ಲೇಖಕ: admin

ಮಡಿಕೇರಿ ಆ.23 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ಸೇವಾ ಸಿಂಧು, ಆನ್‍ಲೈನ್ ತಂತ್ರಾಂಶದಡಿ ಆಳವಡಿಸಲಾಗಿದೆ. ಆದ್ದರಿಂದ ವಿವಿಧ ಯೋಜನೆಗಳಿಗೆ 2025-26 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ (https://sevasindhu.karnataka.gov.in/Sevasindhu/Kannada)  ಪೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ಸಾಧನ ಸಲಕರಣೆ ಯೋಜನೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯು ಹಾಗೂ…

Read More

ಮಡಿಕೇರಿ ಆ.23 NEWS DESK : ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ 18ನೇ ಪುಣ್ಯಸ್ಮರಣೆಯ ಅಂಗವಾಗಿ ಆ.25 ರಂದು ಮಡಿಕೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಮಡಿಕೇರಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ, ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬ್ರಹ್ಮಾಕುಮಾರಿ ಲೈಟ್‍ಹೌಸ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ 1.30ರ ವರೆಗೆ ಶಿಬಿರ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬ್ರಹ್ಮಾಕುಮಾರಿ ಲೈಟ್‍ಹೌಸ್‍ನ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

Read More

ಸುಂಟಿಕೊಪ್ಪ ಆ.23 NEWS DESK : ಧರ್ಮದ ತಳಹದಿಯ ಮೇಲೆ ಆರ್ಥಿಕ ಸಬಲತೆಯನ್ನು ಹೊಂದುವ ವ್ಯವಸ್ಥೆಯನ್ನು ಮಹಿಳಾ ಸಬಲೀಕರಣದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಧಿಸಿದೆ ಎಂದು ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠದ ಕೊಡ್ಲಿಪೇಟೆಯ ಶ್ರೀ ಸದಾಶಿವ ಸ್ವಾಮಿಗಳು ಹೇಳಿದ್ದಾರೆ. ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಗಳ ಒಕ್ಕೂಟ ಗುಡ್ಡೆಹೊಸೂರು ವಲಯ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಸೌಹಾರ್ದತೆ ಹಾಗೂ ಗ್ರಾಮಸುಭಿಕ್ಷೆಗಾಗಿ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಜನರಿಂದ ಜನರಿಗಾಗಿ ಜನರಿಗೋಸ್ಕರ ಗ್ರಾಮಾಭಿವೃದ್ಧಿ ಯೋಜನೆ ರೂಪುಗೊಂಡಿದ್ದು, ಮಾನಸಿಕವಾಗಿ ಸಾಮಾಜಿಕವಾಗಿ ಧಾರ್ಮಿಕವಾಗಿ ಜನರನ್ನು ಎಚ್ಚರಗೊಳಿಸಿ ಧರ್ಮದ ತಳಹದಿಯ ಮೇರೆ ಆರ್ಥಿಕ ಸಬಲೀಕರಣದ ಮೂಲಕ ಬದುಕನ್ನು ಕಟ್ಟಿಕೊಳ್ಳುವುದು ಶ್ರೇಷ್ಠ ಸಾಧನೆಯೆಂದು ಸ್ವಾಮೀಜಿ ಬಣ್ಣಿಸಿದರು. ಭಾರತ ಎಲ್ಲಾ ರೀತಿಯಲ್ಲೂ…

