ವಿರಾಜಪೇಟೆ ಆ.21 NEWS DESK : ಶ್ರೀ ಕಾವೇರಿ ಗಣೇಶೋತ್ಸವ ಸಮಿತಿ ಮೂರ್ನಾಡು ರಸ್ತೆ ವಿರಾಜಪೇಟೆ ಮತ್ತು ದಕ್ಷಿಣ ಕೊಡಗು ಲೇಖಕಿಯರು ಮತ್ತು ಕಲಾವಿದರ ವೇದಿಕೆ ವಿರಾಜಪೇಟೆ ತಾಲ್ಲೂಕು ವತಿಯಿಂದ ಸೆ.4 ರಂದು ಜಿಲ್ಲಾಮಟ್ಟದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾವೇರಿ ಗಣೇಶೊತ್ಸವ ವೇದಿಕೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಸಬ್ ಜೂನಿಯರ್ ವಿಭಾಗ 6 ರಿಂದ 11 ವರ್ಷ, ಜೂನಿಯರ್ ವಿಭಾಗ 12ರಿಂದ 16 ವರ್ಷ, ಸೀನಿಯರ್ ವಿಭಾಗ 17 ರಿಂದ 22 ವರ್ಷ ಸಾರ್ವಜನಿಕ ವಿಭಾಗ 23 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ಸ್ಪರ್ಧಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ.31 ಹೆಸರು ನೊಂದಾಯಿಸಲು ಕಡೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಮತ್ತು ನೋಂದಾವಣೆಗಾಗಿ ಮೊಬೈಲ್ ಸಂಖ್ಯೆ ವಿಮಲ ದಶರಥ-9008613729, ರಜಿತಾ, ಕಾರ್ಯಪ್ಪ-9481771851 ಸಂಪರ್ಕಿಸಬಹುದಾಗಿದೆ.
ಲೇಖಕ: admin
ಸುಂಟಿಕೊಪ್ಪ ಆ.21 NEWS DESK : ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಕಬ್ ಮತ್ತು ಬುಲ್ ಬುಲ್ ಸೇವಾದಳದ ಇಬ್ಬರು ವಿದ್ಯಾರ್ಥಿಗಳಿಗೆ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಎಸ್.ಬೋಸ್ರಾಜು ಅವರಿಂದ ರಾಜ್ಯ ಪುರಸ್ಕಾರ ನೀಡಲಾಯಿತು. ಕಬ್ ವಿಭಾಗದಲ್ಲಿ ವಿದ್ಯಾರ್ಥಿ ಎಸ್.ಜೆನೀಶ್ ಮತ್ತು ಬುಲ್ಬುಲ್ ವಿದ್ಯಾರ್ಥಿನಿ ನುಹಾ ಫಾತೀಮಾ ಅವರುಗಳು ರಾಜ್ಯ ಪುರಸ್ಕಾರಕ್ಕೆ ಆಯ್ಕೆಗೊಂಡಿದ್ದು, ಮಡಿಕೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ರಾಜು ಅವರು ರಾಜ್ಯ ಪುರಸ್ಕಾರ ಪ್ರಶಸ್ತಿ ನೀಡಿ ಅಬಿನಂಧಿಸಿದರು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೊವಿಟಾ ವಾಸ್ ಅವರು ಶಿಕ್ಷಕಿ ಹಾಗೂ ತರಬೇತುದಾರೆ ಯಿವಾಬೆನ್ಸಿಸ್ ಮತ್ತು ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರಶಂಸಿಸಿ ಶುಭ ಹಾರೈಸಿದರು.
