ಮಡಿಕೇರಿ ಜು.23 NEWS DESK : ರೋಟರಿ ಮಡಿಕೇರಿ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ರಸ್ತೆಯ ನಗರಸಭಾ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಮತ್ತು ಕಲಿಕಾ ಸಲಕರಣೆಗಳನ್ನು ಉಚಿತವಾಗಿ ನೀಡಲಾಯಿತು. ಶಾಲಾ ಆವರಣದಲ್ಲಿ ಜು.19 ರಂದು ನಡೆದ ಸರಳ ಸಮಾರಂಭದಲ್ಲಿ ಈ ಶಾಲೆಯಲ್ಲಿ ಸೇವಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿರುವ ಇಬ್ಬರು ಶಿಕ್ಷಕರಿಗೆ ರೋಟರಿ ವತಿಯಿಂದ ಗೌರವಧನವನ್ನು ಕೂಡ ವಿತರಿಸಲಾಯಿತು. ರೋ.ಡಾ.ಎಂ.ಜಿ.ಪಾಟ್ಕರ್ ಹಾಗೂ ರೋ.ಹೆಚ್.ಎಸ್.ಅನಂತ ಸುಬ್ಬರಾವ್ ಅವರು ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ರೋಜಿ, ರೋಟರಿ ಅಧ್ಯಕ್ಷೆ ರೋ.ಲಲಿತಾ ರಾಘವನ್, ಕಾರ್ಯದರ್ಶಿ ರೋ.ಬಿ.ಎಂ.ಸೋಮಣ್ಣ, ರೋ.ಡಾ.ಎಂ.ಜಿ.ಪಾಟ್ಕರ್, ಡಾ.ಜಯಲಕ್ಷ್ಮಿ ಪಾಟ್ಕರ್, ರೋ.ಹೆಚ್.ಎಸ್.ಅನಂತ ಸುಬ್ಬರಾವ್, ರೋಟರಿ ಸದಸ್ಯರು ಹಾಗೂ ನಗರಸಭಾ ಸದಸ್ಯೆ ಸಬಿತ ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿಯ ಜಂಟಿ ಅಧ್ಯಕ್ಷರುಗಳಾಗಿ ನಾಗರಾಜ್ ವಿಷ್ಣುಪ್ರಿಯ, ಕಿಶೋರ್ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಲ್.ಸತೀಶ್ ಹಾಗೂ ಖಜಾಂಚಿಯಾಗಿ ಪವನ್ ಸಿ.ಎಸ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜು.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಟ್ರಸ್ಟ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಸ್.ಸಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎಸ್.ಪ್ರಕಾಶ್, ಉಪಾಧ್ಯಕ್ಷರಾಗಿ ಎಂ.ವಿ.ಲೋಕೇಶ್ ಹಾಗೂ ಖಜಾಂಚಿಯಾಗಿ ಪೂಜಾರಿ ಉಮೇಶ್ ಆಯ್ಕೆಯಾಗಿದ್ದಾರೆ.
ವಿರಾಜಪೇಟೆ ಜು.23 NEWS DESK : ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ತಮ್ಮ ವ್ಯಕ್ತಿತ್ವ ವಿಕಸನವನ್ನು ಮಾಡುವುದರ ಮೂಲಕ ಶಾಲೆಗೂ ಪೋಷಕರಿಗೂ ಕೀರ್ತಿ ತರಬೇಕು ಎಂದರು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿ ನಾಯಕರಿಗೆ ಸೇವಾ ಮನೋಭಾವನೆಯು ಅತೀ ಮುಖ್ಯ. ನಿಷ್ಕಲ್ಮಷ ಸೇವೆಯನ್ನು ಸಮಾಜಕ್ಕೆ ಸಲ್ಲಿಸಬೇಕು. ಅಹಂ ನ್ನು ತೊರೆದು ಸೇವಾ ಮನೋಭಾವನೆಯನ್ನು ಮೂಡಿಸಿಕೊಂಡು ಶಿಸ್ತನ್ನು ಮೈಗೂಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಸಂತ ಅನ್ನಮ್ಮ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ಶಾಲಾ…
