ಲೇಖಕ: admin

ಸುಂಟಿಕೊಪ್ಪ ಆ.21 NEWS DESK : ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಬಿ.ಯಶೋಧರ ಪೂಜಾರಿ ಆಯ್ಕೆಯಾಗಿದ್ದಾರೆ. ಮಾದಾಪುರ ರಸ್ತೆಯ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಿತಿಯ ವಾರ್ಷಿಕ ಮಹಾಸಭೆಯು ದೇವಾಲಯದ ಆವರಣದಲ್ಲಿ ನಡೆಸಲಾಗಿದ್ದು 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಬಿ.ದಿವಾಕರ್ ಪೂಜಾರಿ, ಪುಳಂಜನ ಕುಶಾಲಪ್ಪ, ದಿವಾಕರ್ ರೈ, ಸಹ ಕಾರ್ಯದರ್ಶಿಯಾಗಿ ಶಿವರಾಮನ್, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್, ಖಜಾಂಚಿಯಾಗಿ ಮನು ಅಚ್ಚಮಯ್ಯ, ಕಾರ್ಯಾಕಾರಿ ಸಮಿತಿ ಸದಸ್ಯರುಗಳಾಗಿ ಎ.ಶ್ರೀಧರ್ ಕುಮಾರ್, ಮಹೇಶ್ ರೈ, ಬಿ.ಎಸ್.ರಮೇಶ್, ಶ್ರೀಧರ್, ಕೆ.ಎನ್.ಪವಿ, ಸುರೇಶ್‍ಗೋಪಿ, ಲೋಕೇಶ್, ಮಣಿಕಂಠ, ಪಿ.ಕಿಶೋರ್, ಅರುಣ, ಹೊನ್ನಪ್ಪಾಡಿ ಸುರೇಶ್, ಅಣ್ಣು ಶೇಖರ್ ಇವರುಗಳನ್ನು ಆಯ್ಕೆಗೊಳಿಸಲಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಆ.21 NEWS DESK :  ಕೃಷಿಯಲ್ಲಿ ತ್ವರಿತ ಪ್ರಗತಿ ಸಾಧಿಸಬೇಕು. ಹೆಚ್ಚು ಆದಾಯವನ್ನು ಗಳಿಸುವುದರೊಂದಿಗೆ ಕಡಿಮೆ ಶ್ರಮದ ಬಳಕೆ ಆಗಬೇಕೆಂಬ ಉದ್ದೇಶದಿಂದ ಇತ್ತೀಚಿಗೆ ಕೀಟನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚುತ್ತಿದ್ದು, ಇದು ನಮ್ಮ ಆರೋಗ್ಯ ಸುತ್ತಮುತ್ತಲಿನ ಪರಿಸರ ಹಾಗೂ ಪ್ರಾಣಿ ಸಂಕುಲಗಳು ಕ್ಷೀಣಿಸಿ ಹೋಗಲು ಪ್ರಮುಖ ಕಾರಣವೆಂದು ಎಫ್.ಎಂ.ಕೆ.ಎಂ.ಸಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಇ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಐಕ್ಯೂಎಸಿ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೊಡಗು ಜಿಲ್ಲೆಯಲ್ಲಿ ಭತ್ತ ಬೆಳೆಯ ಅವಕಾಶಗಳು ಹಾಗೂ ಸವಾಲುಗಳು ಎಂಬ ವಿಷಯದ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಬೆಟ್ಟ ಗುಡ್ಡಗಳಿಂದ ಆವೃತವಾದ ಪ್ರದೇಶ. ಇಲ್ಲಿ ಸಾವಯವ ಪದ್ಧತಿಯಲ್ಲಿ ಭತ್ತ ಬೆಳೆಸುವುದು ಅತಿ ಮುಖ್ಯ . ಭತ್ತ ಬೆಳೆಯುವ ಜಿಲ್ಲೆಗಳಲ್ಲಿ ಕೊಡಗು ಜಿಲ್ಲೆಯು ಸಹ ಒಂದಾಗಿದ್ದು, ಭತ್ತ ಬೆಳೆಯುವ ಪದ್ಧತಿ, ಸ್ವರೂಪ, ಭತ್ತದ ತಳಿಗಳು ಬೇರೆ ಯಾಗಿದೆ. ಕೊಡಗು…

