ಲೇಖಕ: admin

ಕುಶಾಲನಗರ ಜು.16 NEWS DESK : ಕುಶಾಲನಗರ ಕ್ಲಸ್ಟರ್ ವ್ಯಾಪ್ತಿಯ ಪಟ್ಟಣದ ಸರಹದ್ದಿನ ಮುಳ್ಳುಸೋಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಎಸ್.ಡಿ.ಎಂ.ಸಿ.ಸಹಭಾಗಿತ್ವದಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮದ ಒಂದನೇ ತರಗತಿ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಮಾಹಿತಿ ನೀಡಿದ ಸಿ.ಆರ್.ಪಿ., ಟಿ.ಈ.ವಿಶ್ವನಾಥ್, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಂಗ್ಲಭಾಷಾ ಜ್ಞಾನ ಬೆಳೆಸುವ ದಿಸೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಲಾಗುತ್ತಿದೆ ಎಂದರು. ಸರ್ಕಾರಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲಾಗುತ್ತಿದ್ದು, ಇದರಿಂದ ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲ ಭಾಷೆ ಕಲಿಯಲು ಸುಲಭವಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್ ಮಾತನಾಡಿ, ತಮ್ಮ…

Read More

ಮಡಿಕೇರಿ ಜು.15 NEWS DESK : ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‍ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್‍ಗಳು ಮಾಹಿತಿ ಪಡೆದಿದ್ದು, ಈ ಸಂಬಂಧ ವರದಿ ಬಂದ ನಂತರ ಪುಟಾಣಿ ರೈಲು ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಪ್ರತಿಕ್ರಿಯಿಸಿದರು.  ಈ ಕುರಿತು ವಿಷಯ ಪ್ರಸ್ತಾಪಿಸಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಿಶೇಷ ಆಹ್ವಾನಿತರಾದ ಜಿ.ಚಿದ್ವಿಲಾಸ್ ಅವರು ರಾಜಾಸೀಟಿನಲ್ಲಿ ಮಕ್ಕಳ ರೈಲು ಸ್ಥಗಿತವಾಗಿ ಹಲವು ವರ್ಷಗಳಾಗಿದ್ದು, ಈ ಬಗ್ಗೆ ತುರ್ತು ಕ್ರಮವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಮನವಿ ಮಾಡಿದರು. ನಗರದ ಅಜ್ಜಮಾಡ ದೇವಯ್ಯ…

Read More

ಸುಂಟಿಕೊಪ್ಪ ಜು.16 NEWS DESK : ಸುಂಟಿಕೊಪ್ಪ ವಾಹನ ಚಾಲಕರ ಸಂಘದ 2025-26ನೇ ಸಾಲಿನ ದ್ವಿತೀಯ ಬಾರಿಗೆ ಅಧ್ಯಕ್ಷರಾಗಿ ಕೆ.ವಿ.ಕಿಟ್ಟಣ್ಣ ರೈ, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಕಂಬಿಬಾಣೆ, ಖಜಾಂಚಿಯಾಗಿ ಅಜೀಜ್ ಕೊಡರಗರಹಳ್ಳಿ ಆಯ್ಕೆಯಾಗಿದ್ದಾರೆ. ಸಂಘದ ಸಾರ್ವಜನಿಕ ಸಂಭಾಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಕಿಟ್ಟಣ್ಣ ರೈ ವಹಿಸಿದ್ದರು. ಸಭೆಯಲ್ಲಿಕಳೆದ ಸಾಲಿನ ಲೆಕ್ಕಪತ್ರ ಮಂಡನೆ ಮಾಡಲಾಯಿತು. 2025-26ರ ಸಾಲಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಅಬ್ದುಲ್ಲಕುಟ್ಟಿ, ಬಿ.ಎ.ಕೃಷ್ಣಪ್ಪ, ಸಹಕಾರ್ಯದರ್ಶಿಯಾಗಿ ಪಟ್ಟೆಮನೆ.ಎಸ್.ರಕ್ಷಿತ್ ರೀನು, ಸಂಘಟನಾ ಕಾರ್ಯದರ್ಶಿಯಾಗಿ ರಿಜ್ವಾನ್, ಕಾರ್ಯಕಾರಿಸಮಿತಿ ಗೆ ಸಿ.ಎ.ಬಸಪ್ಪ, ರಾಜ, ಇನಾಸ್ ಡಿಸೋಜ, ಕೆ.ರವಿ, ಸಂದೀಫ್‍ಬಿ.ಎಸ್., ಬಿ.ಕೆ.ಸುರೇಶ್, ಅಸೀಸ್‍ಹೊಸಕೋಟೆ, ಅಸ್ಕರ್, ಜೈನುದ್ದೀನ್, ಶಕ್ತಿವೇಲು, ರಫೀಕ್ ಮೊನು ಮಣಿ ರಾಜ್ ತಂಬಿ, ಎಂ.ಎ.ದೇವಯ್ಯ, ಕುಮಾರ ಜಿ., ಎಂ.ಎಸ್.ಶಾಜಿ., ಸಲೀಂ ಗದ್ದೆಹಳ್ಳ, ಸಲಹಾ ಸಮಿತಿ ಸದಸ್ಯರುಗಳಾಗಿ ಆರ್.ರಾಜ, ಇಸ್ಮಾಯಿಲ್ ಕಾಕು ನೇಮಕಗೊಂಡರು. ಇದೇ ಸಂದರ್ಭ ಕಳೆದ ಬಾರೀ ಸಂಘವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದ ಸಂಘದ ಅಧ್ಯಕ್ಷ ಕೆ.ವಿ.ಕಿಟ್ಟಣ್ಣ ರೈ ಹಾಗೂ ಚಾಲಕ ಸಿ.ಎ.ಬಸಪ್ಪ ಅವರನ್ನು ನೂತನ…

