ಲೇಖಕ: admin

ಮಡಿಕೇರಿ ಆ.22 NEWS DESK : ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು ಗ್ರಾಮದಲ್ಲಿ ವೃದ್ಧ ದಂಪತಿಯ ತೋಟವನ್ನು ನಾಶ ಮಾಡಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಅವರು, ಅರಣ್ಯ ಇಲಾಖೆಯ ವಿರುದ್ಧ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾನೂನು ಉಲ್ಲಂಘಿಸಿ ವೃದ್ಧ ದಂಪತಿಯ ತೋಟವನ್ನು ನಾಶ ಮಾಡುವ ಮೂಲಕ ಅರಣ್ಯ ಇಲಾಖೆ ಅಮಾನುಷವಾಗಿ ನಡೆದುಕೊಂಡಿದೆ. ತೋಟದಲ್ಲಿ ಬೆಳೆಯಲಾಗಿದ್ದ ಕಾಫಿ, ಏಲಕ್ಕಿ ಮತ್ತಿತರ ಗಿಡಗಳನ್ನು ಯಾವುದೇ ನೋಟಿಸ್ ನೀಡದೆ ಕಡಿದು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಕಾಳಚಂಡ ನಾಣಿಯಪ್ಪ ಅವರು ಕಳೆದ 50 ವರ್ಷಗಳಿಂದ ಪೈಸಾರಿ ಭೂಮಿಯಲ್ಲಿ ಕೃಷಿ ಕಾರ್ಯ ಮಾಡಿಕೊಂಡು ಬಂದಿದ್ದಾರೆ. ಆದರೆ ಅರಣ್ಯ ಇಲಾಖೆ ತನಗೆ ಸೇರಿದ ಭೂಮಿ ಎಂದು ಕಾರ್ಯಾಚರಣೆ ನಡೆಸಿದೆ. ಜಾಗದ ಒಡೆತನದ ಕುರಿತು ಗೊಂದಲಗಳಿದ್ದರೆ ನೋಟಿಸ್ ನೀಡಲು ಮತ್ತು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಲು ಅವಕಾಶವಿತ್ತು.…

Read More

ಯೂನಿಯನ್ ಬ್ಯಾಂಕ್‍ನಲ್ಲಿ ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ (ಯುಬಿಐ) ದೇಶಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿಯಿರುವ 250 ‘ವೆಲ್ತ್ ಮ್ಯಾನೇಜರ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. :: ವರ್ಗವಾರು ಹುದ್ದೆಗಳ ವಿವರ ಹೀಗಿದೆ :: ಸಾಮಾನ್ಯ-103, ಎಸ್ಸಿ-37, ಎಸ್ಟಿ-18, ಓಬಿಸಿ-67,  ಇಡಬ್ಲ್ಯುಎಸ್-25, ಒಟ್ಟು – 250 ಹುದ್ದೆಗಳಿವೆ. :: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :: ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25ರೊಳಗಾಗಿ ಅರ್ಜಿ ಸಲ್ಲಿಸಬೇಕು. :: ವಿದ್ಯಾರ್ಹತೆಗಳೇನು? :: ಮಾನ್ಯತೆ ಪಡೆದ ವಿವಿಯಿಂದ ಎಂಬಿಎ/ ಎಂಎಂಎಸ್/ಪಿಜಿಡಿಬಿಎ/ಪಿಜಿಡಿಬಿಎಂ/ಪಿಜಿಎ/ಪಿಜಿಡಿಎಂ ಕೋರ್ಸ್‍ಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಕಾರ್ಯನಿರ್ವಹಿಸಿದ ಅನುಭವವಿರಬೇಕು. ವಯೋಮಿತಿ ಎಷ್ಟು ? : : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2025ರ ಆ.1 ಕ್ಕೆ ಅನ್ವಯವಾಗುವಂತೆ ಕನಿಷ್ಠ 25 ಹಾಗೂ ಗರಿಷ್ಠ 35 ವರ್ಷಗಳೊಳಗಿರಬೇಕು. ಅರ್ಜಿ ಸಲ್ಲಿಕೆ ವಿಧಾನ ಹೀಗೆ ? : :…

Read More

ನಾಪೋಕ್ಲು ಆ.22 NEWS DESK : ನಾಪೋಕ್ಲು ಲಯನ್ಸ್ ಕ್ಲಬ್, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವನಮೋಹತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವುದರ ಮೂಲಕ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ನ ಅಧ್ಯಕ್ಷರು ಮಾದೆಯಂಡ ಕುಟ್ಟಪ್ಪ, ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪಿ.ಎಸ್.ಸುಬ್ಬಯ್ಯ, ಪ್ರಾಂಶುಪಾಲರಾದ ಕೆ.ಆರ್.ರಮೇಶ್ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕ ಲೋಕೇಶ್ ಸಿ.ಆರ್. ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳು, ಸದಸ್ಯರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ

