ಮಡಿಕೇರಿ ಆ.23 NEWS DESK : ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ ಸಂಭ್ರಮದಿಂದ ನಡೆಯಿತು. ಗೌಳಿ ಸಮುದಾಯದವರು ಅನಾದಿ ಕಾಲದಿಂದಲೂ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿರುವಂತೆ ಶ್ರೀ ಕೃಷ್ಣ ಜನ್ಮಾಷ್ಟಾಮಿಯನ್ನು ಈ ವರ್ಷವೂ ದೇವಾಲಯ ಸಮಿತಿಯಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸ್ಪರ್ಧೆಗೂ ಮುನ್ನ ದೇವಾಲಯದಲ್ಲಿ ಶ್ರೀ ಕೃಷ್ಣನಿಗೆ ವಿಶೇಷ ಪೂಜೆ, ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನೆ ಹಾಗೂ ಕೀರ್ತನೆಗಳು ನಡೆಯಿತು. ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು. ಯುವಕರು ನೀರಿನೇಟನ್ನು ಲೆಕ್ಕಿಸದೆ ವಾದ್ಯಕ್ಕೆ ಸರಿಯಾಗಿ ಹೆಜ್ಜೆ ಹಾಕುತ್ತಾ ಮೊಸರು ಕುಡಿಕೆ ಓಡೆಯುವಲ್ಲಿ ಯಶಸ್ವಿಯಾದರು. ಮೊಸರು ಕುಡಿಕೆ ಒಡೆಯುವ ಸ್ಪರ್ಧಿಗಳಾಗಿ ಎಂ.ವಿಜಯ್ ಹಾಗೂ ಸಂತೋಷ್ ಬಲರಾಮ್ ಭಾಗವಹಿಸಿದರು.
ಲೇಖಕ: admin
ಮಡಿಕೇರಿ ಆ.23 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆಯು ಕಾಲೇಜಿನ ನ್ಯಾಕ್ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಕಾಲೇಜಿನಲ್ಲಿ ತರಲಾಗುವ ಬದಲಾಗುವಣೆ ಕುರಿತು ಹಾಗೂ ಕಾಲೇಜಿನ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಲಾಯಿತು. ಗೌರವ ಅಧ್ಯಕ್ಷ ಸ್ಥಾನವನ್ನ ಕಾಲೇಜು ಪ್ರಾಂಶುಪಾಲರು ವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ಜೊತೆಗೆ ಮುಂಬರುವ ಕಾಲೇಜು ಅಭಿವೃದ್ಧಿ ಕುರಿತು ಚರ್ಚಿಸಿದ್ದು, ಆಡಳಿತ ಮಂಡಳಿ ಸದಸ್ಯರು ಒಪ್ಪಿಗೆ ಸೂಚಿಸಿದರು. ಈ ಕುರಿತು ಗೌರವ ಅಧ್ಯಕ್ಷರು ಹಾಗೂ ಕಾಲೇಜು ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ ಸಂಘದ ಸಹಕಾರ ಅಗತ್ಯ. ಕಾಲೇಜಿನಲ್ಲಿ ಸಾಕಷ್ಟು ಸಮಸ್ಯೆ ಇದ್ದು, ಇದರ ಕಡೆ ಹಳೆ ವಿದ್ಯಾರ್ಥಿ ಸಂಘ ಗಮನ ಹರಿಸುವಂತೆ ಮನವಿ ಮಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹೊಸ…
ಮಡಿಕೇರಿ ಆ.23 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ , ಗುಡ್ಡೆಹೂಸೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಹಯೋಗದಲ್ಲಿ ಕುಶಾಲನಗರ ತಾಲ್ಲೂಕಿನ, ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ವ್ಯವಸ್ಥಾಪಕ ರಾಕೇಶ್, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು.…
ಕುಶಾಲನಗರ ಆ.23 NEWS DESK : ನಾಡಹಬ್ಬ ಮಡಿಕೇರಿ ದಸರಾ ಮಹೋತ್ಸವ-2025 ರ ಆಚರಣೆ ಸಂಬಂಧ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಗಮಿಸುವ ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಕ್ರಮ ಕೈಗೊಂಡು ಕೊಡಗಿನ ಪ್ರವಾಸೋದ್ಯಮಕ್ಕೆ ಸಹಕಾರ ನೀಡಬೇಕೆಂದು ಜಿಲ್ಲೆಯ ಪ್ರವಾಸೋದ್ಯಮಿಗಳ ಪರವಾಗಿ ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ವಿಲೇಜ್ ನ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಸಲಾಂ ಕೊಡಗು-ಮೈಸೂರು ಸಂಸದ ಯದುವೀರ್ ಅವರನ್ನು ಒತ್ತಾಯಿಸಿದ್ದಾರೆ. ನಾಡಹಬ್ಬ ಮಡಿಕೇರಿ ದಸರಾ ಮಹೋತ್ಸವವು ಮುಂಬರುವ 2025 ರ ಸೆ.23 ರಿಂದ ಅ.2 ರವರೆಗೆ ನಡೆಯುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ದಸರಾ ಅಂಗವಾಗಿ ಹೊರರಾಜ್ಯಗಳಿಂದ ನೂರಾರು ಸಂಖ್ಯೆಯಲ್ಲಿ ವಾಹನಗಳೊಂದಿಗೆ ಅಸಂಖ್ಯಾತ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ 2019 ರಲ್ಲಿ ಕೊಡಗು ಹಾಗೂ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ದಸರಾ ವಿಶೇಷ ಕರ್ತವ್ಯಾಧಿಕಾರಿಗಳು ಹೊರಡಿಸಿದ್ದಂತಹ ಆದೇಶದ ಪ್ರಕಾರ ಈ ಬಾರಿಯೂ ದಸರಾ ಅಂಗವಾಗಿ ಹೊರರಾಜ್ಯಗಳಿಂದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಜೊತೆಗೆ ಕೊಡಗು ಜಿಲ್ಲೆಗೆ ಆಗಮಿಸುವ ಪ್ರವಾಸಿ ವಾಹನಗಳಿಗೆ…
ಸುಂಟಿಕೊಪ್ಪ ಆ.23 NEWS DESK : ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡನೇ ಅವಧಿಗೆ ಅಧ್ಯಕ್ಷರಾಗಿ ಜರ್ಮಿ ಡಿಸೋಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಸಂಘದ ಉಪಾಧ್ಯಕ್ಷೆ ರಮ್ಯಾ ಮೋಹನ್, ಕುಶಾಲನಗರದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಂ.ಎನ್.ಕುಮಾರಪ್ಪ, ನಿರ್ದೇಶಕರಾದ ಕ್ಲೈವ ಪೊನ್ನಪ್ಪ, ಡಿ.ಬಿ.ಚೆಂಗಪ್ಪ, ಲೀಲಾವತಿ, ಗಂಗಾಧರ್, ಡಾ.ಶಶಿಕಾಂತ ರೈ, ದಯಾನಂದ, ಕೆ.ಆರ್.ಮಂಜುನಾಥ್, ಕೆ.ಪಿ.ಜಗನ್ನಾತ್, ದಯಾನಂದ, ಪಿ.ಪಿ.ಉದಯಕುಮಾರ್, ಮಾಜಿ ಅಧ್ಯಕ್ಷರಾದ ಕೆ.ಎಸ್.ಮಂಜುನಾಥ್, ಸಂಘದ ಮುಖ್ಯ ನಿರ್ವಹಣಾಧಿಕಾರಿ ಸುಮಿತ್ರಾ ಇದ್ದರು. ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಸಹಕಾರ ಇಲಾಖೆಯ ಪಟ್ಟಡ ಮೋಹನ್ ಕಾರ್ಯನಿರ್ವಹಿಸಿದರು.
