ಮಡಿಕೇರಿ NEWS DESK ಜು.14 : ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ನವದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದರು, ಮೈಸೂರು-ಕೊಡಗು ಕ್ಷೇತ್ರದ ಸಮಸ್ಯೆಗಳು ಹಾಗೂ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾದ ಬಗ್ಗೆ ಮನವಿ ಮಾಡಲಾಯಿತು ಎಂದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್ಡಿಆರ್ಎಫ್ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ತಿಳಿಸಿದರು. ಕೊಡಗು ಜಿಲ್ಲೆಯಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿದೆ. ಇದಕ್ಕಾಗಿ ಹೆಚ್ಚುವರಿ ಪರಿಹಾರ ಬಿಡುಗಡೆ…
ಲೇಖಕ: admin
ಮಡಿಕೇರಿ ಜು.14 NEWS DESK : ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್ನಲ್ಲಿ ಜು.15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಿರುವ ಹಿನ್ನೆಲೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ.ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್ ರಸ್ತೆ, ಮಹದೇವ ಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್, ಅಬ್ದುಲ್ ಕಲಾಮ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜು.14 NEWS DESK : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಹಾಗೂ ಮೊದಲ ಕಾರ್ಯಕ್ರಮವಾದ ‘ಶಕ್ತಿ’ ಯೋಜನೆಯಡಿ 500 ಕೋಟಿಗೂ ಹೆಚ್ಚಿನ ಮಹಿಳೆಯರು ರಾಜ್ಯ ಸರ್ಕಾರಿ ಸಂಸ್ಥೆಯ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಯಿತು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಲಂಕೃತಗೊಳಿಸಲಾಗಿದ್ದ ಬಸ್ಗೆ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರಿರ ಮೋಹನ್ ದಾಸ್ ಅವರು ಪೂಜೆ ಸಲ್ಲಿಸಿ, ಮಹಿಳಾ ಪ್ರಯಾಣಿಕರಿಗೆ ಹಾಗೂ ನೆರೆದಿದ್ದವರಿಗೆ ಸಿಹಿ ವಿತರಿಸಿ ಸಂತಸ ಹಂಚಿಕೊಂಡರು. ಪಂಚ ಗ್ಯಾರಂಟಿ ಯೋಜನೆಯನ್ನು ಸರ್ಕಾರ ಕಳೆದ 2023 ರ ಜೂನ್, 11 ರಂದು ಜಾರಿಗೊಳಿಸಿದ್ದು, ಈ ಹಿನ್ನೆಲೆ 500 ಕೋಟಿಗೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಕೆಎಸ್ಆರ್ಟಿಸಿ ಬಸ್ ಉಚಿತ ಸೌಲಭ್ಯವನ್ನು ಪಡೆದಿರುವ ಹಿನ್ನೆಲೆ ಬಸ್ ನಿಲ್ದಾಣದಲ್ಲಿ ನೆರೆದಿದ್ದವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಶಕ್ತಿ ಯೋಜನೆ ಸಂಬಂಧಿಸಿದ ಸಾಧನೆ ಬಿಂಬಿಸುವ ಪ್ಲೆಕ್ಸ್ಗಳನ್ನು ಬಸ್ ನಿಲ್ದಾಣದ ಆವರಣದಲ್ಲಿ ಅಳವಡಿಸಲಾಗಿತ್ತು. ಹಲವು…