ವಿರಾಜಪೇಟೆ ಜು.23 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆ.ಎಂ.ಇ.ಎಫ್.) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿ ವರ್ಷದಂತೆ ಈ ಸಾಲಿನಲ್ಲೂ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ಅನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಕುರಿತು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿ ಇದೀಗ ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಕೆ.ಎಂ.ಎ. ಸದಸ್ಯರ ಮಕ್ಕಳು “ಕೆ. ಎಂ. ಎ. ಪ್ರತಿಭಾ ಪುರಸ್ಕಾರ-2025″ಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎರಡೂ ವಿಭಾಗದಲ್ಲೂ ಶೇ.75%ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಎರಡೂ ವಿಭಾಗಗಳಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಅತೀ ಹೆಚ್ಚು ಅಂಕ ಪಡೆದ ಆಧಾರದಲ್ಲಿ ತಲಾ13 ಅರ್ಜಿಗಳನ್ನು ಅಂತಿಮವಾಗಿ ಪರಿಗಣಿಸಲಾಗುವುದು. ಇದರಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನ ಮತ್ತು…
ಮಡಿಕೇರಿ ಜು.23 NEWS DESK : ರಾಜ್ಯದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಬುಡಕಟ್ಟು ಆದಿವಾಸಿ ಆಶ್ರಮ ಶಾಲೆಯಲ್ಲಿ ಆದಿವಾಸಿ ಸಮುದಾಯದ ಶಿಕ್ಷಕರಿಗೆ ಆದ್ಯತೆ ನೀಡಬೇಕು ಮತ್ತು ನಿಯಮಗಳಲ್ಲಿ ಸಡಿಲಿಕೆ ನೀಡಿ ವಿದ್ಯಾರ್ಥಿಹತೆಗೆ ಅನುಗುಣವಾಗಿ ಖಾಯಂ ಹುದ್ದೆಗಳಿಗೆ ನಿಯುಕ್ತಿಗೊಳಿಸವಂತೆ ಬುಡಕಟ್ಟು ಕೃಷಿಕರ ಸಂಘ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಕೆ.ಸಿದ್ದಪ್ಪ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಪ್ರದೇಶಗಳಲ್ಲಿನ ಆದಿವಾಸಿ ಹಾಡಿ, ಕಾಲೋನಿಗಳಲ್ಲಿ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಯಿಂದ 119 ಆಶ್ರಮ ಶಾಲೆಗಳಿಗೆ ಸರ್ಕಾರದಿಂದ ಖಾಯಂ ಶಿಕ್ಷಕರನ್ನು ನೇಮಕ ಮಾಡದೇ ಇರುವುದರಿಂದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೊರಸಂಪನ್ಮೂಲ ವ್ಯವಸ್ಥೆಯ ಮೂಲಕ 450 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಈ ಪೈಕಿ 32 ಮಂದಿ ಕಳೆದ ಹದಿನೈದು ವರ್ಷಗಳಿಗೂ ಅಧಿಕ ಅವಧಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಕೊಡಗು ಜಿಲ್ಲೆಯ 11 ಶಾಲೆಗಳಲ್ಲಿ 6 ಮಂದಿ ಆದಿವಾಸಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಆಶ್ರಮ ಶಾಲೆಗಳಿಗೆ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತಿದ್ದು, ಹೊರ…