Read More

ಸುಂಟಿಕೊಪ್ಪ ಆ.23 NEWS DESK : ಸುಂಟಿಕೊಪ್ಪ ಶ್ರೀ ರಾಮ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷರು ಹಾಗೂ ಕೆಳಗಿನ ಪನ್ಯ ತೋಟದ ಮಾಲೀಕರಾದ ಎಸ್.ಬಿ.ಶಂಕರ್ ಅವರ ಪುತ್ರ ಎಸ್.ಎಸ್.ಸಂದೇಶ್ (58) ಅವರು ಮೈಸೂರಿನಲ್ಲಿ ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಸ್ವಗೃಹ ಪನ್ಯದಲ್ಲಿ ನಡೆಯಿತು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ನಾಪೋಕ್ಲು ಆ.23 NEWS DESK : ಬೆಟ್ಟಗೇರಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾಡಾನೆಗಳು ತೋಟಗಳಿಗೆ ನುಗ್ಗೆ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾಗಿದ್ದಾರೆ. ಗ್ರಾಮದ ಕಾಫಿ ಬೆಳೆಗಾರ ಚೌಂಡಿರ ಕುಮಾರ್, ಪಟ್ಟಡ ಗಣಿ ಸೇರಿದಂತೆ ಗ್ರಾಮದ ಹಲವು ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ, ಕಾಫಿ, ಅಡಿಕೆ, ತೆಂಗಿನ ಗಿಡಗಳನ್ನು ನಾಶಪಡಿಸಿ ಅಪಾರ ನಷ್ಟ ಉಂಟು ಮಾಡಿದೆ. ಸುಮಾರು 1.5 ಲಕ್ಷ ರೂ.ಬಾಳೆ ಹಾಗೂ ಕಾಫಿ ಪಸಲು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬೆಟ್ಟಗೇರಿ ಗ್ರಾಮ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿಯಿಂದ ಜನರು ಭಯ ಬೀತರಾಗಿದ್ದು, ಕಾರ್ಮಿಕರು ತೋಟಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಭಯದ ವಾತಾವರಣ ಸೃಷ್ಟಿಯಾಗಿದ್ದು, ಅರಣ್ಯ ಇಲಾಖೆ ಕಾಡಾನೆಗಳನ್ನು ತಕ್ಷಣವೇ ಕಾಡಿಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಬೆಳೆಗಾರರರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಆ.23 NEWS DESK : ಕೆದಕಲ್ ಗ್ರಾ.ಪಂ ವ್ಯಾಪ್ತಿಯ ಹಾಲೇರಿ ಗ್ರಾಮದಲ್ಲಿ ಪ್ರಸ್ತುತ ವರ್ಷದ ಆಗಸ್ಟ್ ತಿಂಗಳ ಮಳೆಯಿಂದ ಮನೆ ನೆಲಸಮವಾಗಿದ್ದು, ಪುನರ್ ವಸತಿ ಕಲ್ಪಿಸುವಂತೆ ಕೋರಿ ಸ್ಥಳೀಯ ನಿವಾಸಿ ವಿಶಾಲಾಕ್ಷಿ ಬಿ.ಜೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ 36 ವರ್ಷಗಳಿಂದ ಹಾಲೇರಿ ತಾತಿಬಾಣೆಯಲ್ಲಿ ವಾಸವಿದ್ದ ಮನೆ 2018 ರ ಪ್ರಾಕೃತಿಕ ವಿಕೋಪದ ಸಂದರ್ಭ ಸಂಪೂರ್ಣ ಬಿರುಕು ಬಿಟ್ಟಿತ್ತು. ಈ ಮನೆ ವಾಸಕ್ಕೆ ಯೋಗ್ಯವಾಗಿರುವುದಿಲ್ಲವೆಂದು ಅಧಿಕಾರಿಗಳು ತಿಳಿಸಿದ ಹಿನ್ನೆಲೆ ಮಡಿಕೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದೆವು. ನಂತರ ಪುನರ್ ವಸತಿ ಕಲ್ಪಿಸುವಂತೆ ಕೋರಿ 2018 ರಿಂದ ಅರ್ಜಿಗಳನ್ನು ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಸ್ಪಂದನೆ ದೊರೆತ್ತಿರಲಿಲ್ಲ. ಜಂಬೂರುಬಾಣೆಯಲ್ಲಿ 2ನೇ ಮನೆ ಹಂಚಿಕೆ ಪಟ್ಟಿಯಲ್ಲಿ ನನ್ನ ಪತಿ ಬಿ.ಪಿ.ಜನಾರ್ಧನ ಅವರ ಹೆಸರಿನಲ್ಲಿ ಮನೆ ನೋಂದಾವಣಿಗೊಂಡಿತ್ತು ಮತ್ತು ಮನೆ ಸಂಖ್ಯೆಯನ್ನು ಕೂಡ ನೀಡಲಾಗಿತ್ತು. ಆದರೆ ಇಲ್ಲಿಯವರೆಗೆ ನಮಗೆ ಮನೆ ದೊರೆತ್ತಿರುವುದಿಲ್ಲ ಎಂದು ಮನವಿಯಲ್ಲಿ ಗಮನ ಸೆಳೆದಿದ್ದಾರೆ. ನಾಲ್ವರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಡಲಾಗಿದೆ,…

Read More

ನಾಪೋಕ್ಲು ಆ.23 NEWS DESK : ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಪಾರಾಣೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಜನಿ ಹೇಳಿದರು. ಶಾಲಾಶಿಕ್ಷಣ ಇಲಾಖೆ ಮತ್ತು ಪಾರಾಣೆ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಚೆರಿಯಪರಂಬು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿಯನ್ನು ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರುದರು. ಕ್ರೀಡಾಕೂಟದಲ್ಲಿ ಪಾರಾಣೆ ಕಕ್ಕಬ್ಬೆ, ಬಲ್ಲಮಾವಟಿ, ಆಕ್ಸ್ ಫರ್ಡ್, ಎಕ್ಸೆಲ್, ಸೇಕ್ರೆಡ್ ಹಾರ್ಟ್, ಹೊದವಾಡ, ಕೆಪಿಎಸ್, ಮರ್ಕಝ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.