ಮಡಿಕೇರಿ ಆ.21 NEWS DESK : ಜಮ್ಮಾ ಬಾಣೆ ವಿಧೇಯಕವನ್ನು ಪರಿಶೀಲಿಸಲು “ವಿಧಾನಸಭೆಯ ಆಯ್ಕೆ ಸಮಿತಿ” ರಚಿಸಿಸುವಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದರು. ಕೊಡಗು ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದ ವಿಧೇಯಕವನ್ನು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಅವರು ಸದನದಲ್ಲಿ ಮಂಡಿಸಿದರು. ಈ ವಿಧೇಯಕ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಸ್ಪಷ್ಟನೆ ನೀಡಿ, ಈ ವಿಧೇಯಕ ವಿಶೇಷವಾಗಿ ಕೊಡಗು ಜಿಲ್ಲೆಗೆ ಸಂಬಂಧಸಿದ್ದಾಗಿದೆ. 1964ನೇ ಕರ್ನಾಟಕ ಕಂದಾಯ ಕಾನೂನಿನಲ್ಲಿ ಕೆಲವು ಅಂಶಗಳು ಕೊಡಗು ಜನರ ಸಮಸ್ಯೆಗೆ ಕಾರಣವಾಗಿದೆ. ಅತ್ಯಂತ ಜಟೀಲವಾದ ಸಮಸ್ಯೆಯಾಗಿರುವುದರಿಂದ ಇದನ್ನು ತಿದ್ದುಪಡಿ ಮಾಡಲು ಅವಶ್ಯಕವಾಗಿರುತ್ತದೆ. ಆದುದರಿಂದ ವಿಧಾನಸಭೆಯ ಆಯ್ಕೆ ಸಮಿತಿ (Select Committee) ರಚನೆ ಮಾಡಲು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ವಿಧಾನಸಭೆಯಲ್ಲಿ ವಿನಂತಿಸಿದರು. ಈ ಬಗ್ಗೆ ವಿಧಾನಸಭೆಯಲ್ಲಿ “ವಿಧಾನಸಭೆ ಆಯ್ಕೆ ಸಮಿತಿ” (Select Committee) ರಚನೆ ಮಾಡಲು ಒಪ್ಪಿಗೆ ನೀಡಲಾಯಿತು.
ಮಡಿಕೇರಿ ಆ.21 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಒಟ್ಟು ರೂ.15577.26 ಲಕ್ಷಗಳ ವಹಿವಾಟು ನಡೆಸಿದ್ದು, ರೂ.54.90 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15ರಂತೆ ಡಿವಿಡೆಂಡ್ ನೀಡುವ ಕುರಿತು ಆ.24 ರಂದು ವಾರ್ಷಿಕ ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.24 ರಂದು ಸಂಘದ 48ನೇ ಮಹಾಸಭೆ ಶ್ರೀ ನರೇಂದ್ರಮೋದಿ ಭವನದಲ್ಲಿ ನಡೆಯಲಿದ್ದು, ಸರ್ವ ಸದಸ್ಯರು ತಪ್ಪದೆ ಹಾಜರಾಗುವಂತೆ ಮನವಿ ಮಾಡಿದರು. 2024-25ನೇ ಸಾಲಿನ ಮಾರ್ಚ್ ಅಂತ್ಯಕ್ಕೆ ಸಂಘದಲ್ಲಿ ಒಟ್ಟು ಎ ತರಗತಿಯ 1195 ಸದಸ್ಯರಿದ್ದು, ಸದಸ್ಯರಿಂದ ಪಾಲು ಬಂಡವಾಳ ಒಟ್ಟು ರೂ 125.62 ಲಕ್ಷಗಳಿರುತ್ತದೆ. ಕ್ಷೇಮ ನಿಧಿ ಸೇರಿ ಇತರೆ ನಿಧಿಗಳು ರೂ.355.04 ಲಕ್ಷಗಳು, ನಿರಖು ಠೇವಣಿ ಸಂಚಯ ಠೇವಣಿ ಹಾಗೂ ಇತರೆ ಠೇವಣಿ ಸೇರಿ ಒಟ್ಟು 1975.07 ಲಕ್ಷ ರೂ.ಗಳಿದೆ ಎಂದು ತಿಳಿಸಿದರು. ಸಂಘದ ಬಂಡವಾಳವನ್ನು…
ಸುಂಟಿಕೊಪ್ಪ ಆ.21 NEWS DESK : ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘ, ಸ್ಮೀತಾ ಐಕೇರ್ ಹಾಗೂ ಯಶಸ್ವಿನ ಸೇವಾ ಟ್ರಸ್ಟ್ ವತಿಯಿಂದ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ನೇತ್ರ ಶಿಬಿರವನ್ನು ಮಡಿಕೇರಿ ಸ್ಮೀತಾ ಐಕೇರ್ನ ವೈಧ್ಯರಾದ ಡಾ.