ಮಡಿಕೇರಿ ಜು.23 NEWS DESK : ಸುಂಟಿಕೊಪ್ಪ ಗ್ರಾಮ ಪಂಚಾಯ್ತಿಯ ಉಪಾಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನದಿಂದ ವಜಾ ಗೊಳಿಸಿರುವ ಹಾಗೂ ಮುಂದಿನ ಆರು ವರ್ಷಗಳವರೆಗೆ ಯಾವುದೇ ಚುನಾವಣೆಯಲ್ಲಿ ಪಾಲ್ಗೊಳ್ಳದಂತೆ ನನ್ನ ವಿರುದ್ಧ ಪಂಚಾಯತ್ ರಾಜ್ ಇಲಾಖೆಯ ಅರೆ ನ್ಯಾಯಕ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಕೆ.ಕೆ.ಪ್ರಸಾದ್ ಕುಟ್ಟಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯವ ಯಾವುದೇ ಕಾಮಗಾರಿ ಪಂಚಾಯ್ತಿ ಸಭೆ ಮತ್ತು ಗ್ರಾಮಸಭೆಯಲ್ಲಿ ಅನುಮೋದನೆಗೊಂಡು, ಇದಕ್ಕೆ ಪಿಡಿಒ, ಇಂಜಿನಿಯರ್ಗಳ ಸಮ್ಮತಿಯ ಬಳಿಕ ಜಾರಿಗೊಳ್ಳುತ್ತದೆ. ಹೀಗೆ ಅನುಷ್ಟಾನಗೊಂಡ ಕಾಮಗಾರಿಯ ಬಿಲ್ ಹಣದ ಪಾವತಿಯ ಹಕ್ಕು ತನ್ನದಾಗಿರುವುದಿಲ್ಲ. ಬದಲಾಗಿ ಅದು ಪಂಚಾಯ್ತಿಯ ಅಧಿಕಾರಿಗಳದ್ದಾಗಿರುತ್ತದೆ. ಹೀಗಿರುವಾಗ ತನ್ನ ವಿರುದ್ಧ ಬಂದಿರುವ ಆರೋಪಗಳಿಗೆ ಸಮಬಂಧಿಸಿದಂತೆ ಕಾನೂನು ಹೋರಾಟ ನಡೆಸುವುದಾಗಿ ಸ್ಪಷ್ಟಪಡಿಸಿದರು. ಸೋಲಾರ್ ದೀಪ ಅಳವಡಿಕೆಗೆ ಸಂಬಂಧಿಸಿದಂತೆ ಪರಿಶಿಷ್ಟರ ಅನುದಾನ ದುರುಪಯೋಗವಾಗಿದೆಯೆಂದು ಆರೋಪಿಸಿ ನಡೆದ ವ್ಯಾಜ್ಯದಲ್ಲಿ ಪಂಚಾಯತ್ ರಾಜ್ ಇಲಾಖೆಯ ಅರೆ…
ಮಡಿಕೇರಿ ಜು.16 NEWS DESK : ಚಾಮುಂಡೇಶ್ವರಿ ನಗರದ ಶ್ರೀ ಸಿದ್ದಿ ವಿನಾಯಕ ಯುವಕ ಮಿತ್ರ ಮಂಡಳಿ ಅಧ್ಯಕ್ಷರಾಗಿ ನಂದೀಶ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೈ ಕುಮಾರ್, ಗೌರವಾಧ್ಯಕ್ಷರಾಗಿ ರವಿಕುಮಾರ್, ಉಪ ಕಾರ್ಯದರ್ಶಿಯಾಗಿ ಹರ್ಷಿತ್ ಕೊಂಬನ್ ಖಜಾಂಚಿಯಾಗಿ ರಾಜೇಶ್, ಉಪ ಖಜಾಂಚಿ ಕಿರಣ್, ಕಾರ್ಯದರ್ಶಿಗಳಾಗಿ ಸ್ಟೀಫನ್ ಹಾಗೂ ರೇಣು, ಅಲಂಕಾರ ಸಮಿತಿ ಅಧ್ಯಕ್ಷರಾಗಿ ತೇಜು ಹಾಗೂ ಜಹೀರ್, ಪ್ರಧಾನ ಸಂಚಾಲಕರಾಗಿ ಅಜಿತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ನೂತನ ಆಡಳಿತ ಮಂಡಳಿಯ ನೇತೃತ್ವದಲ್ಲಿ ನಡೆಯಲಿದೆ. 26ನೇ ವರ್ಷದ ಅದ್ದೂರಿ ಗೌರಿ ಗಣೇಶೋತ್ಸವ ನಡೆಯಲಿದೆ.
ಮಡಿಕೇರಿ ಜು.16 NEWS DESK : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜು.19 ರಂದು ಮಾದಾಪುರದಲ್ಲಿ 8ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಮಾದಾಪುರದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಾಂವಿಧಾನಿಕ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26 ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ…
ಮಡಿಕೇರಿ ಜು.16 NEWS DESK : ಓಂ ಯುವಶಕ್ತಿ ಹೆರವನಾಡು ಬೆಟ್ಟಗೇರಿ ಕ್ರೀಡಾ ಸಮಿತಿ ವತಿಯಿಂದ ಜು.20 ರಂದು 4ನೇ ವರ್ಷದ ಹಿಂದು ಕಪ್ ಕೆಸರು ಗದ್ದೆ ಕ್ರೀಡಾಕೂಟ ನಡೆಯಲಿದೆ. ಅಂದು ಬೆಳಿಗ್ಗೆ 8.30 ರಿಂದ ಸಂಜೆ 6.30ರ ವರೆಗೆ ಹೆರವನಾಡು ಅರೆಯಂಡ ಕುಟುಂಬದವರ ಗದ್ದೆ ಮತ್ತು ಪೊನ್ನಟಿಯಂಡ ಗದ್ದೆಯಲ್ಲಿ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ಸಾರ್ವಜನಿಕ ವಯೋಮಿತಿಯ ಓಟಗಳು ನಡೆಯಲಿದೆ. ಕ್ರೀಡಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರೀಡಾಕೂಟದ ಆಯೋಜಕರು ತಿಳಿಸಿದ್ದಾರೆ.