ಮಡಿಕೇರಿ ಜು.14 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಹಾಗೂ ಕನೆಕ್ಟಿಂಗ್ ಕೊಡವಾಸ್ ಇವರ ಸಹಯೋಗದಲ್ಲಿ ಮುತ್ತಾರ್ಮುಡಿ ಗದ್ದೆಯಲ್ಲಿ ಬೇಲ್ರ ಕೋಯಿಮೆ ಕಾರ್ಯಕ್ರಮವು ನಡೆಯಿತು. ಮೂರ್ನಾಡು ಪಿಯು ಕಾಲೇಜು, ಜ್ಞಾನಜ್ಯೋತಿ ಕಾಲೇಜು, ಕೊಡಗು ವಿದ್ಯಾಲಯ, ಮಾರುತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬೇಲ್ರ ಕೋಯಿಮೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ಮಾತನಾಡಿ, ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಕೃಷಿಯನ್ನೇ ನಂಬಿ ಬದುಕು ನಡೆಸುತ್ತಿದ್ದೇವೆ. ಆ ನಿಟ್ಟಿನಲ್ಲಿ ಕೃಷಿ ಭೂಮಿ ಉಳಿಸಬೇಕು. ಭತ್ತ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಇಡೀ ಭರತ ಖಂಡದಲ್ಲಿ ಕೊಡಗಿನ ಭೂಮಿ ಸ್ವರ್ಗದಂತಿದ್ದು, ರೈತಾಪಿ ಕೃಷಿಕರು ಭತ್ತ, ಕಾಫಿ ಸೇರಿದಂತೆ ವಿವಿಧ ಬೆಳೆಯನ್ನು ಕೃಷಿ ಮಾಡುತ್ತಿದ್ದೇವೆ. ಆ ನಿಟ್ಟಿನಲ್ಲಿ ಮುಂದಿನ ಜನಾಂಗಕ್ಕೆ ಭತ್ತ ಕೃಷಿ ಪರಿಚಯಿಸುವುದು ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಕೃಷಿಯು ಆದರ್ಶ ಬದುಕಾಗಿದ್ದು, ಕೃಷಿಯಲ್ಲಿ ತೊಡಗಿಸಿಕೊಂಡವರು…
ಮಡಿಕೇರಿ ಜು.14 NEWS DESK : ನಗರದ ಮಹದೇವಪೇಟೆಯ ಶ್ರೀ ವಿನಾಯಕ ಯುವಕ ಮಿತ್ರ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ವಿ.ಜೆ.ನಾಗ್ ಸುಜಯ್, ಉಪಾಧ್ಯಕ್ಷರಾಗಿ ಕಾರ್ತಿಕ್, ಗೌರವಾಧ್ಯಕ್ಷರಾಗಿ ಜಿ.ಕೆ.ಅಮಿತ್, ಖಜಾಂಚಿಯಾಗಿ ಎಸ್.ಅರ್ಜುನ್ ಕಿಶೋರ್, ಪ್ರಧಾನ ಕಾರ್ಯದರ್ಶಿಯಾಗಿ ಎನ್.ವೆಂಕಟೇಶ್ ಆಯ್ಕೆಯಾಗಿದ್ದಾರೆ. ಈ ನೂತನ ಆಡಳಿತ ಮಂಡಳಿಯ ನೇತೃತ್ವದಲ್ಲಿ 46ನೇ ವರ್ಷದ ಅದ್ಧೂರಿ ಗಣೇಶೋತ್ಸವ ನಡೆಯಲಿದೆ.
ಕುಶಾಲನಗರ ಜು.14 NEWS DESK : ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ತರಲಾದ ಶಿಲಾ ಕಲ್ಲುಗಳನ್ನು ದೇವಾಲಯ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿಯ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ಕಾರ್ಕಳದಿಂದ ಎರಡು ಲಾರಿಗಳ ಮೂಲಕ ತಂದ ಶಿಲಾ ಕಲ್ಲುಗಳನ್ನು ಕುಶಾಲನಗರ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು. ನಂತರ ಮೆರವಣಿಗೆಯಲ್ಲಿ ಬಂದು ಪಟ್ಟಣದ ಶ್ರೀ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಅಯ್ಯಪ್ಪ ಸ್ವಾಮಿ ದೇವಾಲಯ ಆವರಣಕ್ಕೆ ತರಲಾಯಿತು. ಅರ್ಚಕರಾದ ಸೋಮಶೇಖರ ಭಟ್ ಶಿಲೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ.ಗಣಪತಿ, ಅಂದಾಜು 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ದಾನಿಗಳ ಮತ್ತು ಭಕ್ತಾದಿಗಳ ಸಹಕಾರದೊಂದಿಗೆ ಇನ್ನೆರಡು ವರ್ಷಗಳ ಅವಧಿಯಲ್ಲಿ ದೇವಾಲಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಸಂಚಾಲಕ ವಿ.ಎಸ್.ಆನಂದಕುಮಾರ್…
ವಿರಾಜಪೇಟೆ ಜು.14 NEWS DESK : ಅಗ್ನಿ ಅವಘಡದಿಂದ 2 ಮನೆಗಳಿಗೆ ಹಾನಿಯಾಗಿರುವ ಘಟನೆ ವಿರಾಜಪೇಟೆಯ ಮುಖ್ಯ ರಸ್ತೆಯ ಶ್ರೀ ಗಣಪತಿ ದೇವಾಲಯದ ಹಿಂಭಾಗದಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದೆಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಆದರೆ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಿತು.