Read More

ಸುಂಟಿಕೊಪ್ಪ ಜು.15 NEWS DESK : ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭವಾಯಿತು. ಸರ್ಕಾರದ ಸೂಚನೆ ಮೇರೆಗೆ ಕಾನ್‍ಬೈಲ್ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಕ್ಲಸ್ಟರ್ ಅಧಿಕಾರಿ ಸೀಮಾ ಅವರು ಚಾಲನೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾದ್ಯಾಯನಿ ಶಾಂತಿ ರೈ, ಸಹಶಿಕ್ಷಕರುಗಳಾದ ಕವಿತ, ಯಶೋಧ, ಪ್ರಸನ್ನ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಯಶೋಧ ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಜು.15 NEWS DESK : ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸರಕಾರಿ ಪದವಿ ಪೂರ್ವ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ 2025-26ನೇ ಸಾಲಿಗೆ ಶೈಕ್ಷಣಿಕ ಸಂಸತ್ ಮಂತ್ರಿ ಮಂಡಲ ಶಾಲಾ ನಾಯಕನಾಗಿ ಅಜಿತ್, ಉಪನಾಯಕಿ ವೈಷ್ಣವಿ, ಆಹಾರ ಮಂತ್ರಿಯಾಗಿ ರಿದಾ ಮರಿಯಮ್, ಆಹಾರ ಉಪಮಂತ್ರಿಯಾಗಿ ನಿಶ್ಮಿತಾ, ರಂಜಿತ, ಆರೋಗ್ಯ ಮಂತ್ರಿಯಾಗಿ ಮೊಹಮ್ಮದ್ ಶಹಬಾಸ್, ಆರೋಗ್ಯ ಉಪಮಂತ್ರಿಯಾಗಿ ರೆಹನತ್, ಸ್ಚಚ್ಚತಾ ಮಂತ್ರಿ ಹಾಗೂ ಶಾಲಾ ಭದ್ರತಾ ಸಮಿತಿ ಮಂತ್ರಿಯಾಗಿ ಲೇಖಿಕ್, ಉಪ ಮಂತ್ರಿಯಾಗಿ ಅರ್ಪಿತ ರಾಡ್ರಿಗಸ್, ಕ್ರೀಡಾಮಂತ್ರಿಯಾಗಿ ಶಶಿಕಾಂತ, ಉಪಮಂತ್ರಿಯಾಗಿ ಸೃಜನ, ಸಾಂಸ್ಕೃತಿಕ ಮತ್ತು ವಾರ್ತಾ ಮಂತ್ರಿಯಾಗಿ ದೀಕ್ಷಾ, ವಾರ್ತಾ ಉಪಮಂತ್ರಿಯಾಗಿ ನೌಶಿನ ಅವರುಗಳಿಗೆ ಪ್ರಮಾಣ ವಚನ ಬೋಧಿಸುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಇದೇ ಸಂದರ್ಭ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಸಿ.ಟಿ.ಸೋಮಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಬಾಲಕೃಷ್ಣ, ಶಾಲಾಭಿವೃದ್ಧಿ…

Read More

ನ್ಯೂಯಾರ್ಕ್ ಜು.15 NEWS DESK : ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. “ನಾವು ಮನೆಗೆ ಮರಳಿದ್ದೇವೆ” ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಡ್ರ್ಯಾಗನ್ ಎಂದು ಕರೆಯಲ್ಪಡುವ ಬಾಹ್ಯಾಕಾಶ ನೌಕೆ ಇಳಿದ ಸ್ವಲ್ಪ ಸಮಯದ ನಂತರ, ಮಧ್ಯಾಹ್ನ 3.02 ಕ್ಕೆ ಆಕ್ಸಿಯಮ್ ಸ್ಪೇಸ್‌ನ ಕಮಾಂಡ್ ಕಂಟ್ರೋಲ್ ಸೆಂಟರ್‌ಗೆ ತಿಳಿಸಿದ ಸಂದೇಶ ಇದಾಗಿದೆ. ಪೆಗ್ಗಿ ವಿಟ್ಸನ್ ಸಂದೇಶಕ್ಕೆ ಕಮಾಂಡ್ ಕೇಂದ್ರ “ಮನೆಗೆ ಸ್ವಾಗತ” ಎಂದು ಉತ್ತರಿಸಿದೆ. ಇದಕ್ಕೆ ಪೆಗ್ಗಿ ಉತ್ತರಿಸುತ್ತಾ, “ಮಹಾ ಸವಾರಿ ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಧನ್ಯವಾದಗಳು.” ಗ್ರೇಸ್‌ನಲ್ಲಿರುವ ಸಿಬ್ಬಂದಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಆಕ್ಸಿಯಮ್ -4 ವಾಣಿಜ್ಯ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಕಳೆದ 21 ದಿನಗಳ ನಂತರ, ಮಿಷನ್ ಪೈಲಟ್…