ಪ್ರಶಾಂತ್ ಉದ್ಘಾಟಿಸಿದರು. ಯಶಸ್ವಿನ ಸೇವಾಟ್ರಸ್ಟ್ ಯೋಜನಾಧಿಕಾರಿ ಚೇತನ್ ಮಾತನಾಡಿ, ಈ ಭಾಗದ ಸಾರ್ವಜನಿಕರಿಗಾಗಿ ಉಚಿತ ಕಣ್ಣಿನ ತಪಾಸಣೆಯನ್ನು ಆಯೋಜಿಸಿದ್ದು ಅರ್ಹರಿಗೆ ಉಚಿತ ಕನ್ನಡಕವನ್ನು ವಿತರಿಸಲಾಗುವುದು. ಅಲ್ಲದೆ ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವವರಿಗೆ ಈ ಸಂಘದ ಯಶಸ್ವಿನಿ ಆರೋಗ್ಯ ಕಾರ್ಡು ಹೊಂದಿದಲ್ಲಿ ಉಚಿತ ಶಸ್ತ್ರಚಿಕಿತ್ಸೆ ಮಾಡಿಕೊಡಲಾಗುವುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾ.ಕೃ.ಪ.ಸ.ಸಂ ಅಧ್ಯಕ್ಷ ನಾಪ್ಪಂಡ ಉಮೇಶ್ ಉತ್ತಪ್ಪ, ಮಾದಾಪುರ ವ್ಯಾಪ್ತಿಯ ಸಾರ್ವಜನಿಕರಿಗೆ ಈ ಶಿಬಿರವನ್ನು ಆಯೋಜಿಸಿದ್ದು, ಅವಶ್ಯವಿದ್ದಲ್ಲಿ ಓದುವ ಕನ್ನಡಕವನ್ನು ಸಂಘದ ವತಿಯಿಂದ ನೀಡಲಾಗುವುದೆಂದರು. ಈ ಸಂದರ್ಭ ಸಂಘದ ಯೋಜನಾಧಿಕಾರಿ ಕಾವೇರಪ್ಪ, ನಿರ್ದೇಶಕರುಗಳಾದ ಸಿ.ಎ.ತಮ್ಮಯ್ಯ, ಕೆ.ಎ.ಲತೀಫ್, ಸೋನಾ, ಗಿರೀಶ್,…
ಸುಂಟಿಕೊಪ್ಪ ಆ.21 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್, ವಾಲ್ನೂರು ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಾಲ್ನೂರು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರ್ಕಾರದ ಆದೇಶದಂತೆ ವಾಲ್ನೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಲೀಡ್ ಬ್ಯಾಂಕ್ ನ ವ್ಯವಸ್ಥಾಪಕ ಗಂಗಾಧರ್ ನಾಯಕ್, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರಲ್ಲದೇ, ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ ರೂ.2 ಲಕ್ಷಗಳವರೆಗಿನ ವಿಮಾ ಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ ರೂ436ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ ರೂ.2 ಲಕ್ಷ ಗಳ ವಿಮಾ…
ಮಡಿಕೇರಿ ಆ.21 NEWS DESK : ಮತಬ್ಯಾಂಕ್ ಗಾಗಿ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳಿಗೆ ಪವಿತ್ರ ಕೊಡವ ಲ್ಯಾಂಡ್ ನಲ್ಲಿ ನೆಲೆ ಕಲ್ಪಿಸಲು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹುನ್ನಾರ ನಡೆಯುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸಿದ್ದಾಪುರದಲ್ಲಿ 10ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ರೋಹಿಂಗ್ಯಗಳಿಂದ ಕೊಡವ ಲ್ಯಾಂಡ್ ಗೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಅವರ ಇರುವಿಕೆಯನ್ನು ಸಕ್ರಮಗೊಳಿಸುವ ಮತ್ತು ಕೊಡವ ನೆಲದಲ್ಲಿ ನೆಲೆ ನೀಡುವ…
ಸುಂಟಿಕೊಪ್ಪ ಆ.21 NEWS DESK : ಕೆನರಾ ಬ್ಯಾಂಕಿನ ವತಿಯಿಂದ ಪ್ರತಿಭಾನ್ವಿತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸುನಿಲ್, ಉಪಾಧ್ಯಕ್ಷ ಶರೀಫ್ ಮತ್ತು ಸದಸ್ಯರು ಮುತುವರ್ಜಿ ವಹಿಸಿ ಬ್ಯಾಂಕಿನ ವ್ಯವಸ್ಥಾಪಕರನ್ನು ಸಂಪರ್ಕಿಸಿ ಮನವಿ ಮಾಡಿದ್ದರು. ಮನವಿಗೆ ಸ್ಪಂಧಿಸಿದ ಬ್ಯಾಂಕಿನ ವ್ಯವಸ್ಥಾಪಕರಾದ ಅನಿಕೇತ್, ಶಾಲೆಗೆ ತೆರಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹಂಸಿಕ, ಕೆ.ದೀಕ್ಷಿತ, ಎಸ್.