Read More

ನಾಪೋಕ್ಲು ಆ.22 NEWS DESK : ನಾಪೋಕ್ಲುವಿನ ಇಂದಿರಾ ನಗರದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಈ ಭಾಗಕ್ಕೆ ಶಾಸಕರು ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ರಸ್ತೆಯ ಅಭಿವೃದ್ಧಿಗಾಗಿ ಮನವಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಶಾಸಕರು ಅದಕ್ಕಾಗಿ 25 ಲಕ್ಷ ಅನುದಾನ ಒದಗಿಸಿದ್ದರು. ಇದನ್ನು ಶಾಸಕರು ಸಾರ್ವಜನಿಕರಿಗೆ ಬಳಕೆಗೆ ಉದ್ಘಾಟಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕುಶಾಲಪ್ಪ, ಅರುಣ್ ಬೇಬ ಹೇಮಾವತಿ ಅರುಣ್ ಮತ್ತಿತರರು ಉಪಸಿತರಿದ್ದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಆ.21 NEWS DESK : ಸಿ ಮತ್ತು ಡಿ ಜಾಗದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಗೃಹ ಕಛೇರಿ ಕಾವೇರಿಯಲ್ಲಿ ಭೇಟಿ ಮಾಡಿ  ಮನವಿ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ನಿಯೋಗದ ಅಹವಾಲುಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಒಂದು ವಾರದೊಳಗೆ ಅಧ್ಯಯನ ಕಮಿಟಿ ರಚನೆ ಮಾಡಲಾಗುವುದು ಹಾಗೂ ಈ ಕಮಿಟಿ ಜಿಲ್ಲೆಗೆ ಭೇಟಿ ನೀಡಿ ರೈತರು ಹಾಗೂ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ನೀಡಲಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ನಿಯೋಗಕ್ಕೆ ಮುಖ್ಯಮಂತ್ರಿಗಳು ಅಭಯ ನೀಡಿದರು. ನಿಯೋಗದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಉಪಾಧ್ಯಕ್ಷ ಕೆ.ಎಂ.ಲೋಕೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಸದಸ್ಯೆ ಕೆ.ಪಿ.ಚಂದ್ರಕಲಾ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ…

Read More

ಮಡಿಕೇರಿ ಆ.21 NEWS DESK : ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಎಸ್‍ಎಫ್‍ಸಿ ಮುಕ್ತ ನಿಧಿ ಅನುದಾನದಡಿ ವಿವಿಧ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಹ ಫಲಾನುಭವಿಗಳು ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಸಂಬಂಧಿಸಿದ ದೃಢೀಕೃತ ದಾಖಲಾತಿಗಳೊಡನೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 10 ರಂದು ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಪಡೆಯಬಹುದು ಎಂದು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಆ.21 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ನಿಗದಿಯಾಗಿರುವ ಕಾರ್ಯಕ್ರಮವನ್ನು ಕಾಲ ಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಸರ್ಕಾರ ವಿವಿಧ ಇಲಾಖೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಇಂತಿಷ್ಟು ಹಣ ಹಾಗೂ ಸೌಲಭ್ಯ ನಿಗದಿಮಾಡಿದ್ದು, ಪ್ರಗತಿ ಸಾಧಿಸಿ ವರದಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.  ಕೃಷಿ ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಯುವ ಸಬಲೀಕರಣ ಮತ್ತು ಕ್ರೀಡೆ, ಕೈಮಗ್ಗ ಮತ್ತು ಜವಳಿ, ಕಾರ್ಮಿಕ, ಲೋಕೋಪಯೋಗಿ, ಸ್ಥಳೀಯ…