Read More

ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ ಆಯೋಜಿಸಲಾಗಿದೆ. ಆ.3 ರಂದು ಭಾನುವಾರ ವಿರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ. ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತರು ತಮ್ಮ ಹೆಸರನ್ನು ಜು.25 ರೊಳಗಾಗಿ 9353531976, 917760908774 ಸಂಖ್ಯೆಯನ್ನು ಸಂಪರ್ಕಿಸಿ  ನೊಂದಾಯಿಸಿಕೊಳ್ಳ ಬಹುದಾಗಿದೆ.

Read More

ಮಡಿಕೇರಿ ಜು.15 NEWS DESK : ಸಮಾಜದ ಉತ್ತಮ ಅಭಿವೃದ್ಧಿಗೆ ಮತ್ತು ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಅಧಿಕಾರಿಗಳು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿದಾಗ ಗ್ರಾಮಗಳು ಅಭಿವೃದ್ಧಿಯಾಗಲು ಸಾಧ್ಯ ಎಂದು ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಕಾನ್ಸೀರಾಂಜೀ ನಗರದ ಸ್ಥಾಪಕಾಧ್ಯಕ್ಷ ಕೆ.ಮೊಣ್ಣಪ್ಪ ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಿರ್ದೇಶಕರಾದ ಶೇಖರ್ ಅವರನ್ನು ಹೊದ್ದೂರು ಗ್ರಾಮ ಪಂಚಾಯಿತಿಯ ಸದಸ್ಯರು ಮತ್ತು ಕಾನ್ಸೀರಾಂಜೀ ನಗರದ ಪಾಲೆಮಾಡುವಿನ ನಿವಾಸಿಗಳ ಪರವಾಗಿ ಸನ್ಮಾನಿಸಿ ಮಾತನಾಡಿದರು. ಅಧಿಕಾರಿಗಳನ್ನು ಸರಕಾರದ ಮಾನದಂಡದಂತೆ ಕರ್ತವ್ಯದ ಧ್ಯೇಯೋದ್ದೇಶದಿಂದ ಪ್ರಮಾಣ ವಚನ ಮಾಡಿ ಬರುತ್ತಾರೆ. ಸರ್ಕಾರಿ ಹುದ್ದೆಯಲ್ಲಿರುವ ಶೇ.75 ರಷ್ಟು ಅಧಿಕಾರಿಗಳು ನಾಮಕಾವಸ್ಥೆಗೆ ಕೆಲಸ ಮಾಡುತ್ತಾ ದರ್ಪ ಮತ್ತು ಬೇಜವಾಬ್ದಾರಿತನದಿಂದ ಕೂಡಿದ್ದು ಅಧಿಕಾರಿಗಳ ಭ್ರಷ್ಟಾಚಾರವು ತಾಂಡವವಾಡುತ್ತಿದೆ. ಇಂತಹ ಅಧಿಕಾರಿಗಳನ್ನು ಸಮಾಜವು ಸೂಕ್ಷ್ಮವಾಗಿ ನೋಡುತ್ತಿದೆ ಎಂಬ ಅರಿವು ಮೂಡಿಸಬೇಕು. ಆದ್ದರಿಂದ, ನಿಷ್ಠಾವಂತ ಅಧಿಕಾರಿಗಳಿಗೆ ಸನ್ಮಾನ ಅಭಿನಂದನೆಯನ್ನು ಸಲ್ಲಿಸುವ ಮೂಲಕ ಅಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯವನ್ನು ಹೆಚ್ಚಿಸಿ ಪ್ರಜ್ನಾವಂತ ಸಮಾಜಕ್ಕೆ ಮತ್ತು ಅಧಿಕಾರಿಗಳಿಗೆ…

Read More

ಮಡಿಕೇರಿ ಜು.15 NEWS DESK : ನಾಪೋಕ್ಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ಮತ್ತು ನಾಪೋಕ್ಲು ಠಾಣೆಯ ಪಿಎಸ್ಐ ರಾಘವೇಂದ್ರ ಮನೆ ಮನೆಗೆ ಭೇಟಿ ನೀಡಿ ಕಾರ್ಯಕ್ರಮದ ಉದ್ದೇಶ ಮತ್ತು ಸೈಬರ್‌ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯಿದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭ ಠಾಣೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು. 

Read More

ಬೆಂಗಳೂರು ಜು.15 NEWS DESK : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು: • ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. • ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು. • ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ. • ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ…

Read More