ಮಡಿಕೇರಿ ಜು.14 NEWS DESK : ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೋಣಿಕೊಪ್ಪ ನಗರದಲ್ಲಿ ಚಾಲನೆ ನೀಡಲಾಯಿತು. ಗೋಣಿಕೊಪ್ಪ ಠಾಣಾಧಿಕಾರಿ ಬಿ.ಕೆ.ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದ ಉಮಾಮಹೇಶ್ವರಿ ಬಡಾವಣಿಗೆ ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆಬಾಗಿಲಿಗೆ ಪೊಲೀಸರು ಈ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಿದರು. ಮನೆ ಮನೆಗೆ ಪೊಲೀಸ್ ಎಂಬ ರಾಜ್ಯ ಸರ್ಕಾರದ ವಿನೂತನ ಪರಿಕಲ್ಪನೆಯ ಕಾರ್ಯಕ್ರಮವಾಗಿದೆ. ಪೊಲೀಸರಿಂದ ಹೆಚ್ಚಿನ ಸೇವೆ ಈ ಮೂಲಕ ಜನರೆಡೆಗೆ ತಲುಪಲಿದೆ ಎಂದು ಹೇಳಿದರು. ನಂತರ ಕಾರ್ಯಕ್ರಮದ ಭಾಗವಾಗಿ ಪೊಲೀಸ್ ಸಿಬ್ಬಂದಿಗಳು ಎಂಟು ವಾರ್ಡ್ ಗಳಲ್ಲಿ ಅಭಿಯಾನ ಕೈಗೊಂಡು, ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು.…
ಮಡಿಕೇರಿ ಜು.14 NEWS DESK : ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸ್ಥಾಪಕ ಸಂಪಾದಕ ಕಲ್ಯಾಟಂಡ ಗಣಪತಿ ಅವರ ನಿಧನಕ್ಕೆ ಕೊಡಗು ಪತ್ರಕತ೯ರ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. 48 ವಷ೯ಗಳ ಕಾಲ ಅಂಕಣಕಾರರಾಗಿ, ಪತ್ರಕತ೯ರಾಗಿ ಜನಮನದಲ್ಲಿ ನೆಲೆಯೂರಿದ ಪತ್ರಕತ೯ನ ಅಗಲಿಕೆಗೆ ಸಂಘದ ಮೂಲಕ ಪತ್ರಕತ೯ರು, ಸಂಘಸಂಸ್ಥೆಗಳ ಪ್ರಮುಖರು ನುಡಿನಮನ ಸಲ್ಲಿಸಿದರು. ನಗರದ ಪತ್ರಿಕಾಭವನದಲ್ಲಿ ಕೊಡಗು ಪತ್ರಕತ೯ರ ಸಂಘದಿಂದ ನಡೆದ ದಿ.ಗಣಪತಿ ಅವರಿಗ ಸಂತಾಪ ಸಭೆಯಲ್ಲಿ ಮಾತನಾಡಿದ ಹಿರಿಯ ಪತ್ರಕತ೯ ಜಿ.