Read More

ಸುಂಟಿಕೊಪ್ಪ,ಆ.14 NEWS DESK : ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದಲ್ಲಿ  ಆ.26 ರಂದು ಗೌರಿ ಪ್ರತಿಷ್ಠಾಪನೆ ನಡೆಯಲಿದೆ.  ಪೂರ್ವಾಹ್ನ 9.45 ರಿಂದ 10.40 ರವರೆಗೆ ಸಲ್ಲುವ ತುಲ ಲಗ್ನದಲ್ಲಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪನೆ ಪೂಜಾ ನಡೆಯಲಿದೆ.  ಆ.27 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಶಕ್ತಿ ಗಣಪತಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ವಿವಿಧ ಪೂಜಾ ವಿಧಿವಿಧಾನಗಳ ನಂತರ ಹರದೂರು ಹೊಳೆಯಲ್ಲಿ ಗೌರಿಯನ್ನು ವಿಸರ್ಜಿಸಲಾಗುವುದೆಂದು ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್‍ಕುಮಾರ್ ತಿಳಿಸಿದ್ದಾರೆ. ಕೊಡಗರಹಳ್ಳಿಯ ಶ್ರೀ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ವರ್ಷದ ಉತ್ಸವ ಗೌರಿ ಗಣೇಶೋತ್ಸವದ ಮೂರ್ತಿಯನ್ನು ಪ್ರತಿಷ್ಠಾಪಿಸಿ 3 ದಿನಗಳ ಕಾಲ ವಿಶೇಷಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ವರ್ಷವೂ ಅಯೋಜಿಸಿಕೊಂಡು ಬರಲಾಗುತ್ತಿರುವ ಕೊಡಗರಹಳ್ಳಿಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಡಿ.ದೇವಯ್ಯ ಅವರು ದಾನವಾಗಿ ನೀಡಿರುವ…

Read More

ಗೋಣಿಕೊಪ್ಪ ಆ.21 NEWS DESK : ಶ್ರೀ ಕಾವೇರಿ ದಸರಾ ಸಮಿತಿಯ 47ನೇ ದಸರಾ ಜನೋತ್ಸವದ ಅಧ್ಯಕ್ಷರಾಗಿ ಗ್ರಾ.ಪಂ ಸದಸ್ಯ ಕೆ.ಜಿ.ರಾಮಕೃಷ್ಣ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಒಮ್ಮತ ಈ ಆಯ್ಕೆ ನಡೆದಿದೆ. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷರು ಜನೋತ್ಸವವನ್ನು ವಿಭಿನ್ನವಾಗಿ ಆಚರಿಸಲು ಸರ್ವರ ಸಹಕಾರದೊಂದಿಗೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಆಯ್ಕೆಯ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಮೊದ್ ಗಣಪತಿ, ಉಪಾಧ್ಯಕ್ಷೆ ಮಂಜುಳ, ಪಿ.ಡಿ.ಓ ತಿಮ್ಮಯ್ಯ ಹಾಗೂ ಸದಸ್ಯರುಗಳು ಹಾಜರಿದ್ದರು.

Read More

ಮಡಿಕೇರಿ ಆ.21 NEWS DESK : ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಏರಿಕೆಯಾಗಿದ್ದರೂ ಕೊಡಗಿನ ಕಾಫಿ ಬೆಳೆಗಾರರಿಗೆ ಸೂಕ್ತ ಬೆಲೆ ಸಿಗದೆ ಅನ್ಯಾಯವಾಗುತ್ತಿದೆ. ಅಂತರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಸೂಕ್ತ ಬೆಲೆಯನ್ನು ನೀಡದ ಕಾಫಿ ಖರೀದಿದಾರರ ಪರವಾನಗಿಯನ್ನು ಜಿಲ್ಲೆಯ ಗ್ರಾ.ಪಂ ಗಳ ಮಟ್ಟದಲ್ಲಿ ರದ್ದುಗೊಳಿಸುವ ಅನಿವಾರ್ಯತೆ ಇದೆ ಎಂದು ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಫಿ ಖರೀದಿ ಮಾಡುವ ರಫ್ತುದಾರರು ಹಾಗೂ ಮಧ್ಯವರ್ತಿಗಳಿಂದ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ. ಅಂತರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಬೆಲೆ ನಿಗದಿ ಮಾಡದವರ ಪರವಾನಗಿಯನ್ನು ರದ್ದು ಮಾಡುವ ಕುರಿತು ಆಯಾ ಗ್ರಾ.ಪಂ ಗಳು ಚಿಂತನೆ ನಡೆಸಬೇಕಾಗಿದೆ ಮತ್ತು ಬೆಳೆಗಾರರ ಹಿತ ಕಾಯಬೇಕಾಗಿದೆ ಎಂದು ಹೇಳಿದ್ದಾರೆ. ಹಲವು ಸಂಕಷ್ಟಗಳ ನಡುವೆಯೂ ಕಾಫಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಣ್ಣ ಮತ್ತು ಮಧ್ಯಮ ಬೆಳೆಗಾರರು ಕಾಫಿ ಧಾರಣೆಯಲ್ಲಿ ಚೇತರಿಕೆ ಕಾಣುವುದನ್ನೇ ಎದುರು ನೋಡುತ್ತಿದ್ದರು. ಆದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಯಾದರೂ ಅದಕ್ಕೆ ಸರಿಯಾಗಿ ಇಲ್ಲಿ ಕಾಫಿಗೆ…

Read More