೆಯನ್ನು ಗಳಿಸಲು ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ರೋಟರಿ ಸಂಸ್ಥೆಯು ತೊಡಗಿಸಿಕೊಳ್ಳುವ ಮುಖೇನ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸವಲತ್ತುಗಳನ್ನು ನೀಡುತ್ತಿದೆ. ಆ ಮೂಲಕ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂಬ ಕನಸನ್ನು ನಮ್ಮ ರೋಟರಿ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಹಮ್ಮಿಕೊಳ್ಳಲಾಗಿದೆ. ಅದರಂತೆಯೇ ಈ ಸಾಲಿನಲ್ಲಿ ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಶೂ ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನಿರಂತರ ಸೇವೆಯನ್ನು ರೋಟರಿ ಸಂಸ್ಥೆ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದರು.…
ಮಡಿಕೇರಿ ಜು.24 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಭಾಗದ ತ್ರಿವೇಣಿ ಸಂಗಮದ ಭಾಗಮಂಡಲ ಕ್ಷೇತ್ರದಲ್ಲಿ ಮಾತೆ ಕಾವೇರಿಗೆ ಬಾಗಿನ ಅರ್ಪಿಸುವ ‘ಪೊಲಿಂಕಾನ ಉತ್ಸವ’ ಶ್ರದ್ಧಾಭಕ್ತಿಯಿಂದ ಜರುಗಿತು. ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ ಹಾಗೂ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಹರಶಿನ, ಕುಂಕುಮ, ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ಪೂಜೆ ಮಾಡಲಾಯಿತು. ನಂತರ ಶ್ರೀಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಬಂದು ವಾದ್ಯಗೋಷ್ಠಿಗಳೊಂದಿಗೆ ಕಾವೇರಿ, ಸುಜ್ಯೋತಿ ಹಾಗೂ ಕನ್ನಿಕೆ ನದಿಗಳ ತ್ರಿವೇಣಿ ಸಂಗಮಕ್ಕೆ ಬರಲಾಯಿತು. ನದಿಗೆ ವಿಶೇಷ ಪೂಜೆ ಸಲ್ಲಿಸಿ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪವನ್ನು ವಿಸರ್ಜಿಸಲಾಯಿತು. ನೂರಾರು ಭಕ್ತರು ‘ಪೊಲಿಂಕಾನ ಉತ್ಸವ’ ಕ್ಕೆ ಸಾಕ್ಷಿಯಾದರು. ಪ್ರತಿವರ್ಷ ಭೀಮನ ಅಮಾವಾಸ್ಯೆಯಂದು ‘ಪೊಲಿಂಕಾನ ಉತ್ಸವ’ ವನ್ನು ಆಚರಿಸಿ ತ್ರಿವೇಣಿ ಸಂಗಮದಲ್ಲಿ ತಾಯಿ ಕಾವೇರಿಗೆ ಬಾಗಿನ ಅರ್ಪಿಸುವ ಪದ್ಧತಿಯನ್ನು ಬಹಳ ಹಿಂದಿನಿಂದಲೂ ಆಚರಿಸಿಕೊಂಡು…
ಮಡಿಕೇರಿ ಜು.24 NEWS DESK : ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮೈಸೂರಿನ ಗಲ್ಲಿಗಳು ಹಾಗೂ ವೃತ್ತಗಳ ಇತಿಹಾಸದ ಕುರಿತು ಬರೆದ ಎರಡು ಪುಸ್ತಕ, ವೀರ ಸೇನಾನಿಗಳ ಸಾಸಹಗಾಥೆಯನ್ನು ಒಳಗೊಂಡ ಮತ್ತೊಂದು ಕೃತಿ ಸೇರಿದಂತೆ ಒಟ್ಟು ಮೂರು ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ಜು.25 ರಂದು ನಗರದಲ್ಲಿ ನಡೆಯಲಿದೆ. ಮೈಸೂರಿನ ಗಲ್ಲಿ ಗಲ್ಲಿಗೂ ಒಂದೊಂದು ಕಥೆ ಇದೆ. ಇಲ್ಲಿನ ರಸ್ತೆಗಳು ಕೇವಲ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲ. ಅವುಗಳ ಹಿಂದೆ ಬಹುದೊಡ್ಡ ಇತಿಹಾಸ, ತ್ಯಾಗ, ಬಲಿದಾನ, ಸಾಧನೆ, ಆದರ್ಶ ಇದೆ. ಪ್ರತಿಯೊಂದಕ್ಕೆ ಅದರದ್ದೇ ಆದ ಹೆಸರಿದೆ. ಆದರೆ, ಆ ಹೆಸರು ಯಾರದ್ದು ಎನ್ನುವುದು ಹಲವರಿಗೆ ತಿಳಿದಿಲ್ಲ. ಕೆಲವು ರಸ್ತೆ ಹಾಗೂ ವೃತ್ತಗಳ ಹೆಸರುಗಳೇ ಮರೆತು ಹೋಗಿವೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಮೈಸೂರಿನ ರಸ್ತೆ, ವೃತ್ತಗಳ ಕುರಿತು ಐತಿಚಂಡ ರಮೇಶ್ ಉತ್ತಪ್ಪ ಅವರು ಅಧ್ಯಯನ ನಡೆಸಿ ‘‘ಮೈಸೂರಿನ ಗಲ್ಲಿಕಥೆಗಳು’’ ಹಾಗೂ ‘‘ಮೈಸೂರು ವೃತ್ತಗಳ ವೃತ್ತಾಂತ’’ ಕೃತಿಗಳನ್ನು ರಚಿಸಿದ್ದಾರೆ. ಈ ಎರಡೂ ಕೃತಿಗಳು ಮೈಸೂರಿನ…
