ಮಡಿಕೇರಿ ಜು.15 NEWS DESK :ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.86 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 58.85 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1188.57 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 41.90 ಮಿ.ಮೀ. ಕಳೆದ ವರ್ಷ ಇದೇ ದಿನ 88.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2510.17 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1739.21 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1597.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1221.25 ಮಿ.ಮೀ. ಮಳೆಯಾಗಿತ್ತು. ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 33.02…
ಲೇಖಕ: admin
ಬೆಂಗಳೂರು ಜು.15 NEWS DESK : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಯುವ ಕೌಶಲ್ಯ ದಿನಾಚರಣೆ 2025 ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ” ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು, ಬಳಿಕ ಕರ್ನಾಟಕ ರಾಜ್ಯ ಶುಶ್ರೂಷಕ ಪರಿಷತ್ತು ವತಿಯಿಂದ ಆಧಾರ್ ಹಾಗೂ ಡಿಜಿ ಲಾಕರ್ ಇ ಕೆವೈಸಿ ಮೂಲಕ ಸಮೂಹದ ವರೆಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನವನ್ನು ಲೋಕಾರ್ಪಣೆಗೊಳಿಸಿದರು.
ಮಡಿಕೇರಿ NEWS DESK ಜು.15 : ಮಡಿಕೇರಿಯ ಜಿಲ್ಲಾ ಸರಕಾರಿ ಆಸ್ಪತ್ರೆಯಿಂದ ಕಾಣೆಯಾಗಿದ್ದ ಮಡಿಕೇರಿ ತಾಲ್ಲೂಕಿನ ಅರೆಕಾಡು ಗ್ರಾಮದ ನಿವಾಸಿ ಕೆ.ಎನ್.ರಘು (38) ಅವರ ಮೃತದೇಹ ಪತ್ತೆಯಾಗಿದೆ. ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕ್ರಿಟಿಕಲ್ ಕೇರ್ ಕಟ್ಟಡದ ನೀರು ತುಂಬಿದ ಗುಂಡಿಯಲ್ಲಿ ರಘು ಅವರ ಮೃತದೇಹ ದೊರೆತ್ತಿದ್ದು, ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಘು ಅವರನ್ನು ಅವರ ತಾಯಿ ರತ್ನ ಹಾಗೂ ಪತ್ನಿ ರಾಜೇಶ್ವರಿ ಅವರು ಜು.8 ರಂದು ಮಡಿಕೇರಿಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದರು. ಜು.11 ರಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿನಲ್ಲಿ ತಾಯಿಯ ಬಳಿಯಿಂದ 200 ರೂ. ಪಡೆದ ರಘು ಅವರು ಕಾಫಿ ಹಾಗೂ ತಿಂಡಿಯನ್ನು ತರಲು ಹೊಟೇಲ್ ಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮರಳಿರಲಿಲ್ಲ, ಅಲ್ಲದೆ ಮನೆಗೂ ಬಂದಿರಲಿಲ್ಲ. ಇದರಿಂದ ಆತಂಕಗೊAಡ ಪತ್ನಿ ರಾಜೇಶ್ವರಿ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು…
