ವಿರಾಜಪೇಟೆ ಜು.16 NEWS DESK : ಕೊಡಗಿನಲ್ಲಿ ಕಕ್ಕಡ(ಆಟಿ)ಮಾಸ ಪ್ರಾರಂಭವಾಗಿದ್ದು, ಇದರ ಅಂಗವಾಗಿ ಕೆದಮುಳ್ಳೂರು ಮಹಾದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮಸ್ಥರ ಪರವಾಗಿ ದೇವಾಲಯದ ವತಿಯಿಂದ(ಕಕ್ಕಡ ತೆಂಗೆ) ಹಣ್ಣು ಕಾಯಿ ಸಮರ್ಪಿಸಲಾಯಿತು. ಬಳಿಕ ಮಹಾದೇವರ ಆಶೀರ್ವಾದ ಗ್ರಾಮದವರಿಗೆ ಸದಾ ಇರಲಿ ಎಂದು ಪ್ರಾರ್ಥಿಸಲಾಯಿತು. ಅರ್ಚಕರಾದ ರಾಧಕೃಷ್ಣ ಅವರು ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.
ಲೇಖಕ: admin
ವಿರಾಜಪೇಟೆ ಜು.16 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಕಾನೂರು ವಲಯದ ಕುಟ್ಟ ಕಾರ್ಯಕ್ಷೇತ್ರದ ನಾಗರಹೊಳೆ ಅಭಯಾರಣ್ಯದ ಕಾಡಂಚಿನಲ್ಲಿರುವ ನಾಣಚ್ಚಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕೆ.ಬಾಡಗ ಪಂಚಾಯತ್ ಅಧ್ಯಕ್ಷ ರಿತೇಶ್ ಬಿದ್ದಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆ ಉತ್ತಮವಾದ ಕಾರ್ಯಕ್ರಮವಾಗಿದ್ದು, ಈ ರೀತಿ ಕಾರ್ಯಕ್ರಮ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡುತ್ತದೆ ಎಂದು ಹೇಳಿದರು. ಶಾಲಾ ಶಿಕ್ಷಕರಾದ ಹರೀಶ್ ಮಾತನಾಡಿ, ಪರಿಸರ ಎಂದರೆ ಏನು, ನಮ್ಮ ಸುತ್ತಮುತ್ತಲಿನ ಮರ-ಗಿಡಗಳನ್ನು ಹೇಗೆ ಬೆಳೆಸಬೇಕು, ಭೂಮಿಯನ್ನು ರಕ್ಷಿಸಬೇಕು, ನಮಗೆ ಶುದ್ಧವಾದ ನೀರು, ಶುದ್ಧವಾದ ಗಾಳಿ ಸಿಗುತ್ತದೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುತ್ತದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಎಲೆ ಗುರುತಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಊರಿನ ಗಣ್ಯರಾದ ಗುಂಡಿಯಂಗಡ ರಾಜು,…
ಮಡಿಕೇರಿ ಜು.16 NEWS DESK : ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ, ಆದರೆ ಈ ಆದೇಶ ಹೊರ ಜಿಲ್ಲೆಯ ವಾಹನಗಳಿಗೆ ಅನ್ವಯವಾಗದೆ ಇರುವುದು ವಿಪರ್ಯಾಸ ಎಂದು ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್, ಮಳೆಯಿಂದ ಭೂಕುಸಿತ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜು.6 ರಿಂದ ಆ.5ರ ವರೆಗೆ ಭಾರೀ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಆದರೂ ನಿಯಮವನ್ನು ಉಲ್ಲಂಘಿಸಿ ರಾತ್ರಿ ವೇಳೆ ಹೊರ ಜಿಲ್ಲೆಯ ಭಾರೀ ತೂಕದ ವಾಹನಗಳು ಮಡಿಕೇರಿ ಮೂಲಕ ಸಂಚರಿಸುತ್ತಿವೆ ಎಂದರು. ನಷ್ಟದ ನಡುವೆಯೂ ಜಿಲ್ಲಾಡಳಿತದ ಆದೇಶವನ್ನು ಜಿಲ್ಲೆಯ ಲಾರಿ ಚಾಲಕ ಹಾಗೂ ಮಾಲೀಕರು ಪಾಲಿಸುತ್ತಿದ್ದಾರೆ. ಆದರೆ ಹೊರ ಜಿಲ್ಲೆಯ ಭಾರೀ ವಾಹನಗಳು ಯಾವುದೇ ಆತಂಕವಿಲ್ಲದೆ ಸಂಚರಿಸುತ್ತಿವೆ. ಕೆಲವು ದಿನಗಳ ಹಿಂದೆ ಹೊರ ಜಿಲ್ಲೆಯ ವಾಹನಗಳನ್ನು ತಡೆದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಆದರೂ ಭಾರೀ…
ಮಡಿಕೇರಿ ಜು.16 NEWS DESK : ಗ್ರಾಮೀಣ ಪ್ರದೇಶದಲ್ಲಿ ಮನೆಕಟ್ಟಲು ಇರುವ ನಿಯಮವನ್ನು ಸರಳೀಕರಣಗೊಳಿಸಬೇಕೆಂದು ಅರ್ವತ್ತೋಕ್ಲು ಗ್ರಾ.ಪಂ ಮಾಜಿ ಸದಸ್ಯ ಫಿಲಿಪೋಸ್ ಮ್ಯಾಥ್ಯೂ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆಯ ಇಂದಿನ ನಿಯಮಾವಳಿಯಿಂದ ಗ್ರಾಮೀಣ ಪ್ರದೇಶದಲ್ಲಿ ಮನೆಕಟ್ಟಲು ತೊಡಕುಂಟಾಗಿದೆ. ಈಗಿನ ನಿಯಮ ಜನವಿರೋಧಿಯಾಗಿದೆ ಎಂದು ಆರೋಪಿಸಿದರು. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ನಿಯಮಾವಳಿಯ ಪ್ರಕಾರ ಮನೆ ನಿರ್ಮಿಸುವ ಮುನ್ನ ರಸ್ತೆಗಾಗಿ ಎರಡೂ ಬದಿಗಳಲ್ಲಿ ಜಾಗ ಬೀಡಬೇಕು. ನಗರ ಪ್ರದೇಶದಂತೆ ಗ್ರಾಮೀಣ ಭಾಗದಲ್ಲಿ ಎರಡೂ ಬದಿಯಲ್ಲಿ ರಸ್ತೆಗಾಗಿ ಜಾಗ ಬಿಡಲು ಸಾಧ್ಯವಿಲ್ಲ. ಅಲ್ಲದೆ ಚಿಕ್ಕ ಚಿಕ್ಕ ನಿವೇಶಗಳನ್ನಾಗಿ ಭೂ ಪರಿವರ್ತನೆ ಮಾಡಿ ಮಾರಾಟ ಮಾಡುವುದು ಸಾಧ್ಯವಿಲ್ಲ. ನಿವೇಶನ ರಹಿತರು ಮೂಲ ದಾಖಲಾತಿಗಳನ್ನು ಜಿಪಿಎಸ್ ಮಾಡಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳು ಗ್ರಾ.ಪಂ ಗಳಿಗೆ ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ. ಆದ್ದರಿಂದ ಭೂ ಪರಿರ್ತನೆ ಮಾಡಲು ಇರುವ ನಿಯಮವನ್ನು ಸರಳೀಕರಣಗೊಳಿಸಬೇಕು ಮತ್ತು ಜನ ಪ್ರತಿನಿಧಿಗಳು…