Read More

ಮಡಿಕೇರಿ ಆ.21 NEWS DESK : ಮೈಸೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಚರ್ಚಿಸಲು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಅವರನ್ನು ಮೈಸೂರು-ಕೊಡಗು ಸಂಸದರಾದ ಯದುವೀರ್ ಒಡೆಯರ್  ಭೇಟಿ ಮಾಡಿದರು. ಒಪ್ಪಂದದ ಪ್ರಕಾರ ರಾಜ್ಯ ಸರ್ಕಾರವು ಉಪಯುಕ್ತತೆಗಳನ್ನು ಬದಲಾಯಿಸಲು ಒಪ್ಪಿಕೊಂಡಿದೆ ಮತ್ತು ಅವರು ಅದಕ್ಕಾಗಿ ಅಂದಾಜು ರೂಪಿಸುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರು. ಭೂ ಹಸ್ತಾಂತರವು ಆದಷ್ಟು ಬೇಗ ನಡೆಯುವುದು ಉತ್ತಮ ಮತ್ತು ಯುಟಿಲಿಟಿ ಶಿಫ್ಟಿಂಗ್ ಕಾರ್ಯವು ರನ್‌ವೇ ವಿಸ್ತರಣೆಗೆ ಸಮಾನಾಂತರವಾಗಿ ನಡೆಯಬಹುದುˌ ಏಕೆಂದರೆ ಇದು ವಿಮಾನ ನಿಲ್ದಾಣವನ್ನು ಬೇಗನೆ ಸಿದ್ಧಪಡಿಸುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಎಂದು ತಿಳಿಸಿದರು. ಮನವಿ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ಮೈಸೂರಿನ ಸಿಎನ್‌ಡಿ ತ್ಯಾಜ್ಯದಿಂದ ವಿಮಾನ ನಿಲ್ದಾಣದ ಭೂಮಿಯನ್ನು ಸಮತಟ್ಟುಗೊಳಿಸಲು ಆಳವಾದ ಕಂದರಗಳನ್ನು ತುಂಬಿಸುವ ಸಾಧ್ಯತೆಗಳ ಕುರಿತು ಅವರಿಗೆ ಕೇಳಿದೆ. ಅದು ಸಾಧ್ಯವಾದರೆ AI ಅಧ್ಯಯನವನ್ನು ನಡೆಸಿ ಪರಿಶೀಲಿಸುವುದರ ಕುರಿತು ತಿಳಿಸಿದರು. ಇದಲ್ಲದೆ, ಕೊಡಗು ಜಿಲ್ಲೆಯಲ್ಲಿ ವಾಯುನೆಲೆಯನ್ನೂ ತ್ವರಿತಗೊಳಿಸಬೇಕೆಂದು  ಮನವಿ ಸಲ್ಲಿಸಿದರು.…