ಕುಶಾಲನಗರ ಜು.15 NEWS DESK : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ 200ಕ್ಕೂ ಹೆಚ್ಚು ಅರಣ್ಯ ಮೊಕದ್ದಮೆಗಳು, 30ಕ್ಕೂ ಹೆಚ್ಚು ವನ್ಯಜೀವಿ ಪ್ರಕರಣಗಳು ಹಾಗೂ 50ಕ್ಕೂ ಹೆಚ್ಚು ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಿ ಅರಣ್ಯ ಕಾನೂನು ಬಗ್ಗೆ ತರಬೇತಿ ಶಾಲೆಯಲ್ಲಿ ಭೋಧನೆಯನ್ನು ಮಾಡಿರುತ್ತಾರೆ. ಇವರು ಮೂಲತಃ ಬೆಳಗಾವಿ ಜಿಲ್ಲೆ, ಅಥಣಿ ಯವರಾಗಿದ್ದು ಕಳೆದ 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕಳೆದ ಕೆಲವು ವರ್ಷಗಳ ಕಾಲ ವಿರಾಜಪೇಟೆ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕುಶಾಲನಗರದ ಮೀನುಕೊಲ್ಲಿ ವಲಯದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕುಶಾಲನಗರ ಜು.15 NEWS DESK : ಗಂಧದಕೋಟಿಯಲ್ಲಿರುವ ಅರಣ್ಯ ತರಬೇತಿ ಕೇಂದ್ರದ ಉಪ ವಲಯ ಅರಣ್ಯಾಧಿಕಾರಿ ಐಶ್ವರ್ಯ ಆರ್.ಗೌಡರ್ ಅವರು ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಇಲಾಖೆಯಲ್ಲಿ ಮಾಡಿರುವ ಸಕ್ರಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 120 ಉಪ ವಲಯ ಅರಣ್ಯಾಧಿಕಾರಿ ಹಾಗೂ 45 ಅರಣ್ಯ ವೀಕ್ಷಕರಿಗೆ ವೃತ್ತಿ ಬುನಾದಿ ತರಬೇತಿಯಲ್ಲಿ- ವನ್ಯಜೀವಿ ನಿರ್ವಹಣೆ, ಸಸ್ಯಶಾಸ್ತ್ರ, ಮಣ್ಣು ಶಾಸ್ತ್ರ, ಲೆಕ್ಕ ಪತ್ರ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಬೋಧನೆ ಮಾಡಿರುವುದು. 100ಕ್ಕೂ ಹೆಚ್ಚು ಬಗೆಯ ಸಸ್ಯ ಪ್ರಬೇಧ ಗುರುತಿಸುವ ಜ್ಞಾನ ಹೊಂದಿರುವುದು, ಪಕ್ಷಿ ಹಾಗೂ ಜೀವಿ ಸಂಕುಲದ ಬಗ್ಗೆ ಹೊಂದಿರುವ ಜ್ಞಾನವನ್ನು ಇಲಾಖೆ ಗುರುತಿಸಿ ಗೌರವಿಸುತ್ತಿದೆ. ಮಾನವ ವನ್ಯ ಜೀವಿ ಸಂಘರ್ಷ, ಜೇನುಕೃಷಿ, ವನ್ಯಜೀವಿ ಕಾನೂನು, ಇಕ್ಟ್ ವಿಷಯದ ಬಗ್ಗೆ ತರಬೇತಿ, ಚಿಣ್ಣರ ವನ ದರ್ಶನ ಕಾರ್ಯಕ್ರಮ ಪೊನ್ನಂಪೇಟೆ ವಲಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲಾ ಕಾಲೇಜುಗಳ ಮಕ್ಕಳಿಗೆ ಮಾಡಿರುವ ಬೋಧನೆಯ ಸುಧೀರ್ಘ ಸೇವೆಗೆ ಐಶ್ವರ್ಯ ಗೌಡರ್ ಅವರಿಗೆ…
ಮಡಿಕೇರಿ ಜು.15 NEWS DESK : ಭಾಗಮಂಡಲದಲ್ಲಿ ನೂತನ ಸಮುದಾಯ ಭನವ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಭಾಗಮಂಡಲ ನಾಡಗೌಡ ಸಮಾಜದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಸಮಾಜದ ಪ್ರಮುಖರು, ಭಾಗಮಂಡಲ ಗ್ರಾಮದಲ್ಲಿ 1983 ರಲ್ಲಿ ನಿರ್ಮಿಸಿರುವ ಗೌಡ ಸಮುದಾಯ ಭವನದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಭಾಗಮಂಡಲ ಭಾಗದಲ್ಲಿ ಏಕೈಕ ಸಮುದಾಯ ಭವನ ಇದಾಗಿದೆ. ಗೌಡ ಸಮಾಜ ಮತ್ತು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನ ನಿರ್ಮಿಸಲು ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದರು. ನಿಯೋಗದಲ್ಲಿ ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷ ಕುದ್ಪಾಜೆ ಪಿ.ಪಳಂಗಪ್ಪ, ಗೌಡ ಸಮಾಜದ ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದ್ಪಾಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು ನಿಡ್ಯಮಲೆ ರವಿ, ಕುದ್ಪಾಜೆ ಗಗನ್, ನಿಡ್ಯಮಲೆ…