ಮಡಿಕೇರಿ NEWS DESK ಜು.16 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಇನ್ನು ಕೇವಲ ಎರಡೂವರೆ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಶೀಘ್ರ ನೂತನ ಮಡಿಕೇರಿ ದಸರಾ ಸಮಿತಿಯನ್ನು ರಚಿಸಬೇಕೆಂದು ದಶಮಂಟಪ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎಂ.ರಾಜೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರತಿವರ್ಷ ತರಾತುರಿಯಲ್ಲಿ ಸಮಿತಿ ರಚನೆ ಮಾಡುವುದರಿಂದ ಮತ್ತು ಸಭೆ ನಡೆಸುವುದರಿಂದ ಗೊಂದಲಗಳು ಏರ್ಪಡುತ್ತಿತ್ತು. ಈ ಬಾರಿ ದಸರಾ ಹಬ್ವನ್ನು ಸುಸೂತ್ರವಾಗಿ ಆಚರಿಸಲು ವಿಳಂಬವಿಲ್ಲದೆ ನೂತನ ಸಮಿತಿಯನ್ನು ರಚಿಸಬೇಕು. ಕಳೆದ ಬಾರಿಯ ಲೆಕ್ಕಪತ್ರವನ್ನು ಸಾರ್ವಜನಿಕವಾಗಿ ಮಂಡಿಸುವ ಮೂಲಕ ಪ್ರಸ್ತುತ ವರ್ಷ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಡಳಿತವನ್ನು ಕೋರಿದ್ದಾರೆ. ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿರುವ ಮಡಿಕೇರಿ ದಸರಾ ಜನೋತ್ಸವ ದೇಶ ವಿದೇಶಗಳ ಲಕ್ಷಾಂತರ ಜನರನ್ನು ಆಕರ್ಷಿಸುತ್ತಿದೆ. ದಸರಾ ಹಬ್ಬ ವ್ಯಾಪಾರ ವಹಿವಾಟಿನ ಚೇತರಿಕೆಗೆ ಮತ್ತು ರಾಜ್ಯದ ಆರ್ಥಿಕ ಕ್ಷೇತ್ರದ ಸಬಲತೆಗೆ ಸಹಕಾರಿಯಾಗಿದೆ. ಪ್ರಸ್ತುತ ವರ್ಷ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿರುವುದರಿಂದ ವಾಣಿಜ್ಯ ಮತ್ತು ಕೃಷಿ ಕ್ಷೇತ್ರ ಸಂಕಷ್ಟಕ್ಕೆ…
ನಾಪೋಕ್ಲು ಜು.16 NEWS DESK : ಯವಕಪಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ತೆಂಗಿನ ಮರವೊಂದು ಮನೆ ಮೇಲೆ ಬಿದ್ದು ಅಪಾರ ಹಾನಿಯುಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಕಕ್ಕಬೆ ಕುಂಜಿಲ ಗ್ರಾಮ ಪಂಚಾಯಿತಿಯ ಯವಕಪಾಡಿ ಗ್ರಾಮದ ಕುಡಿಯರ ಕಾಲೋನಿಯಲ್ಲಿ ಸೋಮವಾರ ರಾತ್ರಿ ಕಾಡಾನೆ ದಾಂಧಲೆ ನಡೆಸಿದ್ದು, ಈ ವೇಳೆ ತೆಂಗಿನ ಮರವೊಂದು ಗ್ರಾಮದ ನಿವಾಸಿ ಕುಡಿಯರ ಗಣೇಶ್ ಅವರ ಮನೆಯ ಮೇಲೆ ಬಿದ್ದಿದೆ. ಇದರಿಂದಾಗಿ ಮನೆಯ ಒಂದು ಭಾಗಕ್ಕೆ ಸಂಪೂರ್ಣ ಹಾನಿಯಾಗಿದೆ. ಮಾತ್ರವಲ್ಲದೆ ಮನೆಯ ಸುತ್ತಮುತ್ತ ಅಡ್ಡಾಡಿ ಕೃಷಿಯನ್ನು ತಿಂದು ನಷ್ಟ ಮಾಡಿದೆ. ಕುಟುಂಬದ ಮಂದಿ ಕಾರ್ಯನಿಮಿತ್ತ ಬೇರೆಡೆ ತೆರಳಿದ್ದರಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಮಡಿಕೇರಿ ತಾಲ್ಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ ಮಾತನಾಡಿ, ಕಾಡಾನೆ ದಾಳಿಯಿಂದ ಎರಡು ವರ್ಷದಿಂದ ಈ ಭಾಗದಲ್ಲಿ ವಾಸಿಸುವವರ ಮನೆ ಆಸ್ತಿ ನಾಶವಾಗಿದೆ. ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಯವಕಪಾಡಿ, ಮರಂದೋಡ, ಕುಂಜಿಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಕಾಫಿ ತೋಟಗಳು ಹಾನಿಯಾಗಿವೆ.…
ಮಡಿಕೇರಿ ಜು.16 NEWS DESK : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡಿದ್ದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಎಐಸಿಸಿ ಓಬಿಸಿ ಸಲಹಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಭೆಯಲ್ಲಿ, ಹಿಂದುಳಿದ ವರ್ಗಗಳ ಏಳಿಗೆಯ ಬಗ್ಗೆ ಹಲವು ಪ್ರಮುಖ ಚರ್ಚೆ ನಡೆಯಿತು. ಸಭೆಯಲ್ಲಿ ಎಐಸಿಸಿ ಒಬಿಸಿ ಘಟಕದ ರಾಷ್ಟ್ರೀಯ ಅಧ್ಯಕ್ಷ ಡಾ.ಅನಿಲ್ ಜೈಹಿಂದ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿರಿಯ ನಾಯಕರುಗಳಾದ ಅಶೋಕ್ ಗೆಲ್ಲಾಟ್, ಸಚಿವ ಎನ್.ಎಸ್ ಬೋಸ್ ರಾಜ್, ಡಾ. ಎಂ.ವೀರಪ್ಪ ಮೊಯ್ಲಿ, ವಿ.ನಾರಾಯಣಸ್ವಾಮಿ ಹಾಗೂ ಸಿಡಬ್ಲ್ಯೂಸಿ ಸದಸ್ಯರು ಭಾಗವಹಿಸಿದರು.
ವಿರಾಜಪೇಟೆ ಜು.16 NEWS DESK : ವಿರಾಜಪೇಟೆ ಸಂತ ಅನ್ನಮ್ಮ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಹಾಗೂ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಹಾಗೂ ಈ.ಪಿ.ನೆಲ್ಸನ್ ಮುಂದಿನ ಐದು ವರ್ಷಗಳ ಅವಧಿಗೆ ಆಯ್ಕೆ ಯಾಗಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಇತರ ಸದಸ್ಯರುಗಳ ಒಪ್ಪಿಗೆಯೊಂದಿಗೆ ಸರ್ವಾನುಮತದಿಂದ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಸಂಘದ ನೂತನ ಅಧ್ಯಕ್ಷರಾದ ಚಾರ್ಲ್ಸ್ ಡಿಸೋಜಾ ಮಾತನಾಡಿ, ಸಂತ ಅನ್ನಮ್ಮ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವು ಪ್ರಸ್ತುತ 400ಕ್ಕೂ ಅಧಿಕ ಪಡಿತರದಾರರನ್ನು ಹೊಂದಿದ್ದು, ಅಕ್ಕಿಯನ್ನು ಪಡಿತರದಾರರಿಗೆ ಉಚಿತವಾಗಿ ವಿತರಿಸಲಾತ್ತಿದೆ. ಇನ್ನು ಮುಂದಿನ ದಿವಸಗಳಲ್ಲಿ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಸಗೊಬ್ಬರ, ಕೀಟ ನಾಶಕಗಳು, ಕೃಷಿ ಉಪಕರಣಗಳನ್ನು ಮಾರಾಟ ಮಾಡುವ ಯೋಜನೆ ಇದ್ದು, ರೈತಾಪಿ ವರ್ಗಕ್ಕೆ ಸಹಕರಿಸುವ ಕ್ರಿಯಾಯೋಜನೆಯನ್ನು ಹೊಂದಲಾಗಿದೆ ಎಂದು ಹೇಳಿದರು. ಸರ್ವ ಸದಸ್ಯರ ಹಾಗೂ ಪಡಿತರದಾರರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ಈ ಸಂದರ್ಭ ಪ್ರಮುಖರಾದ ಮರ್ವಿನ್ ಲೋಬೋ,…