ಮಡಿಕೇರಿ ಆ.23 NEWS DESK : ಕೊಡವ ಕೂಟಾಳಿಯಡ ಕೂಟ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ನೇಮಗೊಂಡಿದ್ದಾರೆ. ಪೊನ್ನಂಪೇಟೆಯ ಗೋಲ್ಡನ್ ಗೇಟ್ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೆಟ್ಟೋಳಿರ ಶರತ್ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘಟನೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ ಯನ್ನು ರಚಿಸಲಾಯಿತು. ಉಪಾಧ್ಯಕ್ಷರಾಗಿ ಚೆಕ್ಕೆರ ರಾಜೇಶ್, ಖಜಾಂಚಿಯಾಗಿ ಮಾಚಿಮಡ ಡಿಂಪಲ್, ಸಂಘಟನೆಯ ನಿರ್ದೇಶಕರುಗಳಾಗಿ ಕಾಂಗೀರ ಸಂತೋಷ್ ದೇವಯ್ಯ, ಅಮ್ಮಾಟಂಡ ಚೇತನ್, ಚೇಂದಿರ ಪ್ರಿಯಾ ಲೋಹಿತ್, ನೂರೆರ ಸರಿತ ಉತ್ತಯ್ಯ, ಕೊಟ್ಟಂಗಡ ಕವಿತ ವಾಸುದೇವ, ಅಜ್ಜಮಾಡ ಸಾವಿತ್ರಿ, ಬೊಜ್ಜಂಗಡ ಭವ್ಯ ದೇವಯ್ಯ, ಇಟ್ಟಿರ ಭವ್ಯ ಈಶ್ವರ್, ಪಾಂಡಿರ ದಿವ್ಯ ಉತ್ತಪ್ಪ, ಚಕ್ಕೆರ ಹೇಮಾ ಆಯ್ಕೆಗೊಂಡರು. ನಂತರ ಮಾತನಾಡಿದ ನೂತನ ಅಧ್ಯಕ್ಷರು, ಕಳೆದ ಐದು ವರ್ಷಗಳಿಂದ ಈ ಸಂಘಟನೆಯು ಕೊಡವ ಜನಾಂಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಇನ್ನು ಮುಂದೆಯೂ ಸಂಘಟನೆಯಲ್ಲಿ ಎಲ್ಲರ ಸಲಹೆ ಸಾಕಾರವನ್ನು ಪಡೆದುಕೊಂಡು ವಿನೂತನ ಕಾರ್ಯಕ್ರಮಗಳು ನಡೆಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ…
ಮಡಿಕೇರಿ ಆ.23 NEWS DESK : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್ಟ್ಯೂಟ್(ಎಫ್ಸಿಐ), ಮೈಸೂರು ಇನ್ಸ್ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (ಐಎಚ್ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. :: ಕಾರ್ಯಕ್ರಮಗಳ ವಿವರ :: ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ, ಕನಿಷ್ಟ ವಿದ್ಯಾರ್ಹತೆ- ಎಸ್ಎಸ್ಎಲ್ಸಿ ಪಾಸ್, ತರಬೇತಿ ಕಾಲಾವಧಿ 540 ಗಂಟೆಗಳು (300 ಗಂಟೆಗಳು +240 ಗಂಟೆಗಳು ಒಜೆಟಿ) 15 ವಾರಗಳು (4 ತಿಂಗಳುಗಳು), ವಯಸ್ಸು 20 ರಿಂದ 45 ವರ್ಷ ಮೇಲ್ಪಟ್ಟವರು, ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -2 ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ-1 ಅರ್ಜಿದಾರರು ಇತ್ತೀಚಿನ ಭಾವಚಿತ್ರ, ಆದಾರ್ ಕಾರ್ಡ್, ರೇಷನ್ ಕಾರ್ಡ್,…
ಮಡಿಕೇರಿ ಆ.23 NEWS DESK : ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ದೊಡ್ಡಮಳ್ತೆ ಗ್ರಾಮ, ಇವರ ಸಹಯೋಗದೊಂದಿಗೆ ಶ್ರೀ ಸ್ವರ್ಣಗೌರಿ ಮಹೋತ್ಸವನ ಅಂಗವಾಗಿ ಬಾಗಿನ ಅರ್ಪಣೆ ಕಾರ್ಯಕ್ರಮವು ಆಗಸ್ಟ್, 26 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆಯಲ್ಲಿ ನಡೆಯಲಿದೆ. ಮೈಸೂರು ಕೊಡಗು ಲೋಕಾಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಕರ್ನಾಟಕ ಸರ್ಕಾರ ಮಾಜಿ ಸಚಿವರಾದ ಬಿ.