ದೀಕ್ಷಿತ ಹಾಗೂ ಪ್ರೌಢಶಾಲೆಯ ಮೂವರು ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ನಿಶ್ಮಿತಾ, ಅಂಜಲಿ, ಸಂಜನಾ ಅವರಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಆರ್.ಹೆಚ್.ಶರೀಫ್ ಅವರು, ವಿದ್ಯಾರ್ಥಿಗಳಲ್ಲಿ ಶಿಕ್ಷಣಕ್ಕೆ ಇನ್ನಷ್ಟು ಪೆÇ್ರೀತ್ಸಾಹ ಕೊಡಲಿ ಎನ್ನುವ ದೃಷ್ಟಿಯಲ್ಲಿ ಹಾಗೂ ಈ ಮಕ್ಕಳಿಂದ ಮುಂದಿನ ದಿನಗಳಲ್ಲಿ ಉಳಿದ ಮಕ್ಕಳಿಗೆ ಸ್ಪೂರ್ತಿಯಾಗಲಿ ಎನ್ನುವ ದೃಷ್ಡಿಯಿಂದ ಬ್ಯಾಂಕಿನ ವ್ಯವಸ್ಥಾಪಕರನ್ನು ಮನವಿ ಮಾಡಿಕೊಂಡಾಗ ಅದಕ್ಕೆ ಸಮ್ಮತಿ ಸೂಚಿಸಿ ನಮ್ಮ ಶಾಲೆಯ…
ಕುಶಾಲನಗರ ಆ.20 NEWS DESK : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕೊಡಗು ಜಿಲ್ಲಾ ಶಿಕ್ಷಕರ ಘಟಕದ ಅಧ್ಯಕ್ಷರಾಗಿ ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕ ಸಿ.ಟಿ.ಸೋಮಶೇಖರ್ ಅವರನ್ನು ಆಯ್ಕೆ ಮಾಡಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಅನುಮೋದನೆ ಮೇರೆಗೆ ಸಿ.ಟಿ.ಸೋಮಶೇಖರ್ ಅವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾ ಶಿಕ್ಷಕರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಶಿಕ್ಷಕರ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮೂಲತಃ ಸೋಮವಾರಪೇಟೆ ಬಳಿಯ ಗೌಡಳ್ಳಿ ಬಳಿಯ ಚಿಕ್ಕ ತೋಳೂರು ಗ್ರಾಮದ ಕೃಷಿ ಕುಟುಂಬದ ಸೋಮಶೇಖರ್ ಅವರು ಸೋಮವಾರಪೇಟೆ ಸರ್ಕಾರಿ ಜೂನಿಯರ್ ಕಾಲೇಜಿನಿಂದ ವೃತ್ತಿ ಜೀವನ ಆರಂಭಿಸಿದ ಅವರು ಕಾನ್ ಬೈಲ್ , ಸುಂಟಿಕೊಪ್ಪ ಹಾಗೂ ಆಲೂರು ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿ ಕಳೆದ ಏಪ್ರಿಲ್ 2025 ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದು, ಕುಶಾಲನಗರ ಪಟ್ಟಣದ ನಿವಾಸಿಯಾಗಿದ್ದಾರೆ.…
ಸುಂಟಿಕೊಪ್ಪ ಆ.21 NEWS DESK : ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಬಿ.ಯಶೋಧರ ಪೂಜಾರಿ ಆಯ್ಕೆಯಾಗಿದ್ದಾರೆ. ಮಾದಾಪುರ ರಸ್ತೆಯ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಿತಿಯ ವಾರ್ಷಿಕ ಮಹಾಸಭೆಯು ದೇವಾಲಯದ ಆವರಣದಲ್ಲಿ ನಡೆಸಲಾಗಿದ್ದು 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಬಿ.ದಿವಾಕರ್ ಪೂಜಾರಿ, ಪುಳಂಜನ ಕುಶಾಲಪ್ಪ, ದಿವಾಕರ್ ರೈ, ಸಹ ಕಾರ್ಯದರ್ಶಿಯಾಗಿ ಶಿವರಾಮನ್, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್, ಖಜಾಂಚಿಯಾಗಿ ಮನು ಅಚ್ಚಮಯ್ಯ, ಕಾರ್ಯಾಕಾರಿ ಸಮಿತಿ ಸದಸ್ಯರುಗಳಾಗಿ ಎ.ಶ್ರೀಧರ್ ಕುಮಾರ್, ಮಹೇಶ್ ರೈ, ಬಿ.ಎಸ್.ರಮೇಶ್, ಶ್ರೀಧರ್, ಕೆ.ಎನ್.ಪವಿ, ಸುರೇಶ್ಗೋಪಿ, ಲೋಕೇಶ್, ಮಣಿಕಂಠ, ಪಿ.ಕಿಶೋರ್, ಅರುಣ, ಹೊನ್ನಪ್ಪಾಡಿ ಸುರೇಶ್, ಅಣ್ಣು ಶೇಖರ್ ಇವರುಗಳನ್ನು ಆಯ್ಕೆಗೊಳಿಸಲಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ತಿಳಿಸಿದ್ದಾರೆ.






