ಲೇಖಕ: admin

ವಿರಾಜಪೇಟೆ ಸೆ.10 NEWS DESK : ಆದಿವಾಸಿಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಕರೆ ನೀಡಿದರು. ಮಾಲ್ದಾರೆ ಸಮೀಪದ ಚೆನ್ನಂಗಿ ಗ್ರಾಮದ ಚೊಟ್ಟೆಪಾರೆ ಹಾಡಿಯಲ್ಲಿ ಶ್ರೀ ವರಸಿದ್ಧಿ ವಿನಾಯಕ ಉತ್ಸವ ಸಮಿತಿ ವತಿಯಿಂದ ನಡೆಸಲಾದ ಗೌರಿ ಗಣೇಶ ವಿಸರ್ಜನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಹಾಡಿಗಳಲ್ಲಿ ಪ್ರತಿಭಾವಂತ ಮಕ್ಕಳು ಇದ್ದು ಅವರಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಅವರನ್ನು ರಾಜ್ಯಮಟ್ಟಕ್ಕೆ ಹಾಗೂ ರಾಷ್ಟ್ರಮಟ್ಟಕ್ಕೆ ಎಲ್ಲ ಕ್ಷೇತ್ರದಲ್ಲಿ ಮುಂದೆ ತರಲು ಪ್ರೋತ್ಸಾಹ ನೀಡಬೇಕೆಂದು ಸಲಹೆ ನೀಡಿದರು. ಹಾಡಿಯ ಮಕ್ಕಳಲ್ಲಿ ಪ್ರತಿಭಾ ಸಾಮಥ್ರ್ಯಗಳಿದ್ದು, ಜಿಲ್ಲೆಗೆ ಹಾಗೂ ರಾಜ್ಯ ರಾಷ್ಟ್ರಕ್ಕೆ ಕೀರ್ತಿ ತರುವಂತಹ ಆಗಬೇಕೆಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜೆ.ಕೆ.ರಾಮು, ಶ್ರೀ ವರಸಿದ್ಧಿ ವಿನಾಯಕ ಉತ್ಸವ ಸಮಿತಿ ಪದಾಧಿಕಾರಿಗಳಾದ ಜೆ.ಬಿ.ರಾಜ, ಅಶೋಕ, ಎಂ.ಡಿ.ರಾಜ, ಜೆ.ಬಿ.ರಾಜು, ಪಾಪಣ್ಣ ಇನ್ನಿತರರು ಹಾಜರಿದ್ದರು.…

Read More

ಮಡಿಕೇರಿ ಸೆ.10 NEWS DESK : ವಿದ್ಯಾಥಿ೯ಗಳಲ್ಲಿ ಸೃಜನಶೀಲತೆ ಸೖಷ್ಟಿಸುವ ಮೂಲಕ ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕ ವೃಂದ ಕಾರಣವಾಗಬೇಕೆಂದು ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್. ಗಂಗಾಧರ ಗೌಡ ಕರೆ ನೀಡಿದ್ದಾರೆ.  ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಗಂಗಾಧರ ಗೌಡ, ಜೀವನದ ಸೌಂದಯ೯ವೇ ಅದ್ಬುತವಾಗಿರುತ್ತದೆ. ನಾಳೆ ಎಂಬುದೇ ಜೀವನದ ಭರವಸೆಯಾಗಿರುವಾಗ ಮಕ್ಕಳ ಪಾಲಿಗೆ ಇಂಥ ನಾಳೆಗಳನ್ನು ಅತ್ಯಂತ ಸುಂದರವಾಗಿಸುವ ನಿಟ್ಟಿನಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ ಎಂದೂ ಅವರು ಅಭಿಪ್ರಾಯಪಟ್ಟರು. ಓವ೯ ಗುರು, ಬ್ರಹ್ಮ, ವಿಷ್ಮು, ಮಹೇಶ್ವರರು ನಿವ೯ಹಿಸಿದಂಥ ಸೖಜನಶೀಲತೆ, ತಂತ್ರಗಾರಿಕಾ ನಿಪುಣ, ಲಯಕತ೯,ನ ಪಾತ್ರ ವಹಿಸುತ್ತಾರೆ. ಹೀಗಾಗಿಯೇ ಇಂದಿಗೂ ಸಮಾಜದಲ್ಲಿ ಗುರುವಿನ ಸ್ಥಾನಕ್ಕೆ ಪಯಾ೯ಯ ಎಂಬುದೇ ಇಲ್ಲ ಎಂದು ಹೆಮ್ಮೆಯಿಂದ ನುಡಿದ ಗಂಗಾಧರ ಗೌಡ, ಉತ್ತಮ ವಿದ್ಯಾಥಿ೯ಗಳನ್ನು ರೂಪಿಸಿದರೆ ಅದಕ್ಕಿಂತ ಸಾಥ೯ಕತೆ ಶಿಕ್ಷಕನೋವ೯ನಿಗೆ ಬೇಕಾಗಿಲ್ಲಿ ಎಂದೂ ಅನಿಸಿಕೆ ವ್ಯಕ್ತಪಡಿಸಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್…