ಕುಶಾಲನಗರ ಜು.24 NEWS DESK : ಪತ್ರಕರ್ತರು ಸಮಾಜದ ಆಗುಹೋಗುಗಳ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಸಮಾಜದ ಕಣ್ಗಾವಲಾಗಿ ಕಾರ್ಯನಿರ್ವಹಿಸಬೇಕೆಂದು ಶಕ್ತಿ ಸಂಪಾದಕ ಜಿ.ಚಿದ್ವಿಲಾಸ್ ಕರೆ ನೀಡಿದರು. ಕೊಡಗು ವಿಶ್ವವಿದ್ಯಾಲಯ ಹಾಗೂ ಕೊಡಗು ವಿವಿ ಹಿತರಕ್ಷಣಾ ಸಮಿತಿ ವತಿಯಿಂದ ವಿವಿಯ ಹಾರಂಗಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗು ವಿವಿ ಉಳಿವಿನ ಬಗ್ಗೆ ಸರ್ಕಾರ ಇದೂವರೆಗೂ ತನ್ನ ನಿಲುವು ಪ್ರಕಟಪಡಿಸದ ಹಿನ್ನೆಲೆಯಲ್ಲಿ ಶಾಸಕರು ಈ ಬಗ್ಗೆ ವಿವಿಯೊಂದಿಗೆ ಗಟ್ಟಿಯಾಗಿ ನಿಲ್ಲುವ ಮೂಲಕ ಖಾಸಗಿ ಸಂಸ್ಥೆಗಳು ನೀಡಬಹುದಾದ ಅನುದಾನಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ಸಾಮಾಜಿಕ ಜಾಲತಾಣಗಳು ಯಾವುದೇ ವ್ಯಕ್ತಿಯನ್ನು ಕಠಿನ ಶಬ್ಧಗಳಿಂದ ತೇಜೋವಧೆ ಮಾಡುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಕೆಲಸ ಆಗಬಾರದು. ಮಾಧ್ಯಮಗಳಿಂದಾಗಿ ಹೊಸ ಪ್ರತಿಭೆಗಳು ಹೊಸ ಚಿಂತನೆಗಳ ಉಗಮವಾಗುತ್ತಿದೆ ಎಂದು ಶ್ಲಾಘಿಸಿದರು. ಯುವ ಜನಾಂಗ ಇಂದು ಸಮಾಜದಲ್ಲಿ ಅನೈತಿಕ ಚಟುವಟಿಕೆಗಳು ಹಾಗೂ ಕ್ರೌರ್ಯದತ್ತ ಮುಖ ಮಾಡುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಚಿದ್ವಿಲಾಸ್, ಮೊಬೈಲ್ ಗಳ…
ನಾಪೋಕ್ಲು ಜು.24 NEWS DESK : ಕೊಡಗು ದಕ್ಷಿಣ ಕನ್ನಡದ ಜಿಲ್ಲೆಗಳ ಗಡಿ ಭಾಗವಾದ ಚೆಂಬು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸಂಬಂಧಪಟ್ಟ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕೆಲವು ತಿಂಗಳುಗಳಿಂದ ಕಾಡಾನೆಗಳ ಹಿಂಡು ನಿರಂತರ ಗ್ರಾಮದ ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟು ರೈತರು ಕಷ್ಟಪಟ್ಟು ಬೆಳೆಸಿದ ಕೃಷಿ ಗಿಡ ಹಾಗೂ ಬೆಳೆಗಳು ನಾಶವಾಗಿದೆ. ಚೆಂಬು ಗ್ರಾಮದ ಸುತ್ತ ಮುತ್ತಲಿನ ಊರುಗಳಾದ ಊರುಬೈಲು, ದಬ್ಬಡ್ಕ ಆನೆಹಳ್ಳ, ಕಾಂತುಬೈಲುಗಳಲ್ಲಿ ಹಲವು ದಿನಗಳಿಂದ ಆನೆಗಳು ಕೃಷಿ ಜಾಗಕ್ಕೆ ನುಗ್ಗಿ ಹಾನಿ ಮಾಡುತ್ತಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೃಷಿಯನ್ನೇ ನಂಬಿ ಜೀವನ ಮಾಡುತ್ತಿರುವ ಗ್ರಾಮದಲ್ಲಿ ಈ ರೀತಿ ಆನೆಗಳ ಹಾವಳಿ ಯಿಂದ ಕೃಷಿಕರು ಬಾರಿ ನಷ್ಟ ಅನುಭವಿಸುತ್ತಿದ್ದು, ಸಂಬಂಧ ಪಟ್ಟ ಅರಣ್ಯ ಅಧಿಕಾರಿಗಳು ಇತ್ತ ಗಮನ ಹರಿಸಿ ಆನೆಯನ್ನು ಕಾಡಿಗೆ ಅಟ್ಟುವ ಕೆಲಸ ಆಗಬೇಕಾಗಿದೆ. ಶಾಲಾ ಮಕ್ಕಳು ಹೋಗುವ ದಾರಿಯಲ್ಲಿ ಆನೆಗಳು…
ಮಡಿಕೇರಿ ಜು.24 NEWS DESK : ಮಡಿಕೇರಿ- ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ತಡೆಗೋಡೆಯನ್ನು ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಪರಿಶೀಲಿಸಿದರು. ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಅರಕಲಗೂಡು ಶಾಸಕ ಎ.ಮಂಜು, ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.