ರಾಜೇಂದ್ರ, ಮೇರು ವ್ಯಕ್ತಿತ್ವದ ಗಣಪತಿಯವರ ಅಗಲಿಕೆ ಪತ್ರಿಕೋದ್ಯಮ ಮಾತ್ರವಲ್ಲದೇ ಸಮಾಜಕ್ಕೂ ಸಾಕಷ್ಟು ನಷ್ಟ ಉಂಟು ಮಾಡಿದೆ. ಯಾರನ್ನೂ ದ್ವೇಷಿಸದ, ಯೂರನ್ನೂ ದೂಷಿಸದ ಗಣಪತಿ ಅವರಲ್ಲಿದ್ದ ಸದ್ಗುಣ ಇತರರಿಗೂ ಆದಶ೯ಪ್ರಾಯವಾದದ್ದು ಎಂದರಲ್ಲದೇ, ಪರಿಸರ ಕಾಳಜಿಯ ಜತೆಗೇ ಸಾಮಾಜಿಕ ಕಳಕಳಿಯನ್ನೂ ಹೊಂದಿದ್ದ ಸುಸಂಸ್ಕೖತ ವ್ಯಕ್ತಿತ್ವದ ಮೇಧಾವಿಯಾಗಿದ್ದರು ಗಣಪತಿಯವರು ಎಂದು ಸ್ಮರಿಸಿಕೊಂಡರು. ಮಾಧ್ಯಮ ಮುಖ್ಯಸ್ಥರೋವ೯ನಿಗೆ ಅಗತ್ಯವಾಗಿದ್ದ ಎಲ್ಲಾ ಅಗತ್ಯ ಗುಣಗಳನ್ನೂ ಹೊಂದಿದ್ದ ಗಣಪತಿಯವರು ನಿಷ್ಪಾಕ್ಷಪಾತ ಧೋರಣೆ ಹೊಂದುವ ಮೂಲಕ ಜನಾನುರಾಗಿ ಪತ್ರಿಕೋದ್ಯಮಿಯಾಗಿ…
ವಿರಾಜಪೇಟೆ ಜು.12 NEWS DESK : ವಿರಾಜಪೇಟೆ ಕಾವೇರಿ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ರಚನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಸಲುವಾಗಿ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆಗಾಗಿ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ [ಇವಿಎಂ] ಮೂಲಕ ತಮ್ಮ ಮತವನ್ನು ಚಲಾಯಿಸಿದರು. ಚುನಾವಣೆಯ ಮತಗಟ್ಟೆ ಅಧಿಕಾರಿಯಾಗಿ ಮುಖ್ಯ ಶಿಕ್ಷಕಿ ಪಿ.ಯು.ಪಾರ್ವತಿ, ಸಹ ಅಧಿಕಾರಿಯಾಗಿ ಬಿ.ಪಿ.ಉಷಾ ಹಾಗೂ ಬಿ.ಡಿ.ಭಾಗ್ಯ ಕಾರ್ಯನಿರ್ವಹಿಸಿದ್ದರು. ಶಾಲಾ ಸಂಸತ್ತು ಚುನಾವಣೆಯಲ್ಲಿ ಶಾಲಾ ನಾಯಕನಾಗಿ ಕನ್ನಂಬಿರ ಜಿ.ಭೀಮಯ್ಯ, ಉಪ ನಾಯಕಿಯಾಗಿ ಬೋವ್ವೇರಿಯಂಡ ಹನ್ಸಿಕ ಪೊನ್ನಪ್ಪ, ಕ್ರೀಡಾ ನಾಯಕಿ ತನ್ಯ ರೈ ಬಿ.ಎಸ್, ಉಪ ನಾಯಕಿಯಾಗಿ ಕರ್ನಂದ ಎಸ್.ಕೃತಿಕಾ ಅಕ್ಕಮ್ಮಾ, ಸಾಂಸ್ಕೃತಿಕ ನಾಯಕಿಯಾಗಿ ಬೊಳ್ಳೆಪಂಡ ಬಿ.ದೀಪ್ತಿ ತಂಗಮ, ಉಪ ನಾಯಕಿಯಾಗಿ ಕುಲ್ಲಚಂಡ ಎಸ್.ಭೂಮಿಕಾ ಬೋಜಮ್ಮ, ಆರೋಗ್ಯ ನಾಯಕಿಯಾಗಿ ಪುಚ್ಚಿಮಂಡ ಯು.ತನಿಶ, ಉಪ ಆರೋಗ್ಯ ನಾಯಕಿಯಾಗಿ ರಾನೀಯ ಟಿ.ಎಫ್.ತಸ್ಲೀನ್, ಸನಾ ಕೆ.ಎಸ್, ಶಿಸ್ತಿನ ನಾಯಕಿಯಾಗಿ ಸುಹಾನಿ ರಾಜ್ ಪುರೋಹಿತ್, ಉಪ ಶಿಸ್ತಿನ ನಾಯಕಿಯಾಗಿ ಕೆ.ಹೆಚ್.ನಿಧಾ, ಅಂಕುರ್ ಹೌಸ್ ಕ್ಯಾಪ್ಟನ್…