ಕುಶಾಲನಗರ, ಜು.15 NEWS DESK : ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ( ಅಭಿವೃದ್ಧಿ) ಸಿ.ರಂಗಧಾಮಪ್ಪ ಸೋಮವಾರ ಮನವಿ ಮಾಡಿದರು. ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಿಂದ ಎಸ್.ಡಿ.ಎಂ.ಸಿ.ಸಹಭಾಗಿತ್ವದಲ್ಲಿ ನೂತನವಾಗಿ ಸೋಮವಾರ ಆರಂಭಿಸಲಾದ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರವು ಇದೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿ ಆರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ…
ಸುಂಟಿಕೊಪ್ಪ ಜು.15 NEWS DESK : ನಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರಿಂದ ಪರಿಸರವು ಸಮೃದ್ಧಿಯಾಗಿರುತ್ತದೆ ಎಂದು ಸುಂಟಿಕೊಪ್ಪ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಹೀದ್ಜಾನ್ ಅಭಿಪ್ರಾಯ ವ್ಯಕ್ತಪಡಿಸಿದರು. ಗದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಸರದ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಂಡು ಮನೆಯ ಪರಿಸರದಲ್ಲಿ ಹಾಗೂ ಅರಣ್ಯಗಳಲ್ಲಿ ನಾವು ಹಣ್ಣಿನ ಗಿಡಗಳನ್ನು ಬೆಳೆಸಲು ಹೆಚ್ಚಿನ ಆದ್ಯತೆ ನೀಡುವುದರಿಂದ ಭೂಮಿಯಲ್ಲಿ ಜೀವಿಸುವ ಪ್ರಾಣಿ ಪಕ್ಷಿಗಳಿಗೆ ಆಹಾರ ದೊರೆಯುವುದಲ್ಲದೆ ಪರಿಸರವು ಅಭಿವೃದ್ಧಿಗೊಳ್ಳುತ್ತದೆ. ಆದ್ದರಿಂದ ಮಕ್ಕಳು ಮನೆ ಸೇರಿದಂತೆ ಅರಣ್ಯಗಳಲ್ಲಿ ಹಣ್ಣಿನ ಗಿಡಗಳನ್ನು ಪೋಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ವಹೀದ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಿಡಗಳನ್ನು ನೆಡುವುದು ಒಂದು ದಿನಕ್ಕೆ ಸಿಮಿತವಾಗದೆ ಅವುಗಳನ್ನು ನಿತ್ಯವು…
ನವದೆಹಲಿ NEWS DESK ಜು.15 : ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು. ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಗೃಹ ಸಚಿವರಿಗೆ ತಿಳಿಸಿದರು. ಈ ವಿಷಯದ ಕುರಿತು ಗೃಹ ಸಚಿವಾಲಯದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಎಲ್ಲಾ ವಿಷಯಗಳನ್ನು ಕೂಲಂಕಷವಾಗಿ ಆಲಿಸಿದ ಗೃಹ ಸಚಿವ ಅಮಿತ್ ಶಾ ಅವರು ಕಾಲಮಿತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಬೆಂಗಳೂರು NEWS DESK ಜು.15 : ಕೊಡಗು ಜಿಲ್ಲೆಯ ಜನರನ್ನು ಕಾಡುತ್ತಿರುವ ಕಂದಾಯ ಭೂಮಿ ಮತ್ತು ಜಮ್ಮಾಬಾಣೆ ಸಮಸ್ಯೆಗೆ ಸೂಕ್ತ ಪರಿಹಾರ ಸೂಚಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ರಾಜ್ಯ ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಅವರನ್ನು ವಿಕಾಸಸೌಧದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಮಾಡಿದರು. ವಿಶೇಷವಾಗಿ, ಕೊಡಗಿನವರ ಜಮ್ಮಾಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನು ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ ಕಂದಾಯ ಕಾಯ್ದೆ 1964 ಕ್ಕೆ ತರಬೇಕೆಂದು ಕೋರಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂದು ಭರವಸೆ ನೀಡಿದರು.