Read More

ಸಿದ್ದಾಪುರ ಆ.23 NEWS DESK : ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯವು 2024-25ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶೇ.100 ರಷ್ಟು ಫಲಿತಾಂಶವನ್ನು ನೀಡಿದ್ದಾರೆ. ನೃತ್ಯ ಕಲಾ ಶಾಲೆಯ ಸಿದ್ದಾಪುರದ ವಿದ್ಯಾರ್ಥಿಗಳಾದ ಹೆಚ್.ಆರ್.ಹರ್ಷಿತ, ಕೆ.ಆರ್.ಅದಿತ್ರಿ, ವಿ.ಜೆ.ಸಿಂಚನ, ಹೆಚ್.ಎಲ್.ಧೃತಿಕ ಮತ್ತು ಕೆ.ಎಸ್.ಜೀಶ್ನ ಇವರುಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಭಾರತೀಯ ನೃತ್ಯ ಕಲಾ ಶಾಲೆಯ ನೃತ್ಯಗುರು ವಿದುಷಿ ಜಲಜ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ಟಿ.ಸಿ. ನಾಗರಾಜ್, ಮೂರ್ನಾಡು.

Read More

ಮಡಿಕೇರಿ ಆ.23 NEWS DESK : ಜಮ್ಮಾಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಬಗ್ಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚರ್ಚಿಸಿದರು. ಸದನದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಶಾಸಕರು, ಜಮ್ಮಾಬಾಣೆ ಹಾಗೂ ಕಂದಾಯ ಸಮಸ್ಯೆ  ಕೊಡಗಿನ ಜನತೆಯನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದ್ದು, ಇದರ ಇತ್ಯರ್ಥಕ್ಕಾಗಿ ಶೀಘ್ರ ಸದನ ಸಮಿತಿ ರಚನೆ ಮಾಡುವಂತೆ ಕೋರಿದರು.

Read More

ಕುಶಾಲನಗರ ಆ.23 NEWS DESK : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡಾಗ ಮಾತ್ರ ತಾವು ಪಡೆದ ಶಿಕ್ಷಣಕ್ಕೆ ಮಹತ್ವ ಸಿಗುತ್ತದೆ ಎಂದು ಸೋಮವಾರಪೇಟೆ ವಿಭಾಗದ ಡಿವೈಎಸ್ಪಿ ಪಿ.ಚಂದ್ರಶೇಖರ್ ಹೇಳಿದರು. ಪಟ್ಟಣದ ಬೈಚನಹಳ್ಳಿಯಲ್ಲಿರುವ ಮಹಾತ್ಮಾಗಾಂಧಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೊಸ ವಿದ್ಯಾರ್ಥಿಗಳಿಗೆ ಕಾಲೇಜಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಹಾಯ ಮಾಡುವುದಕ್ಕೆ ಫ್ರೆಶರ್ಸ್ ಡೇ ಸಹಕಾರಿಯಾಗಿದೆ. ತಮ್ಮ ಪ್ರತಿಭೆಯನ್ನು ಅನಾವರಣ ಪಡಿಸಲು ವೇದಿಕೆ ನೀಡುವುದು ಮತ್ತು ಹಿರಿಯರೊಂದಿಗೆ ಬಾಂಧವ್ಯ ಬೆಳೆಸುವುದು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು. ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯಗತ್ಯ. ಶಿಕ್ಷಣ ಎಂಬುದು‌ ಕೇವಲ ಉದ್ಯೋಗ ಗಳಿಸಲು ಮಾತ್ರ ಸೀಮಿತಗೊಳಿಸಬಾರದು. ಜ್ಞಾನಾರ್ಜನೆ ಶಿಕ್ಷಣದ ಮುಖ್ಯ ಉದ್ದೇಶವಾಗಿರಬೇಕು.ತಾವು ಪಡೆದುಕೊಂಡ ಶಿಕ್ಷಣ ಸದ್ಬಳಕೆ‌ ಮಾಡಿಕೊಂಡು ಸ್ವ ಉದ್ಯೋಗ ಪಡೆದುಕೊಳ್ಳಲು ಚಿಂತನೆ ಹರಿಸಬೇಕಿದೆ‌‌. ನಾವು ಕಲಿತ ಶಿಕ್ಷಣವನ್ನು ಸತ್ಕಾರ್ಯ, ಒಳ್ಳೆಯ ವಿಚಾರಗಳಿಗೆ ಉಪಯೋಗಿಸಬೇಕಿದೆ ಎಂದರು. ವಿದ್ಯಾರ್ಥಿಗಳು ತಪ್ಪು ಹಾದಿ ಹಿಡಿಯದೆ, ಸಮಾಜದಲ್ಲಿ ಇತರರಿಗೆ ಮಾದರಿಯಾಗುವ…

Read More