Read More

ಮಡಿಕೇರಿ ಆ.21 NEWS DESK : ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಮಡಿಕೇರಿ ಬಾಲ ಗೋಕುಲ ವತಿಯಿಂದ ನಗರದ ಮಹದೇವಪೇಟೆಯಲ್ಲಿರುವ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ “ಶ್ರೀ ಕೃಷ್ಣ, ರುಕ್ಮಣಿ, ರಾಧೆ, ದೇವಕಿ, ಯಶೋದೆ ಹಾಗೂ ವಸುದೇವರ” ಛದ್ಮವೇಷ ಸಮಾಗಮ ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಬಾಲಗೋಕುಲ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖರಾದ ಉಮೇಶ್‌, “ನೈತಿಕ ವೌಲ್ಯ ಕುಸಿಯುತ್ತಿರುವ ಈ ಕಾಲಘಟ್ಟದಲ್ಲಿ ಸಾಮಾಜಿಕ ಅಧ:ಪತನ ಉಂಟಾಗುತ್ತಿದ್ದು, ಮಾನವೀಯ ವೌಲ್ಯ ಬೆಳೆಸುವ ಸಾಂಸ್ಕೃತಿಕ ಶಿಕ್ಷಣ, ಇದನ್ನು ಬೋಧಿಸುವ ವ್ಯವಸ್ಥೆಯೇ ಬಾಲಗೋಕುಲಗಳಾಗಿವೆ ಎಂದರು. ಹೆಜ್ಜೆ ಹೆಜ್ಜೆಗೂ ದೈವಿಕ ಚೈತನ್ಯದಿಂದ ಜೀವನವನ್ನು ನಡೆಸುವವರು. ಹಿರಿಯರು ಕೊಟ್ಟಿರುವ ಉತ್ತಮ ಸಂಪ್ರದಾಯ, ಜೀವನ ಪದ್ಧತಿಗಳು ಸ್ವಂತಕ್ಕೆ ಅಲ್ಲ. ಬದಲು ಲೋಕದ ಸಮಸ್ತ ಚರಾಚರಕ್ಕೆ ಸಮರ್ಪಿತ ಎಂದು ಅರಿತು, ಸಶಕ್ತ ಸಮಾಜದ ಮೂಲಾಧಾರವು ಪ್ರೀತಿ ಮತ್ತು ಸೇವೆಯಾಗಿದೆ ಎಂದರು. ಇಂದಿನ ಮಕ್ಕಳು ಮುಂದಿನ ಸಮಾಜಕ್ಕೆ ಸತ್ಕಾರ್ಯಕ್ಕಾಗಿ ಸಿಗಬೇಕಾದರೆ ಬಾಲಗೋಕುಲ ಶಿಕ್ಷಣ…

Read More

ಸಿದ್ದಾಪುರ ಆ.21 NEWS DESK : ವೈದ್ಯ ಸ್ನಾತಕೋತ್ತರ ನೀಟ್ ಪಿಜಿ 2025 ಪರೀಕ್ಷೆಯಲ್ಲಿ ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿಯ Dr. ವಹೀದ ಮುಹಮ್ಮದ್ ಆಲ್ ಇಂಡಿಯಾ ರ‍್ಯಾಂಕ್ (AIR) 1505 ಪಡೆದು ಉತ್ತೀರ್ಣರಾಗಿದ್ದಾರೆ. ಇವರು ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ Dr.ಶಾರುಖ್ ಫಹಾದ್ ಅವರ ಪತ್ನಿ. ಆ.3 ರಂದು ನಡೆದ ಪರೀಕ್ಷೆಯಲ್ಲಿ ದೇಶಾದ್ಯಂತ ಸುಮಾರು 2.42 ಲಕ್ಷ ವ್ಯದ್ಯರು ಹಾಜರಾಗಿದ್ದರು.