Read More

ಮಡಿಕೇರಿ ಸೆ.10 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗವು “ಕ್ವಾಲಿಟೇಟಿವ್ ಮೆಥೇಡ್ಸ್ ಇನ್ ಹೆಲ್ತ್ ರಿರ‍್ಚ್” ಎಂಬ ವಿಷಯದ ಮೇಲೆ ಎರಡು ದಿನಗಳ ಕಾರ್ಯಾಗಾರ ನಡೆಸಿತು. ಮಂಗಲಗಿರಿ  ಆಲ್ ಇಂಡಿಯಾ ಇನ್ಸಟಿಟ್ಯುಟ್ ಆಫ್ ಮೆಡಿಕಲ್ ಸೈನ್ಸ್ ನ ಡಾ. ಜಿ.ಕಲೈಸೇಲ್ವನ್ ಹಾಗೂ ಪಾಂಡಿಚೇರಿ ಮನಕುಲ ವಿನಯಗರ್ ವೈದ್ಯಕೀಯ ಕಾಲೇಜಿನ ಡಾ. ರೀನಾಮೋಹನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿ ಪ್ರಾಯೋಗಿಕ ಅಧಿವೇಶನಗಳನ್ನು ನಡೆಸಿ, ಕಾರ್ಯಾಗಾರದಿಂದ ಆರೋಗ್ಯ ಕ್ಷೇತ್ರದಲ್ಲಿ ಸಮಸ್ಯೆಗಳನ್ನು ಅನ್ವೇಷಣೆ ಮಾಡಿ ರೋಗಿಗಳ ಕೇಂದ್ರಿತ ಆರೈಕೆ ಅಭಿವೃದ್ಧಿ ಪಡಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ. ಎ.ಜೆ.ಲೋಕೇಶ್, ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಮತ್ತು  ಕಾರ್ಯಕ್ರಮದ ಕಾರ್ಯದರ್ಶಿ ಡಾ.ಎಸ್.ಹೆಚ್.ಮಹೇಶ್ ಹಾಜರಿದ್ದರು. ವಿವಿಧ ವೈದ್ಯಕೀಯ ಕಾಲೇಜುಗಳ ಬೋಧಕ ಸಿಬ್ಬಂದಿಗಳು ಹಾಗೂ ಸ್ನಾತ್ತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡು  ಚಟುವಟಿಕೆಯುತ ಹಾಗೂ ಅನುಭವಾತ್ಮಕ ಅಧಿವೇಶನಗಳನ್ನು ಮೆಚ್ಚಿದರು.

Read More

ಮಡಿಕೇರಿ NEWS DESK ಸೆ.10 : ಅಹಿಂದ ಒಕ್ಕೂಟದ ಸ್ಥಾಪಕರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ‘ಅಹಿಂದ ಭೂಷಣ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತು. ದಲಿತ ಸಂಘರ್ಷ ಸಮಿತಿಯ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಸಾಮಾಜಿಕ ಕಳಕಳಿಯೊಂದಿಗೆ ಸಾಮರಸ್ಯ ಮತ್ತು ಒಗ್ಗಟ್ಟಿನ ಜೀವನಕ್ಕಾಗಿ ಅಹಿಂದ ಒಕ್ಕೂಟವನ್ನು ಸ್ಥಾಪಿಸಿದ ಟಿ.ಪಿ.ರಮೇಶ್ ಅವರು ನಂತರದ ದಿನಗಳಲ್ಲಿ ರೂಪಿಸಿದ ಹೋರಾಟ ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ…

