ಲೇಖಕ: admin

ಸುಂಟಿಕೊಪ್ಪ ಸೆ.10 NEWS DESK : 7ನೇ ಹೊಸಕೋಟೆಯ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಗೌರಿ-ಗಣೇಶ ಮೂರ್ತಿಯನ್ನು ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ವಿದ್ಯುತ್ ದೀಪ ಅಲಂಕಾರ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ನಗಾರಿ, ಹುಲಿ ವೇಷದೊಂದಿಗೆ ದೇವಾಲಯದಿಂದ ಹೊರಟ ಮೆರವಣಿಗೆಯೂ ಮೆಟ್ನಳ್ಳದವರೆಗೆ ಸಾಗಿ ಅಲ್ಲಿಂದ ವಾಪಾಸಾಗಿ ಅದೇ ಮಾರ್ಗವಾಗಿ ಏಳನೇ ಹೊಸಕೋಟೆಯ ಪ್ರಮುಖ ಬೀದಿಗಳಲ್ಲಿ ಭಕ್ತಾಧಿಗಳ ಪೂಜೆಯೊಂದಿಗೆ ಸಾಗಿ ನಂತರ 7ನೇ ಹೊಸಕೋಟೆ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ದಾಸಂಡ ರಮೇಶ್ ಚಂಗಪ್ಪ, ರಮೇಶ್, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಇದ್ದರು.

Read More

ಸುಂಟಿಕೊಪ್ಪ ಸೆ.10 NEWS DESK : ನಾಕೂರು ಗ್ರಾಮದ ಸಂಜೀವಿನಿ ಒಕ್ಕೂಟದ ಸ್ವ ಸಹಾಯ ಸಂಘದ ವತಿಯಿಂದ ನಿವೃತ್ತಗೊಂಡ ಆಶಾ ಕಾರ್ಯಕರ್ತೆ ಬಿ.ಎಸ್.ಶಿವಮ್ಮ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 16 ವರ್ಷಗಳಿಂದ ನಾಕೂರು-ಶಿರಂಗಾಲ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎಸ್.ಶಿವಮ್ಮ ಅವರಿಗೆ ಸಂಜೀವಿನಿ ಒಕ್ಕೂಟದ ಬೆಳಕು ಮತ್ತು ಸಮುದ್ರ ಸಂಘದ ಸದಸ್ಯರುಗಳು ಗ್ರಾಮದಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಒಕ್ಕೂಟದ ಎಂ.ಬಿ.ಕೆ.ರಂಜಿನಿ, ಕೃಷಿಸಖಿ ಬ್ರಿಜಿತ್, ಸಂಘದ ಅಧ್ಯಕ್ಷರುಗಳಾದ ಎ.ಪಿ.ಮೀನಾಕ್ಷಿ, ಹೆಚ್.ಎ.ರಶ್ಮಿ, ಉಪಾಧ್ಯಕ್ಷರು ಹಾಗೂ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು.