Read More

ವಿರಾಜಪೇಟೆ ಆ.20 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನಪರ್ವ ರಕ್ಷಾ ಬಂಧನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿ ಶಾಖೆಯ ಸಹ ಸಂಚಾಲಕಿ ಬಿ.ಕೆ.ಧನಲಕ್ಷ್ಮಿ ಅವರು ರಕ್ಷಾಬಂಧನದ ಆಧ್ಯಾತ್ಮಿಕ ರಹಸ್ಯವನ್ನು ತಿಳಿಸಿ ಮಾತನಾಡಿ, ಯಾರು ಪರಮಾತ್ಮನ ನೆನಪು ಎಂಬ ಶ್ರೀರಕ್ಷೆಯಲ್ಲಿ ಬಂಧಿತ ಆಗುತ್ತಾರೋ ಅವರಿಗೆ ಉಳಿದೆಲ್ಲ ಬಂಧನಗಳು ದೂರ ಆಗುವುದು. ನಮ್ಮ ಜೀವನದಲ್ಲಿ ಪವಿತ್ರ ಧಾರಣೆ ಮಾಡುವ ಪ್ರತಿಜ್ಞೆ ಮಾಡಿಕೊಂಡು ಪಾವನರಾಗುವುದೇ ನಿಜವಾದ ರಾಕಿ ಕಟ್ಟಿಕೊಳ್ಳುವುದು ಆಗಿದೆ. ಆಧ್ಯಾತ್ಮಿಕ ದೃಷ್ಟಿಯ ತಿಲಕ ಇಟ್ಟು, ಸಿಹಿ ತಿಂದು ಬಾಯಿ ಎಷ್ಟು ಮಧುರ, ಹಾಗೆ ನಮ್ಮ ಮಾತು ಮಧುರವಾಗಿರಬೇಕು. ಮಾತಿನಿಂದ ಯಾರಿಗೂ ದುಃಖ ಕೊಡಬಾರದು, ಶ್ರೀ ಕೃಷ್ಣ ಸತ್ಯಯುಗದ ಪ್ರಥಮ ರಾಜಕುಮಾರ ಕೃಷ್ಣ ದೇವತಾ ಪುರುಷನಾಗಿದ್ದಾನೆ. ಮರ್ಯಾದ ಪುರುಷೋತ್ತಮನೆಂದು ಹೇಳಲಾಗುತ್ತದೆ. ರಕ್ಷಾ ಬಂಧನವೆಂದರೆ ಕೇವಲ ದಾರ ಕಟ್ಟಿಕೊಳ್ಳುವುದಲ್ಲ, ಇದು ಮನಸನ್ನು ಸಕಾರಾತ್ಮಕ ಮಾಡಿಕೊಳ್ಳುವುದು ಆಗಿದೆ. ಮನಸ್ಸನ್ನು ಬಲಶಾಲಿ ಮಾಡಿಕೊಳ್ಳಲು ರಾಜಯೋಗ (ಮೆಡಿಟೇಶನ್)…

Read More

ಪುತ್ತೂರು ಆ.20  NEWS DESK : ಆಧುನಿಕ ಸಮಾಜದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯಗಳ ಬಳಕೆ ವ್ಯಾಪಕವಾಗಿ ಹೆಚ್ಚಳವನ್ನು ಕಂಡಿದ್ದು, ಇದು ವ್ಯಕ್ತಿಯೊಬ್ಬನ ಚಾರಿತ್ರ್ಯ ಹಾಗೂ ಹಣಕಾಸಿನ ಮೂಲವನ್ನು ನಾಶಮಾಡುತ್ತವೆ. ಅದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದು ಪುತ್ತೂರು ಟ್ರಾಫಿಕ್  ಪೊಲೀಸರು ಠಾಣೆಯ ಪಿಎಸ್‍ಐ ಉದಯ ರವಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿಯ ಆಶ್ರಯದಲ್ಲಿ ನಡೆದ ಆನ್ಲೈನ್‍ನಲ್ಲಿ ಸುರಕ್ಷಿತವಾಗಿರಿ ಎನ್ನುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಯಾವಾಗ ಮಾಹಿತಿ ತಂತ್ರಜ್ಞಾನದ ಕ್ರಾಂತಿಯಾಯಿತೋ ಅದರ ಜತೆಯಲ್ಲಿ ಈ ಅಪರಾಧ ಪ್ರಕರಣಗಳೂ ಹೆಚ್ಚಾಯ್ತು. ಆನ್ಲೈನ್ ಮೂಲಕ ಮಕ್ಕಳ ದೌರ್ಜನ್ಯ, ಇಚ್ಚೆಗೆ ವಿರುದ್ದವಾಗಿ ಮಾನಸಿಕ ಹಿಂಸೆಯನ್ನು ನೀಡುವುದು, ಡೇಟಿಂಗ್ ಆಪ್ ಮೂಲಕ ತೊಂದರೆಯನ್ನು ನೀಡುವುದು, ಉದ್ಯೋಗದ ಆಮಿಷವೊಡ್ಡಿ ಹಣ ಸಂಗ್ರಹಿಸುವುದು, ಅಧಿಕ ಲಾಭಾಂಶದ ನೆಪದಿಂದ ಹೂಡಿಕೆ ಮಾಡಿಸುವುದು ಡಿಜಿಟಲ್ ಅರೆಸ್ಟ್, ಫೋನ್ ಮೂಲಕ ಒಟಿಪಿಗಳನ್ನು…