Read More

ಮಡಿಕೇರಿ ಸೆ.10 NEWS DESK : ಸೋಮವಾರಪೇಟೆ ಮನೆಹಳ್ಳಿ ಮಠದ ಶ್ರೀ ತಪೋಕ್ಷೇತ್ರದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಲಕ್ಷ ಬಿಲ್ವಾರ್ಚನೆ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನಡೆಸಿ, ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಪುತ್ತೂರು ಸೆ.10 NEWS DESK : ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ಧಾಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು, ಇದು ಎಲ್ಲರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಅರ್ಮಾಧಂ-2025 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ಎಲ್ಲೇ ಹೋದರು ನಮ್ಮ ಮಾತೃಭೂಮಿಯ ಸಾಂಪ್ರದಾಯಗಳನ್ನು ಮತ್ತು ಆಚರಣೆಗಳನ್ನು ಮರೆಯಬಾರದು. ನಮ್ಮ ನೆಲ, ಜಲದ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು. ಓಣಂ ಹಬ್ಬದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಬೃಹತ್ ಪೂಕಳಂನ್ನು ನಿರ್ಮಿಸಲಾಗಿತ್ತು. ಈ…

Read More

ಮಡಿಕೇರಿ ಸೆ.10 NEWS DESK :  ತಮಿಳುನಾಡಿನಲ್ಲಿ ನಡೆದ ಆನ್ ಲೈನ್ ವರ್ಲ್ಡ್ ರೆಕಾರ್ಡ್ ಡ್ಯಾನ್ಸ್ ಇವೆಂಟ್ 2025 ರಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ವಿದ್ಯಾರ್ಥಿನಿ ಹೆಚ್.ಬಿ.ವರ್ಷ ಪಾಲ್ಗೊಂಡು ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾಳೆ. ಈ ಕಾರ್ಯಕ್ರಮ ಆರೋಗ್ಯಕರ ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಭಾಗವಾಗಿ ನಡೆಯಿತು. ಹೆಚ್.ಬಿ.ವರ್ಷ  ಗೆ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ಸಂಸ್ಥಾಪಕರು ಹಾಗೂ ನೃತ್ಯ ಸಂಯೋಜಕಿ ಪ್ರೀತ ಕೃಷ್ಣ ಅವರು ಮಾರ್ಗದರ್ಶನ ನೀಡಿದರು.

Read More

ಶನಿವಾರಸಂತೆ ಸೆ.10 NEWS DESK : ಕೊಡಗು ಜಿಲ್ಲೆಗೆ ಸೆ.22 ರಂದು ಆಗಮಿಸಲಿರುವ ಬಸವ ಸಂಸ್ಕೃತಿ ಅಭಿಯಾನ ಯಾತ್ರೆಯನ್ನು ಕೊಡಗು ಜಿಲ್ಲೆಯ ಕೊಡ್ಲಿಪೇಟೆಯಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಒಗ್ಗೂಡಿ ಸ್ವಾಗತಿಸಿಕೊಳ್ಳುವ ವಿಚಾರವಾಗಿ ಕೊಡಗು ಮಠಾಧಿಪತಿಗಳ ಸಮ್ಮುಖದಲ್ಲಿ  ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.3 ರಿಂದ ಬಸವೇಶ್ವರರ ಕಲ್ಯಾಣದ ನಾಡು ಬೀದರ್ ನಿಂದ ಆರಂಭಗೊಂಡ ಅಭಿಯಾನ ರಾಜ್ಯದ 31 ಜಲ್ಲೆಗಳಲ್ಲಿ ಸಂಚರಿಸುತ್ತದೆ.  ಸೆ.21 ರಂದು ಹಾಸನ ಜಿಲ್ಲೆಗೆ ಬಂದು ಸೆ.22 ರಂದು ಕೊಡ್ಲಿಪೇಟೆಗೆ ಧಾವಿಸಲಿದೆ. ಅಂದು ಕೊಡಗು ಜಿಲ್ಲೆಯ ಎಲ್ಲಾ ಬಸವಪರ ಚಿಂತನೆಗಳ ಒಕ್ಕೂಟಗಳು, ಸಂಘ ಸಂಸ್ಥೆಗಳು, ಅಖಿಲ ಭಾರತ ವೀರಶೈವ ಮಹಾಸಭಾ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಎಲ್ಲಾ ಸಮುದಾಯಗಳ ಮಂದಿ ಬಸವ ಸಂಸ್ಕೃತಿ ಅಭಿಯಾನವನ್ನು ಕೊಡ್ಲಿಪೇಟೆಯ ಬಸವೇಶ್ವರ ದೇವಾಲಯದ ಬಳಿ ಸ್ವಾಗತಿಸಿಕೊಂಡು ಮೆರವಣಿಗೆ ಮೂಲಕ ಕಿರಿಕೊಡ್ಲಿ ಮಠದ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯುವ ಧಾರ್ಮಿಕ ಸಭಾ ವೇದಿಕೆಗೆ ಆಗಮಿಸಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಹಾಗೂ…

