ಮಡಿಕೇರಿ ಆ.22 NEWS DESK : ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಅನುದಾನ ಒದಗಿಸುವಂತೆ ಒತ್ತಾಯಿಸಿ ಕೊಡಗು ಹೆಗ್ಗಡೆ ಸಮಾಜದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಸಮಾಜದ ಪ್ರಮುಖರು ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಆರ್ಥಿಕ ನೆರವು ಒದಗಿಸಲು ಮನವಿ ಮಾಡಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರಾದ ಪೊನ್ನಣ್ಣ ಈ ವಿಚಾರವನ್ನು ಈಗಾಗಲೇ ತಿಳಿಸಿದ್ದು ಶೀಘ್ರದಲ್ಲಿ ಕೊಡಗು ಹೆಗ್ಗಡೆ ಸಮಾಜದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು. ನಿಯೋಗದಲ್ಲಿ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಕೊರಕುಟ್ಟೀರ ಸರ ಚಂಗಪ್ಪ, ಮಾಜಿ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪ, ಸಮಾಜದ ಉಪಾಧ್ಯಕ್ಷರಾದ ಚರ್ಮಂಡ ಪೂವಯ್ಯ, ಖಜಾಂಚಿ ಕೊರಂಡ ಪ್ರಕಾಶ್ ನಾಣಯ್ಯ, ಪ್ರಮುಖರಾದ…
ಲೇಖಕ: admin
ಮಡಿಕೇರಿ ಆ.21 NEWS DESK : ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಈ ಅವಕಾಶ ಬಳಸಿಕೊಂಡು ಸ್ವಉದ್ಯೋಗ ಕೈಗೊಳ್ಳುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ(ಪಿಎಂಎಫ್ಎಂಇ) ಯೋಜನೆ ಕುರಿತು ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆತ್ಮ ನಿರ್ಭರ ಭಾರತ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಆ ನಿಟ್ಟಿನಲ್ಲಿ ಸಾಲ ಸೌಲಭ್ಯ ಪಡೆದು ಮನೆಯಲ್ಲಿಯೇ ಸ್ವ ಉದ್ಯೋಗ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಸರ್ಕಾರದಿಂದ ಶೇ.50 ರಷ್ಟು ಸಹಾಯಧನ ದೊರೆಯಲಿದ್ದು, ಸಣ್ಣ ಮತ್ತು ಅತೀ ಸಣ್ಣ ಉದ್ದಿಮೆಗಳ ಬೆಳವಣಿಗೆಗೆ ಈ ಯೋಜನೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಈ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಮಾರುಕಟ್ಟೆ ಸೌಲಭ್ಯ ಒದಗಿಸಿ ಎಲ್ಲೆಡೆ…
ಮಡಿಕೇರಿ ಆ.22 NEWS DESK : ನ್ಯಾಯಮೂರ್ತಿ ನಾಗಮೋಹನ್ದಾಸ್ ಅವರ ಒಳ ಮೀಸಲಾತಿ ವರದಿಯನ್ನು ಜಾರಿ ಮಾಡುವುದಕ್ಕೂ ಮೊದಲು ರಾಜ್ಯ ಸರ್ಕಾರ ಪುನರ್ ಪರಿಶೀಲನೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ (ಬಲಗೈ) ಸಂಬಂಧಿತ ಜಾತಿಗಳ ಒಕ್ಕೂಟದ ಕೊಡಗು ಘಟಕ ಮಡಿಕೇರಿಯಲ್ಲಿ ಇಂದು ಪ್ರತಿಭಟನೆ ನಡೆಸಿತು. ಜಿಲ್ಲಾಡಳಿತದ ಭವನದ ಎದುರು ಬೇಡಿಕೆ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಬಲಗೈ ಪಂಗಡಕ್ಕೆ ಸರಕಾರ ನ್ಯಾಯ ಒದಗಸಬೇಕು ಎಂದು ಆಗ್ರಹಿಸಿದರು. ಒಕ್ಕೂಟದ ಜಿಲ್ಲಾ ಸಂಚಾಲಕ ರಾಜಪ್ಪ ಅವರು ಮಾತನಾಡಿ, ರಾಜ್ಯ ಸರಕಾರ ಒಳ ಮೀಸಲಾತಿಯ ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿಯನ್ನು ಜಾರಿಗೆ ಮುಂದಾಗುತ್ತಿದೆ. ಆದರೆ, ಈ ವರದಿಯಲ್ಲಿ ರಾಜ್ಯದ ಬಹುಸಂಖ್ಯಾತರಾದ ಪರಿಶಿಷ್ಟ ಬಲಗೈ ಸಂಬಂಧಿತ ಜಾತಿಗಳಿಗೆ ಶೇ.5 ಮೀಸಲಾತಿಯನ್ನು, ಎಡಗೈಗೆ ಶೇ.7 ಮೀಸಲಾತಿಯನ್ನು ಶಿಫಾರಸ್ಸು ಮಾಡಿರುವುದು ಸಮಂಜಸವಲ್ಲವೆಂದು ತಿಳಿಸಿದರು. ಪರಿಶಿಷ್ಟ ಎಡಗೈ ಜಾತಿ ಬಾಂಧವರು ನಮ್ಮ ಅಣ್ಣ ತಮ್ಮಂದಿರೇ ಆಗಿದ್ದಾರೆ ಮತ್ತು ಅವರಿಗೆ ಮೀಸಲಾತಿ ಸೌಲಭ್ಯ ನೀಡಬಾರದು ಎನ್ನುವ ಬೇಡಿಕೆ ನಮ್ಮದಲ್ಲ. ಬದಲಾಗಿ ಸಮಾನ…
ಮಡಿಕೇರಿ ಆ.22 NEWS DESK : ಶ್ರೀ ಧರ್ಮಸ್ಥಳ ಕ್ಷೇತ್ರದ ಮೇಲೆ ನಿರಂತರವಾಗಿ ನಡೆಸುತ್ತಿರುವ ಅಪಪ್ರಚಾರದ ಹಿಂದಿನ ಷಡ್ಯಂತ್ರದ ಕುರಿತು ರಾಜ್ಯ ಸರಕಾರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥgನ್ನು ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿತು. ಜಿಲ್ಲಾಡಳಿತ ಭವನದ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಕೆಲವು ಧರ್ಮದ್ರೋಹಿಗಳು ಹಾಗೂ ಎಡ ಪಂಥೀಯರು ಅಪಪ್ರಚಾರ ಮಾಡುವ ಮೂಲಕ ಅಪಚಾರವೆಸಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎನ್ನುವ ಅನಾಮಿಕ ವ್ಯಕ್ತಿಯ ದೂರನ್ನು ಆಧರಿಸಿ ಗುಂಡಿಗಳನ್ನು ತೋಡಿದರು ಸೂಕ್ತವಾದ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲ. ದೂರು ನೀಡುವ ಹಂತದಲ್ಲೆ ಅನಾಮಿಕ ವ್ಯಕ್ತಿ ನೀಡಿರುವ ದೂರಿನಲ್ಲಿ ಹುರುಳಿದೆಯೇ ಎನ್ನುವುದನ್ನು ಪರಿಶೀಲಿಸದೆ ಪ್ರಕರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ…
ಮಡಿಕೇರಿ ಆ.22 NEWS DESK : ತಾರ್ಬ್ಸ್ ನ ಸಂತ ಜೋಸೆಫರ ಸಂಸ್ಥೆಗಳ ಸಂಸ್ಥಾಪನಾ ದಿನಾಚರಣೆಯನ್ನು ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿಭಾಗಗಳ ಎಲ್ಲ ವಿದ್ಯಾರ್ಥಿಗಳು ಮತ್ತು ಶಿಕ್ಷಕ ಸಮುದಾಯ ಸಂಸ್ಥೆಗೆ ಅಡಿಪಾಯ ಹಾಕಿದ ದಿನವನ್ನು ಅರ್ಥಪೂರ್ಣ ಆಚರಣೆಯ ಮೂಲಕ ಸ್ಮರಿಸಿದರು. ಮಡಿಕೇರಿಯ ಜೋಸೆಫ್ಸ್ ಸಂಸ್ಥೆಯ ಸುಪೀರಿಯರ್ ಆಗಿರುವ ಸಿಸ್ಟರ್ ಮರ್ಸಿ ಜೇಕಬ್ ಮಾತನಾಡಿ 1843 ರ ಆ.14ರಂದು ಫ್ರಾನ್ಸ್ ದೇಶದ ಕಾಂತಾವ್ಸ್ ನ ಟಾರ್ಬ್ಸ್ ಎಂಬಲ್ಲಿ ಆರು ಮಂದಿ ಕನ್ಯೆಯರಿಂದ ಆರಂಭಗೊಂಡ ಸಂತ ಜೋಸೆಫರ ಸಂಸ್ಥೆಯು ಆರೋಗ್ಯ, ಶಿಕ್ಷಣ, ಸಮಾಜ ಸೇವೆ ಮೊದಲಾದ ಸಮಾಜಮುಖಿ ಸೇವೆಗಳಲ್ಲಿ ನಿರತವಾಗಿದ್ದು, ತನ್ನ ಸೇವಾ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತ, ಇಂದು ಬೇರೆ ಬೇರೆ ದೇಶಗಳಲ್ಲಿ ತನ್ನ ಶಾಖೆಗಳನ್ನು ತೆರೆದು ಕಾರ್ಯನಿರತವಾಗಿವೆ. ಶಿಕ್ಷಣ, ಆರೋಗ್ಯವನ್ನೂ ಒಳಗೊಂಡಂತೆ ಹತ್ತು ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಂಸ್ಥೆಗಳ ಸಿಸ್ಟರ್ಸ್ ಗಳು ತೊಡಗಿಕೊಂಡಿದ್ದಾರೆ ಎಂದರು.…
ಮಡಿಕೇರಿ ಆ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು. ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳ ಪ್ರತಿಭೆಯನ್ನು ಗುರುತಿಸಲು ಕ್ರೀಡಾಕೂಟ ಸಹಕಾರಿಯಾಗಿದೆ. ದಸರಾ ಕ್ರೀಡಾಕೂಟದ ಮೂಲಕ ವಿವಿಧ ರಾಜ್ಯ, ರಾಷ್ಟ್ರೀಯ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ. ದಸರಾ ಕ್ರೀಡೆಯು ರಾಜಮನೆತನದ ದಸರಾ ಹಬ್ಬ ಆಚರಣೆ ಸಂದರ್ಭದಿಂದಲೇ ನಡೆದುಕೊಂಡು ಬಂದ ಹಿನ್ನೆಲೆಯಲ್ಲಿ ಇಂದಿನ ಯುವಕರಿಗೆ ಮಾರ್ಗದರ್ಶನವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ, ಕ್ರೀಡಾ ಶಾಲೆ ಮುಖ್ಯೋಪಾಧ್ಯಾಯ ಮುರುಳಿ, ಕ್ರೀಡಾ ತರಬೇತಿದಾರರಾದ ವೆಂಕಟೇಶ, ದೀನಾಮಣಿ, ಬಿಂದಿಯಾ, ಸುಬ್ಬಯ್ಯ, ಗಣೇಶ್, ಮಂಜುನಾಥ, ಮಹಾಬಲ, ನಿವೃತ್ತ ಅರ್ಥೆಟಿಕ್ಸ್ ತರಬೇತಿದಾರ ಅಂತೋಣಿ ಡಿಸೋಜ, ಸಹಾಯಕ ಠಾಣಾಧಿಕಾರಿ ವಿಜಯ, ರಾಜ್ಯ ಮಟ್ಟದ…
ಕುಶಾಲನಗರ ಆ.22 NEWS DESK : ಭಾರತೀಯ ಸಂಸ್ಕೃತಿಯಲ್ಲಿ ಹಸಿರು ಗಾಜಿನ ಬಳೆಗೆ ಬಹಳಷ್ಟು ಮೌಲ್ಯವಿದೆ. ಬಳೆಗೆ ತನ್ನದೇ ಆದ ವಿಶೇಷ ಮಹತ್ವವಿದೆ. ಯಾವುದೇ ಮಹಿಳೆ ಎಷ್ಟೇ ಅಲಂಕಾರ ಮಾಡಿಕೊಂಡರು ಬಳೆ ಇಲ್ಲದೆ ಸಂಪೂರ್ಣವಾಗುವುದಿಲ್ಲ ಎನ್ನುವ ಭಾವನೆ ಇರುತ್ತೆ ಎಂದು ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಅನುಷಾ ಅರ್ಜುನ್ ಹೇಳಿದರು. ವಾಸವಿ ಯುವತಿಯರ ಸಂಘದ ನೇತೃತ್ವದಲ್ಲಿ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾದಲ್ಲಿ ಮುತ್ತೈದೆಯರಿಗೆ ಹಸಿರು ಬಳೆ ತೊಡಿಸುವ ಮೂಲಕ ಗೌರಿ ಹಬ್ಬವನ್ನು ಆಚರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದೂ ಸನಾತನ ಧರ್ಮದ ಪ್ರಕಾರ ಬಳೆ ಮುತ್ತೈದೆಯರಿಗೆ ಭೂಷಣ. ಮನೆಯಲ್ಲಿ ಇರುವ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಕರರು ಗಾಜಿನ ಬಳೆ ತೊಟ್ಟು ಸಂಭ್ರಮಿಸುವುದನ್ನು ಕಾಣುತ್ತೇವೆ. ಬಳೆಯ ನಾದವನ್ನು ಗಂಡಸರು, ಮಕ್ಕಳು ಕೂಡ ಆನಂದಿಸುತ್ತಾರೆ. ಅಂತಹ ಶ್ರೇಷ್ಠ ಆಚರಣೆಯನ್ನು ಇಂದಿನ ಯುವಪೀಳಿಗೆಯ ಯುವತಿಯರಲ್ಲಿ ಅರಿವು ಮೂಡಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು. ಆರ್ಯವೈಶ್ಯ ಮಹಿಳೆಯರು ಹಸಿರು ಬಣ್ಣದ ಸೀರೆಯಲ್ಲಿ ಕಂಗೊಳಿಸಿದರು. ಬಳೆಗಾರ ರಮೇಶ್ ದಂಪತಿ ಎಲ್ಲಾ…
ಮಡಿಕೇರಿ ಆ.22 NEWS DESK : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದ್ದು, ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ.
ಮಡಿಕೇರಿ ಆ.22 NEWS DESK : ಜಮ್ಮಾಮಲೆ, ಸಿ ಮತ್ತು ಡಿ ಜಮೀನು ಹಾಗೂ ವನ್ಯ ಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರ ಕಛೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರುಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ಜಮ್ಮಾಮಲೆ ಹಿಡುವಳಿದಾರ ಆಸ್ತಿ ಹಕ್ಕು ರಕ್ಷಣೆ ಮತ್ತು ಅವರಿಗೆ ನ್ಯಾಯ ದೊರಕಬೇಕು. ನ್ಯಾಯಾಲಗಳಲ್ಲಿ ಆದೇಶವಾಗಿದೆ. ಈ ಬಗ್ಗೆ ಶ್ರೀಘ್ರವಾಗಿ ಕ್ರಮವಹಿಸಬೇಕೆಂದು ವಿವರಿಸಿದರು. ಸಚಿವರು ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಸಿ ಮತ್ತು ಡಿ ಲ್ಯಾಂಡ್ ಬಗ್ಗೆ ಜಂಟಿ ಸರ್ವೆ ಮಾಡಿ ಹಿಡುವಳಿದಾರರಿಗೆ ನ್ಯಾಯ ಒದಗಿಸಬೇಕು. ಕೊಡಗು ಜಿಲ್ಲೆಯಲ್ಲಿ ಆನೆಗಳ ಹಾವಳಿಯಿಂದ ಮಾನವನ ಪ್ರಾಣ ಹಾನಿ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟ ಬೇಕು, ಆನೆ ಮತ್ತು ಹುಲಿಯ…
ನಾಪೋಕ್ಲು ಆ.22 NEWS DESK : ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ.ಯು.ಪೂವಣ್ಣ ಮೂರು ವರ್ಷದ ಅವಧಿಗೆ ಆಯ್ಕೆಯಾಗಿದ್ದಾರೆ. ಕಕ್ಕಬೆಯ ಪಾಣಿ ಕುತಪ್ಪ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿದರು. ಸಮಿತಿಯ ಸದಸ್ಯರುಗಳಾದ ಕುಶ ಭಟ್, ಕೆ.ಸಿ.ರಮೇಶ್, ಸಿ.ಡಿ.ಉಷಾ, ಕೆ.ಸಿ.ನೈಲ್, ಪಿ.ಎಂ.ನರೇಂದ್ರ, ಎ. ಜಗದೀಶ್, ಭೀಮಯ್ಯ, ಉಲ್ಲಾಸ್ ಆರ್. ರವಿಕುಮಾರ್ ಕಾರ್ಯನಿರ್ವಾಹಕ ಅಧಿಕಾರಿ, ಪಿ.ಟಿ.ತಮ್ಮಯ್ಯ ಹಾಗೂ ಶ್ರೀಕಾಂತ್ ಸಭೆಯಲ್ಲಿ ಹಾಜರಿದ್ದರು. ವರದಿ : ದುಗ್ಗಳ ಸದಾನಂದ