ಮಡಿಕೇರಿ ಜು.16 NEWS DESK : ಪ್ರಧಾನಮಂತ್ರಿ ಜನ್ ಜಾತೀಯ ಆದಿವಾಸಿ ಮಹಾ ಅಭಿಯಾನ (ಪಿಎಂ-ಜನ್ಮನ್) ಯೋಜನೆಯಡಿ ಜೇನುಕುರುಬ ಜನಾಂಗದವರಿಗೆ ಘಟಕ ವೆಚ್ಚ ರೂ.4.50 ಲಕ್ಷಗಳಲ್ಲಿ ಮನೆಯನ್ನು ಮಂಜೂರು ಮಾಡಲಾಗುತ್ತಿದ್ದು, ವಸತಿ ರಹಿತ ಜೇನುಕುರುಬ ಜನಾಂಗದ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ಕೋರಿದ್ದಾರೆ. ಜೇನುಕುರುಬ ಜನಾಂಗದವರನ್ನು ಹೊರತುಪಡಿಸಿ ಇತರೆ ಪರಿಶಿಷ್ಟ ಪಂಗಡದ ಜನಾಂಗದವರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜು.16 NEWS DESK : ಶಿಕ್ಷಣದ ಗುರಿ ಕೇವಲ ಯಶಸ್ಸನ್ನು ಸಾಧಿಸುವುದಲ್ಲ, ಜೀವನದಲ್ಲಿ ಎದುರಾಗುವ ಸೋಲುಗಳನ್ನು ಧೈರ್ಯದಿಂದ ಎದುರಿಸುವುದನ್ನು ಕಲಿಸುವುದೂ ಶಿಕ್ಷಣದ ಧ್ಯೇಯವಾಗಿದೆ ಎಂದು ಹಿರಿಯ ವಕೀಲ ಎಂ.ಎಂ. ನಿರಂಜನ್ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಪದಗ್ರಹಣ ಸಮಾರಂಭ’ದಲ್ಲಿ, ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಕ್ಕಳನ್ನು ಕೇವಲ ಅಂಕಗಳಿಸುವ ಯಂತ್ರಗಳನ್ನಾಗಿ ಮಾಡದೆ, ಮೌಲ್ಯಗಳನ್ನು ಮೈಗೂಡಿಸಿಕೊಂಡ ಸಹಾನುಭೂತಿಯುಳ್ಳ ಮನುಷ್ಯರನ್ನಾಗಿ ರೂಪಿಸುವುದು ಪೋಷಕರು ಮತ್ತು ಶಿಕ್ಷಕರ ಪ್ರಮುಖ ಕರ್ತವ್ಯ,” ಎಂದು ಅವರು ಹೇಳಿದರು. ಇಂದಿನ ಸಮಾಜದಲ್ಲಿನ ಸೂಕ್ಷ್ಮತೆಯ ಕೊರತೆಯ ಬಗ್ಗೆ ಮಾತನಾಡಿದ ನಿರಂಜನ್, ಹಿಂದಿನ ದಿನಗಳಲ್ಲಿ ಅಪಘಾತ ಸಂಭವಿಸಿದಾಗ ತತ್ ಕ್ಷಣ ಜನರು ಸಹಾಯ ಮಾಡಲು ಧಾವಿಸುತ್ತಿದ್ದರು, ಆದರೆ ಇಂದು ಘಟನೆ ನಡೆದ ಕೂಡಲೇ ಮೊಬೈಲ್ ತೆಗೆದು ವಿಡಿಯೋ ಮಾಡುವ ಮನಸ್ಥಿತಿ ಹೆಚ್ಚಾಗಿದೆ. ಕಾನೂನಿನ ಭಯ ಕಡಿಮೆಯಾಗುತ್ತಿರುವುದು ಈ ರೀತಿಯ ಅಮಾನವೀಯ ವರ್ತನೆಗೆ ಕಾರಣ,” ಎಂದು ವಿಷಾದಿಸಿದರು. ಮೊಬೈಲ್ ಫೋನ್ಗಳ ಅತಿಯಾದ ಬಳಕೆಯ ಬಗ್ಗೆ ಎಚ್ಚರಿಸಿದ ಅವರು, “ಮೊಬೈಲ್ ಫೋನ್ ಯುವಜನರ…