Read More

ನಾಪೋಕ್ಲು ಸೆ.10 NEWS DESK : ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್‍ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕೊಡಗು ಚಾಂಪಿಯನ್ ಶಿಪ್-2025 ಜರುಗಿತು. 17 ವರ್ಷದ ಒಳಗಿನ ವಯೋಮಿತಿಯಲ್ಲಿ ಪಿ.ಡಿ.ಬೃಂದ ಸಿಂಗಲ್ಸ್ ರನ್ನರ್, ಡಬಲ್ಸ್ ಪಿ.ಡಿ.ಬೃಂದ ಮತ್ತು ಕಾವೇರಮ್ಮ ಟಿ.ಬಿ ರನ್ನರ್ಸ್, ಮಹಿಳೆಯರ ವಿಭಾಗದಲ್ಲಿ ಪಿ.ಡಿ.ಬೃಂದ ಮತ್ತು ಪೂವಮ್ಮ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ. ಬೃಂದಾ ಬಾವಲಿ ಗ್ರಾಮದ ಪೊನ್ನಚ್ಚನ ದಿನೇಶ್ ಕುಮಾರ್ ಮತ್ತು ಡಾಲಿ ದಂಪತಿಯ ಪುತ್ರಿ. ಕಾವೇರಮ್ಮ ಮರಗೋಡು ಗ್ರಾಮದ ತಾತಪಂಡ ಬೆಳ್ಯಪ್ಪ ಮತ್ತು ಬೋಜಮ್ಮ ದಂಪತಿಯ ಪುತ್ರಿ. ಮೂರ್ನಾಡು ವಿದ್ಯಾ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾಗಿದ್ದು ದೈಹಿಕ ಶಿಕ್ಷಕರಾದ ಕೆ.ಕೆ.ಬೋಪಣ್ಣ ಮತ್ತು ಯತೀಶ್ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಸೆ.10 NEWS DESK : ನಾಪೋಕ್ಲುವಿನ ಮೇರಿ ಮಾತೆಯ ದೇವಾಲಯದಲ್ಲಿ ಮೇರಿ ಮಾತೆಯ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಪೂರ್ವ ಸಿದ್ಧತೆಯಲ್ಲಿ ಮಾತೆಗೆ ಒಂಬತ್ತು ದಿನದಿಂದ ನೋವೇನಾ ಪ್ರಾರ್ಥನೆ ಸಲ್ಲಿಸಿ ಕೊನೆಯ ದಿನದಂದು ಮೇರಿಮಾತೆಯನ್ನು ಪ್ರತಿಷ್ಠಾಪಿಸಿ ಜಪಸರ ಮತ್ತು ನೋವೇನಾ ಪ್ರಾರ್ಥನೆ, ಬಲಿ ಪೂಜೆಯನ್ನು ನೆರವೇರಿಸಲಾಯಿತು. ಮಾತೆಯ ಹಾಡಿನೊಂದಿಗೆ ಕ್ರೈಸ್ತ ಬಾಂಧವರು ಪುಷ್ಪಾರ್ಚನೆಯೊಂದಿಗೆ ಹಾಡಿ ಸಂಭ್ರಮಿಸಿದರು. ಈ ಸಂದರ್ಭ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್ ಮಾತನಾಡಿ, ಮೇರಿಮಾತೆಯ ಆದರ್ಶಗಳನ್ನು ಪಾಲಿಸಿ ಬೇರೆಯವರ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು, ದೇವರನ್ನು ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿಸಿ ಎಂದ ಅವರು ವೃದ್ಧಾಪ್ಯದ ತಂದೆ ತಾಯಿಗಳ ಸೇವೆ ಮಾಡುವುದರೊಂದಿಗೆ ತನ್ನ ಮಕ್ಕಳನ್ನು ವಿಶ್ವಾಸದಲ್ಲಿ ಬೆಳೆಸಿ ಉತ್ತಮ ನಾಗರಿಕರನ್ನಾಗಿ ಮಾಡಬೇಕು. ಪ್ರತಿಯೊಬ್ಬರು ಸುಸಂಸ್ಕೃತ ಮನೋಭಾವದೊಂದಿಗೆ ಉತ್ತಮ ಗುರಿಯನ್ನು ಬೆಳೆಸಿಕೊಳ್ಳಬೇಕೆಂದು ಶುಭ ಸಂದೇಶವನ್ನು ಸಾರಿ ಹಬ್ಬಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು, ಪಾಲನಾ ಸಮಿತಿಯ ಸದಸ್ಯರು, ಯುವಕ ಸಂಘದ ಸದಸ್ಯರು ಭಾಗವಹಿಸಿದ್ದರು. ವರದಿ :…