ಎ.ಜೀವಿಜಯ, ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್, ಅರಕಲಗೂಡು ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಮಂಜು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಜಿ.ಪಂ.ಮಾಜಿ ಅಧ್ಯಕ್ಷರಾದ ಚಂದ್ರಕಲಾ, ಗ್ರಾ.ಪಂ. ಅಧ್ಯಕ್ಷರಾದ ಹೆಚ್.ಎಂ.ಗೋಪಾಲಕೃಷ್ಣ, ಪ್ರಾ.ಕೃ.ಪ ಸ.ಸಂ ಗೌಡಳ್ಳಿ ಅಧ್ಯಕ್ಷರಾದ ಹೆಚ್.ಆರ್ ಸುರೇಶ್, ಬೆಂಗಳೂರು ರಾಜ್ಯ ವಕ್ಕಲಿಗರ ಸಂಘ ನಿರ್ದೇಶಕರಾದ…
ಮಡಿಕೇರಿ ಆ.23 NEWS DESK : ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್ಸಿ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್ಸಿ ಗ್ರೂಪ್-“ಸಿ”, ಆರ್ಆರ್ಬಿ ಮತ್ತು ಎಸ್ಎಸ್ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. https://sevasindhu.karnataka.gov.in/Sevasindhu/DepartmentServices ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು https://dom.karnataka.gov.in ನಲ್ಲಿ ಲಭ್ಯವಿದೆ.ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ), ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ: ಯುಪಿಎಸ್ಸಿ/ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್ಸಿ ಗ್ರೂಪ್-“ಸಿ” ತರಬೇತಿಗೆ ಕನಿಷ್ಠ 21 ಹಾಗೂ ಗರಿಷ್ಟ 35 ವರ್ಷಗಳು ಮತ್ತು ಆರ್ಆರ್ಬಿ ಮತ್ತು ಎಸ್ಎಸ್ಸಿ ತರಬೇತಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಟ…
ಮಡಿಕೇರಿ ಆ.23 NEWS DESK : ಅರಣ್ಯ ಬಗರ್ ಹುಕುಂ ಸಾಗುವಾಳಿದಾರ ಬಡ ಕುಟುಂಬಗಳಿಗೆ ಸರಕಾರ ಒನ್ ಟೈಮ್ ಸೆಟಲ್ಮೆಂಟ್ ಮೂಲಕ ಭೂಮಿ, ವಸತಿ ಹಕ್ಕು ಮಾನ್ಯ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ರಾಜ್ಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖ ಅಮೀನ್ ಮೊಹಿಸಿನ್ ಅವರು ಸಿ ಮತ್ತು ಡಿ ಭೂಮಿಯ ಸಮಸ್ಯೆಗೆ ದೊರೆಯುವ ಪರಿಹಾರ ಬಡವರ ಪರವಾಗಿ ಇರಬೇಕೇ ಹೊರತು ಉಳ್ಳವರ ಪರವಾಗಿ ಇರಬಾರದು. ಬಡವರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದರು. ಅಕ್ರಮ ಸಕ್ರಮ ಸಮಿತಿ ಕೇವಲ ನಾಮಕಾವಸ್ಥೆಗಷ್ಟೇ ಇದ್ದು, ಇದೊಂದು ರಾಜಕೀಯ ಸಮಿತಿಯಾಗಿದೆ. ಈ ಸಮಿತಿಯಡಿ ಎಷ್ಟು ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಲೆಕ್ಕವನ್ನು ಮೊದಲು ನೀಡಬೇಕು. ತಹಶೀಲ್ದಾರರು ಸಮಿತಿಯ ಸಭೆ ನಡೆಸಿ ನಿವೇಶನ ರಹಿತರ ಅರ್ಜಿಯನ್ನು ವಿಲೇವಾರಿ ಮಾಡಬೇಕು ಎಂದರು. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು…