Read More

ಕುಶಾಲನಗರ ಸೆ.10 NEWS DESK : ತಾಯಂದಿರು ತಮ್ಮ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ನೀಡುವ ಮೂಲಕ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಹೇಳಿದರು.‌  ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ಅಂಗನವಾಡಿಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಮಕ್ಕಳ ಆರೋಗ್ಯ ದೃಷ್ಟಿಯಿಂದ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶಭರಿತ ಆಹಾರಗಳನ್ನು ಸೇವಿಸಬೇಕು. ಸೊಪ್ಪು ತರಕಾರಿಗಳನ್ನು ಸೇವಿಸಬೇಕು. ಇದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಬಹುದಾಗಿದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಸತ್ವಭರಿತ, ಪೌಷ್ಟಕ ಆಹಾರಗಳನ್ನು ನೀಡಲಾಗುತ್ತದೆ. ಅದರಂತೆ ಮನೆಯಲ್ಲಿಯೂ ತಾಯಂದಿರು ಇದನ್ನು ಮುಂದುವರೆಸಬೇಕು. ಮಕ್ಕಳ ಆರೋಗ್ಯವನ್ನು ಹದಗೆಡಿಸುವಂತಹ ಆಹಾರಗಳನ್ನು ನೀಡಬಾರದು. ಇದು ಮಕ್ಕಳ‌ ಆರೋಗ್ಯದ ಮೇಲೆ ನೇರ ಪರಿಣಾಮ‌ ಬೀರಲಿದೆ ಎಂದರು. ಹಾರಂಗಿ ಬಿ ವ್ಯಾಪ್ತಿಯ ಸಮುದಾಯ ಆರೋಗ್ಯಾಧಿಕಾರಿ ಸೌಮ್ಯ ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ತಾಯಂದಿರು ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ಮಾತ್ರ ಸೇವಿಸಬೇಕು ಎಂದ ಅವರು, ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿಗಳ ಬಗ್ಗೆ…

Read More

ಸುಂಟಿಕೊಪ್ಪ ಸೆ.10 NEWS DESK : 7ನೇ ಹೊಸಕೋಟೆ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಕನ್ಯಾಮಾತೆ ಮರಿಯಮ್ಮನವರ ಜನ್ಮ ದಿನೋತ್ಸವದ ಅಂಗವಾಗಿ ಅಡಂಬರ ಬಲಿಪೂಜೆಯನ್ನು ನೆರವೇರಿಸಲಾಯಿತು. ಸಂಜೆ ಸಂತ ಸೆಬಾಸ್ಟೀನ್ ದೇವಾಲಯದ ಧರ್ಮಗುರುಗಳಾದ ರೇ.ಫಾ ವಿ.ಎಂ.ಮಾಣಿ ಹಾಗೂ ಕೊಪ್ಪ ಸಂತಮೇರಿ ಸೆಮಿನಿರಿ ಸಿಎಂಐ ರೇಕ್ಟರ್ ರೇ.ಫಾ.ನೀಬಿನ್ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನೋತ್ಸವದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಅಡಂಬರ ಬಲಿಪೂಜೆಯನ್ನು ಸಮರ್ಪಿಸಿದರು. ದೇವಾಲಯದ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗೂ ಕ್ರೈಸ್ತಭಕ್ತಾಧಿಗಳು ಮಾತೆ ಬೊಂಬಿನ ಅವರ ಪ್ರತಿಮೆಯನ್ನು ಹಿಡಿದುಕೊಂಡು ದೇವಾಲಯದ ಆವರಣದಲ್ಲಿ ಜಪಸರ ಪ್ರಾರ್ಥನೆಯನ್ನು ನೇರವೇರಿಸುವ ಮೂಲಕ ಮಾಂತಿಪೇಸ್ತ್‍ನ ಆರ್ಶಿವಚನವನ್ನು ನೀಡಿದರು. ಭಕ್ತಾಧಿಗಳು ಪರಸ್ಪರ ಮಾತೆ ಮರಿಯಮ್ಮನವರ ಜನ್ಮದಿನದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

Read More