Read More

ಮಡಿಕೇರಿ ಸೆ.9 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್‍ನಲ್ಲಿ ಸೆ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೈನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್, ಹಳೆ ಖಾಸಗಿ ಬಸ್ ಸ್ಟಾಂಡ್, ಜಯನಗರ, ಮಂಗಳದೇವಿನಗರ, ಪುಟಾಣಿನಗರ, ಜಲಾಶಯ ಬಡಾವಣೆ, ಅರಣ್ಯಭವನ, ಚೈನ್ ಗೇಟ್, ದೇಚೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಭಾಗಮಂಡಲ ಸೆ.10 NEWS DESK : ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹ್ಯಾಂಡ್‌ಬಾಲ್‌ನಲ್ಲಿ ಪ್ರಾಥಮಿಕ ಬಾಲಕ ಮತ್ತು ಬಾಲಕಿಯರು ಪ್ರಥಮ, ಪ್ರೌಢ ಶಾಲಾ ಬಾಲಕ ಮತ್ತು ಬಾಲಕಿಯರು ಪ್ರಥಮ, ಪ್ರಾಥಮಿಕ ಶಾಲಾ ಬಾಲಕಿಯರು ಕಬಡ್ಡಿ ಪ್ರಥಮ, ಥ್ರೋಬಾಲ್ ಪ್ರಥಮ, ಪ್ರೌಢ ಶಾಲಾ ಬಾಲಕರು ಥ್ರೋಬಾಲ್ ದ್ವಿತೀಯ, ಪ್ರೌಢ ಶಾಲಾ ಬಾಲಕಿಯರ ಕಬಡ್ಡಿ ಪ್ರಥಮ. ಥ್ರೋಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಮಕ್ಕಳ ಈ ಕ್ರೀಡಾ ಸಾಧನೆಗೆ ಪ್ರಾಂಶುಪಾಲರಾದ ಲೋಕೇಶ್, ನಿಲಯಪಾಲಕರಾದ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಪಿ.ಪವನ್ ಸಾಗರ್, ವ್ಯವಸ್ಥಾಪಕರಾದ ಕೆ.ಜಿ.ಚೇತನ್ ಮತ್ತು ಎಲ್ಲಾ ಬೋಧಕಾ ಬೋಧಕೇತರ ಸಿಬ್ಬಂದಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ ಸೆ.10 NEWS DESK : ಬದುಕಿನ ಸತ್ಯವನ್ನು ವಚನ ರೂಪದಲ್ಲಿ ತೆರೆದಿಟ್ಟ ಮಹಾನ್ ಚೇತನ ವಿಶ್ವಗುರು ಬಸವಣ್ಣ ಎಂದು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ಹೇಳಿದರು. ಕುಶಾಲನಗರ ತಾಲ್ಲೂಕಿನ ತೊರೆನೂರು ಶ್ರೀ ವಿರಕ್ತಮಠದಲ್ಲಿ ಮಾಸಿಕ ಹುಣ್ಣಿಮೆ ಅಂಗವಾಗಿ ಏರ್ಪಡಿಸಿದ್ದ ವಚನಗಳಲ್ಲಿ ಸಾಮಾಜಿಕ ಮೌಲ್ಯಗಳು ಚಿಂತನಾ ಗೋಷ್ಠಿಯಲ್ಲಿ ಪ್ರವಚನ ನೀಡಿದ ಅವರು, ತಲೆಯಲ್ಲಿ ಸದ್ವಿಚಾರ, ಎದೆಯಲ್ಲಿ ಸದ್ಭಾವ, ಕೈಯಲ್ಲಿ ಸತ್ಕಾರ್ಯ ಮತ್ತು ಬಾಯಿಂದ ಬರುತ್ತಿದ್ದಂತಹ ಸವಿಮಾತುಗಳನ್ನು ವಚನ ಸಾಹಿತ್ಯ ರೂಪದಲ್ಲಿ ನೀಡಿದ ಶರಣರ ಚಿಂತನೆಗಳು ಸದಾ ಕಾಲಕ್ಕೂ ಸರ್ವಹಿತ. ಅಂತಹ ಶರಣರ ಮಾರ್ಗದಲ್ಲಿ ನಡೆದು ಸಮಾಜಕ್ಕೆ ಉಪಕಾರಿಯಾದವರು ಸುತ್ತೂರಿನ 23 ನೇ ಜಗದ್ಗುರುಗಳಾದ ಶ್ರೀ ಶಿವರಾತ್ರಿ ರಾಜೇಂದ್ರಸ್ವಾಮಿಗಳು. ಸ್ವಾತಂತ್ರ್ಯ ಪೂರ್ವದಲ್ಲಿಯೇ ವಿದ್ಯಾರ್ಥಿ ನಿಲಯ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದರು. ಒಂದು ಸಲ ವಿದ್ಯಾರ್ಥಿನಿಲಯ ನಡೆಸಲು ದಿನಸಿ ಪದಾರ್ಥಗಳು ಇಲ್ಲದಿದ್ದಾಗ ತಮ್ಮ ಚಿನ್ನದ ಕರಡಿಗೆ ಮತ್ತು ಚಿನ್ನದ ರುದ್ರಾಕ್ಷಿ ಸರ ಗಿರವಿ ಇಟ್ಟು ವಿದ್ಯಾರ್ಥಿಗಳಿಗೆ ದಾಸೋಹ ವ್ಯವಸ್ಥೆ…