Read More

ಮಡಿಕೇರಿ ಆ.18 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತ ದೇಹ ಪತ್ತೆಯಾಗಿದೆ. ಹುಲಿ ವಯೋ ಸಹಜ ರೀತಿಯಲ್ಲಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಆಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಆ.20 NEWS DESK : ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಳುವವನೆ ಭೂಮಿಯ ಒಡೆಯ, ಜೀತ ಪದ್ಧತಿ ನಿರ್ಮೂಲನೆ, ವಿದ್ಯಾರ್ಥಿ ನಿಲಯ ಸ್ಥಾಪನೆ, ಹಿಂದುಳಿದ ವರ್ಗಗಳಿಗೆ ನ್ಯಾಯ, ಎಲೆಕ್ಟ್ರಾನಿಕ್ ಸಿಟಿ ಆರಂಭ ಹೀಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ತುಂಬಾ ದೂರದೃಷ್ಟಿಯಿಂದ ಆಡಳಿತವನ್ನು ನಡೆಸಿ, ಇಂದಿಗೂ ಸಹ ಜನಮನ್ನಣೆ ಉಳಿಸಿಕೊಂಡಿರುವುದು ಸಾಕ್ಷಿ ಪ್ರಜ್ಞೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಪ್ರತಿಯೊಂದು ಸಮಾಜಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಾಕಷ್ಟು ಶ್ರಮಿಸಿದ್ದಾರೆ. ಇಂತಹ ಮಹನೀಯರ ಆದರ್ಶ ಮತ್ತು ಸಾಧನೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಸಮ ಸಮಾಜ ನಿರ್ಮಾಣ ಹಾಗೂ ಸುಧಾರಣೆಗೆ ಶ್ರಮಿಸಿದ್ದಾರೆ. ಆ…

Read More

ಮಡಿಕೇರಿ ಆ.20 NEWS DESK : ‘ಶೋಷಣೆ ಮತ್ತು ಬಡತನ’ ಮುಕ್ತವಾದ ಸಮಾಜ ನಿರ್ಮಾಣಕ್ಕಾಗಿ ಬದುಕಿನುದ್ದಕ್ಕೂ ಹೋರಾಟಗಳನ್ನು ನಡೆಸಿಕೊಂಡು ಬಂದ ದಿ.ದೇವರಾಜ ಅರಸು, ಅಂತಃಕರಣದ ರಾಜ್ಯಭಾರದ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಮಹಾನ್ ನೇತಾರರಾಗಿದ್ದಾರೆ ಎಂದು ಮೈಸೂರು ವಿಶ್ವ ವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅರಗು ಮತ್ತು ಬಣ್ಣದ ಕಾರ್ಖಾನೆ ನಿಗಮದ ಮಾಜಿ ಅಧ್ಯಕ್ಷರಾದ ಹೆಚ್.ಎ.ವೆಂಕಟೇಶ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ದಿ.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವರಾಜ ಅರಸು ಅವರನ್ನು ಮುಖ್ಯಮಂತ್ರಿಗಳಾಗಿದ್ದವರು ಎನ್ನುವ ಕಾರಣದಿಂದ ಜನತೆ ನೆನಪಿಸಿಕೊಳ್ಳುತ್ತಿಲ್ಲ. ಬದಲಾಗಿ ಅವವರು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು ಶ್ರಮಿಸಿದ ಮಹಾನ್ ನೇತಾರರಾಗಿದ್ದರೆಂದು ಸ್ಮರಿಸುತ್ತಾರೆ. ಇವರು ತಮ್ಮ ಆಡಳಿತದ ಅವಧಿಯಲ್ಲಿ ತಂದ ದೂರದೃಷ್ಟಿಯ ಜನಪರವಾದ ಯೋಜನೆಗಳು, ಆಡಳಿತ ವೈಖರಿಗಳು ರಾಜ್ಯದಲ್ಲಿ ಹೊಸ ರಾಜಕೀಯ ವಾತಾವರಣವನ್ನೆ ಸೃಷ್ಟಿಸಿತ್ತು.…

Read More