Read More

ಕುಶಾಲನಗರ ಸೆ.10 NEWS DESK : ತೀರ್ಥರೂಪಿಣಿಯಾಗಿ ಹರಿದು ನಾಡಿನ ಜೀವನದಿಯಾಗಿರುವ ಕಾವೇರಿ ಕಲುಷಿತಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಬಾರವಿ ಕನ್ನಡ ಅಭಿಮಾನಿ ಸಂಘದ ಸಂಚಾಲಕ ರವೀಂದ್ರ ಪ್ರಸಾದ್ ಹೇಳಿದರು. ಪಟ್ಟಣದ ಟೋಲ್ ಗೇಟ್ ನಲ್ಲಿರುವ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಭಾದ್ರಪದ ಶುಕ್ಲ ಹುಣ್ಣಿಮೆ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯದಲ್ಲಿ ಕಾವೇರಿ ನದಿ ನೀರನ್ನು ಸಹಸ್ರಾರು ಮಂದಿ ಕುಡಿಯುತ್ತಿದ್ದು ಜನರು ಕಸ ತ್ಯಾಜ್ಯ ಎಸೆಯುವುದರಿಂದ ನೀರು ಮಲಿನ ವಾಗುತ್ತದೆ. ಸ್ವಚ್ಛ ಪರಿಸರ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಕಾವೇರಿಯ ಆರಾಧನೆಯೊಂದಿಗೆ ನದಿ ನೀರು ಸ್ವಚ್ಛವಾಗಿ ಹರಿಯುವ ಸಂದರ್ಭ ಗ್ರಾಮ ಪಟ್ಟಣಗಳ ಕಲುಷಿತ ನೀರು ನೇರವಾಗಿ ಸೇರದಂತೆ ಎಚ್ಚರ ವಹಿಸಬೇಕು. ನಿರಂತರವಾಗಿ ಕಾರ್ಯಕ್ರಮಗಳ ಮೂಲಕ ನದಿ ಸ್ವಚ್ಛತೆ ಬಗ್ಗೆ ನದಿ ಪರಿಸರದ ಕಾಳಜಿ ವಹಿಸುತ್ತಿರುವ ಬಾರವಿ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾವೇರಿ ಪ್ರತಿಮೆಗೆ ಹಾಲು,…

Read More

ಸಿದ್ದಾಪುರ ಸೆ.10 NEWS DESK : ಕಾವೇರಿ ಸಂಘದ ವತಿಯಿಂದ ಕೈಲ್ ಮುಹೂರ್ತ ಹಬ್ಬದ ಅಂಗವಾಗಿ 45ನೇ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಿತು. ಚೆನ್ನಂಗಿ ಕಾವೇರಿ ಕ್ಲಬ್ ಆವರಣದಲ್ಲಿ ನಡೆದ ಕ್ರೀಡಾಕೂಟಕ್ಕೆ  ಸುತ್ತಮುತ್ತಲ ಗ್ರಾಮಗಳಿಂದ ಹಲವು ಸ್ವರ್ದಾಳಿಗಳು ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ವಾಟೇರಿರಾ ಕರುಣ್ ಪ್ರಥಮ, ಕಲ್ಲಪ್ಪಂಡ ಶರಣು ದ್ವಿತೀಯ, ಕುಟ್ಟಂಡ ಮದನ್ ತೃತೀಯ ಬಹುಮಾನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ  ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ಹಬ್ಬ ಆಚರಣೆಗಳ ಮೂಲಕ ಸಮಾಜ ಬಾಂಧವರು ಒಗ್ಗೂಡುವಿಕೆಯೊಂದಿಗೆ ಸಂಪ್ರದಾಯ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಸಾಧನೆ ತೋರುತ್ತಿದ್ದಾರೆ ಕಾವೇರಿ ಕ್ಲಬ್ ಹಲವು ವರ್ಷಗಳಿಂದಲೂ ವಿವಿಧ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮಾದರಿಯಾಗಿ ಮುನ್ನಡೆಯುತ್ತಿದೆ ಎಂದರು. ಕಾವೇರಿ ಸಂಘದ ಸ್ಥಾಪಕ ಅಧ್ಯಕ್ಷ ಡಾ. ಎ ಸಿ ಗಣಪತಿ ಮಾತನಾಡಿ ಕಳೆದ 45 ವರ್ಷಗಳಿಂದ ಕಾವೇರಿ ಸಂಘ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿದೆ. ತೆಂಗಿನಕಾಯಿಗೆ ಗುಂಡು…

Read More

ಮಡಿಕೇರಿ ಸೆ.9 NEWS DESK : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More